Homeಕರ್ನಾಟಕಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ತಾಂತ್ರಿಕ ದೋಷದ ನಡುವೆಯೂ ಕನ್ನಡ ಎನ್‌ಇಟಿ ಬರೆದವರು ಕೀ ಆನ್ಸರ್‌ ನೋಡಿ ಆತಂಕಿತರಾಗಿದ್ದಾರೆ.

- Advertisement -
- Advertisement -

ಕನ್ನಡ ಇಚ್ಛಿಕ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಗೊಂದಲದ ಗೂಡಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ಕಾಣಿಸಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ನಂತರದಲ್ಲಿ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ ‘ಮರು ಪರೀಕ್ಷೆ’ ನಡೆಸುವುದಾಗಿಯೂ ಹೇಳಿತ್ತು. ಆದರೆ ಈಗ ಬಿಡುಗಡೆ ಮಾಡಿರುವ ‘ಕೀ ಆನ್ಸರ್‌‌ಗಳು’ ಪರೀಕ್ಷೆ ಬರೆದವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

2021, ಡಿಸೆಂಬರ್‌ 26ನೇ ತಾರೀಖಿನಂದು ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ನಡೆದಿತ್ತು. “ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದು ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿತ್ತು. ಮರು ಪರೀಕ್ಷೆ ನಡೆಸುವುದಾಗಿ ಅಂದು ಸಂಜೆಯೇ ಸ್ಪಷ್ಟನೆ ನೀಡಿತ್ತು.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿತ್ತು. ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ಬರೆದ ಆಕಾಂಕ್ಷಿಗಳ ಸಂಬಂಧ ಯಾವುದೇ ಸ್ಪಷ್ಟನೆ ಇರಲಿಲ್ಲ.

“ಎಲ್ಲರಿಗೂ ಮತ್ತೆ ಪರೀಕ್ಷೆ ನಡೆಸುವುದು ಅಗತ್ಯ” ಎಂದು ಕನ್ನಡ ಪರೀಕ್ಷಾರ್ಥಿಗಳು ಆಗ್ರಹಿಸಿದ್ದರು. ಈ ನಡುವೆಯೇ ಕೀ ಅನ್ಸರ್‌ ಬಿಡುಗಡೆಗೊಳಿಸಲಾಗಿದೆ. ಪರೀಕ್ಷಾ ಬರೆದ ವಿದ್ಯಾರ್ಥಿಗಳು ತಮ್ಮ ‘ಕೀ ಆನ್ಸರ್‌’ಗಳನ್ನು ನೋಡಿ ಆತಂಕಕ್ಕೊಳಗಾಗಿದ್ದಾರೆ. ನೂರು ಪ್ರಶ್ನೆಗಳಲ್ಲಿ ಸುಮಾರು 30ರಿಂದ 60 ಪ್ರಶ್ನೆಗಳನ್ನು ಅಟೆಂಪ್ಟ್‌‌ ಮಾಡಿಯೇ ಇಲ್ಲ ಎಂದು ಕೀ ಆನ್ಸರ್‌ ತೋರಿಸುತ್ತಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ. ನಾನುಗೌರಿ.ಕಾಂಗೆ ಕರೆ ಮಾಡಿದ ಅನೇಕ ಪರೀಕ್ಷಾರ್ಥಿಗಳು ಆತಂಕವನ್ನು ತೋಡಿಕೊಂಡು ತಮ್ಮ ಭವಿಷ್ಯದ ಅನಿಶ್ಚಿತತೆಯನ್ನು ವ್ಯಕ್ತಪಡಿಸಿದ್ದಾರೆ.

ಮಂಡ್ಯದಿಂದ ಕರೆ ಮಾಡಿದ (ಮೈಸೂರು ವಿವಿ ವಿದ್ಯಾರ್ಥಿ) ಸಂದೀಪ್‌‌  ಅವರು, “ನನ್ನ ಕೀ ಆನ್ಸರ್‌ನಲ್ಲಿ ಶೇ. 60ರಷ್ಟು ಪ್ರಶ್ನೆಗಳು ‘not attempt’ ಎಂದು ಬಂದಿದೆ. ಪ್ರಶ್ನೆ ಪತ್ರಿಕೆಯೂ ಸುಲಭವಾಗಿತ್ತು. ಹೀಗಾಗಿ ಈ ಭಾರಿ ಎನ್‌ಇಟಿ ಪಾಸ್‌ ಆಗುತ್ತದೆ ಎಂಬ ನಿರೀಕ್ಷೆಯಲ್ಲಿ ಅಭ್ಯರ್ಥಿಗಳು ಕಾಯುತ್ತಿದ್ದೆವು. ಕೆಲವರಿಗೆ ಮೊದಲ ಪ್ರಶ್ನೆ ಪತ್ರಿಕೆ ಹೀಗೆ ಸಮಸ್ಯೆಯಾಗಿದೆ. ನನಗೆ ಎರಡನೇ ಪ್ರಶ್ನೆಪತ್ರಿಕೆ ಸಮಸ್ಯೆಯಾಗಿದೆ. submit ಕೊಟ್ಟು ಬಂದಿದ್ದೇನೆ. submit ಕೊಟ್ಟಿಲ್ಲದಿದ್ದರೂ ಅದು auto submit ಆಗಬೇಕಿತ್ತು. ಆದರೂ ಸಮಸ್ಯೆಯಾಗಿದೆ. ಪರೀಕ್ಷಾರ್ಥಿಳೆಲ್ಲ ಚಿಂತೆಗೊಳಗಾಗಿದ್ದೇವೆ. ಒಂದೋ ಎರಡೋ ಪ್ರಶ್ನೆಗಳು not attempt ಎಂದರೆ ಪರವಾಗಿಲ್ಲ. ಆದರೆ ಶೇ. 60 ಪ್ರಶ್ನೆಗಳು ಹೀಗೆಯೇ ಆದರೆ ನಾನು ಕೇವಲ ಶೇ. 40ರಷ್ಟು ಪ್ರಶ್ನೆಗಳನ್ನಷ್ಟೇ ಪ್ರಯತ್ನಿಸಿದ್ದೇನೆ ಎಂದಾಗುತ್ತದೆ. ಸಾಮಾನ್ಯ ಪ್ರಶ್ನೆಪತ್ರಿಕೆಯ ಕೀ ಆನ್ಸರ್‌ನಲ್ಲಿ ಕೆಲವರಿಗೆ ಈ ಸಮಸ್ಯೆಯಾಗಿದ್ದರೆ, ಕನ್ನಡ ಐಚ್ಛಿಕ ಪ್ರಶ್ನೆಪತ್ರಿಕೆಯಲ್ಲಿ ಮಾತ್ರ ಪ್ರತಿಯೊಬ್ಬರಿಗೂ ಈ ತೊಂದರೆಯಾಗಿದೆ. ಕನಿಷ್ಠ 30 ಪ್ರಶ್ನೆಗಳಾದರೂ not Attempt ಎಂದು ಎಲ್ಲರಿಗೂ ತೋರಿಸುತ್ತಿದೆ” ಎಂದು ಆರೋಪಿಸಿದರು.

 

“ಪರೀಕ್ಷೆ ದಿನ ಹಿಂದಿ ಪ್ರಶ್ನೆಗಳೆಲ್ಲ ಕಾಣಿಸಿಕೊಂಡು ಆತಂಕಕ್ಕೊಳಗಾದೆವು. ಮತ್ತೆ ಲಾಗಿನ್‌ ಆಗಿ ಅನೇಕರು ಪರೀಕ್ಷೆ ಬರೆದಿದ್ದೇವೆ. ಏನು ಮಾಡಬೇಕೆಂದೇ ಗೊತ್ತಾಗುತ್ತಿಲ್ಲ. ಕನ್ನಡ ವಿದ್ಯಾರ್ಥಿಗಳಿಗೆ ಮಾತ್ರ ಈ ಸಮಸ್ಯೆಯಾಗುತ್ತಿದೆ” ಎಂದು ಆತಂಕ ತೋಡಿಕೊಂಡರು.

ಮೈಸೂರು ವಿವಿ ವಿದ್ಯಾರ್ಥಿ ಶರತ್‌ ಮಾತನಾಡಿ, “ನೀವು ಸಬ್ಮಿಟ್‌ ಮಾಡಿದ್ದೀರಿ. ಸಬ್ಮಿಟ್ ಆದವರಿಗೆ ಮತ್ತೆ ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎನ್ನಲಾಗಿತ್ತು. ಸಬ್ಮಿಟ್ ಆದವರಿಗೆ ಸರಿಯಾಗಿ ಫಲಿತಾಂಶ ಕೊಡಬೇಕು ತಾನೇ? ಈಗ ನಾಟ್ ಅಟೆಂಪ್ಟ್‌ ಎಂದು ಬರುತ್ತಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನೇ ನೀಡಿ ಬಂದಿದ್ದೇವೆ. ಮೂರ್ನಾಲ್ಕು ಪ್ರಶ್ನೆಗಳನ್ನು ಬಿಟ್ಟು ಬಂದಿದ್ದೇವೆ ಎಂದರೆ ಒಪ್ಪಬಹುದು. ಆದರೆ ಮೂವತ್ತರಿಂದ ಅರವತ್ತು ಪ್ರಶ್ನೆಗಳನ್ನು ಬಿಟ್ಟು ಬರಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಕೀ ಆನ್ಸರ್‌ ಸಂಬಂಧ ನೋಟಿಫಿಕೇಷನ್‌ ಬಿಡುಗಡೆ ಮಾಡಿರುವ ಎನ್‌ಟಿಎ, ತೊಂದರೆಯಾಗಿರುವ ಕನ್ನಡ ಪರೀಕ್ಷಾರ್ಥಿಗಳ ಉತ್ತರ ಪತ್ರಿಕೆಯನ್ನೂ ಒಳಗೊಂಡಿರುವುದಾಗಿ ತಿಳಿಸಿದೆ. ಆದರೆ ತಾಂತ್ರಿಕ ದೋಷದ ನಡುವೆಯೂ ಪರೀಕ್ಷೆ ಬರೆದವರ ಕೀ ಆನ್ಸರ್‌ಗಳಲ್ಲಿ ತೊಂದರೆ ಕಾಣಿಸಿರುವುದು ಗೊಂದಲ ಸೃಷ್ಟಿಸಿದೆ. ಕನ್ನಡದ ಎಲ್ಲ ಪರೀಕ್ಷಾರ್ಥಿಗಳಿಗೂ ಇದೇ ಸಮಸ್ಯೆಯಾಗಿರುವಾಗ ಕೀ ಆನ್ಸರ್‌ ಬಿಟ್ಟು ಗೊಂದಲ ಸೃಷ್ಟಿಸಿರುವುದು ಏತಕ್ಕೆ ಎಂದು ಅಭ್ಯರ್ಥಿಗಳು ಕೇಳುತ್ತಿದ್ದಾರೆ.

 

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು, ಕೀ ಆನ್ಸರ್‌ಗಳನ್ನು ಜನವರಿ 21, 2022ರಂದು ಬಿಡುಗಡೆ ಮಾಡಿದೆ. UGC ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ugcnet.nta.nic.inನಲ್ಲಿ ಪರಿಶೀಲಿಸಬಹುದು. ಆಕ್ಷೇಪಣೆಗಳನ್ನು ಜನವರಿ 24, 2022ರವರೆಗೆ ಸಲ್ಲಿಬಹುದು.

ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಆಕ್ಷೇಪಣೆ ಶುಲ್ಕವನ್ನು ಪಾವತಿಸಲು ಜನವರಿ 24 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಪ್ರತಿ ಸವಾಲಿನ ಉತ್ತರಕ್ಕೆ ₹1000 ಸಂಸ್ಕರಣಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಆಕ್ಷೇಪಣೆ ಸರಿಯಾಗಿದ್ದರೆ ಕೀ ಆನ್ಸರ್‌ ಪರಿಷ್ಕರಿಸಲಾಗುತ್ತದೆ. ಪಾವತಿಸಿದ ಸಂಸ್ಕರಣಾ ಶುಲ್ಕವನ್ನೂ ಮರುಪಾವತಿಸಲಾಗುತ್ತದೆ.


ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...