Homeಕರ್ನಾಟಕಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ತಾಂತ್ರಿಕ ದೋಷದ ನಡುವೆಯೂ ಕನ್ನಡ ಎನ್‌ಇಟಿ ಬರೆದವರು ಕೀ ಆನ್ಸರ್‌ ನೋಡಿ ಆತಂಕಿತರಾಗಿದ್ದಾರೆ.

- Advertisement -
- Advertisement -

ಕನ್ನಡ ಇಚ್ಛಿಕ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಗೊಂದಲದ ಗೂಡಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ಕಾಣಿಸಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ನಂತರದಲ್ಲಿ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ ‘ಮರು ಪರೀಕ್ಷೆ’ ನಡೆಸುವುದಾಗಿಯೂ ಹೇಳಿತ್ತು. ಆದರೆ ಈಗ ಬಿಡುಗಡೆ ಮಾಡಿರುವ ‘ಕೀ ಆನ್ಸರ್‌‌ಗಳು’ ಪರೀಕ್ಷೆ ಬರೆದವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

2021, ಡಿಸೆಂಬರ್‌ 26ನೇ ತಾರೀಖಿನಂದು ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ನಡೆದಿತ್ತು. “ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದು ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿತ್ತು. ಮರು ಪರೀಕ್ಷೆ ನಡೆಸುವುದಾಗಿ ಅಂದು ಸಂಜೆಯೇ ಸ್ಪಷ್ಟನೆ ನೀಡಿತ್ತು.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿತ್ತು. ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ಬರೆದ ಆಕಾಂಕ್ಷಿಗಳ ಸಂಬಂಧ ಯಾವುದೇ ಸ್ಪಷ್ಟನೆ ಇರಲಿಲ್ಲ.

“ಎಲ್ಲರಿಗೂ ಮತ್ತೆ ಪರೀಕ್ಷೆ ನಡೆಸುವುದು ಅಗತ್ಯ” ಎಂದು ಕನ್ನಡ ಪರೀಕ್ಷಾರ್ಥಿಗಳು ಆಗ್ರಹಿಸಿದ್ದರು. ಈ ನಡುವೆಯೇ ಕೀ ಅನ್ಸರ್‌ ಬಿಡುಗಡೆಗೊಳಿಸಲಾಗಿದೆ. ಪರೀಕ್ಷಾ ಬರೆದ ವಿದ್ಯಾರ್ಥಿಗಳು ತಮ್ಮ ‘ಕೀ ಆನ್ಸರ್‌’ಗಳನ್ನು ನೋಡಿ ಆತಂಕಕ್ಕೊಳಗಾಗಿದ್ದಾರೆ. ನೂರು ಪ್ರಶ್ನೆಗಳಲ್ಲಿ ಸುಮಾರು 30ರಿಂದ 60 ಪ್ರಶ್ನೆಗಳನ್ನು ಅಟೆಂಪ್ಟ್‌‌ ಮಾಡಿಯೇ ಇಲ್ಲ ಎಂದು ಕೀ ಆನ್ಸರ್‌ ತೋರಿಸುತ್ತಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ. ನಾನುಗೌರಿ.ಕಾಂಗೆ ಕರೆ ಮಾಡಿದ ಅನೇಕ ಪರೀಕ್ಷಾರ್ಥಿಗಳು ಆತಂಕವನ್ನು ತೋಡಿಕೊಂಡು ತಮ್ಮ ಭವಿಷ್ಯದ ಅನಿಶ್ಚಿತತೆಯನ್ನು ವ್ಯಕ್ತಪಡಿಸಿದ್ದಾರೆ.

ಮಂಡ್ಯದಿಂದ ಕರೆ ಮಾಡಿದ (ಮೈಸೂರು ವಿವಿ ವಿದ್ಯಾರ್ಥಿ) ಸಂದೀಪ್‌‌  ಅವರು, “ನನ್ನ ಕೀ ಆನ್ಸರ್‌ನಲ್ಲಿ ಶೇ. 60ರಷ್ಟು ಪ್ರಶ್ನೆಗಳು ‘not attempt’ ಎಂದು ಬಂದಿದೆ. ಪ್ರಶ್ನೆ ಪತ್ರಿಕೆಯೂ ಸುಲಭವಾಗಿತ್ತು. ಹೀಗಾಗಿ ಈ ಭಾರಿ ಎನ್‌ಇಟಿ ಪಾಸ್‌ ಆಗುತ್ತದೆ ಎಂಬ ನಿರೀಕ್ಷೆಯಲ್ಲಿ ಅಭ್ಯರ್ಥಿಗಳು ಕಾಯುತ್ತಿದ್ದೆವು. ಕೆಲವರಿಗೆ ಮೊದಲ ಪ್ರಶ್ನೆ ಪತ್ರಿಕೆ ಹೀಗೆ ಸಮಸ್ಯೆಯಾಗಿದೆ. ನನಗೆ ಎರಡನೇ ಪ್ರಶ್ನೆಪತ್ರಿಕೆ ಸಮಸ್ಯೆಯಾಗಿದೆ. submit ಕೊಟ್ಟು ಬಂದಿದ್ದೇನೆ. submit ಕೊಟ್ಟಿಲ್ಲದಿದ್ದರೂ ಅದು auto submit ಆಗಬೇಕಿತ್ತು. ಆದರೂ ಸಮಸ್ಯೆಯಾಗಿದೆ. ಪರೀಕ್ಷಾರ್ಥಿಳೆಲ್ಲ ಚಿಂತೆಗೊಳಗಾಗಿದ್ದೇವೆ. ಒಂದೋ ಎರಡೋ ಪ್ರಶ್ನೆಗಳು not attempt ಎಂದರೆ ಪರವಾಗಿಲ್ಲ. ಆದರೆ ಶೇ. 60 ಪ್ರಶ್ನೆಗಳು ಹೀಗೆಯೇ ಆದರೆ ನಾನು ಕೇವಲ ಶೇ. 40ರಷ್ಟು ಪ್ರಶ್ನೆಗಳನ್ನಷ್ಟೇ ಪ್ರಯತ್ನಿಸಿದ್ದೇನೆ ಎಂದಾಗುತ್ತದೆ. ಸಾಮಾನ್ಯ ಪ್ರಶ್ನೆಪತ್ರಿಕೆಯ ಕೀ ಆನ್ಸರ್‌ನಲ್ಲಿ ಕೆಲವರಿಗೆ ಈ ಸಮಸ್ಯೆಯಾಗಿದ್ದರೆ, ಕನ್ನಡ ಐಚ್ಛಿಕ ಪ್ರಶ್ನೆಪತ್ರಿಕೆಯಲ್ಲಿ ಮಾತ್ರ ಪ್ರತಿಯೊಬ್ಬರಿಗೂ ಈ ತೊಂದರೆಯಾಗಿದೆ. ಕನಿಷ್ಠ 30 ಪ್ರಶ್ನೆಗಳಾದರೂ not Attempt ಎಂದು ಎಲ್ಲರಿಗೂ ತೋರಿಸುತ್ತಿದೆ” ಎಂದು ಆರೋಪಿಸಿದರು.

 

“ಪರೀಕ್ಷೆ ದಿನ ಹಿಂದಿ ಪ್ರಶ್ನೆಗಳೆಲ್ಲ ಕಾಣಿಸಿಕೊಂಡು ಆತಂಕಕ್ಕೊಳಗಾದೆವು. ಮತ್ತೆ ಲಾಗಿನ್‌ ಆಗಿ ಅನೇಕರು ಪರೀಕ್ಷೆ ಬರೆದಿದ್ದೇವೆ. ಏನು ಮಾಡಬೇಕೆಂದೇ ಗೊತ್ತಾಗುತ್ತಿಲ್ಲ. ಕನ್ನಡ ವಿದ್ಯಾರ್ಥಿಗಳಿಗೆ ಮಾತ್ರ ಈ ಸಮಸ್ಯೆಯಾಗುತ್ತಿದೆ” ಎಂದು ಆತಂಕ ತೋಡಿಕೊಂಡರು.

ಮೈಸೂರು ವಿವಿ ವಿದ್ಯಾರ್ಥಿ ಶರತ್‌ ಮಾತನಾಡಿ, “ನೀವು ಸಬ್ಮಿಟ್‌ ಮಾಡಿದ್ದೀರಿ. ಸಬ್ಮಿಟ್ ಆದವರಿಗೆ ಮತ್ತೆ ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎನ್ನಲಾಗಿತ್ತು. ಸಬ್ಮಿಟ್ ಆದವರಿಗೆ ಸರಿಯಾಗಿ ಫಲಿತಾಂಶ ಕೊಡಬೇಕು ತಾನೇ? ಈಗ ನಾಟ್ ಅಟೆಂಪ್ಟ್‌ ಎಂದು ಬರುತ್ತಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನೇ ನೀಡಿ ಬಂದಿದ್ದೇವೆ. ಮೂರ್ನಾಲ್ಕು ಪ್ರಶ್ನೆಗಳನ್ನು ಬಿಟ್ಟು ಬಂದಿದ್ದೇವೆ ಎಂದರೆ ಒಪ್ಪಬಹುದು. ಆದರೆ ಮೂವತ್ತರಿಂದ ಅರವತ್ತು ಪ್ರಶ್ನೆಗಳನ್ನು ಬಿಟ್ಟು ಬರಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಕೀ ಆನ್ಸರ್‌ ಸಂಬಂಧ ನೋಟಿಫಿಕೇಷನ್‌ ಬಿಡುಗಡೆ ಮಾಡಿರುವ ಎನ್‌ಟಿಎ, ತೊಂದರೆಯಾಗಿರುವ ಕನ್ನಡ ಪರೀಕ್ಷಾರ್ಥಿಗಳ ಉತ್ತರ ಪತ್ರಿಕೆಯನ್ನೂ ಒಳಗೊಂಡಿರುವುದಾಗಿ ತಿಳಿಸಿದೆ. ಆದರೆ ತಾಂತ್ರಿಕ ದೋಷದ ನಡುವೆಯೂ ಪರೀಕ್ಷೆ ಬರೆದವರ ಕೀ ಆನ್ಸರ್‌ಗಳಲ್ಲಿ ತೊಂದರೆ ಕಾಣಿಸಿರುವುದು ಗೊಂದಲ ಸೃಷ್ಟಿಸಿದೆ. ಕನ್ನಡದ ಎಲ್ಲ ಪರೀಕ್ಷಾರ್ಥಿಗಳಿಗೂ ಇದೇ ಸಮಸ್ಯೆಯಾಗಿರುವಾಗ ಕೀ ಆನ್ಸರ್‌ ಬಿಟ್ಟು ಗೊಂದಲ ಸೃಷ್ಟಿಸಿರುವುದು ಏತಕ್ಕೆ ಎಂದು ಅಭ್ಯರ್ಥಿಗಳು ಕೇಳುತ್ತಿದ್ದಾರೆ.

 

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು, ಕೀ ಆನ್ಸರ್‌ಗಳನ್ನು ಜನವರಿ 21, 2022ರಂದು ಬಿಡುಗಡೆ ಮಾಡಿದೆ. UGC ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ugcnet.nta.nic.inನಲ್ಲಿ ಪರಿಶೀಲಿಸಬಹುದು. ಆಕ್ಷೇಪಣೆಗಳನ್ನು ಜನವರಿ 24, 2022ರವರೆಗೆ ಸಲ್ಲಿಬಹುದು.

ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಆಕ್ಷೇಪಣೆ ಶುಲ್ಕವನ್ನು ಪಾವತಿಸಲು ಜನವರಿ 24 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಪ್ರತಿ ಸವಾಲಿನ ಉತ್ತರಕ್ಕೆ ₹1000 ಸಂಸ್ಕರಣಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಆಕ್ಷೇಪಣೆ ಸರಿಯಾಗಿದ್ದರೆ ಕೀ ಆನ್ಸರ್‌ ಪರಿಷ್ಕರಿಸಲಾಗುತ್ತದೆ. ಪಾವತಿಸಿದ ಸಂಸ್ಕರಣಾ ಶುಲ್ಕವನ್ನೂ ಮರುಪಾವತಿಸಲಾಗುತ್ತದೆ.


ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...