Homeಕರ್ನಾಟಕಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ತಾಂತ್ರಿಕ ದೋಷದ ನಡುವೆಯೂ ಕನ್ನಡ ಎನ್‌ಇಟಿ ಬರೆದವರು ಕೀ ಆನ್ಸರ್‌ ನೋಡಿ ಆತಂಕಿತರಾಗಿದ್ದಾರೆ.

- Advertisement -
- Advertisement -

ಕನ್ನಡ ಇಚ್ಛಿಕ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಗೊಂದಲದ ಗೂಡಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ಕಾಣಿಸಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ನಂತರದಲ್ಲಿ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ ‘ಮರು ಪರೀಕ್ಷೆ’ ನಡೆಸುವುದಾಗಿಯೂ ಹೇಳಿತ್ತು. ಆದರೆ ಈಗ ಬಿಡುಗಡೆ ಮಾಡಿರುವ ‘ಕೀ ಆನ್ಸರ್‌‌ಗಳು’ ಪರೀಕ್ಷೆ ಬರೆದವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

2021, ಡಿಸೆಂಬರ್‌ 26ನೇ ತಾರೀಖಿನಂದು ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ನಡೆದಿತ್ತು. “ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದು ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿತ್ತು. ಮರು ಪರೀಕ್ಷೆ ನಡೆಸುವುದಾಗಿ ಅಂದು ಸಂಜೆಯೇ ಸ್ಪಷ್ಟನೆ ನೀಡಿತ್ತು.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿತ್ತು. ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ಬರೆದ ಆಕಾಂಕ್ಷಿಗಳ ಸಂಬಂಧ ಯಾವುದೇ ಸ್ಪಷ್ಟನೆ ಇರಲಿಲ್ಲ.

“ಎಲ್ಲರಿಗೂ ಮತ್ತೆ ಪರೀಕ್ಷೆ ನಡೆಸುವುದು ಅಗತ್ಯ” ಎಂದು ಕನ್ನಡ ಪರೀಕ್ಷಾರ್ಥಿಗಳು ಆಗ್ರಹಿಸಿದ್ದರು. ಈ ನಡುವೆಯೇ ಕೀ ಅನ್ಸರ್‌ ಬಿಡುಗಡೆಗೊಳಿಸಲಾಗಿದೆ. ಪರೀಕ್ಷಾ ಬರೆದ ವಿದ್ಯಾರ್ಥಿಗಳು ತಮ್ಮ ‘ಕೀ ಆನ್ಸರ್‌’ಗಳನ್ನು ನೋಡಿ ಆತಂಕಕ್ಕೊಳಗಾಗಿದ್ದಾರೆ. ನೂರು ಪ್ರಶ್ನೆಗಳಲ್ಲಿ ಸುಮಾರು 30ರಿಂದ 60 ಪ್ರಶ್ನೆಗಳನ್ನು ಅಟೆಂಪ್ಟ್‌‌ ಮಾಡಿಯೇ ಇಲ್ಲ ಎಂದು ಕೀ ಆನ್ಸರ್‌ ತೋರಿಸುತ್ತಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ. ನಾನುಗೌರಿ.ಕಾಂಗೆ ಕರೆ ಮಾಡಿದ ಅನೇಕ ಪರೀಕ್ಷಾರ್ಥಿಗಳು ಆತಂಕವನ್ನು ತೋಡಿಕೊಂಡು ತಮ್ಮ ಭವಿಷ್ಯದ ಅನಿಶ್ಚಿತತೆಯನ್ನು ವ್ಯಕ್ತಪಡಿಸಿದ್ದಾರೆ.

ಮಂಡ್ಯದಿಂದ ಕರೆ ಮಾಡಿದ (ಮೈಸೂರು ವಿವಿ ವಿದ್ಯಾರ್ಥಿ) ಸಂದೀಪ್‌‌  ಅವರು, “ನನ್ನ ಕೀ ಆನ್ಸರ್‌ನಲ್ಲಿ ಶೇ. 60ರಷ್ಟು ಪ್ರಶ್ನೆಗಳು ‘not attempt’ ಎಂದು ಬಂದಿದೆ. ಪ್ರಶ್ನೆ ಪತ್ರಿಕೆಯೂ ಸುಲಭವಾಗಿತ್ತು. ಹೀಗಾಗಿ ಈ ಭಾರಿ ಎನ್‌ಇಟಿ ಪಾಸ್‌ ಆಗುತ್ತದೆ ಎಂಬ ನಿರೀಕ್ಷೆಯಲ್ಲಿ ಅಭ್ಯರ್ಥಿಗಳು ಕಾಯುತ್ತಿದ್ದೆವು. ಕೆಲವರಿಗೆ ಮೊದಲ ಪ್ರಶ್ನೆ ಪತ್ರಿಕೆ ಹೀಗೆ ಸಮಸ್ಯೆಯಾಗಿದೆ. ನನಗೆ ಎರಡನೇ ಪ್ರಶ್ನೆಪತ್ರಿಕೆ ಸಮಸ್ಯೆಯಾಗಿದೆ. submit ಕೊಟ್ಟು ಬಂದಿದ್ದೇನೆ. submit ಕೊಟ್ಟಿಲ್ಲದಿದ್ದರೂ ಅದು auto submit ಆಗಬೇಕಿತ್ತು. ಆದರೂ ಸಮಸ್ಯೆಯಾಗಿದೆ. ಪರೀಕ್ಷಾರ್ಥಿಳೆಲ್ಲ ಚಿಂತೆಗೊಳಗಾಗಿದ್ದೇವೆ. ಒಂದೋ ಎರಡೋ ಪ್ರಶ್ನೆಗಳು not attempt ಎಂದರೆ ಪರವಾಗಿಲ್ಲ. ಆದರೆ ಶೇ. 60 ಪ್ರಶ್ನೆಗಳು ಹೀಗೆಯೇ ಆದರೆ ನಾನು ಕೇವಲ ಶೇ. 40ರಷ್ಟು ಪ್ರಶ್ನೆಗಳನ್ನಷ್ಟೇ ಪ್ರಯತ್ನಿಸಿದ್ದೇನೆ ಎಂದಾಗುತ್ತದೆ. ಸಾಮಾನ್ಯ ಪ್ರಶ್ನೆಪತ್ರಿಕೆಯ ಕೀ ಆನ್ಸರ್‌ನಲ್ಲಿ ಕೆಲವರಿಗೆ ಈ ಸಮಸ್ಯೆಯಾಗಿದ್ದರೆ, ಕನ್ನಡ ಐಚ್ಛಿಕ ಪ್ರಶ್ನೆಪತ್ರಿಕೆಯಲ್ಲಿ ಮಾತ್ರ ಪ್ರತಿಯೊಬ್ಬರಿಗೂ ಈ ತೊಂದರೆಯಾಗಿದೆ. ಕನಿಷ್ಠ 30 ಪ್ರಶ್ನೆಗಳಾದರೂ not Attempt ಎಂದು ಎಲ್ಲರಿಗೂ ತೋರಿಸುತ್ತಿದೆ” ಎಂದು ಆರೋಪಿಸಿದರು.

 

“ಪರೀಕ್ಷೆ ದಿನ ಹಿಂದಿ ಪ್ರಶ್ನೆಗಳೆಲ್ಲ ಕಾಣಿಸಿಕೊಂಡು ಆತಂಕಕ್ಕೊಳಗಾದೆವು. ಮತ್ತೆ ಲಾಗಿನ್‌ ಆಗಿ ಅನೇಕರು ಪರೀಕ್ಷೆ ಬರೆದಿದ್ದೇವೆ. ಏನು ಮಾಡಬೇಕೆಂದೇ ಗೊತ್ತಾಗುತ್ತಿಲ್ಲ. ಕನ್ನಡ ವಿದ್ಯಾರ್ಥಿಗಳಿಗೆ ಮಾತ್ರ ಈ ಸಮಸ್ಯೆಯಾಗುತ್ತಿದೆ” ಎಂದು ಆತಂಕ ತೋಡಿಕೊಂಡರು.

ಮೈಸೂರು ವಿವಿ ವಿದ್ಯಾರ್ಥಿ ಶರತ್‌ ಮಾತನಾಡಿ, “ನೀವು ಸಬ್ಮಿಟ್‌ ಮಾಡಿದ್ದೀರಿ. ಸಬ್ಮಿಟ್ ಆದವರಿಗೆ ಮತ್ತೆ ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎನ್ನಲಾಗಿತ್ತು. ಸಬ್ಮಿಟ್ ಆದವರಿಗೆ ಸರಿಯಾಗಿ ಫಲಿತಾಂಶ ಕೊಡಬೇಕು ತಾನೇ? ಈಗ ನಾಟ್ ಅಟೆಂಪ್ಟ್‌ ಎಂದು ಬರುತ್ತಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನೇ ನೀಡಿ ಬಂದಿದ್ದೇವೆ. ಮೂರ್ನಾಲ್ಕು ಪ್ರಶ್ನೆಗಳನ್ನು ಬಿಟ್ಟು ಬಂದಿದ್ದೇವೆ ಎಂದರೆ ಒಪ್ಪಬಹುದು. ಆದರೆ ಮೂವತ್ತರಿಂದ ಅರವತ್ತು ಪ್ರಶ್ನೆಗಳನ್ನು ಬಿಟ್ಟು ಬರಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಕೀ ಆನ್ಸರ್‌ ಸಂಬಂಧ ನೋಟಿಫಿಕೇಷನ್‌ ಬಿಡುಗಡೆ ಮಾಡಿರುವ ಎನ್‌ಟಿಎ, ತೊಂದರೆಯಾಗಿರುವ ಕನ್ನಡ ಪರೀಕ್ಷಾರ್ಥಿಗಳ ಉತ್ತರ ಪತ್ರಿಕೆಯನ್ನೂ ಒಳಗೊಂಡಿರುವುದಾಗಿ ತಿಳಿಸಿದೆ. ಆದರೆ ತಾಂತ್ರಿಕ ದೋಷದ ನಡುವೆಯೂ ಪರೀಕ್ಷೆ ಬರೆದವರ ಕೀ ಆನ್ಸರ್‌ಗಳಲ್ಲಿ ತೊಂದರೆ ಕಾಣಿಸಿರುವುದು ಗೊಂದಲ ಸೃಷ್ಟಿಸಿದೆ. ಕನ್ನಡದ ಎಲ್ಲ ಪರೀಕ್ಷಾರ್ಥಿಗಳಿಗೂ ಇದೇ ಸಮಸ್ಯೆಯಾಗಿರುವಾಗ ಕೀ ಆನ್ಸರ್‌ ಬಿಟ್ಟು ಗೊಂದಲ ಸೃಷ್ಟಿಸಿರುವುದು ಏತಕ್ಕೆ ಎಂದು ಅಭ್ಯರ್ಥಿಗಳು ಕೇಳುತ್ತಿದ್ದಾರೆ.

 

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು, ಕೀ ಆನ್ಸರ್‌ಗಳನ್ನು ಜನವರಿ 21, 2022ರಂದು ಬಿಡುಗಡೆ ಮಾಡಿದೆ. UGC ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ugcnet.nta.nic.inನಲ್ಲಿ ಪರಿಶೀಲಿಸಬಹುದು. ಆಕ್ಷೇಪಣೆಗಳನ್ನು ಜನವರಿ 24, 2022ರವರೆಗೆ ಸಲ್ಲಿಬಹುದು.

ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಆಕ್ಷೇಪಣೆ ಶುಲ್ಕವನ್ನು ಪಾವತಿಸಲು ಜನವರಿ 24 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಪ್ರತಿ ಸವಾಲಿನ ಉತ್ತರಕ್ಕೆ ₹1000 ಸಂಸ್ಕರಣಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಆಕ್ಷೇಪಣೆ ಸರಿಯಾಗಿದ್ದರೆ ಕೀ ಆನ್ಸರ್‌ ಪರಿಷ್ಕರಿಸಲಾಗುತ್ತದೆ. ಪಾವತಿಸಿದ ಸಂಸ್ಕರಣಾ ಶುಲ್ಕವನ್ನೂ ಮರುಪಾವತಿಸಲಾಗುತ್ತದೆ.


ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...