Homeಕರ್ನಾಟಕಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ತಾಂತ್ರಿಕ ದೋಷದ ನಡುವೆಯೂ ಕನ್ನಡ ಎನ್‌ಇಟಿ ಬರೆದವರು ಕೀ ಆನ್ಸರ್‌ ನೋಡಿ ಆತಂಕಿತರಾಗಿದ್ದಾರೆ.

- Advertisement -
- Advertisement -

ಕನ್ನಡ ಇಚ್ಛಿಕ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಗೊಂದಲದ ಗೂಡಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ಕಾಣಿಸಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ನಂತರದಲ್ಲಿ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ ‘ಮರು ಪರೀಕ್ಷೆ’ ನಡೆಸುವುದಾಗಿಯೂ ಹೇಳಿತ್ತು. ಆದರೆ ಈಗ ಬಿಡುಗಡೆ ಮಾಡಿರುವ ‘ಕೀ ಆನ್ಸರ್‌‌ಗಳು’ ಪರೀಕ್ಷೆ ಬರೆದವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

2021, ಡಿಸೆಂಬರ್‌ 26ನೇ ತಾರೀಖಿನಂದು ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ನಡೆದಿತ್ತು. “ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದು ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿತ್ತು. ಮರು ಪರೀಕ್ಷೆ ನಡೆಸುವುದಾಗಿ ಅಂದು ಸಂಜೆಯೇ ಸ್ಪಷ್ಟನೆ ನೀಡಿತ್ತು.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿತ್ತು. ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ಬರೆದ ಆಕಾಂಕ್ಷಿಗಳ ಸಂಬಂಧ ಯಾವುದೇ ಸ್ಪಷ್ಟನೆ ಇರಲಿಲ್ಲ.

“ಎಲ್ಲರಿಗೂ ಮತ್ತೆ ಪರೀಕ್ಷೆ ನಡೆಸುವುದು ಅಗತ್ಯ” ಎಂದು ಕನ್ನಡ ಪರೀಕ್ಷಾರ್ಥಿಗಳು ಆಗ್ರಹಿಸಿದ್ದರು. ಈ ನಡುವೆಯೇ ಕೀ ಅನ್ಸರ್‌ ಬಿಡುಗಡೆಗೊಳಿಸಲಾಗಿದೆ. ಪರೀಕ್ಷಾ ಬರೆದ ವಿದ್ಯಾರ್ಥಿಗಳು ತಮ್ಮ ‘ಕೀ ಆನ್ಸರ್‌’ಗಳನ್ನು ನೋಡಿ ಆತಂಕಕ್ಕೊಳಗಾಗಿದ್ದಾರೆ. ನೂರು ಪ್ರಶ್ನೆಗಳಲ್ಲಿ ಸುಮಾರು 30ರಿಂದ 60 ಪ್ರಶ್ನೆಗಳನ್ನು ಅಟೆಂಪ್ಟ್‌‌ ಮಾಡಿಯೇ ಇಲ್ಲ ಎಂದು ಕೀ ಆನ್ಸರ್‌ ತೋರಿಸುತ್ತಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ. ನಾನುಗೌರಿ.ಕಾಂಗೆ ಕರೆ ಮಾಡಿದ ಅನೇಕ ಪರೀಕ್ಷಾರ್ಥಿಗಳು ಆತಂಕವನ್ನು ತೋಡಿಕೊಂಡು ತಮ್ಮ ಭವಿಷ್ಯದ ಅನಿಶ್ಚಿತತೆಯನ್ನು ವ್ಯಕ್ತಪಡಿಸಿದ್ದಾರೆ.

ಮಂಡ್ಯದಿಂದ ಕರೆ ಮಾಡಿದ (ಮೈಸೂರು ವಿವಿ ವಿದ್ಯಾರ್ಥಿ) ಸಂದೀಪ್‌‌  ಅವರು, “ನನ್ನ ಕೀ ಆನ್ಸರ್‌ನಲ್ಲಿ ಶೇ. 60ರಷ್ಟು ಪ್ರಶ್ನೆಗಳು ‘not attempt’ ಎಂದು ಬಂದಿದೆ. ಪ್ರಶ್ನೆ ಪತ್ರಿಕೆಯೂ ಸುಲಭವಾಗಿತ್ತು. ಹೀಗಾಗಿ ಈ ಭಾರಿ ಎನ್‌ಇಟಿ ಪಾಸ್‌ ಆಗುತ್ತದೆ ಎಂಬ ನಿರೀಕ್ಷೆಯಲ್ಲಿ ಅಭ್ಯರ್ಥಿಗಳು ಕಾಯುತ್ತಿದ್ದೆವು. ಕೆಲವರಿಗೆ ಮೊದಲ ಪ್ರಶ್ನೆ ಪತ್ರಿಕೆ ಹೀಗೆ ಸಮಸ್ಯೆಯಾಗಿದೆ. ನನಗೆ ಎರಡನೇ ಪ್ರಶ್ನೆಪತ್ರಿಕೆ ಸಮಸ್ಯೆಯಾಗಿದೆ. submit ಕೊಟ್ಟು ಬಂದಿದ್ದೇನೆ. submit ಕೊಟ್ಟಿಲ್ಲದಿದ್ದರೂ ಅದು auto submit ಆಗಬೇಕಿತ್ತು. ಆದರೂ ಸಮಸ್ಯೆಯಾಗಿದೆ. ಪರೀಕ್ಷಾರ್ಥಿಳೆಲ್ಲ ಚಿಂತೆಗೊಳಗಾಗಿದ್ದೇವೆ. ಒಂದೋ ಎರಡೋ ಪ್ರಶ್ನೆಗಳು not attempt ಎಂದರೆ ಪರವಾಗಿಲ್ಲ. ಆದರೆ ಶೇ. 60 ಪ್ರಶ್ನೆಗಳು ಹೀಗೆಯೇ ಆದರೆ ನಾನು ಕೇವಲ ಶೇ. 40ರಷ್ಟು ಪ್ರಶ್ನೆಗಳನ್ನಷ್ಟೇ ಪ್ರಯತ್ನಿಸಿದ್ದೇನೆ ಎಂದಾಗುತ್ತದೆ. ಸಾಮಾನ್ಯ ಪ್ರಶ್ನೆಪತ್ರಿಕೆಯ ಕೀ ಆನ್ಸರ್‌ನಲ್ಲಿ ಕೆಲವರಿಗೆ ಈ ಸಮಸ್ಯೆಯಾಗಿದ್ದರೆ, ಕನ್ನಡ ಐಚ್ಛಿಕ ಪ್ರಶ್ನೆಪತ್ರಿಕೆಯಲ್ಲಿ ಮಾತ್ರ ಪ್ರತಿಯೊಬ್ಬರಿಗೂ ಈ ತೊಂದರೆಯಾಗಿದೆ. ಕನಿಷ್ಠ 30 ಪ್ರಶ್ನೆಗಳಾದರೂ not Attempt ಎಂದು ಎಲ್ಲರಿಗೂ ತೋರಿಸುತ್ತಿದೆ” ಎಂದು ಆರೋಪಿಸಿದರು.

 

“ಪರೀಕ್ಷೆ ದಿನ ಹಿಂದಿ ಪ್ರಶ್ನೆಗಳೆಲ್ಲ ಕಾಣಿಸಿಕೊಂಡು ಆತಂಕಕ್ಕೊಳಗಾದೆವು. ಮತ್ತೆ ಲಾಗಿನ್‌ ಆಗಿ ಅನೇಕರು ಪರೀಕ್ಷೆ ಬರೆದಿದ್ದೇವೆ. ಏನು ಮಾಡಬೇಕೆಂದೇ ಗೊತ್ತಾಗುತ್ತಿಲ್ಲ. ಕನ್ನಡ ವಿದ್ಯಾರ್ಥಿಗಳಿಗೆ ಮಾತ್ರ ಈ ಸಮಸ್ಯೆಯಾಗುತ್ತಿದೆ” ಎಂದು ಆತಂಕ ತೋಡಿಕೊಂಡರು.

ಮೈಸೂರು ವಿವಿ ವಿದ್ಯಾರ್ಥಿ ಶರತ್‌ ಮಾತನಾಡಿ, “ನೀವು ಸಬ್ಮಿಟ್‌ ಮಾಡಿದ್ದೀರಿ. ಸಬ್ಮಿಟ್ ಆದವರಿಗೆ ಮತ್ತೆ ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎನ್ನಲಾಗಿತ್ತು. ಸಬ್ಮಿಟ್ ಆದವರಿಗೆ ಸರಿಯಾಗಿ ಫಲಿತಾಂಶ ಕೊಡಬೇಕು ತಾನೇ? ಈಗ ನಾಟ್ ಅಟೆಂಪ್ಟ್‌ ಎಂದು ಬರುತ್ತಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನೇ ನೀಡಿ ಬಂದಿದ್ದೇವೆ. ಮೂರ್ನಾಲ್ಕು ಪ್ರಶ್ನೆಗಳನ್ನು ಬಿಟ್ಟು ಬಂದಿದ್ದೇವೆ ಎಂದರೆ ಒಪ್ಪಬಹುದು. ಆದರೆ ಮೂವತ್ತರಿಂದ ಅರವತ್ತು ಪ್ರಶ್ನೆಗಳನ್ನು ಬಿಟ್ಟು ಬರಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಕೀ ಆನ್ಸರ್‌ ಸಂಬಂಧ ನೋಟಿಫಿಕೇಷನ್‌ ಬಿಡುಗಡೆ ಮಾಡಿರುವ ಎನ್‌ಟಿಎ, ತೊಂದರೆಯಾಗಿರುವ ಕನ್ನಡ ಪರೀಕ್ಷಾರ್ಥಿಗಳ ಉತ್ತರ ಪತ್ರಿಕೆಯನ್ನೂ ಒಳಗೊಂಡಿರುವುದಾಗಿ ತಿಳಿಸಿದೆ. ಆದರೆ ತಾಂತ್ರಿಕ ದೋಷದ ನಡುವೆಯೂ ಪರೀಕ್ಷೆ ಬರೆದವರ ಕೀ ಆನ್ಸರ್‌ಗಳಲ್ಲಿ ತೊಂದರೆ ಕಾಣಿಸಿರುವುದು ಗೊಂದಲ ಸೃಷ್ಟಿಸಿದೆ. ಕನ್ನಡದ ಎಲ್ಲ ಪರೀಕ್ಷಾರ್ಥಿಗಳಿಗೂ ಇದೇ ಸಮಸ್ಯೆಯಾಗಿರುವಾಗ ಕೀ ಆನ್ಸರ್‌ ಬಿಟ್ಟು ಗೊಂದಲ ಸೃಷ್ಟಿಸಿರುವುದು ಏತಕ್ಕೆ ಎಂದು ಅಭ್ಯರ್ಥಿಗಳು ಕೇಳುತ್ತಿದ್ದಾರೆ.

 

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು, ಕೀ ಆನ್ಸರ್‌ಗಳನ್ನು ಜನವರಿ 21, 2022ರಂದು ಬಿಡುಗಡೆ ಮಾಡಿದೆ. UGC ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ugcnet.nta.nic.inನಲ್ಲಿ ಪರಿಶೀಲಿಸಬಹುದು. ಆಕ್ಷೇಪಣೆಗಳನ್ನು ಜನವರಿ 24, 2022ರವರೆಗೆ ಸಲ್ಲಿಬಹುದು.

ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಆಕ್ಷೇಪಣೆ ಶುಲ್ಕವನ್ನು ಪಾವತಿಸಲು ಜನವರಿ 24 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಪ್ರತಿ ಸವಾಲಿನ ಉತ್ತರಕ್ಕೆ ₹1000 ಸಂಸ್ಕರಣಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಆಕ್ಷೇಪಣೆ ಸರಿಯಾಗಿದ್ದರೆ ಕೀ ಆನ್ಸರ್‌ ಪರಿಷ್ಕರಿಸಲಾಗುತ್ತದೆ. ಪಾವತಿಸಿದ ಸಂಸ್ಕರಣಾ ಶುಲ್ಕವನ್ನೂ ಮರುಪಾವತಿಸಲಾಗುತ್ತದೆ.


ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...