Homeಕರ್ನಾಟಕಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ತಾಂತ್ರಿಕ ದೋಷದ ನಡುವೆಯೂ ಕನ್ನಡ ಎನ್‌ಇಟಿ ಬರೆದವರು ಕೀ ಆನ್ಸರ್‌ ನೋಡಿ ಆತಂಕಿತರಾಗಿದ್ದಾರೆ.

- Advertisement -
- Advertisement -

ಕನ್ನಡ ಇಚ್ಛಿಕ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಗೊಂದಲದ ಗೂಡಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ಕಾಣಿಸಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ನಂತರದಲ್ಲಿ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ ‘ಮರು ಪರೀಕ್ಷೆ’ ನಡೆಸುವುದಾಗಿಯೂ ಹೇಳಿತ್ತು. ಆದರೆ ಈಗ ಬಿಡುಗಡೆ ಮಾಡಿರುವ ‘ಕೀ ಆನ್ಸರ್‌‌ಗಳು’ ಪರೀಕ್ಷೆ ಬರೆದವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

2021, ಡಿಸೆಂಬರ್‌ 26ನೇ ತಾರೀಖಿನಂದು ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ನಡೆದಿತ್ತು. “ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದು ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿತ್ತು. ಮರು ಪರೀಕ್ಷೆ ನಡೆಸುವುದಾಗಿ ಅಂದು ಸಂಜೆಯೇ ಸ್ಪಷ್ಟನೆ ನೀಡಿತ್ತು.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿತ್ತು. ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ಬರೆದ ಆಕಾಂಕ್ಷಿಗಳ ಸಂಬಂಧ ಯಾವುದೇ ಸ್ಪಷ್ಟನೆ ಇರಲಿಲ್ಲ.

“ಎಲ್ಲರಿಗೂ ಮತ್ತೆ ಪರೀಕ್ಷೆ ನಡೆಸುವುದು ಅಗತ್ಯ” ಎಂದು ಕನ್ನಡ ಪರೀಕ್ಷಾರ್ಥಿಗಳು ಆಗ್ರಹಿಸಿದ್ದರು. ಈ ನಡುವೆಯೇ ಕೀ ಅನ್ಸರ್‌ ಬಿಡುಗಡೆಗೊಳಿಸಲಾಗಿದೆ. ಪರೀಕ್ಷಾ ಬರೆದ ವಿದ್ಯಾರ್ಥಿಗಳು ತಮ್ಮ ‘ಕೀ ಆನ್ಸರ್‌’ಗಳನ್ನು ನೋಡಿ ಆತಂಕಕ್ಕೊಳಗಾಗಿದ್ದಾರೆ. ನೂರು ಪ್ರಶ್ನೆಗಳಲ್ಲಿ ಸುಮಾರು 30ರಿಂದ 60 ಪ್ರಶ್ನೆಗಳನ್ನು ಅಟೆಂಪ್ಟ್‌‌ ಮಾಡಿಯೇ ಇಲ್ಲ ಎಂದು ಕೀ ಆನ್ಸರ್‌ ತೋರಿಸುತ್ತಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ. ನಾನುಗೌರಿ.ಕಾಂಗೆ ಕರೆ ಮಾಡಿದ ಅನೇಕ ಪರೀಕ್ಷಾರ್ಥಿಗಳು ಆತಂಕವನ್ನು ತೋಡಿಕೊಂಡು ತಮ್ಮ ಭವಿಷ್ಯದ ಅನಿಶ್ಚಿತತೆಯನ್ನು ವ್ಯಕ್ತಪಡಿಸಿದ್ದಾರೆ.

ಮಂಡ್ಯದಿಂದ ಕರೆ ಮಾಡಿದ (ಮೈಸೂರು ವಿವಿ ವಿದ್ಯಾರ್ಥಿ) ಸಂದೀಪ್‌‌  ಅವರು, “ನನ್ನ ಕೀ ಆನ್ಸರ್‌ನಲ್ಲಿ ಶೇ. 60ರಷ್ಟು ಪ್ರಶ್ನೆಗಳು ‘not attempt’ ಎಂದು ಬಂದಿದೆ. ಪ್ರಶ್ನೆ ಪತ್ರಿಕೆಯೂ ಸುಲಭವಾಗಿತ್ತು. ಹೀಗಾಗಿ ಈ ಭಾರಿ ಎನ್‌ಇಟಿ ಪಾಸ್‌ ಆಗುತ್ತದೆ ಎಂಬ ನಿರೀಕ್ಷೆಯಲ್ಲಿ ಅಭ್ಯರ್ಥಿಗಳು ಕಾಯುತ್ತಿದ್ದೆವು. ಕೆಲವರಿಗೆ ಮೊದಲ ಪ್ರಶ್ನೆ ಪತ್ರಿಕೆ ಹೀಗೆ ಸಮಸ್ಯೆಯಾಗಿದೆ. ನನಗೆ ಎರಡನೇ ಪ್ರಶ್ನೆಪತ್ರಿಕೆ ಸಮಸ್ಯೆಯಾಗಿದೆ. submit ಕೊಟ್ಟು ಬಂದಿದ್ದೇನೆ. submit ಕೊಟ್ಟಿಲ್ಲದಿದ್ದರೂ ಅದು auto submit ಆಗಬೇಕಿತ್ತು. ಆದರೂ ಸಮಸ್ಯೆಯಾಗಿದೆ. ಪರೀಕ್ಷಾರ್ಥಿಳೆಲ್ಲ ಚಿಂತೆಗೊಳಗಾಗಿದ್ದೇವೆ. ಒಂದೋ ಎರಡೋ ಪ್ರಶ್ನೆಗಳು not attempt ಎಂದರೆ ಪರವಾಗಿಲ್ಲ. ಆದರೆ ಶೇ. 60 ಪ್ರಶ್ನೆಗಳು ಹೀಗೆಯೇ ಆದರೆ ನಾನು ಕೇವಲ ಶೇ. 40ರಷ್ಟು ಪ್ರಶ್ನೆಗಳನ್ನಷ್ಟೇ ಪ್ರಯತ್ನಿಸಿದ್ದೇನೆ ಎಂದಾಗುತ್ತದೆ. ಸಾಮಾನ್ಯ ಪ್ರಶ್ನೆಪತ್ರಿಕೆಯ ಕೀ ಆನ್ಸರ್‌ನಲ್ಲಿ ಕೆಲವರಿಗೆ ಈ ಸಮಸ್ಯೆಯಾಗಿದ್ದರೆ, ಕನ್ನಡ ಐಚ್ಛಿಕ ಪ್ರಶ್ನೆಪತ್ರಿಕೆಯಲ್ಲಿ ಮಾತ್ರ ಪ್ರತಿಯೊಬ್ಬರಿಗೂ ಈ ತೊಂದರೆಯಾಗಿದೆ. ಕನಿಷ್ಠ 30 ಪ್ರಶ್ನೆಗಳಾದರೂ not Attempt ಎಂದು ಎಲ್ಲರಿಗೂ ತೋರಿಸುತ್ತಿದೆ” ಎಂದು ಆರೋಪಿಸಿದರು.

 

“ಪರೀಕ್ಷೆ ದಿನ ಹಿಂದಿ ಪ್ರಶ್ನೆಗಳೆಲ್ಲ ಕಾಣಿಸಿಕೊಂಡು ಆತಂಕಕ್ಕೊಳಗಾದೆವು. ಮತ್ತೆ ಲಾಗಿನ್‌ ಆಗಿ ಅನೇಕರು ಪರೀಕ್ಷೆ ಬರೆದಿದ್ದೇವೆ. ಏನು ಮಾಡಬೇಕೆಂದೇ ಗೊತ್ತಾಗುತ್ತಿಲ್ಲ. ಕನ್ನಡ ವಿದ್ಯಾರ್ಥಿಗಳಿಗೆ ಮಾತ್ರ ಈ ಸಮಸ್ಯೆಯಾಗುತ್ತಿದೆ” ಎಂದು ಆತಂಕ ತೋಡಿಕೊಂಡರು.

ಮೈಸೂರು ವಿವಿ ವಿದ್ಯಾರ್ಥಿ ಶರತ್‌ ಮಾತನಾಡಿ, “ನೀವು ಸಬ್ಮಿಟ್‌ ಮಾಡಿದ್ದೀರಿ. ಸಬ್ಮಿಟ್ ಆದವರಿಗೆ ಮತ್ತೆ ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎನ್ನಲಾಗಿತ್ತು. ಸಬ್ಮಿಟ್ ಆದವರಿಗೆ ಸರಿಯಾಗಿ ಫಲಿತಾಂಶ ಕೊಡಬೇಕು ತಾನೇ? ಈಗ ನಾಟ್ ಅಟೆಂಪ್ಟ್‌ ಎಂದು ಬರುತ್ತಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನೇ ನೀಡಿ ಬಂದಿದ್ದೇವೆ. ಮೂರ್ನಾಲ್ಕು ಪ್ರಶ್ನೆಗಳನ್ನು ಬಿಟ್ಟು ಬಂದಿದ್ದೇವೆ ಎಂದರೆ ಒಪ್ಪಬಹುದು. ಆದರೆ ಮೂವತ್ತರಿಂದ ಅರವತ್ತು ಪ್ರಶ್ನೆಗಳನ್ನು ಬಿಟ್ಟು ಬರಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಕೀ ಆನ್ಸರ್‌ ಸಂಬಂಧ ನೋಟಿಫಿಕೇಷನ್‌ ಬಿಡುಗಡೆ ಮಾಡಿರುವ ಎನ್‌ಟಿಎ, ತೊಂದರೆಯಾಗಿರುವ ಕನ್ನಡ ಪರೀಕ್ಷಾರ್ಥಿಗಳ ಉತ್ತರ ಪತ್ರಿಕೆಯನ್ನೂ ಒಳಗೊಂಡಿರುವುದಾಗಿ ತಿಳಿಸಿದೆ. ಆದರೆ ತಾಂತ್ರಿಕ ದೋಷದ ನಡುವೆಯೂ ಪರೀಕ್ಷೆ ಬರೆದವರ ಕೀ ಆನ್ಸರ್‌ಗಳಲ್ಲಿ ತೊಂದರೆ ಕಾಣಿಸಿರುವುದು ಗೊಂದಲ ಸೃಷ್ಟಿಸಿದೆ. ಕನ್ನಡದ ಎಲ್ಲ ಪರೀಕ್ಷಾರ್ಥಿಗಳಿಗೂ ಇದೇ ಸಮಸ್ಯೆಯಾಗಿರುವಾಗ ಕೀ ಆನ್ಸರ್‌ ಬಿಟ್ಟು ಗೊಂದಲ ಸೃಷ್ಟಿಸಿರುವುದು ಏತಕ್ಕೆ ಎಂದು ಅಭ್ಯರ್ಥಿಗಳು ಕೇಳುತ್ತಿದ್ದಾರೆ.

 

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು, ಕೀ ಆನ್ಸರ್‌ಗಳನ್ನು ಜನವರಿ 21, 2022ರಂದು ಬಿಡುಗಡೆ ಮಾಡಿದೆ. UGC ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ugcnet.nta.nic.inನಲ್ಲಿ ಪರಿಶೀಲಿಸಬಹುದು. ಆಕ್ಷೇಪಣೆಗಳನ್ನು ಜನವರಿ 24, 2022ರವರೆಗೆ ಸಲ್ಲಿಬಹುದು.

ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಆಕ್ಷೇಪಣೆ ಶುಲ್ಕವನ್ನು ಪಾವತಿಸಲು ಜನವರಿ 24 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಪ್ರತಿ ಸವಾಲಿನ ಉತ್ತರಕ್ಕೆ ₹1000 ಸಂಸ್ಕರಣಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಆಕ್ಷೇಪಣೆ ಸರಿಯಾಗಿದ್ದರೆ ಕೀ ಆನ್ಸರ್‌ ಪರಿಷ್ಕರಿಸಲಾಗುತ್ತದೆ. ಪಾವತಿಸಿದ ಸಂಸ್ಕರಣಾ ಶುಲ್ಕವನ್ನೂ ಮರುಪಾವತಿಸಲಾಗುತ್ತದೆ.


ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...