Homeಮುಖಪುಟಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು - ಆರ್‌ಟಿಐನಿಂದ ಬಹಿರಂಗ!

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ

- Advertisement -
- Advertisement -

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ ಸಾಕಷ್ಟಿವೆ. ಸಂವಿಧಾನದ ಅಡಿಯಲ್ಲಿ 22 ಭಾಷೆಗಳನ್ನು ಸಮಾನವಾಗಿ ಸೂಚಿಸಿದ್ದರೂ ಸಹ ಕೇವಲ ಹಿಂದಿಯನ್ನು ಮಾತ್ರ ಉನ್ನತೀಕರಿಸುತ್ತಿರುವುದರ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳಿಂದ ವ್ಯಾಪಕ ವಿರೊಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ವ್ಯಾಪಕ ಟೀಕೆಗಳು ಬಂದಿದ್ದವು.

ಹಿಂದಿ ದಿವಸ್‌ ಆಚರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ಹಣದ ಮಾಹಿತಿಯನ್ನು ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗವಾಗಿರುವ ಮಾಹಿತಿ ನಿಜಕ್ಕೂ ಅಚ್ಚರಿಯನ್ನುಂಟುಮಾಡುತ್ತದೆ.

ಕಳೆದ 12 ವರ್ಷಗಳಲ್ಲಿ ‘ಹಿಂದಿ ದಿವಸ್‌’ ಆಚರಣೆಗೆ ಸರ್ಕಾರ ಖರ್ಚು ಮಾಡಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಕೇಂದ್ರದ ‘ಅಧಿಕೃತ ಭಾಷೆಗಳ ಇಲಾಖೆ’ಯು ಮಾಹಿತಿ ನೀಡಿದ್ದು, “ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆಡಳಿತದಲ್ಲಿ ಹಿಂದಿ ದಿವಸ್‌ಗೆ ಮೀಸಲಿಡುತ್ತಿದ್ದ ಹಣದ ಮೊತ್ತ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದ್ವಿಗುಣಗೊಂಡಿದೆ” ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಚಿರು, “ಹಿಂದಿ ದಿವಸ್ ಆಚರಣೆಗೆ ಕಳೆದ 12ವರ್ಷಗಳಿಂದ ತಗಲುತ್ತಿರುವ ವೆಚ್ಚದ ಬಗ್ಗೆ ಮಾಹಿತಿ ಕೋರಿ ನಾನು ಸೆಪ್ಟಂಬರ್ 17 ರಂದು RTI ಅರ್ಜಿ ಸಲ್ಲಿಸಿದ್ದೆ. 30 ದಿನಗಳ ಒಳಗೆ ಪ್ರತ್ಯುತ್ತರ ಬಾರದ ಕಾರಣ ಮೇಲ್ಮನವಿ ಮೊರೆ ಹೋಗಿದ್ದೆ. ಸುಮಾರು 2 ತಿಂಗಳ ನಂತರ ಈ ಸಂಬಂಧ ‘ಡಿಪಾರ್ಟ್ಮೆಂಟ್ ಆಫ್ ಅಫೀಷಿಯಲ್ ಲ್ಯಾಂಗ್ವೇಜ್’ ನಿಂದ ಪ್ರತ್ಯುತ್ತರ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಕುರಿತು ಉತ್ತರ ಭಾರತದ ಜನಪರ ಮುಖಂಡರ ಅಭಿಪ್ರಾಯವೇನು? – ಡಾ.ಎಚ್.ವಿ ವಾಸು

ಮತ್ತೊಂದು ಟ್ವೀಟ್‌ನಲ್ಲಿ ಕೇಂದ್ರ ಅಧಿಕೃತ ಭಾಷಾ ಇಲಾಖೆಯು ನೀಡಿರುವ ಮಾಹಿತಿಯನ್ನು ಹಂಚಿಕೊಂಡು, “2009-19 ರವರೆಗೆ ಇದಕ್ಕೆ ಸುಮಾರು 1.5 ಕೋಟಿ ವೆಚ್ಚ ತಗುಲಿದೆ. ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ. ಇಷ್ಟೊಂದು ಯಥೇಚ್ಛವಾಗಿ ಖರ್ಚು ಮಾಡಲು ಅಚ್ಚೆ ದಿನ್ ಕಾರಣವಿರಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ಈ ಮಾಹಿತಿಯ ಪ್ರಕಾರ, 2009 ರಲ್ಲಿ ಹಿಂದಿ ದಿವಸ್ ಆಚರಣೆಗೆ ಮಾಡಿರುವ ಖರ್ಚು 8 ಲಕ್ಷದ 68 ಸಾವಿರದ 305 ರೂಗಳಾಗಿದ್ದರೆ, 2019 ರಲ್ಲಿ 15 ಲಕ್ಷದ 39 ಸಾವಿರದ 511 ರೂಗಳು ಖರ್ಚಾಗಿದೆ. ಅಂದರೆ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಸರಾಸರಿ 17 ಲಕ್ಷದ 32 ಸಾವಿರ ರೂಗಳನ್ನು ಹಿಂದಿ ದಿವಸ್‌ಗೆ ಖರ್ಚು ಮಾಡಲಾಗಿದೆ.

ಈ ಮೂಲಕ ಹಿಂದಿ ಭಾಷೆಯನ್ನು ಮಾತ್ರವಲ್ಲದೇ ಉತ್ತರ ಭಾರದ ಸಂಸ್ಕೃತಿಯನ್ನೂ ಸಹ ದೇಶದ ಇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ಹುನ್ನಾರ ನಡೆಯುತ್ತಿದೆ. ಇದರಿಂದ ಭವಿಷ್ಯದಲ್ಲಿ ಹಿಂದಿ ಮಾತ್ರ ಉಳಿದುಕೊಂಡು ಇತರೆ ಭಾಷೆಗಳ ಅಸ್ಮಿತೆ ನಾಶವಾಗುತ್ತದೆ.

ಕೇಂದ್ರ ಸರ್ಕಾರದ ಹಿಂದಿಪರ ಧೋರಣೆ ಏನೆಂಬುದು ಇದರಿಂದಲೇ ತಿಳಿಯುತ್ತದೆ. ಹಿಂದಿಗಾಗಿ ಇಷ್ಟು ಹಣ ಖರ್ಚು ಮಾಡುವುದರಲ್ಲಿ ತಕರಾರಿಲ್ಲ. ಆದರೆ ಹಿಂದಿಯಂತೆಯೇ ಇತರ ಭಾಷೆಗಳಿಗೂ ಇದೇ ಪ್ರಧಾನ್ಯತೆ ನೀಡಬೇಕು ಎಂಬುದು ಎಲ್ಲರ ಪ್ರಮುಖ ಕೂಗಾಗಿದೆ.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...