Homeಮುಖಪುಟಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು - ಆರ್‌ಟಿಐನಿಂದ ಬಹಿರಂಗ!

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ

- Advertisement -
- Advertisement -

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ ಸಾಕಷ್ಟಿವೆ. ಸಂವಿಧಾನದ ಅಡಿಯಲ್ಲಿ 22 ಭಾಷೆಗಳನ್ನು ಸಮಾನವಾಗಿ ಸೂಚಿಸಿದ್ದರೂ ಸಹ ಕೇವಲ ಹಿಂದಿಯನ್ನು ಮಾತ್ರ ಉನ್ನತೀಕರಿಸುತ್ತಿರುವುದರ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳಿಂದ ವ್ಯಾಪಕ ವಿರೊಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ವ್ಯಾಪಕ ಟೀಕೆಗಳು ಬಂದಿದ್ದವು.

ಹಿಂದಿ ದಿವಸ್‌ ಆಚರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ಹಣದ ಮಾಹಿತಿಯನ್ನು ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗವಾಗಿರುವ ಮಾಹಿತಿ ನಿಜಕ್ಕೂ ಅಚ್ಚರಿಯನ್ನುಂಟುಮಾಡುತ್ತದೆ.

ಕಳೆದ 12 ವರ್ಷಗಳಲ್ಲಿ ‘ಹಿಂದಿ ದಿವಸ್‌’ ಆಚರಣೆಗೆ ಸರ್ಕಾರ ಖರ್ಚು ಮಾಡಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಕೇಂದ್ರದ ‘ಅಧಿಕೃತ ಭಾಷೆಗಳ ಇಲಾಖೆ’ಯು ಮಾಹಿತಿ ನೀಡಿದ್ದು, “ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆಡಳಿತದಲ್ಲಿ ಹಿಂದಿ ದಿವಸ್‌ಗೆ ಮೀಸಲಿಡುತ್ತಿದ್ದ ಹಣದ ಮೊತ್ತ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದ್ವಿಗುಣಗೊಂಡಿದೆ” ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಚಿರು, “ಹಿಂದಿ ದಿವಸ್ ಆಚರಣೆಗೆ ಕಳೆದ 12ವರ್ಷಗಳಿಂದ ತಗಲುತ್ತಿರುವ ವೆಚ್ಚದ ಬಗ್ಗೆ ಮಾಹಿತಿ ಕೋರಿ ನಾನು ಸೆಪ್ಟಂಬರ್ 17 ರಂದು RTI ಅರ್ಜಿ ಸಲ್ಲಿಸಿದ್ದೆ. 30 ದಿನಗಳ ಒಳಗೆ ಪ್ರತ್ಯುತ್ತರ ಬಾರದ ಕಾರಣ ಮೇಲ್ಮನವಿ ಮೊರೆ ಹೋಗಿದ್ದೆ. ಸುಮಾರು 2 ತಿಂಗಳ ನಂತರ ಈ ಸಂಬಂಧ ‘ಡಿಪಾರ್ಟ್ಮೆಂಟ್ ಆಫ್ ಅಫೀಷಿಯಲ್ ಲ್ಯಾಂಗ್ವೇಜ್’ ನಿಂದ ಪ್ರತ್ಯುತ್ತರ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಕುರಿತು ಉತ್ತರ ಭಾರತದ ಜನಪರ ಮುಖಂಡರ ಅಭಿಪ್ರಾಯವೇನು? – ಡಾ.ಎಚ್.ವಿ ವಾಸು

ಮತ್ತೊಂದು ಟ್ವೀಟ್‌ನಲ್ಲಿ ಕೇಂದ್ರ ಅಧಿಕೃತ ಭಾಷಾ ಇಲಾಖೆಯು ನೀಡಿರುವ ಮಾಹಿತಿಯನ್ನು ಹಂಚಿಕೊಂಡು, “2009-19 ರವರೆಗೆ ಇದಕ್ಕೆ ಸುಮಾರು 1.5 ಕೋಟಿ ವೆಚ್ಚ ತಗುಲಿದೆ. ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ. ಇಷ್ಟೊಂದು ಯಥೇಚ್ಛವಾಗಿ ಖರ್ಚು ಮಾಡಲು ಅಚ್ಚೆ ದಿನ್ ಕಾರಣವಿರಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ಈ ಮಾಹಿತಿಯ ಪ್ರಕಾರ, 2009 ರಲ್ಲಿ ಹಿಂದಿ ದಿವಸ್ ಆಚರಣೆಗೆ ಮಾಡಿರುವ ಖರ್ಚು 8 ಲಕ್ಷದ 68 ಸಾವಿರದ 305 ರೂಗಳಾಗಿದ್ದರೆ, 2019 ರಲ್ಲಿ 15 ಲಕ್ಷದ 39 ಸಾವಿರದ 511 ರೂಗಳು ಖರ್ಚಾಗಿದೆ. ಅಂದರೆ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಸರಾಸರಿ 17 ಲಕ್ಷದ 32 ಸಾವಿರ ರೂಗಳನ್ನು ಹಿಂದಿ ದಿವಸ್‌ಗೆ ಖರ್ಚು ಮಾಡಲಾಗಿದೆ.

ಈ ಮೂಲಕ ಹಿಂದಿ ಭಾಷೆಯನ್ನು ಮಾತ್ರವಲ್ಲದೇ ಉತ್ತರ ಭಾರದ ಸಂಸ್ಕೃತಿಯನ್ನೂ ಸಹ ದೇಶದ ಇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ಹುನ್ನಾರ ನಡೆಯುತ್ತಿದೆ. ಇದರಿಂದ ಭವಿಷ್ಯದಲ್ಲಿ ಹಿಂದಿ ಮಾತ್ರ ಉಳಿದುಕೊಂಡು ಇತರೆ ಭಾಷೆಗಳ ಅಸ್ಮಿತೆ ನಾಶವಾಗುತ್ತದೆ.

ಕೇಂದ್ರ ಸರ್ಕಾರದ ಹಿಂದಿಪರ ಧೋರಣೆ ಏನೆಂಬುದು ಇದರಿಂದಲೇ ತಿಳಿಯುತ್ತದೆ. ಹಿಂದಿಗಾಗಿ ಇಷ್ಟು ಹಣ ಖರ್ಚು ಮಾಡುವುದರಲ್ಲಿ ತಕರಾರಿಲ್ಲ. ಆದರೆ ಹಿಂದಿಯಂತೆಯೇ ಇತರ ಭಾಷೆಗಳಿಗೂ ಇದೇ ಪ್ರಧಾನ್ಯತೆ ನೀಡಬೇಕು ಎಂಬುದು ಎಲ್ಲರ ಪ್ರಮುಖ ಕೂಗಾಗಿದೆ.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...