Homeಮುಖಪುಟಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು - ಆರ್‌ಟಿಐನಿಂದ ಬಹಿರಂಗ!

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ

- Advertisement -
- Advertisement -

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ ಸಾಕಷ್ಟಿವೆ. ಸಂವಿಧಾನದ ಅಡಿಯಲ್ಲಿ 22 ಭಾಷೆಗಳನ್ನು ಸಮಾನವಾಗಿ ಸೂಚಿಸಿದ್ದರೂ ಸಹ ಕೇವಲ ಹಿಂದಿಯನ್ನು ಮಾತ್ರ ಉನ್ನತೀಕರಿಸುತ್ತಿರುವುದರ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳಿಂದ ವ್ಯಾಪಕ ವಿರೊಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ವ್ಯಾಪಕ ಟೀಕೆಗಳು ಬಂದಿದ್ದವು.

ಹಿಂದಿ ದಿವಸ್‌ ಆಚರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ಹಣದ ಮಾಹಿತಿಯನ್ನು ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗವಾಗಿರುವ ಮಾಹಿತಿ ನಿಜಕ್ಕೂ ಅಚ್ಚರಿಯನ್ನುಂಟುಮಾಡುತ್ತದೆ.

ಕಳೆದ 12 ವರ್ಷಗಳಲ್ಲಿ ‘ಹಿಂದಿ ದಿವಸ್‌’ ಆಚರಣೆಗೆ ಸರ್ಕಾರ ಖರ್ಚು ಮಾಡಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಕೇಂದ್ರದ ‘ಅಧಿಕೃತ ಭಾಷೆಗಳ ಇಲಾಖೆ’ಯು ಮಾಹಿತಿ ನೀಡಿದ್ದು, “ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆಡಳಿತದಲ್ಲಿ ಹಿಂದಿ ದಿವಸ್‌ಗೆ ಮೀಸಲಿಡುತ್ತಿದ್ದ ಹಣದ ಮೊತ್ತ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದ್ವಿಗುಣಗೊಂಡಿದೆ” ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಚಿರು, “ಹಿಂದಿ ದಿವಸ್ ಆಚರಣೆಗೆ ಕಳೆದ 12ವರ್ಷಗಳಿಂದ ತಗಲುತ್ತಿರುವ ವೆಚ್ಚದ ಬಗ್ಗೆ ಮಾಹಿತಿ ಕೋರಿ ನಾನು ಸೆಪ್ಟಂಬರ್ 17 ರಂದು RTI ಅರ್ಜಿ ಸಲ್ಲಿಸಿದ್ದೆ. 30 ದಿನಗಳ ಒಳಗೆ ಪ್ರತ್ಯುತ್ತರ ಬಾರದ ಕಾರಣ ಮೇಲ್ಮನವಿ ಮೊರೆ ಹೋಗಿದ್ದೆ. ಸುಮಾರು 2 ತಿಂಗಳ ನಂತರ ಈ ಸಂಬಂಧ ‘ಡಿಪಾರ್ಟ್ಮೆಂಟ್ ಆಫ್ ಅಫೀಷಿಯಲ್ ಲ್ಯಾಂಗ್ವೇಜ್’ ನಿಂದ ಪ್ರತ್ಯುತ್ತರ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಕುರಿತು ಉತ್ತರ ಭಾರತದ ಜನಪರ ಮುಖಂಡರ ಅಭಿಪ್ರಾಯವೇನು? – ಡಾ.ಎಚ್.ವಿ ವಾಸು

ಮತ್ತೊಂದು ಟ್ವೀಟ್‌ನಲ್ಲಿ ಕೇಂದ್ರ ಅಧಿಕೃತ ಭಾಷಾ ಇಲಾಖೆಯು ನೀಡಿರುವ ಮಾಹಿತಿಯನ್ನು ಹಂಚಿಕೊಂಡು, “2009-19 ರವರೆಗೆ ಇದಕ್ಕೆ ಸುಮಾರು 1.5 ಕೋಟಿ ವೆಚ್ಚ ತಗುಲಿದೆ. ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ. ಇಷ್ಟೊಂದು ಯಥೇಚ್ಛವಾಗಿ ಖರ್ಚು ಮಾಡಲು ಅಚ್ಚೆ ದಿನ್ ಕಾರಣವಿರಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ಈ ಮಾಹಿತಿಯ ಪ್ರಕಾರ, 2009 ರಲ್ಲಿ ಹಿಂದಿ ದಿವಸ್ ಆಚರಣೆಗೆ ಮಾಡಿರುವ ಖರ್ಚು 8 ಲಕ್ಷದ 68 ಸಾವಿರದ 305 ರೂಗಳಾಗಿದ್ದರೆ, 2019 ರಲ್ಲಿ 15 ಲಕ್ಷದ 39 ಸಾವಿರದ 511 ರೂಗಳು ಖರ್ಚಾಗಿದೆ. ಅಂದರೆ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಸರಾಸರಿ 17 ಲಕ್ಷದ 32 ಸಾವಿರ ರೂಗಳನ್ನು ಹಿಂದಿ ದಿವಸ್‌ಗೆ ಖರ್ಚು ಮಾಡಲಾಗಿದೆ.

ಈ ಮೂಲಕ ಹಿಂದಿ ಭಾಷೆಯನ್ನು ಮಾತ್ರವಲ್ಲದೇ ಉತ್ತರ ಭಾರದ ಸಂಸ್ಕೃತಿಯನ್ನೂ ಸಹ ದೇಶದ ಇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ಹುನ್ನಾರ ನಡೆಯುತ್ತಿದೆ. ಇದರಿಂದ ಭವಿಷ್ಯದಲ್ಲಿ ಹಿಂದಿ ಮಾತ್ರ ಉಳಿದುಕೊಂಡು ಇತರೆ ಭಾಷೆಗಳ ಅಸ್ಮಿತೆ ನಾಶವಾಗುತ್ತದೆ.

ಕೇಂದ್ರ ಸರ್ಕಾರದ ಹಿಂದಿಪರ ಧೋರಣೆ ಏನೆಂಬುದು ಇದರಿಂದಲೇ ತಿಳಿಯುತ್ತದೆ. ಹಿಂದಿಗಾಗಿ ಇಷ್ಟು ಹಣ ಖರ್ಚು ಮಾಡುವುದರಲ್ಲಿ ತಕರಾರಿಲ್ಲ. ಆದರೆ ಹಿಂದಿಯಂತೆಯೇ ಇತರ ಭಾಷೆಗಳಿಗೂ ಇದೇ ಪ್ರಧಾನ್ಯತೆ ನೀಡಬೇಕು ಎಂಬುದು ಎಲ್ಲರ ಪ್ರಮುಖ ಕೂಗಾಗಿದೆ.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...