Homeಮುಖಪುಟಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು - ಆರ್‌ಟಿಐನಿಂದ ಬಹಿರಂಗ!

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ

- Advertisement -
- Advertisement -

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ ಸಾಕಷ್ಟಿವೆ. ಸಂವಿಧಾನದ ಅಡಿಯಲ್ಲಿ 22 ಭಾಷೆಗಳನ್ನು ಸಮಾನವಾಗಿ ಸೂಚಿಸಿದ್ದರೂ ಸಹ ಕೇವಲ ಹಿಂದಿಯನ್ನು ಮಾತ್ರ ಉನ್ನತೀಕರಿಸುತ್ತಿರುವುದರ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳಿಂದ ವ್ಯಾಪಕ ವಿರೊಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ವ್ಯಾಪಕ ಟೀಕೆಗಳು ಬಂದಿದ್ದವು.

ಹಿಂದಿ ದಿವಸ್‌ ಆಚರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ಹಣದ ಮಾಹಿತಿಯನ್ನು ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗವಾಗಿರುವ ಮಾಹಿತಿ ನಿಜಕ್ಕೂ ಅಚ್ಚರಿಯನ್ನುಂಟುಮಾಡುತ್ತದೆ.

ಕಳೆದ 12 ವರ್ಷಗಳಲ್ಲಿ ‘ಹಿಂದಿ ದಿವಸ್‌’ ಆಚರಣೆಗೆ ಸರ್ಕಾರ ಖರ್ಚು ಮಾಡಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಕೇಂದ್ರದ ‘ಅಧಿಕೃತ ಭಾಷೆಗಳ ಇಲಾಖೆ’ಯು ಮಾಹಿತಿ ನೀಡಿದ್ದು, “ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆಡಳಿತದಲ್ಲಿ ಹಿಂದಿ ದಿವಸ್‌ಗೆ ಮೀಸಲಿಡುತ್ತಿದ್ದ ಹಣದ ಮೊತ್ತ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದ್ವಿಗುಣಗೊಂಡಿದೆ” ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಚಿರು, “ಹಿಂದಿ ದಿವಸ್ ಆಚರಣೆಗೆ ಕಳೆದ 12ವರ್ಷಗಳಿಂದ ತಗಲುತ್ತಿರುವ ವೆಚ್ಚದ ಬಗ್ಗೆ ಮಾಹಿತಿ ಕೋರಿ ನಾನು ಸೆಪ್ಟಂಬರ್ 17 ರಂದು RTI ಅರ್ಜಿ ಸಲ್ಲಿಸಿದ್ದೆ. 30 ದಿನಗಳ ಒಳಗೆ ಪ್ರತ್ಯುತ್ತರ ಬಾರದ ಕಾರಣ ಮೇಲ್ಮನವಿ ಮೊರೆ ಹೋಗಿದ್ದೆ. ಸುಮಾರು 2 ತಿಂಗಳ ನಂತರ ಈ ಸಂಬಂಧ ‘ಡಿಪಾರ್ಟ್ಮೆಂಟ್ ಆಫ್ ಅಫೀಷಿಯಲ್ ಲ್ಯಾಂಗ್ವೇಜ್’ ನಿಂದ ಪ್ರತ್ಯುತ್ತರ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಕುರಿತು ಉತ್ತರ ಭಾರತದ ಜನಪರ ಮುಖಂಡರ ಅಭಿಪ್ರಾಯವೇನು? – ಡಾ.ಎಚ್.ವಿ ವಾಸು

ಮತ್ತೊಂದು ಟ್ವೀಟ್‌ನಲ್ಲಿ ಕೇಂದ್ರ ಅಧಿಕೃತ ಭಾಷಾ ಇಲಾಖೆಯು ನೀಡಿರುವ ಮಾಹಿತಿಯನ್ನು ಹಂಚಿಕೊಂಡು, “2009-19 ರವರೆಗೆ ಇದಕ್ಕೆ ಸುಮಾರು 1.5 ಕೋಟಿ ವೆಚ್ಚ ತಗುಲಿದೆ. ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ. ಇಷ್ಟೊಂದು ಯಥೇಚ್ಛವಾಗಿ ಖರ್ಚು ಮಾಡಲು ಅಚ್ಚೆ ದಿನ್ ಕಾರಣವಿರಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ಈ ಮಾಹಿತಿಯ ಪ್ರಕಾರ, 2009 ರಲ್ಲಿ ಹಿಂದಿ ದಿವಸ್ ಆಚರಣೆಗೆ ಮಾಡಿರುವ ಖರ್ಚು 8 ಲಕ್ಷದ 68 ಸಾವಿರದ 305 ರೂಗಳಾಗಿದ್ದರೆ, 2019 ರಲ್ಲಿ 15 ಲಕ್ಷದ 39 ಸಾವಿರದ 511 ರೂಗಳು ಖರ್ಚಾಗಿದೆ. ಅಂದರೆ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಸರಾಸರಿ 17 ಲಕ್ಷದ 32 ಸಾವಿರ ರೂಗಳನ್ನು ಹಿಂದಿ ದಿವಸ್‌ಗೆ ಖರ್ಚು ಮಾಡಲಾಗಿದೆ.

ಈ ಮೂಲಕ ಹಿಂದಿ ಭಾಷೆಯನ್ನು ಮಾತ್ರವಲ್ಲದೇ ಉತ್ತರ ಭಾರದ ಸಂಸ್ಕೃತಿಯನ್ನೂ ಸಹ ದೇಶದ ಇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ಹುನ್ನಾರ ನಡೆಯುತ್ತಿದೆ. ಇದರಿಂದ ಭವಿಷ್ಯದಲ್ಲಿ ಹಿಂದಿ ಮಾತ್ರ ಉಳಿದುಕೊಂಡು ಇತರೆ ಭಾಷೆಗಳ ಅಸ್ಮಿತೆ ನಾಶವಾಗುತ್ತದೆ.

ಕೇಂದ್ರ ಸರ್ಕಾರದ ಹಿಂದಿಪರ ಧೋರಣೆ ಏನೆಂಬುದು ಇದರಿಂದಲೇ ತಿಳಿಯುತ್ತದೆ. ಹಿಂದಿಗಾಗಿ ಇಷ್ಟು ಹಣ ಖರ್ಚು ಮಾಡುವುದರಲ್ಲಿ ತಕರಾರಿಲ್ಲ. ಆದರೆ ಹಿಂದಿಯಂತೆಯೇ ಇತರ ಭಾಷೆಗಳಿಗೂ ಇದೇ ಪ್ರಧಾನ್ಯತೆ ನೀಡಬೇಕು ಎಂಬುದು ಎಲ್ಲರ ಪ್ರಮುಖ ಕೂಗಾಗಿದೆ.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...