Homeಮುಖಪುಟಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು - ಆರ್‌ಟಿಐನಿಂದ ಬಹಿರಂಗ!

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ

- Advertisement -
- Advertisement -

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ ಸಾಕಷ್ಟಿವೆ. ಸಂವಿಧಾನದ ಅಡಿಯಲ್ಲಿ 22 ಭಾಷೆಗಳನ್ನು ಸಮಾನವಾಗಿ ಸೂಚಿಸಿದ್ದರೂ ಸಹ ಕೇವಲ ಹಿಂದಿಯನ್ನು ಮಾತ್ರ ಉನ್ನತೀಕರಿಸುತ್ತಿರುವುದರ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳಿಂದ ವ್ಯಾಪಕ ವಿರೊಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ವ್ಯಾಪಕ ಟೀಕೆಗಳು ಬಂದಿದ್ದವು.

ಹಿಂದಿ ದಿವಸ್‌ ಆಚರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ಹಣದ ಮಾಹಿತಿಯನ್ನು ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗವಾಗಿರುವ ಮಾಹಿತಿ ನಿಜಕ್ಕೂ ಅಚ್ಚರಿಯನ್ನುಂಟುಮಾಡುತ್ತದೆ.

ಕಳೆದ 12 ವರ್ಷಗಳಲ್ಲಿ ‘ಹಿಂದಿ ದಿವಸ್‌’ ಆಚರಣೆಗೆ ಸರ್ಕಾರ ಖರ್ಚು ಮಾಡಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಕೇಂದ್ರದ ‘ಅಧಿಕೃತ ಭಾಷೆಗಳ ಇಲಾಖೆ’ಯು ಮಾಹಿತಿ ನೀಡಿದ್ದು, “ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆಡಳಿತದಲ್ಲಿ ಹಿಂದಿ ದಿವಸ್‌ಗೆ ಮೀಸಲಿಡುತ್ತಿದ್ದ ಹಣದ ಮೊತ್ತ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದ್ವಿಗುಣಗೊಂಡಿದೆ” ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಚಿರು, “ಹಿಂದಿ ದಿವಸ್ ಆಚರಣೆಗೆ ಕಳೆದ 12ವರ್ಷಗಳಿಂದ ತಗಲುತ್ತಿರುವ ವೆಚ್ಚದ ಬಗ್ಗೆ ಮಾಹಿತಿ ಕೋರಿ ನಾನು ಸೆಪ್ಟಂಬರ್ 17 ರಂದು RTI ಅರ್ಜಿ ಸಲ್ಲಿಸಿದ್ದೆ. 30 ದಿನಗಳ ಒಳಗೆ ಪ್ರತ್ಯುತ್ತರ ಬಾರದ ಕಾರಣ ಮೇಲ್ಮನವಿ ಮೊರೆ ಹೋಗಿದ್ದೆ. ಸುಮಾರು 2 ತಿಂಗಳ ನಂತರ ಈ ಸಂಬಂಧ ‘ಡಿಪಾರ್ಟ್ಮೆಂಟ್ ಆಫ್ ಅಫೀಷಿಯಲ್ ಲ್ಯಾಂಗ್ವೇಜ್’ ನಿಂದ ಪ್ರತ್ಯುತ್ತರ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಕುರಿತು ಉತ್ತರ ಭಾರತದ ಜನಪರ ಮುಖಂಡರ ಅಭಿಪ್ರಾಯವೇನು? – ಡಾ.ಎಚ್.ವಿ ವಾಸು

ಮತ್ತೊಂದು ಟ್ವೀಟ್‌ನಲ್ಲಿ ಕೇಂದ್ರ ಅಧಿಕೃತ ಭಾಷಾ ಇಲಾಖೆಯು ನೀಡಿರುವ ಮಾಹಿತಿಯನ್ನು ಹಂಚಿಕೊಂಡು, “2009-19 ರವರೆಗೆ ಇದಕ್ಕೆ ಸುಮಾರು 1.5 ಕೋಟಿ ವೆಚ್ಚ ತಗುಲಿದೆ. ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ. ಇಷ್ಟೊಂದು ಯಥೇಚ್ಛವಾಗಿ ಖರ್ಚು ಮಾಡಲು ಅಚ್ಚೆ ದಿನ್ ಕಾರಣವಿರಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ಈ ಮಾಹಿತಿಯ ಪ್ರಕಾರ, 2009 ರಲ್ಲಿ ಹಿಂದಿ ದಿವಸ್ ಆಚರಣೆಗೆ ಮಾಡಿರುವ ಖರ್ಚು 8 ಲಕ್ಷದ 68 ಸಾವಿರದ 305 ರೂಗಳಾಗಿದ್ದರೆ, 2019 ರಲ್ಲಿ 15 ಲಕ್ಷದ 39 ಸಾವಿರದ 511 ರೂಗಳು ಖರ್ಚಾಗಿದೆ. ಅಂದರೆ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಸರಾಸರಿ 17 ಲಕ್ಷದ 32 ಸಾವಿರ ರೂಗಳನ್ನು ಹಿಂದಿ ದಿವಸ್‌ಗೆ ಖರ್ಚು ಮಾಡಲಾಗಿದೆ.

ಈ ಮೂಲಕ ಹಿಂದಿ ಭಾಷೆಯನ್ನು ಮಾತ್ರವಲ್ಲದೇ ಉತ್ತರ ಭಾರದ ಸಂಸ್ಕೃತಿಯನ್ನೂ ಸಹ ದೇಶದ ಇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ಹುನ್ನಾರ ನಡೆಯುತ್ತಿದೆ. ಇದರಿಂದ ಭವಿಷ್ಯದಲ್ಲಿ ಹಿಂದಿ ಮಾತ್ರ ಉಳಿದುಕೊಂಡು ಇತರೆ ಭಾಷೆಗಳ ಅಸ್ಮಿತೆ ನಾಶವಾಗುತ್ತದೆ.

ಕೇಂದ್ರ ಸರ್ಕಾರದ ಹಿಂದಿಪರ ಧೋರಣೆ ಏನೆಂಬುದು ಇದರಿಂದಲೇ ತಿಳಿಯುತ್ತದೆ. ಹಿಂದಿಗಾಗಿ ಇಷ್ಟು ಹಣ ಖರ್ಚು ಮಾಡುವುದರಲ್ಲಿ ತಕರಾರಿಲ್ಲ. ಆದರೆ ಹಿಂದಿಯಂತೆಯೇ ಇತರ ಭಾಷೆಗಳಿಗೂ ಇದೇ ಪ್ರಧಾನ್ಯತೆ ನೀಡಬೇಕು ಎಂಬುದು ಎಲ್ಲರ ಪ್ರಮುಖ ಕೂಗಾಗಿದೆ.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...