Homeಮುಖಪುಟಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು - ಆರ್‌ಟಿಐನಿಂದ ಬಹಿರಂಗ!

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ

- Advertisement -
- Advertisement -

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ ಸಾಕಷ್ಟಿವೆ. ಸಂವಿಧಾನದ ಅಡಿಯಲ್ಲಿ 22 ಭಾಷೆಗಳನ್ನು ಸಮಾನವಾಗಿ ಸೂಚಿಸಿದ್ದರೂ ಸಹ ಕೇವಲ ಹಿಂದಿಯನ್ನು ಮಾತ್ರ ಉನ್ನತೀಕರಿಸುತ್ತಿರುವುದರ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳಿಂದ ವ್ಯಾಪಕ ವಿರೊಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ವ್ಯಾಪಕ ಟೀಕೆಗಳು ಬಂದಿದ್ದವು.

ಹಿಂದಿ ದಿವಸ್‌ ಆಚರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ಹಣದ ಮಾಹಿತಿಯನ್ನು ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗವಾಗಿರುವ ಮಾಹಿತಿ ನಿಜಕ್ಕೂ ಅಚ್ಚರಿಯನ್ನುಂಟುಮಾಡುತ್ತದೆ.

ಕಳೆದ 12 ವರ್ಷಗಳಲ್ಲಿ ‘ಹಿಂದಿ ದಿವಸ್‌’ ಆಚರಣೆಗೆ ಸರ್ಕಾರ ಖರ್ಚು ಮಾಡಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಕೇಂದ್ರದ ‘ಅಧಿಕೃತ ಭಾಷೆಗಳ ಇಲಾಖೆ’ಯು ಮಾಹಿತಿ ನೀಡಿದ್ದು, “ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆಡಳಿತದಲ್ಲಿ ಹಿಂದಿ ದಿವಸ್‌ಗೆ ಮೀಸಲಿಡುತ್ತಿದ್ದ ಹಣದ ಮೊತ್ತ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದ್ವಿಗುಣಗೊಂಡಿದೆ” ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಚಿರು, “ಹಿಂದಿ ದಿವಸ್ ಆಚರಣೆಗೆ ಕಳೆದ 12ವರ್ಷಗಳಿಂದ ತಗಲುತ್ತಿರುವ ವೆಚ್ಚದ ಬಗ್ಗೆ ಮಾಹಿತಿ ಕೋರಿ ನಾನು ಸೆಪ್ಟಂಬರ್ 17 ರಂದು RTI ಅರ್ಜಿ ಸಲ್ಲಿಸಿದ್ದೆ. 30 ದಿನಗಳ ಒಳಗೆ ಪ್ರತ್ಯುತ್ತರ ಬಾರದ ಕಾರಣ ಮೇಲ್ಮನವಿ ಮೊರೆ ಹೋಗಿದ್ದೆ. ಸುಮಾರು 2 ತಿಂಗಳ ನಂತರ ಈ ಸಂಬಂಧ ‘ಡಿಪಾರ್ಟ್ಮೆಂಟ್ ಆಫ್ ಅಫೀಷಿಯಲ್ ಲ್ಯಾಂಗ್ವೇಜ್’ ನಿಂದ ಪ್ರತ್ಯುತ್ತರ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಕುರಿತು ಉತ್ತರ ಭಾರತದ ಜನಪರ ಮುಖಂಡರ ಅಭಿಪ್ರಾಯವೇನು? – ಡಾ.ಎಚ್.ವಿ ವಾಸು

ಮತ್ತೊಂದು ಟ್ವೀಟ್‌ನಲ್ಲಿ ಕೇಂದ್ರ ಅಧಿಕೃತ ಭಾಷಾ ಇಲಾಖೆಯು ನೀಡಿರುವ ಮಾಹಿತಿಯನ್ನು ಹಂಚಿಕೊಂಡು, “2009-19 ರವರೆಗೆ ಇದಕ್ಕೆ ಸುಮಾರು 1.5 ಕೋಟಿ ವೆಚ್ಚ ತಗುಲಿದೆ. ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ. ಇಷ್ಟೊಂದು ಯಥೇಚ್ಛವಾಗಿ ಖರ್ಚು ಮಾಡಲು ಅಚ್ಚೆ ದಿನ್ ಕಾರಣವಿರಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ಈ ಮಾಹಿತಿಯ ಪ್ರಕಾರ, 2009 ರಲ್ಲಿ ಹಿಂದಿ ದಿವಸ್ ಆಚರಣೆಗೆ ಮಾಡಿರುವ ಖರ್ಚು 8 ಲಕ್ಷದ 68 ಸಾವಿರದ 305 ರೂಗಳಾಗಿದ್ದರೆ, 2019 ರಲ್ಲಿ 15 ಲಕ್ಷದ 39 ಸಾವಿರದ 511 ರೂಗಳು ಖರ್ಚಾಗಿದೆ. ಅಂದರೆ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಸರಾಸರಿ 17 ಲಕ್ಷದ 32 ಸಾವಿರ ರೂಗಳನ್ನು ಹಿಂದಿ ದಿವಸ್‌ಗೆ ಖರ್ಚು ಮಾಡಲಾಗಿದೆ.

ಈ ಮೂಲಕ ಹಿಂದಿ ಭಾಷೆಯನ್ನು ಮಾತ್ರವಲ್ಲದೇ ಉತ್ತರ ಭಾರದ ಸಂಸ್ಕೃತಿಯನ್ನೂ ಸಹ ದೇಶದ ಇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ಹುನ್ನಾರ ನಡೆಯುತ್ತಿದೆ. ಇದರಿಂದ ಭವಿಷ್ಯದಲ್ಲಿ ಹಿಂದಿ ಮಾತ್ರ ಉಳಿದುಕೊಂಡು ಇತರೆ ಭಾಷೆಗಳ ಅಸ್ಮಿತೆ ನಾಶವಾಗುತ್ತದೆ.

ಕೇಂದ್ರ ಸರ್ಕಾರದ ಹಿಂದಿಪರ ಧೋರಣೆ ಏನೆಂಬುದು ಇದರಿಂದಲೇ ತಿಳಿಯುತ್ತದೆ. ಹಿಂದಿಗಾಗಿ ಇಷ್ಟು ಹಣ ಖರ್ಚು ಮಾಡುವುದರಲ್ಲಿ ತಕರಾರಿಲ್ಲ. ಆದರೆ ಹಿಂದಿಯಂತೆಯೇ ಇತರ ಭಾಷೆಗಳಿಗೂ ಇದೇ ಪ್ರಧಾನ್ಯತೆ ನೀಡಬೇಕು ಎಂಬುದು ಎಲ್ಲರ ಪ್ರಮುಖ ಕೂಗಾಗಿದೆ.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...