Homeಮುಖಪುಟಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು - ಆರ್‌ಟಿಐನಿಂದ ಬಹಿರಂಗ!

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ

- Advertisement -
- Advertisement -

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ ಸಾಕಷ್ಟಿವೆ. ಸಂವಿಧಾನದ ಅಡಿಯಲ್ಲಿ 22 ಭಾಷೆಗಳನ್ನು ಸಮಾನವಾಗಿ ಸೂಚಿಸಿದ್ದರೂ ಸಹ ಕೇವಲ ಹಿಂದಿಯನ್ನು ಮಾತ್ರ ಉನ್ನತೀಕರಿಸುತ್ತಿರುವುದರ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳಿಂದ ವ್ಯಾಪಕ ವಿರೊಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ವ್ಯಾಪಕ ಟೀಕೆಗಳು ಬಂದಿದ್ದವು.

ಹಿಂದಿ ದಿವಸ್‌ ಆಚರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ಹಣದ ಮಾಹಿತಿಯನ್ನು ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗವಾಗಿರುವ ಮಾಹಿತಿ ನಿಜಕ್ಕೂ ಅಚ್ಚರಿಯನ್ನುಂಟುಮಾಡುತ್ತದೆ.

ಕಳೆದ 12 ವರ್ಷಗಳಲ್ಲಿ ‘ಹಿಂದಿ ದಿವಸ್‌’ ಆಚರಣೆಗೆ ಸರ್ಕಾರ ಖರ್ಚು ಮಾಡಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಕೇಂದ್ರದ ‘ಅಧಿಕೃತ ಭಾಷೆಗಳ ಇಲಾಖೆ’ಯು ಮಾಹಿತಿ ನೀಡಿದ್ದು, “ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆಡಳಿತದಲ್ಲಿ ಹಿಂದಿ ದಿವಸ್‌ಗೆ ಮೀಸಲಿಡುತ್ತಿದ್ದ ಹಣದ ಮೊತ್ತ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದ್ವಿಗುಣಗೊಂಡಿದೆ” ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಚಿರು, “ಹಿಂದಿ ದಿವಸ್ ಆಚರಣೆಗೆ ಕಳೆದ 12ವರ್ಷಗಳಿಂದ ತಗಲುತ್ತಿರುವ ವೆಚ್ಚದ ಬಗ್ಗೆ ಮಾಹಿತಿ ಕೋರಿ ನಾನು ಸೆಪ್ಟಂಬರ್ 17 ರಂದು RTI ಅರ್ಜಿ ಸಲ್ಲಿಸಿದ್ದೆ. 30 ದಿನಗಳ ಒಳಗೆ ಪ್ರತ್ಯುತ್ತರ ಬಾರದ ಕಾರಣ ಮೇಲ್ಮನವಿ ಮೊರೆ ಹೋಗಿದ್ದೆ. ಸುಮಾರು 2 ತಿಂಗಳ ನಂತರ ಈ ಸಂಬಂಧ ‘ಡಿಪಾರ್ಟ್ಮೆಂಟ್ ಆಫ್ ಅಫೀಷಿಯಲ್ ಲ್ಯಾಂಗ್ವೇಜ್’ ನಿಂದ ಪ್ರತ್ಯುತ್ತರ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಕುರಿತು ಉತ್ತರ ಭಾರತದ ಜನಪರ ಮುಖಂಡರ ಅಭಿಪ್ರಾಯವೇನು? – ಡಾ.ಎಚ್.ವಿ ವಾಸು

ಮತ್ತೊಂದು ಟ್ವೀಟ್‌ನಲ್ಲಿ ಕೇಂದ್ರ ಅಧಿಕೃತ ಭಾಷಾ ಇಲಾಖೆಯು ನೀಡಿರುವ ಮಾಹಿತಿಯನ್ನು ಹಂಚಿಕೊಂಡು, “2009-19 ರವರೆಗೆ ಇದಕ್ಕೆ ಸುಮಾರು 1.5 ಕೋಟಿ ವೆಚ್ಚ ತಗುಲಿದೆ. ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ. ಇಷ್ಟೊಂದು ಯಥೇಚ್ಛವಾಗಿ ಖರ್ಚು ಮಾಡಲು ಅಚ್ಚೆ ದಿನ್ ಕಾರಣವಿರಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ಈ ಮಾಹಿತಿಯ ಪ್ರಕಾರ, 2009 ರಲ್ಲಿ ಹಿಂದಿ ದಿವಸ್ ಆಚರಣೆಗೆ ಮಾಡಿರುವ ಖರ್ಚು 8 ಲಕ್ಷದ 68 ಸಾವಿರದ 305 ರೂಗಳಾಗಿದ್ದರೆ, 2019 ರಲ್ಲಿ 15 ಲಕ್ಷದ 39 ಸಾವಿರದ 511 ರೂಗಳು ಖರ್ಚಾಗಿದೆ. ಅಂದರೆ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಸರಾಸರಿ 17 ಲಕ್ಷದ 32 ಸಾವಿರ ರೂಗಳನ್ನು ಹಿಂದಿ ದಿವಸ್‌ಗೆ ಖರ್ಚು ಮಾಡಲಾಗಿದೆ.

ಈ ಮೂಲಕ ಹಿಂದಿ ಭಾಷೆಯನ್ನು ಮಾತ್ರವಲ್ಲದೇ ಉತ್ತರ ಭಾರದ ಸಂಸ್ಕೃತಿಯನ್ನೂ ಸಹ ದೇಶದ ಇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ಹುನ್ನಾರ ನಡೆಯುತ್ತಿದೆ. ಇದರಿಂದ ಭವಿಷ್ಯದಲ್ಲಿ ಹಿಂದಿ ಮಾತ್ರ ಉಳಿದುಕೊಂಡು ಇತರೆ ಭಾಷೆಗಳ ಅಸ್ಮಿತೆ ನಾಶವಾಗುತ್ತದೆ.

ಕೇಂದ್ರ ಸರ್ಕಾರದ ಹಿಂದಿಪರ ಧೋರಣೆ ಏನೆಂಬುದು ಇದರಿಂದಲೇ ತಿಳಿಯುತ್ತದೆ. ಹಿಂದಿಗಾಗಿ ಇಷ್ಟು ಹಣ ಖರ್ಚು ಮಾಡುವುದರಲ್ಲಿ ತಕರಾರಿಲ್ಲ. ಆದರೆ ಹಿಂದಿಯಂತೆಯೇ ಇತರ ಭಾಷೆಗಳಿಗೂ ಇದೇ ಪ್ರಧಾನ್ಯತೆ ನೀಡಬೇಕು ಎಂಬುದು ಎಲ್ಲರ ಪ್ರಮುಖ ಕೂಗಾಗಿದೆ.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...