Homeಮುಖಪುಟ"ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)" ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

“ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು" ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

- Advertisement -
- Advertisement -

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಸೇರಿದಂತೆ ಇತರೆ ಘೋಷಣೆಗಳೊಂದಿಗೆ ಟೀಶರ್ಟ್ ತಯಾರಿಸುತ್ತಿರುವ ತಿರುಪ್ಪೂರಿನ ಬಟ್ಟೆ ತಯಾರಕರಿಗೆ ಕಳೆದ ಕೆಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತಿರುಪ್ಪೂರಿನ ವೀರಪಾಂಡಿಯಲ್ಲಿ ಕಳೆದ ಐದು ವರ್ಷಗಳಿಂದ ಗಾರ್ಮೆಂಟ್ ವ್ಯವಹಾರದಲ್ಲಿ ತೊಡಗಿರುವ ಬಿ ಕಾರ್ತಿಕೇಯನ್, “ನಾನು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಮತ್ತು ಕಾರ್ಪೊರೇಟ್ ಆದೇಶದ ಮೇರೆಗೆ ಟಿ-ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದೇನೆ. ಕಳೆದ ವಾರ, ಟಿ-ಶರ್ಟ್ ಮತ್ತು ಘೋಷಣೆಯ ಬಗ್ಗೆ ತೂತುಕುಡಿ ಸಂಸದ ಕನಿಮೋಳಿ ಅವರ ಕಚೇರಿಯಿಂದ ನನಗೆ ಕರೆ ಬಂದಿತು. ಅವರು ನೀಡಿದ ಘೋಷಣೆಯನ್ನು ನಾನು ಸ್ವೀಕರಿಸಿದೆ. ಅದು ವಿಶಿಷ್ಟ ಮತ್ತು ಶಕ್ತಿಯುತವಾಗಿತ್ತು” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಎಂಬ ಘೋಷಣೆಗಳು ನನ್ನ ಆಸಕ್ತಿಯನ್ನು ಸೆಳೆದವು. ಆದ್ದರಿಂದ, ನಾವು ಟಿ-ಶರ್ಟ್ ಮೇಲೆ ಈ ಘೋಷಣೆಯ ಮುದ್ರಣವನ್ನು ಹಾಕಿಸಿದ್ದೇವೆ. ಕೆಲವೇ ದಿನಗಳಲ್ಲಿ, ಇದು ಚೆನ್ನೈ ಮತ್ತು ತಮಿಳುನಾಡಿನಾದ್ಯಂತ ಭಾರಿ ಮನ್ನಣೆ ಪಡೆಯಿತು. ಹಲವಾರು ಸಿನಿ ಸೆಲೆಬ್ರಿಟಿಗಳು ಮತ್ತು ಉನ್ನತ ವ್ಯಕ್ತಿಗಳು ಟಿ-ಶರ್ಟ್ ಅನ್ನು ತೆಗೆದುಕೊಂಡು ಪ್ರಚಾರ ಮಾಡಿದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಸ್ನೇಹಿತರು ಮತ್ತು ಸಂಬಂಧಿಕರು ಈ ಕೆಲಸವನ್ನು ಮೆಚ್ಚಿಕೊಳ್ಳುವುದರೊಂದಿಗೆ, ಹಲವರಿಂದ ಆರ್ಡರ್‌ ಬರಲು ಆರಂಭವಾಯಿತು. ಆದ್ದರಿಂದ, ನಾನು ಟಿ-ಶರ್ಟ್ ಮಾರಾಟ ಮಾಡಲು ನಿರ್ಧರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಈಗ ಜಗತ್ತಿನಾದ್ಯಂತ ಆರ್ಡರ್‌ ಬರಲು ಪ್ರಾರಂಭವಾಗಿದೆ” ಎಂದು ಹೇಳಿದರು.

“ನಾನು ನನ್ನ ಮೊಬೈಲ್ ಸಂಖ್ಯೆ ಮತ್ತು ಟಿ-ಶರ್ಟ್‌ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ‌ಗಳಲ್ಲಿ ಪೋಸ್ಟ್ ಮಾಡಿದಾಗ, ನನಗೆ ಫೋನ್‌ನಲ್ಲಿ ಬೆದರಿಕೆಗಳು ಮತ್ತು ನಿಂದನೆಗಳು ಬರಲು ಆರಂಭವಾಯಿತು. ಅನೇಕ ಕರೆಗಳು ದುಬೈ ಮತ್ತು ಸಿಂಗಾಪುರದ ಜನರಿಂದ ಬಂದವು. ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರಕ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು” ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

“ಆದ್ದರಿಂದ, ನಾನು ಮೌನವಾಗಿರಲು ನಿರ್ಧರಿಸಿ, ಹೊಸ ಆರ್ಡರ್‌ ಬಂದಾಗಲೆಲ್ಲಾ, ’ನಾನು ಉಡುಪು ತಯಾರಕನಲ್ಲ’ ಎಂದು ನಟಿಸಿದೆ. ಆದರೆ ನನ್ನ ಸ್ನೇಹಿತರು ನನಗೆ ಬಲತುಂಬಿ ಪ್ರೋತ್ಸಾಹಿಸಿದರು. ನಂತರ ನಾನು ಎಲ್ಲಾ ಆರ್ಡರ್‌ಗಳನ್ನು ಸ್ವೀಕರಿಸಲು ನಿರ್ಧರಿಸಿದ್ದೇನೆ. ಆದರೆ, ಬೆದರಿಕೆ ಕರೆಗಳ ಬಗ್ಗೆ ಪೊಲೀಸ್ ದೂರು ನೀಡಲು ಯೋಚಿಸಿಲ್ಲ. ಅವುಗಳನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ಹಿಂದಿ ದಿವಸ್ ವಿರುದ್ಧ ಅನೇಕ ರಾಜ್ಯಗಳು ದನಿಯೆತ್ತುತ್ತಿವೆ. ಕರ್ನಾಟಕದಲ್ಲಿಯೂ ಕೂಡ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಧನಂಜಯ್ ಧರಿಸಿರುವ ಟೀಶರ್ಟ್ ವೈರಲ್ ಆಗುತ್ತಿದ್ದು, ಅದರಲ್ಲಿ “ಕನ್ನಡಿಗರಿಗೆ ಕನ್ನಡ ಭಾಷೆಯೇ ರಾಷ್ಟ್ರೀಯ ಭಾಷೆ” ಎಂದು ಅದರಲ್ಲಿ ಬರೆದಿದೆ.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...