Homeಮುಖಪುಟ"ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)" ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

“ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು" ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

- Advertisement -
- Advertisement -

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಸೇರಿದಂತೆ ಇತರೆ ಘೋಷಣೆಗಳೊಂದಿಗೆ ಟೀಶರ್ಟ್ ತಯಾರಿಸುತ್ತಿರುವ ತಿರುಪ್ಪೂರಿನ ಬಟ್ಟೆ ತಯಾರಕರಿಗೆ ಕಳೆದ ಕೆಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತಿರುಪ್ಪೂರಿನ ವೀರಪಾಂಡಿಯಲ್ಲಿ ಕಳೆದ ಐದು ವರ್ಷಗಳಿಂದ ಗಾರ್ಮೆಂಟ್ ವ್ಯವಹಾರದಲ್ಲಿ ತೊಡಗಿರುವ ಬಿ ಕಾರ್ತಿಕೇಯನ್, “ನಾನು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಮತ್ತು ಕಾರ್ಪೊರೇಟ್ ಆದೇಶದ ಮೇರೆಗೆ ಟಿ-ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದೇನೆ. ಕಳೆದ ವಾರ, ಟಿ-ಶರ್ಟ್ ಮತ್ತು ಘೋಷಣೆಯ ಬಗ್ಗೆ ತೂತುಕುಡಿ ಸಂಸದ ಕನಿಮೋಳಿ ಅವರ ಕಚೇರಿಯಿಂದ ನನಗೆ ಕರೆ ಬಂದಿತು. ಅವರು ನೀಡಿದ ಘೋಷಣೆಯನ್ನು ನಾನು ಸ್ವೀಕರಿಸಿದೆ. ಅದು ವಿಶಿಷ್ಟ ಮತ್ತು ಶಕ್ತಿಯುತವಾಗಿತ್ತು” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಎಂಬ ಘೋಷಣೆಗಳು ನನ್ನ ಆಸಕ್ತಿಯನ್ನು ಸೆಳೆದವು. ಆದ್ದರಿಂದ, ನಾವು ಟಿ-ಶರ್ಟ್ ಮೇಲೆ ಈ ಘೋಷಣೆಯ ಮುದ್ರಣವನ್ನು ಹಾಕಿಸಿದ್ದೇವೆ. ಕೆಲವೇ ದಿನಗಳಲ್ಲಿ, ಇದು ಚೆನ್ನೈ ಮತ್ತು ತಮಿಳುನಾಡಿನಾದ್ಯಂತ ಭಾರಿ ಮನ್ನಣೆ ಪಡೆಯಿತು. ಹಲವಾರು ಸಿನಿ ಸೆಲೆಬ್ರಿಟಿಗಳು ಮತ್ತು ಉನ್ನತ ವ್ಯಕ್ತಿಗಳು ಟಿ-ಶರ್ಟ್ ಅನ್ನು ತೆಗೆದುಕೊಂಡು ಪ್ರಚಾರ ಮಾಡಿದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಸ್ನೇಹಿತರು ಮತ್ತು ಸಂಬಂಧಿಕರು ಈ ಕೆಲಸವನ್ನು ಮೆಚ್ಚಿಕೊಳ್ಳುವುದರೊಂದಿಗೆ, ಹಲವರಿಂದ ಆರ್ಡರ್‌ ಬರಲು ಆರಂಭವಾಯಿತು. ಆದ್ದರಿಂದ, ನಾನು ಟಿ-ಶರ್ಟ್ ಮಾರಾಟ ಮಾಡಲು ನಿರ್ಧರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಈಗ ಜಗತ್ತಿನಾದ್ಯಂತ ಆರ್ಡರ್‌ ಬರಲು ಪ್ರಾರಂಭವಾಗಿದೆ” ಎಂದು ಹೇಳಿದರು.

“ನಾನು ನನ್ನ ಮೊಬೈಲ್ ಸಂಖ್ಯೆ ಮತ್ತು ಟಿ-ಶರ್ಟ್‌ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ‌ಗಳಲ್ಲಿ ಪೋಸ್ಟ್ ಮಾಡಿದಾಗ, ನನಗೆ ಫೋನ್‌ನಲ್ಲಿ ಬೆದರಿಕೆಗಳು ಮತ್ತು ನಿಂದನೆಗಳು ಬರಲು ಆರಂಭವಾಯಿತು. ಅನೇಕ ಕರೆಗಳು ದುಬೈ ಮತ್ತು ಸಿಂಗಾಪುರದ ಜನರಿಂದ ಬಂದವು. ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರಕ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು” ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

“ಆದ್ದರಿಂದ, ನಾನು ಮೌನವಾಗಿರಲು ನಿರ್ಧರಿಸಿ, ಹೊಸ ಆರ್ಡರ್‌ ಬಂದಾಗಲೆಲ್ಲಾ, ’ನಾನು ಉಡುಪು ತಯಾರಕನಲ್ಲ’ ಎಂದು ನಟಿಸಿದೆ. ಆದರೆ ನನ್ನ ಸ್ನೇಹಿತರು ನನಗೆ ಬಲತುಂಬಿ ಪ್ರೋತ್ಸಾಹಿಸಿದರು. ನಂತರ ನಾನು ಎಲ್ಲಾ ಆರ್ಡರ್‌ಗಳನ್ನು ಸ್ವೀಕರಿಸಲು ನಿರ್ಧರಿಸಿದ್ದೇನೆ. ಆದರೆ, ಬೆದರಿಕೆ ಕರೆಗಳ ಬಗ್ಗೆ ಪೊಲೀಸ್ ದೂರು ನೀಡಲು ಯೋಚಿಸಿಲ್ಲ. ಅವುಗಳನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ಹಿಂದಿ ದಿವಸ್ ವಿರುದ್ಧ ಅನೇಕ ರಾಜ್ಯಗಳು ದನಿಯೆತ್ತುತ್ತಿವೆ. ಕರ್ನಾಟಕದಲ್ಲಿಯೂ ಕೂಡ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಧನಂಜಯ್ ಧರಿಸಿರುವ ಟೀಶರ್ಟ್ ವೈರಲ್ ಆಗುತ್ತಿದ್ದು, ಅದರಲ್ಲಿ “ಕನ್ನಡಿಗರಿಗೆ ಕನ್ನಡ ಭಾಷೆಯೇ ರಾಷ್ಟ್ರೀಯ ಭಾಷೆ” ಎಂದು ಅದರಲ್ಲಿ ಬರೆದಿದೆ.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...