Homeಮುಖಪುಟ"ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)" ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

“ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು" ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

- Advertisement -
- Advertisement -

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಸೇರಿದಂತೆ ಇತರೆ ಘೋಷಣೆಗಳೊಂದಿಗೆ ಟೀಶರ್ಟ್ ತಯಾರಿಸುತ್ತಿರುವ ತಿರುಪ್ಪೂರಿನ ಬಟ್ಟೆ ತಯಾರಕರಿಗೆ ಕಳೆದ ಕೆಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತಿರುಪ್ಪೂರಿನ ವೀರಪಾಂಡಿಯಲ್ಲಿ ಕಳೆದ ಐದು ವರ್ಷಗಳಿಂದ ಗಾರ್ಮೆಂಟ್ ವ್ಯವಹಾರದಲ್ಲಿ ತೊಡಗಿರುವ ಬಿ ಕಾರ್ತಿಕೇಯನ್, “ನಾನು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಮತ್ತು ಕಾರ್ಪೊರೇಟ್ ಆದೇಶದ ಮೇರೆಗೆ ಟಿ-ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದೇನೆ. ಕಳೆದ ವಾರ, ಟಿ-ಶರ್ಟ್ ಮತ್ತು ಘೋಷಣೆಯ ಬಗ್ಗೆ ತೂತುಕುಡಿ ಸಂಸದ ಕನಿಮೋಳಿ ಅವರ ಕಚೇರಿಯಿಂದ ನನಗೆ ಕರೆ ಬಂದಿತು. ಅವರು ನೀಡಿದ ಘೋಷಣೆಯನ್ನು ನಾನು ಸ್ವೀಕರಿಸಿದೆ. ಅದು ವಿಶಿಷ್ಟ ಮತ್ತು ಶಕ್ತಿಯುತವಾಗಿತ್ತು” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಎಂಬ ಘೋಷಣೆಗಳು ನನ್ನ ಆಸಕ್ತಿಯನ್ನು ಸೆಳೆದವು. ಆದ್ದರಿಂದ, ನಾವು ಟಿ-ಶರ್ಟ್ ಮೇಲೆ ಈ ಘೋಷಣೆಯ ಮುದ್ರಣವನ್ನು ಹಾಕಿಸಿದ್ದೇವೆ. ಕೆಲವೇ ದಿನಗಳಲ್ಲಿ, ಇದು ಚೆನ್ನೈ ಮತ್ತು ತಮಿಳುನಾಡಿನಾದ್ಯಂತ ಭಾರಿ ಮನ್ನಣೆ ಪಡೆಯಿತು. ಹಲವಾರು ಸಿನಿ ಸೆಲೆಬ್ರಿಟಿಗಳು ಮತ್ತು ಉನ್ನತ ವ್ಯಕ್ತಿಗಳು ಟಿ-ಶರ್ಟ್ ಅನ್ನು ತೆಗೆದುಕೊಂಡು ಪ್ರಚಾರ ಮಾಡಿದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಸ್ನೇಹಿತರು ಮತ್ತು ಸಂಬಂಧಿಕರು ಈ ಕೆಲಸವನ್ನು ಮೆಚ್ಚಿಕೊಳ್ಳುವುದರೊಂದಿಗೆ, ಹಲವರಿಂದ ಆರ್ಡರ್‌ ಬರಲು ಆರಂಭವಾಯಿತು. ಆದ್ದರಿಂದ, ನಾನು ಟಿ-ಶರ್ಟ್ ಮಾರಾಟ ಮಾಡಲು ನಿರ್ಧರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಈಗ ಜಗತ್ತಿನಾದ್ಯಂತ ಆರ್ಡರ್‌ ಬರಲು ಪ್ರಾರಂಭವಾಗಿದೆ” ಎಂದು ಹೇಳಿದರು.

“ನಾನು ನನ್ನ ಮೊಬೈಲ್ ಸಂಖ್ಯೆ ಮತ್ತು ಟಿ-ಶರ್ಟ್‌ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ‌ಗಳಲ್ಲಿ ಪೋಸ್ಟ್ ಮಾಡಿದಾಗ, ನನಗೆ ಫೋನ್‌ನಲ್ಲಿ ಬೆದರಿಕೆಗಳು ಮತ್ತು ನಿಂದನೆಗಳು ಬರಲು ಆರಂಭವಾಯಿತು. ಅನೇಕ ಕರೆಗಳು ದುಬೈ ಮತ್ತು ಸಿಂಗಾಪುರದ ಜನರಿಂದ ಬಂದವು. ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರಕ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು” ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

“ಆದ್ದರಿಂದ, ನಾನು ಮೌನವಾಗಿರಲು ನಿರ್ಧರಿಸಿ, ಹೊಸ ಆರ್ಡರ್‌ ಬಂದಾಗಲೆಲ್ಲಾ, ’ನಾನು ಉಡುಪು ತಯಾರಕನಲ್ಲ’ ಎಂದು ನಟಿಸಿದೆ. ಆದರೆ ನನ್ನ ಸ್ನೇಹಿತರು ನನಗೆ ಬಲತುಂಬಿ ಪ್ರೋತ್ಸಾಹಿಸಿದರು. ನಂತರ ನಾನು ಎಲ್ಲಾ ಆರ್ಡರ್‌ಗಳನ್ನು ಸ್ವೀಕರಿಸಲು ನಿರ್ಧರಿಸಿದ್ದೇನೆ. ಆದರೆ, ಬೆದರಿಕೆ ಕರೆಗಳ ಬಗ್ಗೆ ಪೊಲೀಸ್ ದೂರು ನೀಡಲು ಯೋಚಿಸಿಲ್ಲ. ಅವುಗಳನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ಹಿಂದಿ ದಿವಸ್ ವಿರುದ್ಧ ಅನೇಕ ರಾಜ್ಯಗಳು ದನಿಯೆತ್ತುತ್ತಿವೆ. ಕರ್ನಾಟಕದಲ್ಲಿಯೂ ಕೂಡ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಧನಂಜಯ್ ಧರಿಸಿರುವ ಟೀಶರ್ಟ್ ವೈರಲ್ ಆಗುತ್ತಿದ್ದು, ಅದರಲ್ಲಿ “ಕನ್ನಡಿಗರಿಗೆ ಕನ್ನಡ ಭಾಷೆಯೇ ರಾಷ್ಟ್ರೀಯ ಭಾಷೆ” ಎಂದು ಅದರಲ್ಲಿ ಬರೆದಿದೆ.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...