Homeಮುಖಪುಟ"ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)" ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

“ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು" ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

- Advertisement -
- Advertisement -

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಸೇರಿದಂತೆ ಇತರೆ ಘೋಷಣೆಗಳೊಂದಿಗೆ ಟೀಶರ್ಟ್ ತಯಾರಿಸುತ್ತಿರುವ ತಿರುಪ್ಪೂರಿನ ಬಟ್ಟೆ ತಯಾರಕರಿಗೆ ಕಳೆದ ಕೆಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತಿರುಪ್ಪೂರಿನ ವೀರಪಾಂಡಿಯಲ್ಲಿ ಕಳೆದ ಐದು ವರ್ಷಗಳಿಂದ ಗಾರ್ಮೆಂಟ್ ವ್ಯವಹಾರದಲ್ಲಿ ತೊಡಗಿರುವ ಬಿ ಕಾರ್ತಿಕೇಯನ್, “ನಾನು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಮತ್ತು ಕಾರ್ಪೊರೇಟ್ ಆದೇಶದ ಮೇರೆಗೆ ಟಿ-ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದೇನೆ. ಕಳೆದ ವಾರ, ಟಿ-ಶರ್ಟ್ ಮತ್ತು ಘೋಷಣೆಯ ಬಗ್ಗೆ ತೂತುಕುಡಿ ಸಂಸದ ಕನಿಮೋಳಿ ಅವರ ಕಚೇರಿಯಿಂದ ನನಗೆ ಕರೆ ಬಂದಿತು. ಅವರು ನೀಡಿದ ಘೋಷಣೆಯನ್ನು ನಾನು ಸ್ವೀಕರಿಸಿದೆ. ಅದು ವಿಶಿಷ್ಟ ಮತ್ತು ಶಕ್ತಿಯುತವಾಗಿತ್ತು” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಎಂಬ ಘೋಷಣೆಗಳು ನನ್ನ ಆಸಕ್ತಿಯನ್ನು ಸೆಳೆದವು. ಆದ್ದರಿಂದ, ನಾವು ಟಿ-ಶರ್ಟ್ ಮೇಲೆ ಈ ಘೋಷಣೆಯ ಮುದ್ರಣವನ್ನು ಹಾಕಿಸಿದ್ದೇವೆ. ಕೆಲವೇ ದಿನಗಳಲ್ಲಿ, ಇದು ಚೆನ್ನೈ ಮತ್ತು ತಮಿಳುನಾಡಿನಾದ್ಯಂತ ಭಾರಿ ಮನ್ನಣೆ ಪಡೆಯಿತು. ಹಲವಾರು ಸಿನಿ ಸೆಲೆಬ್ರಿಟಿಗಳು ಮತ್ತು ಉನ್ನತ ವ್ಯಕ್ತಿಗಳು ಟಿ-ಶರ್ಟ್ ಅನ್ನು ತೆಗೆದುಕೊಂಡು ಪ್ರಚಾರ ಮಾಡಿದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಸ್ನೇಹಿತರು ಮತ್ತು ಸಂಬಂಧಿಕರು ಈ ಕೆಲಸವನ್ನು ಮೆಚ್ಚಿಕೊಳ್ಳುವುದರೊಂದಿಗೆ, ಹಲವರಿಂದ ಆರ್ಡರ್‌ ಬರಲು ಆರಂಭವಾಯಿತು. ಆದ್ದರಿಂದ, ನಾನು ಟಿ-ಶರ್ಟ್ ಮಾರಾಟ ಮಾಡಲು ನಿರ್ಧರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಈಗ ಜಗತ್ತಿನಾದ್ಯಂತ ಆರ್ಡರ್‌ ಬರಲು ಪ್ರಾರಂಭವಾಗಿದೆ” ಎಂದು ಹೇಳಿದರು.

“ನಾನು ನನ್ನ ಮೊಬೈಲ್ ಸಂಖ್ಯೆ ಮತ್ತು ಟಿ-ಶರ್ಟ್‌ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ‌ಗಳಲ್ಲಿ ಪೋಸ್ಟ್ ಮಾಡಿದಾಗ, ನನಗೆ ಫೋನ್‌ನಲ್ಲಿ ಬೆದರಿಕೆಗಳು ಮತ್ತು ನಿಂದನೆಗಳು ಬರಲು ಆರಂಭವಾಯಿತು. ಅನೇಕ ಕರೆಗಳು ದುಬೈ ಮತ್ತು ಸಿಂಗಾಪುರದ ಜನರಿಂದ ಬಂದವು. ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರಕ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು” ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

“ಆದ್ದರಿಂದ, ನಾನು ಮೌನವಾಗಿರಲು ನಿರ್ಧರಿಸಿ, ಹೊಸ ಆರ್ಡರ್‌ ಬಂದಾಗಲೆಲ್ಲಾ, ’ನಾನು ಉಡುಪು ತಯಾರಕನಲ್ಲ’ ಎಂದು ನಟಿಸಿದೆ. ಆದರೆ ನನ್ನ ಸ್ನೇಹಿತರು ನನಗೆ ಬಲತುಂಬಿ ಪ್ರೋತ್ಸಾಹಿಸಿದರು. ನಂತರ ನಾನು ಎಲ್ಲಾ ಆರ್ಡರ್‌ಗಳನ್ನು ಸ್ವೀಕರಿಸಲು ನಿರ್ಧರಿಸಿದ್ದೇನೆ. ಆದರೆ, ಬೆದರಿಕೆ ಕರೆಗಳ ಬಗ್ಗೆ ಪೊಲೀಸ್ ದೂರು ನೀಡಲು ಯೋಚಿಸಿಲ್ಲ. ಅವುಗಳನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ಹಿಂದಿ ದಿವಸ್ ವಿರುದ್ಧ ಅನೇಕ ರಾಜ್ಯಗಳು ದನಿಯೆತ್ತುತ್ತಿವೆ. ಕರ್ನಾಟಕದಲ್ಲಿಯೂ ಕೂಡ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಧನಂಜಯ್ ಧರಿಸಿರುವ ಟೀಶರ್ಟ್ ವೈರಲ್ ಆಗುತ್ತಿದ್ದು, ಅದರಲ್ಲಿ “ಕನ್ನಡಿಗರಿಗೆ ಕನ್ನಡ ಭಾಷೆಯೇ ರಾಷ್ಟ್ರೀಯ ಭಾಷೆ” ಎಂದು ಅದರಲ್ಲಿ ಬರೆದಿದೆ.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...