Homeಮುಖಪುಟ"ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)" ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

“ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು" ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

- Advertisement -
- Advertisement -

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಸೇರಿದಂತೆ ಇತರೆ ಘೋಷಣೆಗಳೊಂದಿಗೆ ಟೀಶರ್ಟ್ ತಯಾರಿಸುತ್ತಿರುವ ತಿರುಪ್ಪೂರಿನ ಬಟ್ಟೆ ತಯಾರಕರಿಗೆ ಕಳೆದ ಕೆಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತಿರುಪ್ಪೂರಿನ ವೀರಪಾಂಡಿಯಲ್ಲಿ ಕಳೆದ ಐದು ವರ್ಷಗಳಿಂದ ಗಾರ್ಮೆಂಟ್ ವ್ಯವಹಾರದಲ್ಲಿ ತೊಡಗಿರುವ ಬಿ ಕಾರ್ತಿಕೇಯನ್, “ನಾನು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಮತ್ತು ಕಾರ್ಪೊರೇಟ್ ಆದೇಶದ ಮೇರೆಗೆ ಟಿ-ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದೇನೆ. ಕಳೆದ ವಾರ, ಟಿ-ಶರ್ಟ್ ಮತ್ತು ಘೋಷಣೆಯ ಬಗ್ಗೆ ತೂತುಕುಡಿ ಸಂಸದ ಕನಿಮೋಳಿ ಅವರ ಕಚೇರಿಯಿಂದ ನನಗೆ ಕರೆ ಬಂದಿತು. ಅವರು ನೀಡಿದ ಘೋಷಣೆಯನ್ನು ನಾನು ಸ್ವೀಕರಿಸಿದೆ. ಅದು ವಿಶಿಷ್ಟ ಮತ್ತು ಶಕ್ತಿಯುತವಾಗಿತ್ತು” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಎಂಬ ಘೋಷಣೆಗಳು ನನ್ನ ಆಸಕ್ತಿಯನ್ನು ಸೆಳೆದವು. ಆದ್ದರಿಂದ, ನಾವು ಟಿ-ಶರ್ಟ್ ಮೇಲೆ ಈ ಘೋಷಣೆಯ ಮುದ್ರಣವನ್ನು ಹಾಕಿಸಿದ್ದೇವೆ. ಕೆಲವೇ ದಿನಗಳಲ್ಲಿ, ಇದು ಚೆನ್ನೈ ಮತ್ತು ತಮಿಳುನಾಡಿನಾದ್ಯಂತ ಭಾರಿ ಮನ್ನಣೆ ಪಡೆಯಿತು. ಹಲವಾರು ಸಿನಿ ಸೆಲೆಬ್ರಿಟಿಗಳು ಮತ್ತು ಉನ್ನತ ವ್ಯಕ್ತಿಗಳು ಟಿ-ಶರ್ಟ್ ಅನ್ನು ತೆಗೆದುಕೊಂಡು ಪ್ರಚಾರ ಮಾಡಿದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಸ್ನೇಹಿತರು ಮತ್ತು ಸಂಬಂಧಿಕರು ಈ ಕೆಲಸವನ್ನು ಮೆಚ್ಚಿಕೊಳ್ಳುವುದರೊಂದಿಗೆ, ಹಲವರಿಂದ ಆರ್ಡರ್‌ ಬರಲು ಆರಂಭವಾಯಿತು. ಆದ್ದರಿಂದ, ನಾನು ಟಿ-ಶರ್ಟ್ ಮಾರಾಟ ಮಾಡಲು ನಿರ್ಧರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಈಗ ಜಗತ್ತಿನಾದ್ಯಂತ ಆರ್ಡರ್‌ ಬರಲು ಪ್ರಾರಂಭವಾಗಿದೆ” ಎಂದು ಹೇಳಿದರು.

“ನಾನು ನನ್ನ ಮೊಬೈಲ್ ಸಂಖ್ಯೆ ಮತ್ತು ಟಿ-ಶರ್ಟ್‌ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ‌ಗಳಲ್ಲಿ ಪೋಸ್ಟ್ ಮಾಡಿದಾಗ, ನನಗೆ ಫೋನ್‌ನಲ್ಲಿ ಬೆದರಿಕೆಗಳು ಮತ್ತು ನಿಂದನೆಗಳು ಬರಲು ಆರಂಭವಾಯಿತು. ಅನೇಕ ಕರೆಗಳು ದುಬೈ ಮತ್ತು ಸಿಂಗಾಪುರದ ಜನರಿಂದ ಬಂದವು. ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರಕ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು” ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

“ಆದ್ದರಿಂದ, ನಾನು ಮೌನವಾಗಿರಲು ನಿರ್ಧರಿಸಿ, ಹೊಸ ಆರ್ಡರ್‌ ಬಂದಾಗಲೆಲ್ಲಾ, ’ನಾನು ಉಡುಪು ತಯಾರಕನಲ್ಲ’ ಎಂದು ನಟಿಸಿದೆ. ಆದರೆ ನನ್ನ ಸ್ನೇಹಿತರು ನನಗೆ ಬಲತುಂಬಿ ಪ್ರೋತ್ಸಾಹಿಸಿದರು. ನಂತರ ನಾನು ಎಲ್ಲಾ ಆರ್ಡರ್‌ಗಳನ್ನು ಸ್ವೀಕರಿಸಲು ನಿರ್ಧರಿಸಿದ್ದೇನೆ. ಆದರೆ, ಬೆದರಿಕೆ ಕರೆಗಳ ಬಗ್ಗೆ ಪೊಲೀಸ್ ದೂರು ನೀಡಲು ಯೋಚಿಸಿಲ್ಲ. ಅವುಗಳನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ಹಿಂದಿ ದಿವಸ್ ವಿರುದ್ಧ ಅನೇಕ ರಾಜ್ಯಗಳು ದನಿಯೆತ್ತುತ್ತಿವೆ. ಕರ್ನಾಟಕದಲ್ಲಿಯೂ ಕೂಡ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಧನಂಜಯ್ ಧರಿಸಿರುವ ಟೀಶರ್ಟ್ ವೈರಲ್ ಆಗುತ್ತಿದ್ದು, ಅದರಲ್ಲಿ “ಕನ್ನಡಿಗರಿಗೆ ಕನ್ನಡ ಭಾಷೆಯೇ ರಾಷ್ಟ್ರೀಯ ಭಾಷೆ” ಎಂದು ಅದರಲ್ಲಿ ಬರೆದಿದೆ.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...