Homeಮುಖಪುಟ"ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)" ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

“ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು" ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

- Advertisement -
- Advertisement -

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಸೇರಿದಂತೆ ಇತರೆ ಘೋಷಣೆಗಳೊಂದಿಗೆ ಟೀಶರ್ಟ್ ತಯಾರಿಸುತ್ತಿರುವ ತಿರುಪ್ಪೂರಿನ ಬಟ್ಟೆ ತಯಾರಕರಿಗೆ ಕಳೆದ ಕೆಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತಿರುಪ್ಪೂರಿನ ವೀರಪಾಂಡಿಯಲ್ಲಿ ಕಳೆದ ಐದು ವರ್ಷಗಳಿಂದ ಗಾರ್ಮೆಂಟ್ ವ್ಯವಹಾರದಲ್ಲಿ ತೊಡಗಿರುವ ಬಿ ಕಾರ್ತಿಕೇಯನ್, “ನಾನು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಮತ್ತು ಕಾರ್ಪೊರೇಟ್ ಆದೇಶದ ಮೇರೆಗೆ ಟಿ-ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದೇನೆ. ಕಳೆದ ವಾರ, ಟಿ-ಶರ್ಟ್ ಮತ್ತು ಘೋಷಣೆಯ ಬಗ್ಗೆ ತೂತುಕುಡಿ ಸಂಸದ ಕನಿಮೋಳಿ ಅವರ ಕಚೇರಿಯಿಂದ ನನಗೆ ಕರೆ ಬಂದಿತು. ಅವರು ನೀಡಿದ ಘೋಷಣೆಯನ್ನು ನಾನು ಸ್ವೀಕರಿಸಿದೆ. ಅದು ವಿಶಿಷ್ಟ ಮತ್ತು ಶಕ್ತಿಯುತವಾಗಿತ್ತು” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಎಂಬ ಘೋಷಣೆಗಳು ನನ್ನ ಆಸಕ್ತಿಯನ್ನು ಸೆಳೆದವು. ಆದ್ದರಿಂದ, ನಾವು ಟಿ-ಶರ್ಟ್ ಮೇಲೆ ಈ ಘೋಷಣೆಯ ಮುದ್ರಣವನ್ನು ಹಾಕಿಸಿದ್ದೇವೆ. ಕೆಲವೇ ದಿನಗಳಲ್ಲಿ, ಇದು ಚೆನ್ನೈ ಮತ್ತು ತಮಿಳುನಾಡಿನಾದ್ಯಂತ ಭಾರಿ ಮನ್ನಣೆ ಪಡೆಯಿತು. ಹಲವಾರು ಸಿನಿ ಸೆಲೆಬ್ರಿಟಿಗಳು ಮತ್ತು ಉನ್ನತ ವ್ಯಕ್ತಿಗಳು ಟಿ-ಶರ್ಟ್ ಅನ್ನು ತೆಗೆದುಕೊಂಡು ಪ್ರಚಾರ ಮಾಡಿದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಸ್ನೇಹಿತರು ಮತ್ತು ಸಂಬಂಧಿಕರು ಈ ಕೆಲಸವನ್ನು ಮೆಚ್ಚಿಕೊಳ್ಳುವುದರೊಂದಿಗೆ, ಹಲವರಿಂದ ಆರ್ಡರ್‌ ಬರಲು ಆರಂಭವಾಯಿತು. ಆದ್ದರಿಂದ, ನಾನು ಟಿ-ಶರ್ಟ್ ಮಾರಾಟ ಮಾಡಲು ನಿರ್ಧರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಈಗ ಜಗತ್ತಿನಾದ್ಯಂತ ಆರ್ಡರ್‌ ಬರಲು ಪ್ರಾರಂಭವಾಗಿದೆ” ಎಂದು ಹೇಳಿದರು.

“ನಾನು ನನ್ನ ಮೊಬೈಲ್ ಸಂಖ್ಯೆ ಮತ್ತು ಟಿ-ಶರ್ಟ್‌ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ‌ಗಳಲ್ಲಿ ಪೋಸ್ಟ್ ಮಾಡಿದಾಗ, ನನಗೆ ಫೋನ್‌ನಲ್ಲಿ ಬೆದರಿಕೆಗಳು ಮತ್ತು ನಿಂದನೆಗಳು ಬರಲು ಆರಂಭವಾಯಿತು. ಅನೇಕ ಕರೆಗಳು ದುಬೈ ಮತ್ತು ಸಿಂಗಾಪುರದ ಜನರಿಂದ ಬಂದವು. ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರಕ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು” ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

“ಆದ್ದರಿಂದ, ನಾನು ಮೌನವಾಗಿರಲು ನಿರ್ಧರಿಸಿ, ಹೊಸ ಆರ್ಡರ್‌ ಬಂದಾಗಲೆಲ್ಲಾ, ’ನಾನು ಉಡುಪು ತಯಾರಕನಲ್ಲ’ ಎಂದು ನಟಿಸಿದೆ. ಆದರೆ ನನ್ನ ಸ್ನೇಹಿತರು ನನಗೆ ಬಲತುಂಬಿ ಪ್ರೋತ್ಸಾಹಿಸಿದರು. ನಂತರ ನಾನು ಎಲ್ಲಾ ಆರ್ಡರ್‌ಗಳನ್ನು ಸ್ವೀಕರಿಸಲು ನಿರ್ಧರಿಸಿದ್ದೇನೆ. ಆದರೆ, ಬೆದರಿಕೆ ಕರೆಗಳ ಬಗ್ಗೆ ಪೊಲೀಸ್ ದೂರು ನೀಡಲು ಯೋಚಿಸಿಲ್ಲ. ಅವುಗಳನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ಹಿಂದಿ ದಿವಸ್ ವಿರುದ್ಧ ಅನೇಕ ರಾಜ್ಯಗಳು ದನಿಯೆತ್ತುತ್ತಿವೆ. ಕರ್ನಾಟಕದಲ್ಲಿಯೂ ಕೂಡ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಧನಂಜಯ್ ಧರಿಸಿರುವ ಟೀಶರ್ಟ್ ವೈರಲ್ ಆಗುತ್ತಿದ್ದು, ಅದರಲ್ಲಿ “ಕನ್ನಡಿಗರಿಗೆ ಕನ್ನಡ ಭಾಷೆಯೇ ರಾಷ್ಟ್ರೀಯ ಭಾಷೆ” ಎಂದು ಅದರಲ್ಲಿ ಬರೆದಿದೆ.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...