Homeಮುಖಪುಟಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

- Advertisement -
- Advertisement -

ವೈವಿಧ್ಯತೆ ಮತ್ತು ಬಹುತ್ವ ಭಾರತದ ಜೀವಾಳ. ಇಲ್ಲಿ ಏಕಸಂಸ್ಕೃತಿ, ಏಕ ಭಾಷೆಗೆ ಮಹತ್ವ ಕೊಡುವುದು ಪ್ರಾಯೋಗಿಕವಲ್ಲ. ಹಾಗಾಗಿಯೇ ಹಿಂದಿ ಹೇರಿಕೆಯ ವಿರುದ್ಧ ಹಲವಾರು ಹೋರಾಟಗಳನ್ನು ದೇಶ ಕಂಡಿದೆ. ಈಗ ಮತ್ತೊಮ್ಮೆ ಹಿಂದಿ ಹೇರಿಕೆಯ ವಿಚಾರ ಮುನ್ನಲೆಗೆ ಬಂದಿದೆ. ಪ್ರತಿವರ್ಷ ಹಿಂದಿ ದಿವಸ್ ಆಚರಣೆ ಬಂದಾಗ ಅಥವಾ ಹಿಂದಿ ರಾಷ್ಟ್ರಭಾಷೆ ಎಂಬ ಸುಳ್ಳನ್ನು ಬಿಜೆಪಿ ಮುಖಂಡರು ಪುನರುಚ್ಚರಿಸಿದಾಗ ದಕ್ಷಿಣದ ರಾಜ್ಯಗಳು ಅದನ್ನು ವಿರೋಧಿಸುತ್ತಿದ್ದವು. ಬೃಹತ್ ಚರ್ಚೆ ವಾಗ್ವಾದ ನಡೆಯುತ್ತಿತ್ತು. ಹಿಂದಿ ನಾಮಫಲಕಗಳಿಗೆ ಮಸಿ ಬಳಿಯಲಾಗುತ್ತಿತ್ತು. ಆನಂತರ ಯಥಾಸ್ಥಿತಿಗೆ ಮರಳುತ್ತಿತ್ತು. ಆದರೆ ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷೆಗಳ ಸಂಸದೀಯ ಸ್ಥಾಯಿ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಹಿಂದಿಗೆ ಇನ್ನಿಲ್ಲದ ಪ್ರಾಧಾನ್ಯತೆ ನೀಡಲಾಗಿದೆ; ಈ ನಿಟ್ಟಿನಲ್ಲಿ ಪ್ರಾದೇಶಿಕ ಭಾಷೆಗಳ ಮೇಲೆ ಹಾಗೂ ಭಾರತದ ಒಕ್ಕೂಟ ತತ್ವದ ಮೇಲೆ ತೀವ್ರ ದಾಳಿ ಮಾಡಲಾಗಿದೆ ಎಂದು ದಕ್ಷಿಣದ ರಾಜ್ಯಗಳು ಆರೋಪಿಸಿವೆ. ಮುಖ್ಯವಾಗಿ ಹಿಂದಿ ಹೇರಿಕೆಯ ವಿರುದ್ಧ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಆರಂಭಿಸಿರುವ ಹೋರಾಟಕ್ಕೆ, ತೆಲಂಗಾಣ, ಪಶ್ಚಿಮ ಬಂಗಾಳ ರಾಜ್ಯದ ಜನರು ಸಹ ದನಿಗೂಡಿಸಿರುವುದು ವಿಶೇ?ಷವಾಗಿದೆ.

ಅಮಿತ್ ಶಾ ವರದಿಯಲ್ಲೇನಿದೆ?

ಹಿಂದಿ ಭಾಷಿಕ ರಾಜ್ಯಗಳಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರೀಯ ವಿದ್ಯಾಲಯಗಳು, ಐಐಟಿ, ಐಐಎಂ, ಏಮ್ಸ್ ತರಹದ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮವು ಕಡ್ಡಾಯವಾಗಿ ಇಂಗ್ಲಿಷ್‌ಗೆ ಬದಲಾಗಿ ಹಿಂದಿಯಾಗಬೇಕು. ಇತರ ರಾಜ್ಯಗಳಲ್ಲಿ ಬೋಧನಾ ಮಾಧ್ಯಮವು ಸ್ಥಳೀಯ ಭಾಷೆಯಾಗಿರಬೇಕು. ಇದಲ್ಲದೆ ಕೇಂದ್ರೀಯ ಹುದ್ದೆಗಳ ಸಿಬ್ಬಂದಿಗಳಲ್ಲಿ ಹಿಂದಿಯ ಅಗತ್ಯ ಜ್ಞಾನವನ್ನು ಖಚಿತಪಡಿಸಿಕೊಳ್ಳಬೇಕು. ಅದಕ್ಕಾಗಿ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಬದಲಿಗೆ ಹಿಂದಿಯಲ್ಲಿ ನಡೆಸಬೇಕು. ಇಸ್ರೋ, ಡಿಆರ್‌ಡಿಓನಂತಹ ಸಂಸ್ಥೆಗಳು ಸಹ ಹಿಂದಿಯನ್ನೆ ಬಳಸಬೇಕು ಎಂಬ 112 ಶಿಫಾರಸ್ಸುಗಳನ್ನು ಅಮಿತ್ ಶಾ ನೇತೃತ್ವದ ಸಮಿತಿ ನೀಡಿದೆ.

ಅಮಿತ್ ಶಾ

ಅಮಿತ್ ಶಾ ನೇತೃತ್ವದ ಸಮಿತಿಯು ತನ್ನ 11ನೇ ವರದಿಯಲ್ಲಿ ಸಲ್ಲಿಸಿರುವ ಶಿಫಾರಸ್ಸುಗಳು ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿವೆ. ಕೇರಳ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಈ ಸಮಿತಿಯ ಶಿಫಾರಸ್ಸುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಕರ್ನಾಟಕದ ವಿರೋಧ ಪಕ್ಷಗಳು ಈ ಹಿಂದಿ ಹೇರಿಕೆಯನ್ನು ವಿರೋಧಿಸಿವೆ. ಪಶ್ಚಿಮ ಬಂಗಾಳದಲ್ಲಿಯೂ ಪ್ರತಿಭಟನೆ ನಡೆದಿದೆ. ಪಶ್ಚಿಮ ಬಂಗಾಳದ ಪ್ರತಿಭಟನೆಯಲ್ಲಿ ಕರ್ನಾಟಕದ ಮೇರು ಸಾಹಿತಿ ಕುವೆಂಪು ಮತ್ತು ತಮಿಳುನಾಡಿನ ಹೋರಾಟಗಾರ ಅಣ್ಣಾ ದೊರೈರವರ ಫೋಟೋಗಳನ್ನು ಹಿಡಿದಿದ್ದು ಕೂಡ ಮಾರ್ದನಿಸಿತ್ತು.

ಶಿಫಾರಸ್ಸುಗಳ ವಿರುದ್ಧ ನಿರ್ಣಯ ಕೈಗೊಂಡ ತಮಿಳುನಾಡು ಸರ್ಕಾರ

ಅಮಿತ್ ಶಾ ನೇತೃತ್ವದ ವರದಿಯು ತಮಿಳು ಭಾಷಿಕರು ಸೇರಿದಂತೆ ಇತರ ಭಾಷೆಗಳನ್ನಾಡುವ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ; ಹಾಗಾಗಿ ರಾಷ್ಟ್ರಪತಿಗಳು ವರದಿಯ ಶಿಫಾರಸ್ಸುಗಳನ್ನು ಅಂಗೀಕರಿಸಬಾರದು ಎಂದು ತಮಿಳುನಾಡು ವಿಧಾನಸಭೆಯಲ್ಲಿ ಆಡಳಿತಾರೂಢ ಡಿ.ಎಂ.ಕೆ ಪಕ್ಷವು ನಿರ್ಣಯ ಮಂಡಿಸಿದ್ದು, ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ ನಂತರ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಭಾಷೆ ತಮಿಳರ ಜೀವನಾಡಿ. ಹಿಂದಿಯ ಯಾಜಮಾನ್ಯ ಆಳ್ವಿಕೆಯನ್ನು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಗುಡುಗಿದ್ದಾರೆ. “ಹಿಂದಿ ಹೇರಿಕೆ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳು ಅಪ್ರಾಯೋಗಿಕವಾಗಿವೆ ಮತ್ತು ವಿಭಜಕ ಕ್ರಮಗಳಾಗಿವೆ. ದೇಶದಲ್ಲಿ ಹಿಂದಿ ಮಾತನಾಡದ ಜನರೆ ಬಹುಸಂಖ್ಯಾತರಾಗಿದ್ದಾರೆ. ಹೀಗಿರುವಾಗ ಹಿಂದಿಗೆ ಅನಗತ್ಯವಾಗಿ ಮಹತ್ವ ನೀಡುವುದರಿಂದ ಹಿಂದಿ ಬಾರದ ಜನರನ್ನು ಅವಮಾನಿಸುವುದಲ್ಲದೆ ಅವರನ್ನು ತೀವ್ರ ಅನಾನುಕೂಲಕರ ಪರಿಸ್ಥಿತಿಗೆ ತಳ್ಳಲಾಗುತ್ತಿದೆ” ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಿಎಂ ಸ್ಟಾಲಿನ್

“ಈ ವರದಿ ಜಾರಿಯಾದರೆ ಅದು ಭಾರತದ ಆತ್ಮದ ಮೇಲಿನ ನೇರ ದಾಳಿಯಾಗಿದೆ. ಇದರಿಂದ ಹಿಂದಿಯೇತರ ಭಾಷಿಕ ಜನರು ತಮ್ಮ ನೆಲದಲ್ಲಿಯೇ ತಾವು ಎರಡನೇ ದರ್ಜೆಯ ಪ್ರಜೆಗಳಾಗಿ ಬದುಕಬೇಕಾದ ಪರಿಸ್ಥಿತಿ ಬರುತ್ತದೆ. ಇದೊಂದು ಭಾಷಾ ಯುದ್ಧಕ್ಕೆ ಕಾರಣವಾಗುತ್ತದೆ. ಹಾಗಾಗಿ ಹಿಂದಿ ಹೇರಿಕೆ ಬದಲು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಮಾನ್ಯಗೊಂಡಿರುವ ಎಲ್ಲಾ 22 ಭಾಷೆಗಳನ್ನು ಸಮಾನವಾಗಿ ನೋಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಕೇರಳದ ಕಳವಳ

“ದೇಶದಲ್ಲಿ ಹಲವು ಭಾಷೆಗಳಿವೆ. ಹಾಗಾಗಿ ಒಂದೇ ಭಾಷೆಯನ್ನು ದೇಶದ ಭಾಷೆ ಎಂದು ಕರೆಯಲಾಗದ ಕಾರಣ ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ಹಿಂದಿಯನ್ನು ಮುಖ್ಯ ಬೋಧನಾ ಭಾಷೆಯಾಗಿ ಹೇರಲು ಸಾಧ್ಯವಿಲ್ಲ” ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಪಿಣರಾಯಿ ವಿಜಯನ್

ನಮ್ಮ ದೇಶದಲ್ಲಿ ಸರ್ಕಾರಿ ಉದ್ಯೋಗಗಳು ಕಡಿಮೆ ಇವೆ. ಇಂತಹ ಸಂದರ್ಭದಲ್ಲಿ ಇಂಗ್ಲಿಷ್ ಬದಲಿಗೆ ಹಿಂದಿಯಲ್ಲಿ ಪರೀಕ್ಷೆ ನಡೆಸುವುದರಿಂದ ದಕ್ಷಿಣದ ಯುವಜನರು ಮತ್ತಷ್ಟು ಉದ್ಯೋಗವಂಚಿತರಾಗುತ್ತಾರೆ. ಹಾಗಾಗಿ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ನಿಗದಿಪಡಿಸಿದ ಎಲ್ಲಾ ಭಾಷೆಗಳಲ್ಲಿ ಪರೀಕ್ಷೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಶಿಫಾರಸ್ಸುಗಳು ಅಸಂವಿಧಾನಿಕ – ತೆಲಂಗಾಣ ಸಚಿವ

ಈ ಶಿಫಾರಸ್ಸುಗಳನ್ನು ತೆಲಂಗಾಣದ ಸಚಿವ ಮತ್ತು ಟಿಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ ರಾಮರಾವ್ ಅಸಂವಿಧಾನಿಕ ಎಂದು ಕರೆದಿದ್ದು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. “ಇತರ ಅಧಿಕೃತ ಭಾಷೆಗಳಂತೆ ಹಿಂದಿಯೂ ಮತ್ತೊಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ. ನಮ್ಮ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿ 22 ಭಾಷೆಗಳನ್ನು ಅಂಗೀಕರಿಸಲಾಗಿದೆ. ಬಹುರಾಷ್ಟ್ರೀಯ

ಕೆ.ಟಿ ರಾಮರಾವ್

ಕಂಪೆನಿಗಳಲ್ಲಿ ಸಿಇಒದಂತಹ ಹುದ್ದೆಗಳಿಗೇರಿದ ಹಲವರು ಆಂಗ್ಲ ಭಾಷಾ ಮಾಧ್ಯಮದಲ್ಲಿ ಓದಿದವರಾಗಿದ್ದಾರೆ. ಆದರೆ ಬಿಜೆಪಿಯು ಹಿಂದಿ ಹೇರುವ ಮೂಲಕ ಯುವಜನರ ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದೆ. ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ನಡೆಸುವಂತೆ ನಾವು ಒತ್ತಾಯಿಸಿದ್ದೆವು. ಆದರೆ ಈಗಲೂ ಕೇಂದ್ರ ಸರ್ಕಾರ ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ವಿರೋಧ ಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ವಿರೋಧ

ಹಿಂದಿ ಹೇರಿಕೆಯ ವಿಚಾರದಲ್ಲಿ ಕರ್ನಾಟಕವು ಉಳಿದ ದಕ್ಷಿಣದ ರಾಜ್ಯಗಳಿಗಿಂತ ಭಿನ್ನ ಸ್ಥಾನದಲ್ಲಿದೆ. ಏಕೆಂದರೆ ಇಲ್ಲಿ ಬಿಜೆಪಿ ಆಡಳಿತವಿರುವ ಕಾರಣಕ್ಕೆ ಸರ್ಕಾರ ಹಿಂದಿ ಹೇರಿಕೆಯನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ಹಿಂದಿ ರಾಷ್ಟ್ರಭಾಷೆ, ಹಿಂದಿ ಕಲಿಯಬೇಕು ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಾರೆ. ಆದರೆ ಕನ್ನಡಿಗರು ಮತ್ತು ವಿರೋಧ ಪಕ್ಷಗಳು ಸದಾ ಹಿಂದಿ ಹೇರಿಕೆಯನ್ನು ವಿರೋಧಿಸಿವೆ. ಜೆಡಿಎಸ್‌ನಾಯಕ, ಅಮಿತ್ ಶಾ ನೇತೃತ್ವದ ವರದಿಯನ್ನು ಮಾಜಿ ಸಿಎಂ ಕುಮಾರಸ್ವಾಮಿಯವರು ತೀವ್ರವಾಗಿ ಖಂಡಿಸಿದ್ದಾರೆ. “ವರದಿಯು ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಸ್ತಿತ್ವಕ್ಕೆ ಕುತ್ತು ತರುತ್ತಿದೆ. ಒಂದು ದೇಶ-ಒಂದು ಧರ್ಮ- ಒಂದು ಭಾಷೆ ಎಂಬ ಘೋಷಣೆಯ ಮೂಲಕ ದೇಶದ ಒಕ್ಕೂಟ ವ್ಯವಸ್ಥೆಯನ್ನು ಧ್ವಂಸಗೊಳಿಸಲಾಗುತ್ತಿದೆ. ಬಹುತ್ವದ ದೇಶವನ್ನು ಹಿಂದಿಸ್ತಾನ ಮಾಡಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಎಚ್‌ ಡಿ ಕುಮಾರಸ್ವಾಮಿ

“ದೇಶದಲ್ಲಿ ಹಿಂದಿ ಮಾತನಾಡುವವರ ಸಂಖ್ಯೆ ತೀರಾ ಕಡಿಮೆಯಿದೆ. ತ್ರಿಭಾಷಾ ಸೂತ್ರವನ್ನು ಒಪ್ಪಲು ಸಾಧ್ಯವಿಲ್ಲ. ಆರ್ಯ ಸಂಸ್ಕೃತಿಯ ತುಷ್ಟೀಕರಣವನ್ನು ನಾವು ಒಪ್ಪುವುದಿಲ್ಲ. ಸ್ಥಳೀಯ ಭಾಷೆಗಳನ್ನು ಪೋಷಿಸುತ್ತೇವೆ ಎಂದು ಹೇಳುವ ಬಿಜೆಪಿ ವಾಸ್ತವದಲ್ಲಿ ಅವುಗಳನ್ನು ತುಳಿಯುತ್ತಿದೆ” ಎಂದು ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾಳದಲ್ಲಿ ಮಾರ್ದನಿಸಿದ ಹಿಂದಿ ಹೇರಿಕೆ ವಿರುದ್ಧದ ದನಿ

ಸಾಮಾನ್ಯವಾಗಿ ದಕ್ಷಿಣದ ರಾಜ್ಯಗಳು ಮಾತ್ರವೇ ಹಿಂದಿ ಹೇರಿಕೆ ವಿರೋಧಿಸುತ್ತವೆ, ಉಳಿದ ರಾಜ್ಯಗಳಿಗೆ ಹಿಂದಿ ಹೇರಿಕೆಯಿಂದ ಯಾವುದೇ ಸಮಸ್ಯೆಯಿಲ್ಲ ಎನ್ನಲಾಗುತ್ತದೆ. ಆದರೆ ವಾಸ್ತವ ಸ್ಥಿತಿ ಅದಕ್ಕೆ ವಿರುದ್ಧವಾಗಿದೆ. ಉತ್ತರ ಭಾರತದ ಬಹುತೇಕರ ಮಾತೃಭಾಷೆ ಹಿಂದಿ ಅಲ್ಲ. ಭೋಜಪುರಿ, ಅವಧಿ, ಹರಿಯಾಣ್ವಿ, ಮಗಧಿ, ಮೈಥಿಲಿ, ಬಿಹಾರಿ, ಚಾದ್ರಿ, ಪಹಾಡಿ, ಗಢವಾಲಿ, ಡೋಗ್ರಿ, ಆಂಗಿಕ, ಬುಂದೇಲಿ, ರಾಜಸ್ತಾನಿ, ಛತ್ತೀಸಗಢೀ, ಬ್ರಜಭಾಷಾ ಹಾಗೂ ಖಡೀಬೋಲಿಯಂತಹ ಪ್ರಾದೇಶಿಕ ಭಾಷೆಗಳು ತಮ್ಮ ಸ್ಥಾನಮಾನ ಕಳೆದುಕೊಂಡಿವೆ. ಅವಧಿ ಮತ್ತು ಬೋಜ್‌ಪುರಿ ಭಾಷೆಗಳನ್ನಾಡುವವರ ಜನಸಂಖ್ಯೆ 7 ಕೋಟಿಗೂ ಅಧಿಕವಿದ್ದರೂ ಅವು 8ನೇ ಶೆಡ್ಯೂಲ್‌ನಲ್ಲಿ ಸ್ಥಾನ ಪಡೆದಿಲ್ಲ. ಅವುಗಳ ಸ್ಥಾನವನ್ನು ಸಂಸ್ಕೃತ ಮತ್ತು ಹಿಂದಿ ನುಂಗುತ್ತಿವೆ. ಹಾಗಾಗಿ ಕಳೆದ 50 ವರ್ಷಗಳಲ್ಲಿ ಭಾರತದ 220 ಭಾಷೆಗಳು ಕಣ್ಮರೆಯಾಗಿವೆ ಎನ್ನಲಾಗುತ್ತಿದೆ. ಉತ್ತರ ಮತ್ತು ಮಧ್ಯಭಾರತದ 50ಕ್ಕೂ ಹೆಚ್ಚು ಭಾಷೆಗಳು ಪ್ರಸ್ತುತ ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಂಡು ಅಳಿವಿನ ಅಂಚಿನಲ್ಲಿವೆ.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಹಾಗಾಗಿಯೇ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಹಿಂದಿ ಹೇರಿಕೆಯ ವಿರುದ್ಧ ಹೋರಾಟಗಳು ಆರಂಭವಾಗಿವೆ. ಬಿಜೆಪಿಯನ್ನು ಹಿಂದಿ ಸಾಮ್ರಾಜ್ಯಶಾಹಿ ಪಕ್ಷ ಎಂದು ಕರೆದಿರುವ ಪಶ್ಚಿಮ ಬಂಗಾಳದ ಬಾಂಗ್ಲಾ ಪೋಖ್ಕೊ ಸಂಘಟನೆಯು ಅಕ್ಟೋಬರ್ 16ರಂದು ಕೋಲ್ಕತ್ತಾ ಸೇರಿದಂತೆ 16 ಜಿಲ್ಲೆಗಳಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದೆ. ಈ ಹಿಂದೆಯೂ ಸಹ ರಾಜ್ಯದಲ್ಲಿ ಅಧಿಕಾರದಲ್ಲಿರುವ ಟಿಎಂಸಿ ಪಕ್ಷವು ಹಿಂದಿ ಹೇರಿಕೆಯ ವಿರುದ್ಧ ದನಿಯೆತ್ತಿತ್ತು. ಟಿಎಂಸಿ ವಕ್ತಾರರು “ಭಾರತದ ಭಾಷಾ ವೈವಿಧ್ಯತೆಯು ದೇಶದ ಪ್ರಜಾತಂತ್ರವನ್ನು ಸುಂದರಗೊಳಿಸಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಒಂದು ಭಾಷೆಯನ್ನು ಹೇರುವುದು ವಿಭಜಕ ರಾಜಕಾರಣವಾಗಿದೆ” ಎಂದಿದ್ದರು.

ಹಿಂದಿ ಹೇರಿಕೆಯೇಕೆ?

ನಮ್ಮ ದೇಶದಲ್ಲಿ ಹಿಂದಿ ಎಂದರೆ ಸಂಸ್ಕೃತದ ವ್ಯಾಪಕ ಪ್ರಭಾವವಿರುವ ಒಂದು ಭಾಷೆಯಾಗಿದೆ. ಈ ಕಾರಣದಿಂದ ಹಿಂದಿ ಶ್ರೇಷ್ಠ ಉಳಿದ ಭಾಷೆಗಳು ಕನಿಷ್ಟ ಮತ್ತು ಎರಡನೇ ದರ್ಜೆಯ ಭಾಷೆಗಳು ಎಂಬ ಮನೋಭಾವ ಬಿತ್ತಲಾಗುತ್ತಿದೆ.

ಹಿಂದಿಯ ಮೂಲಕ ಬ್ರಾಹ್ಮಣೀಯ ಮೌಲ್ಯಗಳನ್ನು ಹೇರುವುದು ಬಿಜೆಪಿಯ ಉದ್ದೇಶವಾಗಿದೆ. ಹಿಂದಿ ಭಾಷಿಕರಿಗೆ ಹಲವು ವಲಯಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿಕೊಂಡು ಬರಲಾಗಿದೆ. ಇನ್ನೊಂದೆಡೆ ವಿಶ್ವಸಂಸ್ಥೆಯಲ್ಲಿ ಹಿಂದಿ ಭಾಷೆಗೆ ಅಧಿಕೃತ ಸ್ಥಾನಮಾನ ದೊರಕುವಂತೆ ಮಾಡುವುದಕ್ಕಾಗಿ ಹಿಂದಿ ಭಾರತದ ರಾಷ್ಟ್ರಭಾಷೆಯಾಗಬೇಕು ಎಂದು ಬಿಜೆಪಿ ಹೇಳುತ್ತದೆ. ಒಟ್ಟಿನಲ್ಲಿ ಹಿಂದಿ-ಹಿಂದೂ-ಹಿಂದೂಸ್ತಾನ ಘೋಷಣೆಯಡಿ ಅಧಿಕಾರ ಹಿಡಿಯುವುದು, ಶ್ರೇಷ್ಠ ಕನಿಷ್ಠ ಎಂಬ ತಾರತಮ್ಯವನ್ನು ಜೀವಂತವಾಗಿಡುವುದೇ ಮುಖ್ಯ ಅಜೆಂಡಾವಾಗಿದೆ.

ಈ ಕಾರಣಗಳಿಗಾಗಿಯೇ ದಕ್ಷಿಣದ ರಾಜ್ಯಗಳು ಹಿಂದಿ ಹೇರಿಕೆ ವಿರುದ್ಧ ನಿರಂತರವಾಗಿ ಹೋರಾಡುತ್ತಿವೆ. ಭಾರತದ ವಸಾಹತುಶಾಹಿ ಹಿನ್ನೆಲೆ ಮತ್ತು ಇಂದಿನ ಜಾಗತೀಕರಣಗಳ ಹಿನ್ನೆಲೆಯಿಂದಾಗಿ ಇಂಗ್ಲಿಷ್ ಎರಡನೇ ಭಾಷೆಯ ಶೈಕ್ಷಣಿಕ ಪೂರ್ವಗತ್ಯಗಳನ್ನು ಪೂರೈಸುತ್ತಿದೆ. ಆ ಜಾಗದಲ್ಲಿ ಹಿಂದಿಯನ್ನು ಪರಿಚಯಿಸುವುದು ಕೃತಕ ಮಾತ್ರವಲ್ಲ ಹಿಂದಿಯೇತರ ರಾಜ್ಯದ ಮಕ್ಕಳಿಗೆ ಮತ್ತು ಜನರಿಗೆ ಮಾಡುವ ತಾರತಮ್ಯ ಹಾಗೂ ಆನ್ಯಾಯವೂ ಆಗುತ್ತದೆ. ಹೀಗಾಗಿ ಹಿಂದಿಯು ಎರಡನೆಯ ಅಥವಾ ಮೂರನೆಯ ಭಾಷೆಯಾಗಿ ಸಲ್ಲದು ಎಂಬುದು ದಕ್ಷಿಣದ ರಾಜ್ಯಗಳ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...