Homeಮುಖಪುಟಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

- Advertisement -
- Advertisement -

ವೈವಿಧ್ಯತೆ ಮತ್ತು ಬಹುತ್ವ ಭಾರತದ ಜೀವಾಳ. ಇಲ್ಲಿ ಏಕಸಂಸ್ಕೃತಿ, ಏಕ ಭಾಷೆಗೆ ಮಹತ್ವ ಕೊಡುವುದು ಪ್ರಾಯೋಗಿಕವಲ್ಲ. ಹಾಗಾಗಿಯೇ ಹಿಂದಿ ಹೇರಿಕೆಯ ವಿರುದ್ಧ ಹಲವಾರು ಹೋರಾಟಗಳನ್ನು ದೇಶ ಕಂಡಿದೆ. ಈಗ ಮತ್ತೊಮ್ಮೆ ಹಿಂದಿ ಹೇರಿಕೆಯ ವಿಚಾರ ಮುನ್ನಲೆಗೆ ಬಂದಿದೆ. ಪ್ರತಿವರ್ಷ ಹಿಂದಿ ದಿವಸ್ ಆಚರಣೆ ಬಂದಾಗ ಅಥವಾ ಹಿಂದಿ ರಾಷ್ಟ್ರಭಾಷೆ ಎಂಬ ಸುಳ್ಳನ್ನು ಬಿಜೆಪಿ ಮುಖಂಡರು ಪುನರುಚ್ಚರಿಸಿದಾಗ ದಕ್ಷಿಣದ ರಾಜ್ಯಗಳು ಅದನ್ನು ವಿರೋಧಿಸುತ್ತಿದ್ದವು. ಬೃಹತ್ ಚರ್ಚೆ ವಾಗ್ವಾದ ನಡೆಯುತ್ತಿತ್ತು. ಹಿಂದಿ ನಾಮಫಲಕಗಳಿಗೆ ಮಸಿ ಬಳಿಯಲಾಗುತ್ತಿತ್ತು. ಆನಂತರ ಯಥಾಸ್ಥಿತಿಗೆ ಮರಳುತ್ತಿತ್ತು. ಆದರೆ ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷೆಗಳ ಸಂಸದೀಯ ಸ್ಥಾಯಿ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಹಿಂದಿಗೆ ಇನ್ನಿಲ್ಲದ ಪ್ರಾಧಾನ್ಯತೆ ನೀಡಲಾಗಿದೆ; ಈ ನಿಟ್ಟಿನಲ್ಲಿ ಪ್ರಾದೇಶಿಕ ಭಾಷೆಗಳ ಮೇಲೆ ಹಾಗೂ ಭಾರತದ ಒಕ್ಕೂಟ ತತ್ವದ ಮೇಲೆ ತೀವ್ರ ದಾಳಿ ಮಾಡಲಾಗಿದೆ ಎಂದು ದಕ್ಷಿಣದ ರಾಜ್ಯಗಳು ಆರೋಪಿಸಿವೆ. ಮುಖ್ಯವಾಗಿ ಹಿಂದಿ ಹೇರಿಕೆಯ ವಿರುದ್ಧ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಆರಂಭಿಸಿರುವ ಹೋರಾಟಕ್ಕೆ, ತೆಲಂಗಾಣ, ಪಶ್ಚಿಮ ಬಂಗಾಳ ರಾಜ್ಯದ ಜನರು ಸಹ ದನಿಗೂಡಿಸಿರುವುದು ವಿಶೇ?ಷವಾಗಿದೆ.

ಅಮಿತ್ ಶಾ ವರದಿಯಲ್ಲೇನಿದೆ?

ಹಿಂದಿ ಭಾಷಿಕ ರಾಜ್ಯಗಳಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರೀಯ ವಿದ್ಯಾಲಯಗಳು, ಐಐಟಿ, ಐಐಎಂ, ಏಮ್ಸ್ ತರಹದ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮವು ಕಡ್ಡಾಯವಾಗಿ ಇಂಗ್ಲಿಷ್‌ಗೆ ಬದಲಾಗಿ ಹಿಂದಿಯಾಗಬೇಕು. ಇತರ ರಾಜ್ಯಗಳಲ್ಲಿ ಬೋಧನಾ ಮಾಧ್ಯಮವು ಸ್ಥಳೀಯ ಭಾಷೆಯಾಗಿರಬೇಕು. ಇದಲ್ಲದೆ ಕೇಂದ್ರೀಯ ಹುದ್ದೆಗಳ ಸಿಬ್ಬಂದಿಗಳಲ್ಲಿ ಹಿಂದಿಯ ಅಗತ್ಯ ಜ್ಞಾನವನ್ನು ಖಚಿತಪಡಿಸಿಕೊಳ್ಳಬೇಕು. ಅದಕ್ಕಾಗಿ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಬದಲಿಗೆ ಹಿಂದಿಯಲ್ಲಿ ನಡೆಸಬೇಕು. ಇಸ್ರೋ, ಡಿಆರ್‌ಡಿಓನಂತಹ ಸಂಸ್ಥೆಗಳು ಸಹ ಹಿಂದಿಯನ್ನೆ ಬಳಸಬೇಕು ಎಂಬ 112 ಶಿಫಾರಸ್ಸುಗಳನ್ನು ಅಮಿತ್ ಶಾ ನೇತೃತ್ವದ ಸಮಿತಿ ನೀಡಿದೆ.

ಅಮಿತ್ ಶಾ

ಅಮಿತ್ ಶಾ ನೇತೃತ್ವದ ಸಮಿತಿಯು ತನ್ನ 11ನೇ ವರದಿಯಲ್ಲಿ ಸಲ್ಲಿಸಿರುವ ಶಿಫಾರಸ್ಸುಗಳು ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿವೆ. ಕೇರಳ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಈ ಸಮಿತಿಯ ಶಿಫಾರಸ್ಸುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಕರ್ನಾಟಕದ ವಿರೋಧ ಪಕ್ಷಗಳು ಈ ಹಿಂದಿ ಹೇರಿಕೆಯನ್ನು ವಿರೋಧಿಸಿವೆ. ಪಶ್ಚಿಮ ಬಂಗಾಳದಲ್ಲಿಯೂ ಪ್ರತಿಭಟನೆ ನಡೆದಿದೆ. ಪಶ್ಚಿಮ ಬಂಗಾಳದ ಪ್ರತಿಭಟನೆಯಲ್ಲಿ ಕರ್ನಾಟಕದ ಮೇರು ಸಾಹಿತಿ ಕುವೆಂಪು ಮತ್ತು ತಮಿಳುನಾಡಿನ ಹೋರಾಟಗಾರ ಅಣ್ಣಾ ದೊರೈರವರ ಫೋಟೋಗಳನ್ನು ಹಿಡಿದಿದ್ದು ಕೂಡ ಮಾರ್ದನಿಸಿತ್ತು.

ಶಿಫಾರಸ್ಸುಗಳ ವಿರುದ್ಧ ನಿರ್ಣಯ ಕೈಗೊಂಡ ತಮಿಳುನಾಡು ಸರ್ಕಾರ

ಅಮಿತ್ ಶಾ ನೇತೃತ್ವದ ವರದಿಯು ತಮಿಳು ಭಾಷಿಕರು ಸೇರಿದಂತೆ ಇತರ ಭಾಷೆಗಳನ್ನಾಡುವ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ; ಹಾಗಾಗಿ ರಾಷ್ಟ್ರಪತಿಗಳು ವರದಿಯ ಶಿಫಾರಸ್ಸುಗಳನ್ನು ಅಂಗೀಕರಿಸಬಾರದು ಎಂದು ತಮಿಳುನಾಡು ವಿಧಾನಸಭೆಯಲ್ಲಿ ಆಡಳಿತಾರೂಢ ಡಿ.ಎಂ.ಕೆ ಪಕ್ಷವು ನಿರ್ಣಯ ಮಂಡಿಸಿದ್ದು, ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ ನಂತರ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಭಾಷೆ ತಮಿಳರ ಜೀವನಾಡಿ. ಹಿಂದಿಯ ಯಾಜಮಾನ್ಯ ಆಳ್ವಿಕೆಯನ್ನು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಗುಡುಗಿದ್ದಾರೆ. “ಹಿಂದಿ ಹೇರಿಕೆ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳು ಅಪ್ರಾಯೋಗಿಕವಾಗಿವೆ ಮತ್ತು ವಿಭಜಕ ಕ್ರಮಗಳಾಗಿವೆ. ದೇಶದಲ್ಲಿ ಹಿಂದಿ ಮಾತನಾಡದ ಜನರೆ ಬಹುಸಂಖ್ಯಾತರಾಗಿದ್ದಾರೆ. ಹೀಗಿರುವಾಗ ಹಿಂದಿಗೆ ಅನಗತ್ಯವಾಗಿ ಮಹತ್ವ ನೀಡುವುದರಿಂದ ಹಿಂದಿ ಬಾರದ ಜನರನ್ನು ಅವಮಾನಿಸುವುದಲ್ಲದೆ ಅವರನ್ನು ತೀವ್ರ ಅನಾನುಕೂಲಕರ ಪರಿಸ್ಥಿತಿಗೆ ತಳ್ಳಲಾಗುತ್ತಿದೆ” ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಿಎಂ ಸ್ಟಾಲಿನ್

“ಈ ವರದಿ ಜಾರಿಯಾದರೆ ಅದು ಭಾರತದ ಆತ್ಮದ ಮೇಲಿನ ನೇರ ದಾಳಿಯಾಗಿದೆ. ಇದರಿಂದ ಹಿಂದಿಯೇತರ ಭಾಷಿಕ ಜನರು ತಮ್ಮ ನೆಲದಲ್ಲಿಯೇ ತಾವು ಎರಡನೇ ದರ್ಜೆಯ ಪ್ರಜೆಗಳಾಗಿ ಬದುಕಬೇಕಾದ ಪರಿಸ್ಥಿತಿ ಬರುತ್ತದೆ. ಇದೊಂದು ಭಾಷಾ ಯುದ್ಧಕ್ಕೆ ಕಾರಣವಾಗುತ್ತದೆ. ಹಾಗಾಗಿ ಹಿಂದಿ ಹೇರಿಕೆ ಬದಲು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಮಾನ್ಯಗೊಂಡಿರುವ ಎಲ್ಲಾ 22 ಭಾಷೆಗಳನ್ನು ಸಮಾನವಾಗಿ ನೋಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಕೇರಳದ ಕಳವಳ

“ದೇಶದಲ್ಲಿ ಹಲವು ಭಾಷೆಗಳಿವೆ. ಹಾಗಾಗಿ ಒಂದೇ ಭಾಷೆಯನ್ನು ದೇಶದ ಭಾಷೆ ಎಂದು ಕರೆಯಲಾಗದ ಕಾರಣ ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ಹಿಂದಿಯನ್ನು ಮುಖ್ಯ ಬೋಧನಾ ಭಾಷೆಯಾಗಿ ಹೇರಲು ಸಾಧ್ಯವಿಲ್ಲ” ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಪಿಣರಾಯಿ ವಿಜಯನ್

ನಮ್ಮ ದೇಶದಲ್ಲಿ ಸರ್ಕಾರಿ ಉದ್ಯೋಗಗಳು ಕಡಿಮೆ ಇವೆ. ಇಂತಹ ಸಂದರ್ಭದಲ್ಲಿ ಇಂಗ್ಲಿಷ್ ಬದಲಿಗೆ ಹಿಂದಿಯಲ್ಲಿ ಪರೀಕ್ಷೆ ನಡೆಸುವುದರಿಂದ ದಕ್ಷಿಣದ ಯುವಜನರು ಮತ್ತಷ್ಟು ಉದ್ಯೋಗವಂಚಿತರಾಗುತ್ತಾರೆ. ಹಾಗಾಗಿ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ನಿಗದಿಪಡಿಸಿದ ಎಲ್ಲಾ ಭಾಷೆಗಳಲ್ಲಿ ಪರೀಕ್ಷೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಶಿಫಾರಸ್ಸುಗಳು ಅಸಂವಿಧಾನಿಕ – ತೆಲಂಗಾಣ ಸಚಿವ

ಈ ಶಿಫಾರಸ್ಸುಗಳನ್ನು ತೆಲಂಗಾಣದ ಸಚಿವ ಮತ್ತು ಟಿಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ ರಾಮರಾವ್ ಅಸಂವಿಧಾನಿಕ ಎಂದು ಕರೆದಿದ್ದು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. “ಇತರ ಅಧಿಕೃತ ಭಾಷೆಗಳಂತೆ ಹಿಂದಿಯೂ ಮತ್ತೊಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ. ನಮ್ಮ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿ 22 ಭಾಷೆಗಳನ್ನು ಅಂಗೀಕರಿಸಲಾಗಿದೆ. ಬಹುರಾಷ್ಟ್ರೀಯ

ಕೆ.ಟಿ ರಾಮರಾವ್

ಕಂಪೆನಿಗಳಲ್ಲಿ ಸಿಇಒದಂತಹ ಹುದ್ದೆಗಳಿಗೇರಿದ ಹಲವರು ಆಂಗ್ಲ ಭಾಷಾ ಮಾಧ್ಯಮದಲ್ಲಿ ಓದಿದವರಾಗಿದ್ದಾರೆ. ಆದರೆ ಬಿಜೆಪಿಯು ಹಿಂದಿ ಹೇರುವ ಮೂಲಕ ಯುವಜನರ ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದೆ. ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ನಡೆಸುವಂತೆ ನಾವು ಒತ್ತಾಯಿಸಿದ್ದೆವು. ಆದರೆ ಈಗಲೂ ಕೇಂದ್ರ ಸರ್ಕಾರ ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ವಿರೋಧ ಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ವಿರೋಧ

ಹಿಂದಿ ಹೇರಿಕೆಯ ವಿಚಾರದಲ್ಲಿ ಕರ್ನಾಟಕವು ಉಳಿದ ದಕ್ಷಿಣದ ರಾಜ್ಯಗಳಿಗಿಂತ ಭಿನ್ನ ಸ್ಥಾನದಲ್ಲಿದೆ. ಏಕೆಂದರೆ ಇಲ್ಲಿ ಬಿಜೆಪಿ ಆಡಳಿತವಿರುವ ಕಾರಣಕ್ಕೆ ಸರ್ಕಾರ ಹಿಂದಿ ಹೇರಿಕೆಯನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ಹಿಂದಿ ರಾಷ್ಟ್ರಭಾಷೆ, ಹಿಂದಿ ಕಲಿಯಬೇಕು ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಾರೆ. ಆದರೆ ಕನ್ನಡಿಗರು ಮತ್ತು ವಿರೋಧ ಪಕ್ಷಗಳು ಸದಾ ಹಿಂದಿ ಹೇರಿಕೆಯನ್ನು ವಿರೋಧಿಸಿವೆ. ಜೆಡಿಎಸ್‌ನಾಯಕ, ಅಮಿತ್ ಶಾ ನೇತೃತ್ವದ ವರದಿಯನ್ನು ಮಾಜಿ ಸಿಎಂ ಕುಮಾರಸ್ವಾಮಿಯವರು ತೀವ್ರವಾಗಿ ಖಂಡಿಸಿದ್ದಾರೆ. “ವರದಿಯು ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಸ್ತಿತ್ವಕ್ಕೆ ಕುತ್ತು ತರುತ್ತಿದೆ. ಒಂದು ದೇಶ-ಒಂದು ಧರ್ಮ- ಒಂದು ಭಾಷೆ ಎಂಬ ಘೋಷಣೆಯ ಮೂಲಕ ದೇಶದ ಒಕ್ಕೂಟ ವ್ಯವಸ್ಥೆಯನ್ನು ಧ್ವಂಸಗೊಳಿಸಲಾಗುತ್ತಿದೆ. ಬಹುತ್ವದ ದೇಶವನ್ನು ಹಿಂದಿಸ್ತಾನ ಮಾಡಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಎಚ್‌ ಡಿ ಕುಮಾರಸ್ವಾಮಿ

“ದೇಶದಲ್ಲಿ ಹಿಂದಿ ಮಾತನಾಡುವವರ ಸಂಖ್ಯೆ ತೀರಾ ಕಡಿಮೆಯಿದೆ. ತ್ರಿಭಾಷಾ ಸೂತ್ರವನ್ನು ಒಪ್ಪಲು ಸಾಧ್ಯವಿಲ್ಲ. ಆರ್ಯ ಸಂಸ್ಕೃತಿಯ ತುಷ್ಟೀಕರಣವನ್ನು ನಾವು ಒಪ್ಪುವುದಿಲ್ಲ. ಸ್ಥಳೀಯ ಭಾಷೆಗಳನ್ನು ಪೋಷಿಸುತ್ತೇವೆ ಎಂದು ಹೇಳುವ ಬಿಜೆಪಿ ವಾಸ್ತವದಲ್ಲಿ ಅವುಗಳನ್ನು ತುಳಿಯುತ್ತಿದೆ” ಎಂದು ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾಳದಲ್ಲಿ ಮಾರ್ದನಿಸಿದ ಹಿಂದಿ ಹೇರಿಕೆ ವಿರುದ್ಧದ ದನಿ

ಸಾಮಾನ್ಯವಾಗಿ ದಕ್ಷಿಣದ ರಾಜ್ಯಗಳು ಮಾತ್ರವೇ ಹಿಂದಿ ಹೇರಿಕೆ ವಿರೋಧಿಸುತ್ತವೆ, ಉಳಿದ ರಾಜ್ಯಗಳಿಗೆ ಹಿಂದಿ ಹೇರಿಕೆಯಿಂದ ಯಾವುದೇ ಸಮಸ್ಯೆಯಿಲ್ಲ ಎನ್ನಲಾಗುತ್ತದೆ. ಆದರೆ ವಾಸ್ತವ ಸ್ಥಿತಿ ಅದಕ್ಕೆ ವಿರುದ್ಧವಾಗಿದೆ. ಉತ್ತರ ಭಾರತದ ಬಹುತೇಕರ ಮಾತೃಭಾಷೆ ಹಿಂದಿ ಅಲ್ಲ. ಭೋಜಪುರಿ, ಅವಧಿ, ಹರಿಯಾಣ್ವಿ, ಮಗಧಿ, ಮೈಥಿಲಿ, ಬಿಹಾರಿ, ಚಾದ್ರಿ, ಪಹಾಡಿ, ಗಢವಾಲಿ, ಡೋಗ್ರಿ, ಆಂಗಿಕ, ಬುಂದೇಲಿ, ರಾಜಸ್ತಾನಿ, ಛತ್ತೀಸಗಢೀ, ಬ್ರಜಭಾಷಾ ಹಾಗೂ ಖಡೀಬೋಲಿಯಂತಹ ಪ್ರಾದೇಶಿಕ ಭಾಷೆಗಳು ತಮ್ಮ ಸ್ಥಾನಮಾನ ಕಳೆದುಕೊಂಡಿವೆ. ಅವಧಿ ಮತ್ತು ಬೋಜ್‌ಪುರಿ ಭಾಷೆಗಳನ್ನಾಡುವವರ ಜನಸಂಖ್ಯೆ 7 ಕೋಟಿಗೂ ಅಧಿಕವಿದ್ದರೂ ಅವು 8ನೇ ಶೆಡ್ಯೂಲ್‌ನಲ್ಲಿ ಸ್ಥಾನ ಪಡೆದಿಲ್ಲ. ಅವುಗಳ ಸ್ಥಾನವನ್ನು ಸಂಸ್ಕೃತ ಮತ್ತು ಹಿಂದಿ ನುಂಗುತ್ತಿವೆ. ಹಾಗಾಗಿ ಕಳೆದ 50 ವರ್ಷಗಳಲ್ಲಿ ಭಾರತದ 220 ಭಾಷೆಗಳು ಕಣ್ಮರೆಯಾಗಿವೆ ಎನ್ನಲಾಗುತ್ತಿದೆ. ಉತ್ತರ ಮತ್ತು ಮಧ್ಯಭಾರತದ 50ಕ್ಕೂ ಹೆಚ್ಚು ಭಾಷೆಗಳು ಪ್ರಸ್ತುತ ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಂಡು ಅಳಿವಿನ ಅಂಚಿನಲ್ಲಿವೆ.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಹಾಗಾಗಿಯೇ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಹಿಂದಿ ಹೇರಿಕೆಯ ವಿರುದ್ಧ ಹೋರಾಟಗಳು ಆರಂಭವಾಗಿವೆ. ಬಿಜೆಪಿಯನ್ನು ಹಿಂದಿ ಸಾಮ್ರಾಜ್ಯಶಾಹಿ ಪಕ್ಷ ಎಂದು ಕರೆದಿರುವ ಪಶ್ಚಿಮ ಬಂಗಾಳದ ಬಾಂಗ್ಲಾ ಪೋಖ್ಕೊ ಸಂಘಟನೆಯು ಅಕ್ಟೋಬರ್ 16ರಂದು ಕೋಲ್ಕತ್ತಾ ಸೇರಿದಂತೆ 16 ಜಿಲ್ಲೆಗಳಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದೆ. ಈ ಹಿಂದೆಯೂ ಸಹ ರಾಜ್ಯದಲ್ಲಿ ಅಧಿಕಾರದಲ್ಲಿರುವ ಟಿಎಂಸಿ ಪಕ್ಷವು ಹಿಂದಿ ಹೇರಿಕೆಯ ವಿರುದ್ಧ ದನಿಯೆತ್ತಿತ್ತು. ಟಿಎಂಸಿ ವಕ್ತಾರರು “ಭಾರತದ ಭಾಷಾ ವೈವಿಧ್ಯತೆಯು ದೇಶದ ಪ್ರಜಾತಂತ್ರವನ್ನು ಸುಂದರಗೊಳಿಸಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಒಂದು ಭಾಷೆಯನ್ನು ಹೇರುವುದು ವಿಭಜಕ ರಾಜಕಾರಣವಾಗಿದೆ” ಎಂದಿದ್ದರು.

ಹಿಂದಿ ಹೇರಿಕೆಯೇಕೆ?

ನಮ್ಮ ದೇಶದಲ್ಲಿ ಹಿಂದಿ ಎಂದರೆ ಸಂಸ್ಕೃತದ ವ್ಯಾಪಕ ಪ್ರಭಾವವಿರುವ ಒಂದು ಭಾಷೆಯಾಗಿದೆ. ಈ ಕಾರಣದಿಂದ ಹಿಂದಿ ಶ್ರೇಷ್ಠ ಉಳಿದ ಭಾಷೆಗಳು ಕನಿಷ್ಟ ಮತ್ತು ಎರಡನೇ ದರ್ಜೆಯ ಭಾಷೆಗಳು ಎಂಬ ಮನೋಭಾವ ಬಿತ್ತಲಾಗುತ್ತಿದೆ.

ಹಿಂದಿಯ ಮೂಲಕ ಬ್ರಾಹ್ಮಣೀಯ ಮೌಲ್ಯಗಳನ್ನು ಹೇರುವುದು ಬಿಜೆಪಿಯ ಉದ್ದೇಶವಾಗಿದೆ. ಹಿಂದಿ ಭಾಷಿಕರಿಗೆ ಹಲವು ವಲಯಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿಕೊಂಡು ಬರಲಾಗಿದೆ. ಇನ್ನೊಂದೆಡೆ ವಿಶ್ವಸಂಸ್ಥೆಯಲ್ಲಿ ಹಿಂದಿ ಭಾಷೆಗೆ ಅಧಿಕೃತ ಸ್ಥಾನಮಾನ ದೊರಕುವಂತೆ ಮಾಡುವುದಕ್ಕಾಗಿ ಹಿಂದಿ ಭಾರತದ ರಾಷ್ಟ್ರಭಾಷೆಯಾಗಬೇಕು ಎಂದು ಬಿಜೆಪಿ ಹೇಳುತ್ತದೆ. ಒಟ್ಟಿನಲ್ಲಿ ಹಿಂದಿ-ಹಿಂದೂ-ಹಿಂದೂಸ್ತಾನ ಘೋಷಣೆಯಡಿ ಅಧಿಕಾರ ಹಿಡಿಯುವುದು, ಶ್ರೇಷ್ಠ ಕನಿಷ್ಠ ಎಂಬ ತಾರತಮ್ಯವನ್ನು ಜೀವಂತವಾಗಿಡುವುದೇ ಮುಖ್ಯ ಅಜೆಂಡಾವಾಗಿದೆ.

ಈ ಕಾರಣಗಳಿಗಾಗಿಯೇ ದಕ್ಷಿಣದ ರಾಜ್ಯಗಳು ಹಿಂದಿ ಹೇರಿಕೆ ವಿರುದ್ಧ ನಿರಂತರವಾಗಿ ಹೋರಾಡುತ್ತಿವೆ. ಭಾರತದ ವಸಾಹತುಶಾಹಿ ಹಿನ್ನೆಲೆ ಮತ್ತು ಇಂದಿನ ಜಾಗತೀಕರಣಗಳ ಹಿನ್ನೆಲೆಯಿಂದಾಗಿ ಇಂಗ್ಲಿಷ್ ಎರಡನೇ ಭಾಷೆಯ ಶೈಕ್ಷಣಿಕ ಪೂರ್ವಗತ್ಯಗಳನ್ನು ಪೂರೈಸುತ್ತಿದೆ. ಆ ಜಾಗದಲ್ಲಿ ಹಿಂದಿಯನ್ನು ಪರಿಚಯಿಸುವುದು ಕೃತಕ ಮಾತ್ರವಲ್ಲ ಹಿಂದಿಯೇತರ ರಾಜ್ಯದ ಮಕ್ಕಳಿಗೆ ಮತ್ತು ಜನರಿಗೆ ಮಾಡುವ ತಾರತಮ್ಯ ಹಾಗೂ ಆನ್ಯಾಯವೂ ಆಗುತ್ತದೆ. ಹೀಗಾಗಿ ಹಿಂದಿಯು ಎರಡನೆಯ ಅಥವಾ ಮೂರನೆಯ ಭಾಷೆಯಾಗಿ ಸಲ್ಲದು ಎಂಬುದು ದಕ್ಷಿಣದ ರಾಜ್ಯಗಳ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...