Homeಮುಖಪುಟಹಿಂದಿ ಹೇರಿಕೆ | ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ತೆಗೆದುಕೊಂಡ ಡಿಎಂಕೆ

ಹಿಂದಿ ಹೇರಿಕೆ | ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ತೆಗೆದುಕೊಂಡ ಡಿಎಂಕೆ

- Advertisement -
- Advertisement -

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಉನ್ನತ ಮಟ್ಟದ ಸಭೆಯು ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಹೇರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಲಾಗಿದ್ದು, ಜಾತಿ ಆಧಾರಿತ ಜನಗಣತಿಯನ್ನು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಪಕ್ಷ ಸಭೆಯ ನಿರ್ಣಯದಲ್ಲಿ ತೀವ್ರವಾಗಿ ಟೀಕಿಸಿದೆ. ಈ ಮೂಲಕ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತರೂಢ ಡಿಎಂಕೆ ಪಕ್ಷವು ತಯಾರಿ ಪ್ರಾರಂಭಿಸಿದೆ. ಹಿಂದಿ ಹೇರಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಬಗ್ಗೆ “ಮೂಕ ಪ್ರೇಕ್ಷಕ”ನಾಗಿ ಇರುವ ಬದಲಿಗೆ ಸಕ್ರಿಯವಾಗಿ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿಎಂಕೆ ಕರೆ ನೀಡಿದೆ. ಗಲಭೆ ಪೀಡಿತ ಮಣಿಪುರದಲ್ಲಿ ಎಲ್ಲಾ ಜನರ ಸುರಕ್ಷತೆಯನ್ನು ಖಾತ್ರಿಪಡಿಸುವ ಮತ್ತು ಈ ಪ್ರದೇಶದಲ್ಲಿ ಮಾನವೀಯತೆಯನ್ನು ಪುನಃಸ್ಥಾಪಿಸುವ ಅಗತ್ಯವನ್ನು ಪಕ್ಷವು ಒತ್ತಿಹೇಳಿದೆ. ಹಿಂದಿ ಹೇರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

16 ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ತಮಿಳುನಾಡಿನ ವಿನಂತಿಗಳನ್ನು ಸೇರಿಸುವಂತೆ ಸಭೆಯಲ್ಲಿ ಅಂಗೀಕರಿಸಲಾದ ಮತ್ತೊಂದು ನಿರ್ಣಯಲ್ಲಿ ಡಿಎಂಕೆ ಪಕ್ಷವೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ರಾಜ್ಯದ ಆರ್ಥಿಕ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಈ ನಿರ್ಣಯಗಳನ್ನು ಅಂಗೀಕರಿಸಲು ಪಕ್ಷವು ಕರೆ ನೀಡಿದೆ.

2026 ರ ತಮಿಳುನಾಡು ವಿಧಾನಸಭಾ ಚುನಾವಣೆಯ ತಯಾರಿಯ ಭಾಗವಾಗಿ ತಳಮಟ್ಟದ ಸಾಂಸ್ಥಿಕ ಕೆಲಸವನ್ನು ತಕ್ಷಣವೇ ಪ್ರಾರಂಭಿಸಲು ಡಿಎಂಕೆ ನಾಯಕತ್ವವು ತನ್ನ ಪಕ್ಷದ ಕಾರ್ಯಕರ್ತರಿಗೆ ನಿರ್ದೇಶನ ನೀಡಿದೆ. ಅಷ್ಟೆ ಅಲ್ಲದೆ, ಪಕ್ಷವೂ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯದ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೆ ಪೂರ್ಣಾವಧಿ ಕಾರ್ಯಕರ್ತರನ್ನು ನೇಮಿಸಿದೆ.

ಆಯ್ಕೆ ಮಾಡಲಾದ ಅರ್ಧದಷ್ಟು ಪೂರ್ಣಾವಧಿ ಕಾರ್ಯಕರ್ತರು 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿರುವವರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಡಿಎಂಕೆ ನೇತೃತ್ವದ ಇಂಡಿಯಾ ಒಕ್ಕೂಟವು ತಮಿಳುನಾಡಿನ ಎಲ್ಲಾ 39 ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿರುವ ಏಕೈಕ ಸ್ಥಾನವನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ.

ನೇಮಕಗೊಂಡ ಪೂರ್ಣಾವಧಿ ಕಾರ್ಯಕರ್ತರು ತಮ್ಮ ಕ್ಷೇತ್ರಗಳಲ್ಲಿನ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಗುರುತಿಸಿ ರಾಜ್ಯ ಪಕ್ಷದ ಪ್ರಧಾನ ಕಛೇರಿಗೆ ಸಾಪ್ತಾಹಿಕ ಪ್ರಗತಿ ವರದಿಗಳನ್ನು ಸಲ್ಲಿಸಬೇಕಾಗುತ್ತದೆ. ಅಲ್ಲದೆ, ಸಮನ್ವಯವನ್ನು ಹೆಚ್ಚಿಸಲು ಮತ್ತು ಪ್ರತಿ ಜಿಲ್ಲೆಯ ಕಾರ್ಯಕ್ಷಮತೆಯ ಮೇಲ್ವಿಚಾರಣೆ ಮಾಡಲು ಸಚಿವರನ್ನು ನೇಮಿಸಲಾಗಿದೆ. ಈ ಸಚಿವರು ಕ್ಷೇತ್ರದ ಉಸ್ತುವಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲಿದ್ದು, ಪ್ರಗತಿಯ ಮೇಲ್ವಿಚಾರಣೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುತ್ತಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಚಿವರ ಕಾರ್ಯವೈಖರಿಯನ್ನು ಖುದ್ದಾಗಿ ಗಮನಿಸಲಿದ್ದು, 2026 ರ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 200 ಸ್ಥಾನಗಳನ್ನು ಗೆಲ್ಲುವ ಡಿಎಂಕೆ ಸಾಮರ್ಥ್ಯದ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ 133 ಸ್ಥಾನಗಳನ್ನು ಹೊಂದಿರುವ ಪಕ್ಷವು ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದ್ದು, ಅದಕ್ಕಾಗಿ ಕಠಿಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...