Homeಮುಖಪುಟತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ

ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ

- Advertisement -
- Advertisement -

2020 ರ ರಾಷ್ಟ್ರೀಯ ಶಿಕ್ಷಣ ನೀತಿಯು ತಮಿಳುನಾಡಿನಲ್ಲಿ ಹಿಂದಿಯನ್ನು ಹೇರುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಪುನರುಚ್ಚರಿಸಿದ್ದಾರೆ. ತಮಿಳುನಾಡಿನಲ್ಲಿ ಈ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವುದು ರಾಜಕೀಯ ಉದ್ದೇಶಗಳ ಕಾರಣಕ್ಕಾಗಿ ಎಂದು ಅವರು ಪ್ರತಿಪಾದಿಸಿದ್ದಾರೆ.

“ಎನ್‌ಇಪಿ 2020 ಹಿಂದಿ, ತಮಿಳು, ಒಡಿಯಾ, ಪಂಜಾಬಿ ಸೇರಿದಂತೆ ಭಾರತದ ವಿವಿಧ ಭಾಷೆಗಳ ಮೇಲೆ ಕೇಂದ್ರೀಕೃತವಾಗಿದೆ. ಈ ಎಲ್ಲಾ ಭಾಷೆಗಳು ಸಮಾನ ಪ್ರಾಮುಖ್ಯತೆಯನ್ನು ಹೊಂದಿವೆ.” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ತಮಿಳುನಾಡಿನಲ್ಲಿ ರಾಜಕೀಯ ಕಾರಣಕ್ಕಾಗಿ ಕೆಲವರು [ಎನ್‌ಇಪಿ]ಯನ್ನು ವಿರೋಧಿಸುತ್ತಿದ್ದಾರೆ. ಎನ್‌ಇಪಿ 2020 ರಲ್ಲಿ ಹಿಂದಿ ಮಾತ್ರ ಇರುತ್ತದೆ ಎಂದು ನಾವು ಎಂದಿಗೂ ಹೇಳಿಲ್ಲ. ಶಿಕ್ಷಣವು ಮಾತೃಭಾಷೆಯನ್ನು ಆಧರಿಸಿರುತ್ತದೆ ಎಂದು ಮಾತ್ರ ನಾವು ಹೇಳಿದ್ದೇವೆ. ತಮಿಳುನಾಡಿನಲ್ಲಿ ಅದು ತಮಿಳು ಆಗಿರುತ್ತದೆ.” ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಸೇರಿದಂತೆ ತಮಿಳುನಾಡಿನ ರಾಜಕೀಯ ಪಕ್ಷಗಳು ತ್ರಿಭಾಷಾ ಸೂತ್ರದ ಅಡಿಯಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಹೇರುವ ಪ್ರಯತ್ನಗಳನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿವೆ.

ಕೇಂದ್ರದ ತ್ರಿಭಾಷಾ ನೀತಿಯು ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ರಾಜ್ಯದ ಸ್ಥಳೀಯ ಭಾಷೆಯನ್ನು ಕಲಿಸುವುದನ್ನು ಸೂಚಿಸುತ್ತದೆ. ಇದನ್ನು 1968 ರಲ್ಲಿ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಚಯಿಸಲಾಯಿತು ಮತ್ತು 2020 ರಿಂದ ಹೊಸ ನೀತಿಯಲ್ಲಿ ಉಳಿಸಿಕೊಳ್ಳಲಾಯಿತು.

ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಶಾಲೆಗಳಲ್ಲಿ ಯಾವುದೇ ಭಾಷೆಯನ್ನು ಮೂರನೇ ಭಾಷೆಯಾಗಿ ಒತ್ತಾಯಿಸುವುದು ಅನಗತ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ ಎರಡು ದಿನಗಳ ನಂತರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆಗಳನ್ನು ನೀಡಿದ್ದಾರೆ.

ಫೆಬ್ರವರಿ 21 ರಂದು ರಾಷ್ಟ್ರೀಯ ಶಿಕ್ಷಣ ನೀತಿಯು ಯಾವುದೇ ಭಾಷೆಯನ್ನು ಹೇರುವುದನ್ನು ಪ್ರತಿಪಾದಿಸುವುದಿಲ್ಲ ಎಂದು ಹೇಳಿದ್ದ ಹೇಳಿಕೆಗಳನ್ನು ಧರ್ಮೇಂದ್ರ ಪ್ರಧಾನ್ ಭಾನುವಾರ ಪುನರುಚ್ಚರಿಸಿದ್ದಾರೆ. ಸಿಎಂ ಸ್ಟಾಲಿನ್‌ ಅವರಿಗೆ ಬರೆದ ಪತ್ರದಲ್ಲಿ, ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಈ ನೀತಿಯನ್ನು ಬಿಜೆಪಿಯೇತರ ರಾಜ್ಯಗಳು ಜಾರಿಗೆ ತಂದಿವೆ ಎಂದು ಹೇಳಿದ್ದರು.

ತಮಿಳುನಾಡು ಈ ನೀತಿಯನ್ನು “ಸಂಕುಚಿತ ದೃಷ್ಠಿ”ಯಿಂದ ನೋಡುವುದು ಮತ್ತು ಅಂತಹ ಸುಧಾರಣೆಗಳನ್ನು ತಮ್ಮ ರಾಜಕೀಯ ನಿರೂಪಣೆಗಳನ್ನು ಉಳಿಸಿಕೊಳ್ಳಲು ಬೆದರಿಕೆಗಳಾಗಿ ಪರಿವರ್ತಿಸುವುದು ಸೂಕ್ತವಲ್ಲ ಎಂದು ಅವರು ಸಿಎಂ ಸ್ಟಾಲಿನ್‌ ಅವರಿಗೆ ಹೇಳಿದ್ದರು.

ಸಮಗ್ರ ಶಿಕ್ಷಾ ಯೋಜನೆಯಡಿ ತಮಿಳುನಾಡಿಗೆ ಬಿಡುಗಡೆಯಾದ 2,152 ಕೋಟಿ ರೂ. ಬಾಕಿ ಹಣವನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಲಿಂಕ್ ಮಾಡದೆ ಪಡೆಯುವಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಒಂದು ದಿನದ ನಂತರ ಧರ್ಮೇಂದ್ರ ಪ್ರಧಾನ್ ಅವರು ಈ ಹೇಳಿಕೆ ನೀಡಿದ್ದರು.

2018 ರಲ್ಲಿ ಜಾರಿಗೆ ತರಲಾದ ಸಮಗ್ರ ಶಿಕ್ಷಾ, ಕೇಂದ್ರ ಸರ್ಕಾರವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣಕ್ಕೆ ಬೆಂಬಲ ನೀಡುವ ಯೋಜನೆಯಾಗಿದೆ.

ಕೇಂದ್ರ ಸರ್ಕಾರವು ತಾನು ಕಡ್ಡಾಯಗೊಳಿಸಿದ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯಗಳನ್ನು ಒತ್ತಾಯಿಸುವ ತಂತ್ರವಾಗಿ ಹಣವನ್ನು ತಡೆಹಿಡಿಯುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ. ತಮ್ಮ ರಾಜ್ಯವು ಎರಡು ಭಾಷಾ ನೀತಿಯನ್ನು ಹೊಂದಿದ್ದು, ಅದು ವಿದ್ಯಾರ್ಥಿಗಳಿಗೆ ತಮಿಳು ಮತ್ತು ಇಂಗ್ಲಿಷ್ ಕಲಿಸುವುದನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡಿಗೆ ಸಮಗ್ರ ಶಿಕ್ಷಾ ಕಾರ್ಯಕ್ರಮದಡಿಯಲ್ಲಿ ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಜಾರಿಗೆ ತರುವವರೆಗೆ ಮತ್ತು ತ್ರಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವವರೆಗೆ ಹಣವನ್ನು ಬಿಡುಗಡೆ ಮಾಡುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಸ್ಟಾಲಿನ್ ಈ ಹೇಳಿಕೆ ನೀಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...