Homeಮುಖಪುಟತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ

ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ

- Advertisement -
- Advertisement -

2020 ರ ರಾಷ್ಟ್ರೀಯ ಶಿಕ್ಷಣ ನೀತಿಯು ತಮಿಳುನಾಡಿನಲ್ಲಿ ಹಿಂದಿಯನ್ನು ಹೇರುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಪುನರುಚ್ಚರಿಸಿದ್ದಾರೆ. ತಮಿಳುನಾಡಿನಲ್ಲಿ ಈ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವುದು ರಾಜಕೀಯ ಉದ್ದೇಶಗಳ ಕಾರಣಕ್ಕಾಗಿ ಎಂದು ಅವರು ಪ್ರತಿಪಾದಿಸಿದ್ದಾರೆ.

“ಎನ್‌ಇಪಿ 2020 ಹಿಂದಿ, ತಮಿಳು, ಒಡಿಯಾ, ಪಂಜಾಬಿ ಸೇರಿದಂತೆ ಭಾರತದ ವಿವಿಧ ಭಾಷೆಗಳ ಮೇಲೆ ಕೇಂದ್ರೀಕೃತವಾಗಿದೆ. ಈ ಎಲ್ಲಾ ಭಾಷೆಗಳು ಸಮಾನ ಪ್ರಾಮುಖ್ಯತೆಯನ್ನು ಹೊಂದಿವೆ.” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ತಮಿಳುನಾಡಿನಲ್ಲಿ ರಾಜಕೀಯ ಕಾರಣಕ್ಕಾಗಿ ಕೆಲವರು [ಎನ್‌ಇಪಿ]ಯನ್ನು ವಿರೋಧಿಸುತ್ತಿದ್ದಾರೆ. ಎನ್‌ಇಪಿ 2020 ರಲ್ಲಿ ಹಿಂದಿ ಮಾತ್ರ ಇರುತ್ತದೆ ಎಂದು ನಾವು ಎಂದಿಗೂ ಹೇಳಿಲ್ಲ. ಶಿಕ್ಷಣವು ಮಾತೃಭಾಷೆಯನ್ನು ಆಧರಿಸಿರುತ್ತದೆ ಎಂದು ಮಾತ್ರ ನಾವು ಹೇಳಿದ್ದೇವೆ. ತಮಿಳುನಾಡಿನಲ್ಲಿ ಅದು ತಮಿಳು ಆಗಿರುತ್ತದೆ.” ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಸೇರಿದಂತೆ ತಮಿಳುನಾಡಿನ ರಾಜಕೀಯ ಪಕ್ಷಗಳು ತ್ರಿಭಾಷಾ ಸೂತ್ರದ ಅಡಿಯಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಹೇರುವ ಪ್ರಯತ್ನಗಳನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿವೆ.

ಕೇಂದ್ರದ ತ್ರಿಭಾಷಾ ನೀತಿಯು ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ರಾಜ್ಯದ ಸ್ಥಳೀಯ ಭಾಷೆಯನ್ನು ಕಲಿಸುವುದನ್ನು ಸೂಚಿಸುತ್ತದೆ. ಇದನ್ನು 1968 ರಲ್ಲಿ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಚಯಿಸಲಾಯಿತು ಮತ್ತು 2020 ರಿಂದ ಹೊಸ ನೀತಿಯಲ್ಲಿ ಉಳಿಸಿಕೊಳ್ಳಲಾಯಿತು.

ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಶಾಲೆಗಳಲ್ಲಿ ಯಾವುದೇ ಭಾಷೆಯನ್ನು ಮೂರನೇ ಭಾಷೆಯಾಗಿ ಒತ್ತಾಯಿಸುವುದು ಅನಗತ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ ಎರಡು ದಿನಗಳ ನಂತರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆಗಳನ್ನು ನೀಡಿದ್ದಾರೆ.

ಫೆಬ್ರವರಿ 21 ರಂದು ರಾಷ್ಟ್ರೀಯ ಶಿಕ್ಷಣ ನೀತಿಯು ಯಾವುದೇ ಭಾಷೆಯನ್ನು ಹೇರುವುದನ್ನು ಪ್ರತಿಪಾದಿಸುವುದಿಲ್ಲ ಎಂದು ಹೇಳಿದ್ದ ಹೇಳಿಕೆಗಳನ್ನು ಧರ್ಮೇಂದ್ರ ಪ್ರಧಾನ್ ಭಾನುವಾರ ಪುನರುಚ್ಚರಿಸಿದ್ದಾರೆ. ಸಿಎಂ ಸ್ಟಾಲಿನ್‌ ಅವರಿಗೆ ಬರೆದ ಪತ್ರದಲ್ಲಿ, ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಈ ನೀತಿಯನ್ನು ಬಿಜೆಪಿಯೇತರ ರಾಜ್ಯಗಳು ಜಾರಿಗೆ ತಂದಿವೆ ಎಂದು ಹೇಳಿದ್ದರು.

ತಮಿಳುನಾಡು ಈ ನೀತಿಯನ್ನು “ಸಂಕುಚಿತ ದೃಷ್ಠಿ”ಯಿಂದ ನೋಡುವುದು ಮತ್ತು ಅಂತಹ ಸುಧಾರಣೆಗಳನ್ನು ತಮ್ಮ ರಾಜಕೀಯ ನಿರೂಪಣೆಗಳನ್ನು ಉಳಿಸಿಕೊಳ್ಳಲು ಬೆದರಿಕೆಗಳಾಗಿ ಪರಿವರ್ತಿಸುವುದು ಸೂಕ್ತವಲ್ಲ ಎಂದು ಅವರು ಸಿಎಂ ಸ್ಟಾಲಿನ್‌ ಅವರಿಗೆ ಹೇಳಿದ್ದರು.

ಸಮಗ್ರ ಶಿಕ್ಷಾ ಯೋಜನೆಯಡಿ ತಮಿಳುನಾಡಿಗೆ ಬಿಡುಗಡೆಯಾದ 2,152 ಕೋಟಿ ರೂ. ಬಾಕಿ ಹಣವನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಲಿಂಕ್ ಮಾಡದೆ ಪಡೆಯುವಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಒಂದು ದಿನದ ನಂತರ ಧರ್ಮೇಂದ್ರ ಪ್ರಧಾನ್ ಅವರು ಈ ಹೇಳಿಕೆ ನೀಡಿದ್ದರು.

2018 ರಲ್ಲಿ ಜಾರಿಗೆ ತರಲಾದ ಸಮಗ್ರ ಶಿಕ್ಷಾ, ಕೇಂದ್ರ ಸರ್ಕಾರವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣಕ್ಕೆ ಬೆಂಬಲ ನೀಡುವ ಯೋಜನೆಯಾಗಿದೆ.

ಕೇಂದ್ರ ಸರ್ಕಾರವು ತಾನು ಕಡ್ಡಾಯಗೊಳಿಸಿದ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯಗಳನ್ನು ಒತ್ತಾಯಿಸುವ ತಂತ್ರವಾಗಿ ಹಣವನ್ನು ತಡೆಹಿಡಿಯುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ. ತಮ್ಮ ರಾಜ್ಯವು ಎರಡು ಭಾಷಾ ನೀತಿಯನ್ನು ಹೊಂದಿದ್ದು, ಅದು ವಿದ್ಯಾರ್ಥಿಗಳಿಗೆ ತಮಿಳು ಮತ್ತು ಇಂಗ್ಲಿಷ್ ಕಲಿಸುವುದನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡಿಗೆ ಸಮಗ್ರ ಶಿಕ್ಷಾ ಕಾರ್ಯಕ್ರಮದಡಿಯಲ್ಲಿ ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಜಾರಿಗೆ ತರುವವರೆಗೆ ಮತ್ತು ತ್ರಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವವರೆಗೆ ಹಣವನ್ನು ಬಿಡುಗಡೆ ಮಾಡುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಸ್ಟಾಲಿನ್ ಈ ಹೇಳಿಕೆ ನೀಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...