Homeಮುಖಪುಟತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ

ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ

- Advertisement -
- Advertisement -

2020 ರ ರಾಷ್ಟ್ರೀಯ ಶಿಕ್ಷಣ ನೀತಿಯು ತಮಿಳುನಾಡಿನಲ್ಲಿ ಹಿಂದಿಯನ್ನು ಹೇರುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಪುನರುಚ್ಚರಿಸಿದ್ದಾರೆ. ತಮಿಳುನಾಡಿನಲ್ಲಿ ಈ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವುದು ರಾಜಕೀಯ ಉದ್ದೇಶಗಳ ಕಾರಣಕ್ಕಾಗಿ ಎಂದು ಅವರು ಪ್ರತಿಪಾದಿಸಿದ್ದಾರೆ.

“ಎನ್‌ಇಪಿ 2020 ಹಿಂದಿ, ತಮಿಳು, ಒಡಿಯಾ, ಪಂಜಾಬಿ ಸೇರಿದಂತೆ ಭಾರತದ ವಿವಿಧ ಭಾಷೆಗಳ ಮೇಲೆ ಕೇಂದ್ರೀಕೃತವಾಗಿದೆ. ಈ ಎಲ್ಲಾ ಭಾಷೆಗಳು ಸಮಾನ ಪ್ರಾಮುಖ್ಯತೆಯನ್ನು ಹೊಂದಿವೆ.” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ತಮಿಳುನಾಡಿನಲ್ಲಿ ರಾಜಕೀಯ ಕಾರಣಕ್ಕಾಗಿ ಕೆಲವರು [ಎನ್‌ಇಪಿ]ಯನ್ನು ವಿರೋಧಿಸುತ್ತಿದ್ದಾರೆ. ಎನ್‌ಇಪಿ 2020 ರಲ್ಲಿ ಹಿಂದಿ ಮಾತ್ರ ಇರುತ್ತದೆ ಎಂದು ನಾವು ಎಂದಿಗೂ ಹೇಳಿಲ್ಲ. ಶಿಕ್ಷಣವು ಮಾತೃಭಾಷೆಯನ್ನು ಆಧರಿಸಿರುತ್ತದೆ ಎಂದು ಮಾತ್ರ ನಾವು ಹೇಳಿದ್ದೇವೆ. ತಮಿಳುನಾಡಿನಲ್ಲಿ ಅದು ತಮಿಳು ಆಗಿರುತ್ತದೆ.” ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಸೇರಿದಂತೆ ತಮಿಳುನಾಡಿನ ರಾಜಕೀಯ ಪಕ್ಷಗಳು ತ್ರಿಭಾಷಾ ಸೂತ್ರದ ಅಡಿಯಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಹೇರುವ ಪ್ರಯತ್ನಗಳನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿವೆ.

ಕೇಂದ್ರದ ತ್ರಿಭಾಷಾ ನೀತಿಯು ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ರಾಜ್ಯದ ಸ್ಥಳೀಯ ಭಾಷೆಯನ್ನು ಕಲಿಸುವುದನ್ನು ಸೂಚಿಸುತ್ತದೆ. ಇದನ್ನು 1968 ರಲ್ಲಿ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಚಯಿಸಲಾಯಿತು ಮತ್ತು 2020 ರಿಂದ ಹೊಸ ನೀತಿಯಲ್ಲಿ ಉಳಿಸಿಕೊಳ್ಳಲಾಯಿತು.

ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಶಾಲೆಗಳಲ್ಲಿ ಯಾವುದೇ ಭಾಷೆಯನ್ನು ಮೂರನೇ ಭಾಷೆಯಾಗಿ ಒತ್ತಾಯಿಸುವುದು ಅನಗತ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ ಎರಡು ದಿನಗಳ ನಂತರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆಗಳನ್ನು ನೀಡಿದ್ದಾರೆ.

ಫೆಬ್ರವರಿ 21 ರಂದು ರಾಷ್ಟ್ರೀಯ ಶಿಕ್ಷಣ ನೀತಿಯು ಯಾವುದೇ ಭಾಷೆಯನ್ನು ಹೇರುವುದನ್ನು ಪ್ರತಿಪಾದಿಸುವುದಿಲ್ಲ ಎಂದು ಹೇಳಿದ್ದ ಹೇಳಿಕೆಗಳನ್ನು ಧರ್ಮೇಂದ್ರ ಪ್ರಧಾನ್ ಭಾನುವಾರ ಪುನರುಚ್ಚರಿಸಿದ್ದಾರೆ. ಸಿಎಂ ಸ್ಟಾಲಿನ್‌ ಅವರಿಗೆ ಬರೆದ ಪತ್ರದಲ್ಲಿ, ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಈ ನೀತಿಯನ್ನು ಬಿಜೆಪಿಯೇತರ ರಾಜ್ಯಗಳು ಜಾರಿಗೆ ತಂದಿವೆ ಎಂದು ಹೇಳಿದ್ದರು.

ತಮಿಳುನಾಡು ಈ ನೀತಿಯನ್ನು “ಸಂಕುಚಿತ ದೃಷ್ಠಿ”ಯಿಂದ ನೋಡುವುದು ಮತ್ತು ಅಂತಹ ಸುಧಾರಣೆಗಳನ್ನು ತಮ್ಮ ರಾಜಕೀಯ ನಿರೂಪಣೆಗಳನ್ನು ಉಳಿಸಿಕೊಳ್ಳಲು ಬೆದರಿಕೆಗಳಾಗಿ ಪರಿವರ್ತಿಸುವುದು ಸೂಕ್ತವಲ್ಲ ಎಂದು ಅವರು ಸಿಎಂ ಸ್ಟಾಲಿನ್‌ ಅವರಿಗೆ ಹೇಳಿದ್ದರು.

ಸಮಗ್ರ ಶಿಕ್ಷಾ ಯೋಜನೆಯಡಿ ತಮಿಳುನಾಡಿಗೆ ಬಿಡುಗಡೆಯಾದ 2,152 ಕೋಟಿ ರೂ. ಬಾಕಿ ಹಣವನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಲಿಂಕ್ ಮಾಡದೆ ಪಡೆಯುವಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಒಂದು ದಿನದ ನಂತರ ಧರ್ಮೇಂದ್ರ ಪ್ರಧಾನ್ ಅವರು ಈ ಹೇಳಿಕೆ ನೀಡಿದ್ದರು.

2018 ರಲ್ಲಿ ಜಾರಿಗೆ ತರಲಾದ ಸಮಗ್ರ ಶಿಕ್ಷಾ, ಕೇಂದ್ರ ಸರ್ಕಾರವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣಕ್ಕೆ ಬೆಂಬಲ ನೀಡುವ ಯೋಜನೆಯಾಗಿದೆ.

ಕೇಂದ್ರ ಸರ್ಕಾರವು ತಾನು ಕಡ್ಡಾಯಗೊಳಿಸಿದ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯಗಳನ್ನು ಒತ್ತಾಯಿಸುವ ತಂತ್ರವಾಗಿ ಹಣವನ್ನು ತಡೆಹಿಡಿಯುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ. ತಮ್ಮ ರಾಜ್ಯವು ಎರಡು ಭಾಷಾ ನೀತಿಯನ್ನು ಹೊಂದಿದ್ದು, ಅದು ವಿದ್ಯಾರ್ಥಿಗಳಿಗೆ ತಮಿಳು ಮತ್ತು ಇಂಗ್ಲಿಷ್ ಕಲಿಸುವುದನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡಿಗೆ ಸಮಗ್ರ ಶಿಕ್ಷಾ ಕಾರ್ಯಕ್ರಮದಡಿಯಲ್ಲಿ ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಜಾರಿಗೆ ತರುವವರೆಗೆ ಮತ್ತು ತ್ರಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವವರೆಗೆ ಹಣವನ್ನು ಬಿಡುಗಡೆ ಮಾಡುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಸ್ಟಾಲಿನ್ ಈ ಹೇಳಿಕೆ ನೀಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...