Homeಮುಖಪುಟಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

- Advertisement -
- Advertisement -

ಜನವರಿ 16ರಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ನಿನ್ನೆ ಪ್ರಧಾನಿ ಮೋದಿಯವರು ತಮಿಳುನಾಡಿನಲ್ಲಿ ಚನ್ನೈ ಮೆಟ್ರೋ ಸೇರಿದಂತೆ ಹಲವು ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದ ಆಹ್ವಾನ ಪತ್ರಿಕೆ, ವೇದಿಕೆಯ ಬ್ಯಾನರ್ ಮತ್ತು ಭಾಷಣ ಸೇರಿದಂತೆ ಎಲ್ಲಿಯೂ ಹಿಂದಿ ಬಳಸಿಲ್ಲ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದೆ. ಹಾಗಾಗಿ ಇಲ್ಲಿನ ಬಿಜೆಪಿ ಮುಖಂಡರು ಹೈಕಮಾಂಡ್‌ ಅನ್ನು ಒಲೈಸುವುದಕ್ಕಾಗಿ ಕನ್ನಡವನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡುತ್ತಾರೆ. ಆದರೆ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಗಟ್ಟಿ ಚಳವಳಿ ಇದೆ. ಅಲ್ಲದೇ ಅಲ್ಲಿ ಬಿಜೆಪಿ ಸರ್ಕಾರವಿಲ್ಲ. ಬಿಜೆಪಿಯ ಮಿತ್ರ ಪಕ್ಷಗಳು ಸಹ ಹಿಂದಿ ಹೇರಿಕೆಗೆ ಭಯಪಡುತ್ತಾರೆ. ಹಾಗಾಗಿ ಅಲ್ಲಿ ಹಿಂದಿ ಹೇರಿಕೆ ನಡೆಯುವುದಿಲ್ಲ. ಕರ್ನಾಟಕಕ್ಕೆ ಈ ಅನ್ಯಾಯ ಏಕೆ ಎಂದು ಕನ್ನಡಿಗರು ಪ್ರಶ್ನಿಸಿದ್ದಾರೆ.

ಮೋದಿ ಕೇರಳದ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಅಲ್ಲಿ ಮಾತಾಡ್ತಾರೆ, ಅದಕ್ಕೆ ಮಲಯಾಳಂ ಅನುವಾದ ಸಹ ಇರುತ್ತೆ. ಅದೇ ನಮ್ಮಲ್ಲಿಗೆ ಬಂದ್ರೆ ಹಿಂದಿಲಿ ಮಾತಾಡ್ತಾರೆ, ಕನ್ನಡದ ಅನುವಾದ ಸಹ ಇರೋಲ್ಲ. ಕರಾವಳಿ ಜನ ಅಂತೂ ಅನುವಾದ ಬೇಡ ಅಂತಾರೆ. ಬಿಜೆಪಿನ ಗೆಲ್ಲಿಸಿದ್ದಕ್ಕೆ ನಮಗೆ ಸಿಗೋದು ಏನಪ್ಪಾ ಅಂದ್ರೆ #ಹಿಂದಿಹೇರಿಕೆ ಎಂದು ಸತ್ಯ ಹೊಳ್ಳ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮಿಳು ನಾಡಿನಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ತಮಿಳು ಇರುತ್ತದೆ, ಕರ್ನಾಟಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಇರೊಲ್ಲಾ. ಇದರ ಅರ್ಥ, ಸಾವಿರಾರು ವರ್ಷ ಸ್ವಾಭಿಮಾನಿಗಳಾಗಿ ಬದುಕಿದ್ದ ಕನ್ನಡಿಗರು ಹುಸಿ ದೇಶಪ್ರೇಮದ ಹೆಸರಲ್ಲಿ ಸ್ವಾಭಿಮಾನ ಮರೆತು ಬದುಕುತ್ತಿದ್ದೇವೆ ಎಂದು ಅರುಣ್ ಜಾವಗಲ್ ವಿಷಾಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ವಿರೋಧ ಪಕ್ಷದಲ್ಲಿರೋ ಕಾಂಗ್ರೆಸ್ ನಾಯಕರೇ ಆಗಲಿ ಆಡಳಿತ ಪಕ್ಷ ಬಿಜೆಪಿಯ ನಾಯಕರೇ ಆಗಲಿ ಹಿಂದಿ ಹೇರಿಕೆ ಸಲ್ಲದು ಎಂದು ಕನ್ನಡ ಕಟ್ಟಾಳುಗಳಂತೆ ಮಾತಾಡ್ತಾರೆಯೇ ಹೊರತು, ಸಂವಿಧಾನ ತಿದ್ದುಪಡಿ ಮಾಡಿ ಹಿಂದಿಗಿರುವ ಹೆಚ್ಚುಗಾರಿಕೆಯನ್ನು ಹಾಗೂ ಹಿಂದಿ ಹೇರಲು ಸಂವಿಧಾನದಲ್ಲಿರುವ ವ್ಯವಸ್ಥೆಯನ್ನು ಹತ್ತಿಕ್ಕುವ ಬಗ್ಗೆ ಮಾತಾಡಲ್ಲ ಎಂದು ರಾಮಚಂದ್ರ ಎಂ ಟ್ವೀಟ್ ಮಾಡಿದ್ದಾರೆ.

ಭಾಷೆಯ ವಿಚಾರದಲ್ಲಿ ಕರುಣಾನಿಧಿ ಹೋರಾಟ ಅಷ್ಟು ಮಹತ್ವ ಪಡೆದಿದೆ. ಶತಮಾನಗಳು ಕಳೆದರೂ ತಮಿಳರು ಹಿಂದಿ ಹೇರಿಕೆ ಸಹಿಸುವುದಿಲ್ಲ!. ಕನ್ನಡಿಗರ ಕತೆ, “ಮೂರು ಕೊಟ್ಟರೆ ಮಾವನ ಕಡೆ, ಆರು ಕೊಟ್ಟರೆ ಅತ್ತೆ ಕಡೆ” ಎಂದು ವೆಂಕಟರಾಮು ವ ಎಂಬುವವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವೂ ಕೂಡಾ ತಮಿಳುನಾಡಿನವರಂತೆ ದ್ವಿಭಾಷಾ ಸೂತ್ರಕ್ಕಾಗಿ ಒತ್ತಾಯಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...