Homeಮುಖಪುಟಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

- Advertisement -
- Advertisement -

ಜನವರಿ 16ರಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ನಿನ್ನೆ ಪ್ರಧಾನಿ ಮೋದಿಯವರು ತಮಿಳುನಾಡಿನಲ್ಲಿ ಚನ್ನೈ ಮೆಟ್ರೋ ಸೇರಿದಂತೆ ಹಲವು ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದ ಆಹ್ವಾನ ಪತ್ರಿಕೆ, ವೇದಿಕೆಯ ಬ್ಯಾನರ್ ಮತ್ತು ಭಾಷಣ ಸೇರಿದಂತೆ ಎಲ್ಲಿಯೂ ಹಿಂದಿ ಬಳಸಿಲ್ಲ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದೆ. ಹಾಗಾಗಿ ಇಲ್ಲಿನ ಬಿಜೆಪಿ ಮುಖಂಡರು ಹೈಕಮಾಂಡ್‌ ಅನ್ನು ಒಲೈಸುವುದಕ್ಕಾಗಿ ಕನ್ನಡವನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡುತ್ತಾರೆ. ಆದರೆ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಗಟ್ಟಿ ಚಳವಳಿ ಇದೆ. ಅಲ್ಲದೇ ಅಲ್ಲಿ ಬಿಜೆಪಿ ಸರ್ಕಾರವಿಲ್ಲ. ಬಿಜೆಪಿಯ ಮಿತ್ರ ಪಕ್ಷಗಳು ಸಹ ಹಿಂದಿ ಹೇರಿಕೆಗೆ ಭಯಪಡುತ್ತಾರೆ. ಹಾಗಾಗಿ ಅಲ್ಲಿ ಹಿಂದಿ ಹೇರಿಕೆ ನಡೆಯುವುದಿಲ್ಲ. ಕರ್ನಾಟಕಕ್ಕೆ ಈ ಅನ್ಯಾಯ ಏಕೆ ಎಂದು ಕನ್ನಡಿಗರು ಪ್ರಶ್ನಿಸಿದ್ದಾರೆ.

ಮೋದಿ ಕೇರಳದ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಅಲ್ಲಿ ಮಾತಾಡ್ತಾರೆ, ಅದಕ್ಕೆ ಮಲಯಾಳಂ ಅನುವಾದ ಸಹ ಇರುತ್ತೆ. ಅದೇ ನಮ್ಮಲ್ಲಿಗೆ ಬಂದ್ರೆ ಹಿಂದಿಲಿ ಮಾತಾಡ್ತಾರೆ, ಕನ್ನಡದ ಅನುವಾದ ಸಹ ಇರೋಲ್ಲ. ಕರಾವಳಿ ಜನ ಅಂತೂ ಅನುವಾದ ಬೇಡ ಅಂತಾರೆ. ಬಿಜೆಪಿನ ಗೆಲ್ಲಿಸಿದ್ದಕ್ಕೆ ನಮಗೆ ಸಿಗೋದು ಏನಪ್ಪಾ ಅಂದ್ರೆ #ಹಿಂದಿಹೇರಿಕೆ ಎಂದು ಸತ್ಯ ಹೊಳ್ಳ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮಿಳು ನಾಡಿನಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ತಮಿಳು ಇರುತ್ತದೆ, ಕರ್ನಾಟಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಇರೊಲ್ಲಾ. ಇದರ ಅರ್ಥ, ಸಾವಿರಾರು ವರ್ಷ ಸ್ವಾಭಿಮಾನಿಗಳಾಗಿ ಬದುಕಿದ್ದ ಕನ್ನಡಿಗರು ಹುಸಿ ದೇಶಪ್ರೇಮದ ಹೆಸರಲ್ಲಿ ಸ್ವಾಭಿಮಾನ ಮರೆತು ಬದುಕುತ್ತಿದ್ದೇವೆ ಎಂದು ಅರುಣ್ ಜಾವಗಲ್ ವಿಷಾಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ವಿರೋಧ ಪಕ್ಷದಲ್ಲಿರೋ ಕಾಂಗ್ರೆಸ್ ನಾಯಕರೇ ಆಗಲಿ ಆಡಳಿತ ಪಕ್ಷ ಬಿಜೆಪಿಯ ನಾಯಕರೇ ಆಗಲಿ ಹಿಂದಿ ಹೇರಿಕೆ ಸಲ್ಲದು ಎಂದು ಕನ್ನಡ ಕಟ್ಟಾಳುಗಳಂತೆ ಮಾತಾಡ್ತಾರೆಯೇ ಹೊರತು, ಸಂವಿಧಾನ ತಿದ್ದುಪಡಿ ಮಾಡಿ ಹಿಂದಿಗಿರುವ ಹೆಚ್ಚುಗಾರಿಕೆಯನ್ನು ಹಾಗೂ ಹಿಂದಿ ಹೇರಲು ಸಂವಿಧಾನದಲ್ಲಿರುವ ವ್ಯವಸ್ಥೆಯನ್ನು ಹತ್ತಿಕ್ಕುವ ಬಗ್ಗೆ ಮಾತಾಡಲ್ಲ ಎಂದು ರಾಮಚಂದ್ರ ಎಂ ಟ್ವೀಟ್ ಮಾಡಿದ್ದಾರೆ.

ಭಾಷೆಯ ವಿಚಾರದಲ್ಲಿ ಕರುಣಾನಿಧಿ ಹೋರಾಟ ಅಷ್ಟು ಮಹತ್ವ ಪಡೆದಿದೆ. ಶತಮಾನಗಳು ಕಳೆದರೂ ತಮಿಳರು ಹಿಂದಿ ಹೇರಿಕೆ ಸಹಿಸುವುದಿಲ್ಲ!. ಕನ್ನಡಿಗರ ಕತೆ, “ಮೂರು ಕೊಟ್ಟರೆ ಮಾವನ ಕಡೆ, ಆರು ಕೊಟ್ಟರೆ ಅತ್ತೆ ಕಡೆ” ಎಂದು ವೆಂಕಟರಾಮು ವ ಎಂಬುವವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವೂ ಕೂಡಾ ತಮಿಳುನಾಡಿನವರಂತೆ ದ್ವಿಭಾಷಾ ಸೂತ್ರಕ್ಕಾಗಿ ಒತ್ತಾಯಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...