Homeಮುಖಪುಟ'ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ': ಪತ್ರಬರೆದ IRS ಅಧಿಕಾರಿ

‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

"ಹಿಂದಿ ಸೆಲ್‌ಗೆ ನೇಮಿಸಿರುವ ಅಧಿಕಾರಿಗೆ ಹಿಂದಿಯನ್ನು ಓದಲು-ಬರೆಯಲು ಬರಬೇಕು. ಅಲ್ಲಿ ಕೆಲಸ ಮಾಡಲು ಕನಿಷ್ಟ ಇಚ್ಚೆಯಾದರೂ ಇರಬೇಕು ಎಂಬುದು ನನ್ನ ವಿನಮ್ರ ಸಲಹೆ"

- Advertisement -
- Advertisement -

ತಮಿಳುನಾಡಿನ ಭಾರತೀಯ ಕಂದಾಯ ಸೇವೆಯ (IRS) ಅಧಿಕಾರಿಯೊಬ್ಬರು, ಹಿಂದಿ ಗೊತ್ತಿಲ್ಲದವರ ಮೇಲಿನ ಹಿಂದಿ ಹೇರಿಕೆಯು, ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ ಎಂದು ತನ್ನ ಉನ್ನತ ಅಧಿಕಾರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಬಿ.ಬಾಲಮುರುಗನ್ ಅವರನ್ನು ಕಳೆದ ವರ್ಷ ಚೆನ್ನೈನಲ್ಲಿರುವ ಜಿಎಸ್‌ಟಿ ಕಛೇರಿಯ ಹಿಂದಿ ಸೆಲ್‌ಗೆ ವರ್ಗ ಮಾಡಲಾಗಿತ್ತು. ಈಗ ಅವರು ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ (CBIC) ಪತ್ರವೊಂದನ್ನು ಬರೆದಿದ್ದು, ಅದರಲ್ಲಿ, “ಹಿಂದಿ ಸೆಲ್‌ಗೆ ನೇಮಿಸಿರುವ ಅಧಿಕಾರಿಗೆ ಹಿಂದಿಯನ್ನು ಓದಲು-ಬರೆಯಲು ಬರಬೇಕು. ಅಲ್ಲಿ ಕೆಲಸ ಮಾಡಲು ಕನಿಷ್ಟ ಇಚ್ಚೆಯಾದರೂ ಇರಬೇಕು ಎಂಬುದು ನನ್ನ ವಿನಮ್ರ ಸಲಹೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಆಗಸ್ಟ್‌ 9 ರಂದು ಬರೆದಿರುವ ಪತ್ರದಲ್ಲಿ, “ಹಿಂದಿ ಸೆಲ್‌ನಲ್ಲಿನ ಕೆಲಸದ ಅಧಿಕೃತ ಸಂವಹನದಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸುವುದನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಉತ್ತೇಜಿಸುವುದಾಗಿರುತ್ತದೆ. ನನಗೆ ಹಿಂದಿಯಲ್ಲಿ ABCD ಯೂ ಗೊತ್ತಿಲ್ಲ. ಹಾಗಾಗಿ ಹಿಂದಿ ಕೋಶದಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲ. ನನ್ನನ್ನು ಹಿಂದಿ ಕೋಶದಲ್ಲಿ ಪೋಸ್ಟಿಂಗ್ ಮಾಡುವುದು ನನ್ನ ಮೇಲಿನ ಹಿಂದಿ ಹೇರಿಕೆಯಲ್ಲದೇ ಮತ್ತೇನೂ ಅಲ್ಲ. ಇದು ಬ್ರಾಹ್ಮಣನಿಗೆ ಬೈಬಲ್ ಅಥವಾ ಕುರಾನ್ ಕೊಟ್ಟು, ಕ್ರಿಶ್ಚಿಯನ್ ಅಥವಾ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಲು ನಿರ್ದೇಶಿಸುವಂತಿದೆ” ಎಂಬುದಾಗಿ ಹೇಳಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಹಿಂದಿ ತಿಳಿದಿರುವ ಮತ್ತು ಹಿಂದಿ ಸೆಲ್‌ನಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಧಿಕಾರಿಗಳನ್ನು ಮಾತ್ರ ಅಲ್ಲಿಗೆ ನೇಮಿಸಬೇಕು ಎಂದು, CBIC ಅಧ್ಯಕ್ಷರು ಮತ್ತು ಸಿಬಿಐಸಿಯ ಎಲ್ಲಾ ವಿಭಾಗದ ಮುಖ್ಯಸ್ಥರಿಗೆ ಸೂಚನೆ ನೀಡಬೇಕು ಎಂದು ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

“ನಾವು ಸಹಿ ಮಾಡುವ ಖಡತಗಳಲ್ಲಿ ಏನು ಬರೆದಿದೆ ಎಂದು ಅರ್ಥಮಾಡಿಕೊಳ್ಳುವುದಕ್ಕೂ ನಮಗೆ ಸಾಧ್ಯವಿಲ್ಲ. ಇಲ್ಲಿ ಕೆಲಸ ಮಾಡುವ ಅರ್ಧದಷ್ಟು ಜನ ಹಿಂದಿ ಬಲ್ಲವರೇ ಆಗಿದ್ದಾರೆ. ಇದು ನ್ಯಾಯಯೋಚಿತವೇ? ಹಿಂದಿ ಹೇರಿಕೆಯ ರಾಜಕೀಯಕ್ಕೆ ಇಳಿಯಲು ಇಷ್ಟವಿಲ್ಲದಿದ್ದರೂ, ಒಬ್ಬ ಅಧಿಕಾರಿಯನ್ನು ಇದಕ್ಕೆ ಒಳಪಡಿಸುವುದು ಅನ್ಯಾಯವಾಗಿದೆ. ನಾನು CBICಯಿಂದ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ” ಎಂದು ಬಾಲಮುರುಗನ್ ಹೇಳಿದ್ದಾರೆ.

CBIC, ಎಲ್ಲಾ IRS ಅಧಿಕಾರಿಗಳ ಕೇಡರ್ ನಿಯಂತ್ರಣ ಪ್ರಾಧಿಕಾರವಾಗಿದ್ದು, ಹಿಂದಿ ಸೆಲ್, ಹಿಂದಿ ಅನುಷ್ಠಾನದ ಬಗ್ಗೆ ತ್ರೈಮಾಸಿಕ ಸಂಖ್ಯಾಶಾಸ್ತ್ರೀಯ ವರದಿಗಳನ್ನು ಸಂಗ್ರಹಿಸುತ್ತದೆ. ಹಾಗಾಗಿ ತನ್ನ ಅಧಿಕೃತ ಕೆಲಸದಲ್ಲಿ ಹಿಂದಿ ಭಾಷೆಯ ಬಳಕೆಯು ಅಗತ್ಯವಾಗಿದೆ.


ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...