Homeಮುಖಪುಟ'ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ': ಪತ್ರಬರೆದ IRS ಅಧಿಕಾರಿ

‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

"ಹಿಂದಿ ಸೆಲ್‌ಗೆ ನೇಮಿಸಿರುವ ಅಧಿಕಾರಿಗೆ ಹಿಂದಿಯನ್ನು ಓದಲು-ಬರೆಯಲು ಬರಬೇಕು. ಅಲ್ಲಿ ಕೆಲಸ ಮಾಡಲು ಕನಿಷ್ಟ ಇಚ್ಚೆಯಾದರೂ ಇರಬೇಕು ಎಂಬುದು ನನ್ನ ವಿನಮ್ರ ಸಲಹೆ"

- Advertisement -
- Advertisement -

ತಮಿಳುನಾಡಿನ ಭಾರತೀಯ ಕಂದಾಯ ಸೇವೆಯ (IRS) ಅಧಿಕಾರಿಯೊಬ್ಬರು, ಹಿಂದಿ ಗೊತ್ತಿಲ್ಲದವರ ಮೇಲಿನ ಹಿಂದಿ ಹೇರಿಕೆಯು, ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ ಎಂದು ತನ್ನ ಉನ್ನತ ಅಧಿಕಾರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಬಿ.ಬಾಲಮುರುಗನ್ ಅವರನ್ನು ಕಳೆದ ವರ್ಷ ಚೆನ್ನೈನಲ್ಲಿರುವ ಜಿಎಸ್‌ಟಿ ಕಛೇರಿಯ ಹಿಂದಿ ಸೆಲ್‌ಗೆ ವರ್ಗ ಮಾಡಲಾಗಿತ್ತು. ಈಗ ಅವರು ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ (CBIC) ಪತ್ರವೊಂದನ್ನು ಬರೆದಿದ್ದು, ಅದರಲ್ಲಿ, “ಹಿಂದಿ ಸೆಲ್‌ಗೆ ನೇಮಿಸಿರುವ ಅಧಿಕಾರಿಗೆ ಹಿಂದಿಯನ್ನು ಓದಲು-ಬರೆಯಲು ಬರಬೇಕು. ಅಲ್ಲಿ ಕೆಲಸ ಮಾಡಲು ಕನಿಷ್ಟ ಇಚ್ಚೆಯಾದರೂ ಇರಬೇಕು ಎಂಬುದು ನನ್ನ ವಿನಮ್ರ ಸಲಹೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಆಗಸ್ಟ್‌ 9 ರಂದು ಬರೆದಿರುವ ಪತ್ರದಲ್ಲಿ, “ಹಿಂದಿ ಸೆಲ್‌ನಲ್ಲಿನ ಕೆಲಸದ ಅಧಿಕೃತ ಸಂವಹನದಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸುವುದನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಉತ್ತೇಜಿಸುವುದಾಗಿರುತ್ತದೆ. ನನಗೆ ಹಿಂದಿಯಲ್ಲಿ ABCD ಯೂ ಗೊತ್ತಿಲ್ಲ. ಹಾಗಾಗಿ ಹಿಂದಿ ಕೋಶದಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲ. ನನ್ನನ್ನು ಹಿಂದಿ ಕೋಶದಲ್ಲಿ ಪೋಸ್ಟಿಂಗ್ ಮಾಡುವುದು ನನ್ನ ಮೇಲಿನ ಹಿಂದಿ ಹೇರಿಕೆಯಲ್ಲದೇ ಮತ್ತೇನೂ ಅಲ್ಲ. ಇದು ಬ್ರಾಹ್ಮಣನಿಗೆ ಬೈಬಲ್ ಅಥವಾ ಕುರಾನ್ ಕೊಟ್ಟು, ಕ್ರಿಶ್ಚಿಯನ್ ಅಥವಾ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಲು ನಿರ್ದೇಶಿಸುವಂತಿದೆ” ಎಂಬುದಾಗಿ ಹೇಳಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಹಿಂದಿ ತಿಳಿದಿರುವ ಮತ್ತು ಹಿಂದಿ ಸೆಲ್‌ನಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಧಿಕಾರಿಗಳನ್ನು ಮಾತ್ರ ಅಲ್ಲಿಗೆ ನೇಮಿಸಬೇಕು ಎಂದು, CBIC ಅಧ್ಯಕ್ಷರು ಮತ್ತು ಸಿಬಿಐಸಿಯ ಎಲ್ಲಾ ವಿಭಾಗದ ಮುಖ್ಯಸ್ಥರಿಗೆ ಸೂಚನೆ ನೀಡಬೇಕು ಎಂದು ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

“ನಾವು ಸಹಿ ಮಾಡುವ ಖಡತಗಳಲ್ಲಿ ಏನು ಬರೆದಿದೆ ಎಂದು ಅರ್ಥಮಾಡಿಕೊಳ್ಳುವುದಕ್ಕೂ ನಮಗೆ ಸಾಧ್ಯವಿಲ್ಲ. ಇಲ್ಲಿ ಕೆಲಸ ಮಾಡುವ ಅರ್ಧದಷ್ಟು ಜನ ಹಿಂದಿ ಬಲ್ಲವರೇ ಆಗಿದ್ದಾರೆ. ಇದು ನ್ಯಾಯಯೋಚಿತವೇ? ಹಿಂದಿ ಹೇರಿಕೆಯ ರಾಜಕೀಯಕ್ಕೆ ಇಳಿಯಲು ಇಷ್ಟವಿಲ್ಲದಿದ್ದರೂ, ಒಬ್ಬ ಅಧಿಕಾರಿಯನ್ನು ಇದಕ್ಕೆ ಒಳಪಡಿಸುವುದು ಅನ್ಯಾಯವಾಗಿದೆ. ನಾನು CBICಯಿಂದ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ” ಎಂದು ಬಾಲಮುರುಗನ್ ಹೇಳಿದ್ದಾರೆ.

CBIC, ಎಲ್ಲಾ IRS ಅಧಿಕಾರಿಗಳ ಕೇಡರ್ ನಿಯಂತ್ರಣ ಪ್ರಾಧಿಕಾರವಾಗಿದ್ದು, ಹಿಂದಿ ಸೆಲ್, ಹಿಂದಿ ಅನುಷ್ಠಾನದ ಬಗ್ಗೆ ತ್ರೈಮಾಸಿಕ ಸಂಖ್ಯಾಶಾಸ್ತ್ರೀಯ ವರದಿಗಳನ್ನು ಸಂಗ್ರಹಿಸುತ್ತದೆ. ಹಾಗಾಗಿ ತನ್ನ ಅಧಿಕೃತ ಕೆಲಸದಲ್ಲಿ ಹಿಂದಿ ಭಾಷೆಯ ಬಳಕೆಯು ಅಗತ್ಯವಾಗಿದೆ.


ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...