Homeಕರ್ನಾಟಕಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ...

ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ಸಜ್ಜು

ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ

- Advertisement -
- Advertisement -

ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿನವನ್ನು ಒಕ್ಕೂಟದ ಸರ್ಕಾರ ಆಚರಿಸುತ್ತಾ ಬಂದಿದೆ. ಈ ಹಿಂದಿ ದಿನದ ಆಚರಣೆಯನ್ನು ರದ್ದುಗೊಳಿಸುವಂತೆ ಹಲವಾರು ಹೋರಾಟಗಳು ನಡೆಯುತ್ತಿವೆ. ಆದರೂ ತನ್ನ ನಿಲುವನ್ನು ಬದಲಾಯಿಸಿಕೊಳ್ಳದ ಸರ್ಕಾರದ ಧೋರಣೆಯನ್ನು ವಿರೋಧಿಸಿ ಹಿಂದಿ ದಿನವನ್ನು ರದ್ದು ಮಾಡುವಂತೆ ಆಗ್ರಹಿಸಿ ಕನ್ನಡಿಗರು ಕರಾಳ ದಿನಾಚರಣೆಗೆ ಮುಂದಾಗಿದ್ದಾರೆ. ನಾಳೆ ಬೆಂಗಳೂರಿನಲ್ಲಿರುವ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲು ಸಿದ್ದತೆ ನಡೆಸಿದ್ದಾರೆ. ಕೇವಲ ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಿದ್ದು, ಹೋರಾಟಗಾರರ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಆಗ್ರಹ ಪತ್ರವನ್ನು ನೀಡಲಿದ್ದಾರೆ.

ಭಾರತ ಒಂದು ವೈವಿದ್ಯತೆಯಿಂದ ಕೂಡಿದ ಒಕ್ಕೂಟ ರಾಷ್ಟ್ರ. ಬಹುತ್ವದಿಂದ ಕೂಡಿರುವ ಈ ದೇಶದಲ್ಲಿ ಎಲ್ಲಾ ಸಂಸ್ಕøತಿ, ಭಾಷೆ, ಜನಾಂಗ, ಆಚಾರ-ವಿಚಾರಗಳನ್ನೂ ಸಮಾನ ಗೌರವದಿಂದ ಆಚರಿಸುವ ಸ್ವಾತಂತ್ರ್ಯವನ್ನು ಎಲ್ಲಾ ವರ್ಗಗಳಿಗೂ ಸಂವಿಧಾನಿಕವಾಗಿ ನೀಡಲಾಗಿದೆ. ಆದರೆ ಹಲವಾರು ವರ್ಷಗಳಿಂದ ಉತ್ತರ ಭಾರತದ ಸಂಸ್ಕøತಿಯನ್ನು ದಕ್ಷಿಣ ಭಾರತೀಯರ ಮೇಲೆ ಬಲವಂತವಾಗಿ ಹೇರುವ ಧೋರಣೆಯನ್ನು ಒಕ್ಕೂಟ ವ್ಯವಸ್ಥೆಯ ಸರ್ಕಾರ ತೋರುತ್ತಾ ಬಂದಿದೆ. ಅದರಲ್ಲಿ ಹಿಂದಿ ಭಾಷೆಯ ಹೇರಿಕೆಯೂ ಪ್ರಮುಖವಾದದ್ದು. ಭಾರತದಲ್ಲಿ ಹಿಂದಿ ಭಾಷೆಯನ್ನು ಉತ್ತೇಜಿಸುವ ಸಲುವಾಗಿ 1953ರಿಂದ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿವಸವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಆರಂಭಿಸಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತೀಯರ ಮೇಲೆ ಹಿಂದಿ ಹೇರುವ ಕೆಲಸಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕುಮ್ಮಕ್ಕು ನೀಡುತ್ತಾ ಬಂದಿದೆ.

ಕೇಂದ್ರದ ಹಿಂದಿ ಹೇರಿಕೆಯ ಧೋರಣೆ ಹೆಚ್ಚಾದಂತೆ, ಕನ್ನಡಿಗರು ಹಿಂದಿ ಹೇರಿಕೆಯನ್ನು ಕಠುವಾಗಿ ವಿರೋಧಿಸುತ್ತಾ ಬಂದಿದ್ದಾರೆ. ನಮ್ಮದು ಹಿಂದಿ ಒಕ್ಕೂಟ ರಾಷ್ಟ್ರವಲ್ಲ. ಎಲ್ಲಾ ಭಾಷೆಗಳಿಗೂ ತಮ್ಮದೇ ಆದ ಮಹತ್ವವಿದೆ. ಹಾಗಾಗಿ ನಮ್ಮೆಲ್ಲರ ತೆರಿಗೆ ಹಣದಿಂದ ಕೇವಲ ಒಂದು ಭಾಷೆಯ ಪ್ರಚಾರ ಮತ್ತು ಹೇರಿಕೆ ಮಾಡುವುದನ್ನು ನಾವು ಒಪ್ಪುವುದಿಲ್ಲ ಎಂದಿರುವ ಕನ್ನಡಿಗರು, ಹಿಂದಿ ಬಿಟ್ಟು ಉಳಿದ ಭಾಷೆಗಳ ಪ್ರಚಾರಕ್ಕೆ ಕೇಂದ್ರ ಸರ್ಕಾರವೇಕೆ ಮುಂದಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಿಂದಿ ದಿನವನ್ನು ಭಾರತೀಯ ಭಾಷಾ ದಿನವನ್ನಾ ಆಚರಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 5 ರಂದು ಟ್ವಿಟರ್ ಅಭಿಯಾನ ಕೂಡ ಮಾಡಲಾಗಿದೆ. ಆದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿಕೊಂಡಿಲ್ಲ. ಹಾಗಾಗಿ ಆಕ್ರೋಶಗೊಂಡಿರುವ ಕನ್ನಡಿಗರು ಮತ್ತು ಕನ್ನಡಪರ ಸಂಘಟನೆಗಳು ಹಿಂದಿ ಭಾಷಾ ದಿನವಾದ ಸೆಪ್ಟೆಂಬರ್ 14ನ್ನು ಕನ್ನಡಿಗರ ಕರಾಳ ದಿನವನ್ನಾಗಿ ಆಚರಿಸಲು ಮುಂದಾಗಿವೆ. ಹೋರಾಟದ ಸಮಾವೇಶವನ್ನು ಕರ್ನಾಟಕ ರಕ್ಷಣಾ ಸೇನೆ, ಕರುನಾಡ ಸೇವಕರು ಸಂಘಟನೆ, ಕರುನಾಡ ಯುವಕರು ಸಂಘಟನೆ ಮತ್ತು ರಣಧೀರ ಪಡೆ ಸಂಘಟನೆಗಳು ಜೊತೆಗೂಡಿ ಆಯೋಜಿಸುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆ ಬಳಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ಮಟ್ಟದ ವಿರೋಧ ವ್ಯಕ್ತವಾದ ಬಳಿಕ ಮೆಟ್ರೋದಲ್ಲಿ ಹಿಂದಿ ಭಾಷೆಯನ್ನು ಹಿಂಪಡೆಯಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

“ನಾವು ಎಲ್ಲಾ ಭಾಷೆಯನ್ನು ಸಮಾನವಾಗಿ ಕಾಣುತ್ತೇವೆ. ಅಂತೆಯೇ ಹಿಂದಿಯನ್ನು ಒಂದು ಭಾಷೆಯಾಗಿ ಗೌರವಿಸುತ್ತೇವೆ. ಆದರೆ ನಮ್ಮ ಭಾಷೆಯ ಮೇಲೆ ಸವಾರಿ ಮಾಡಲು ಬಂದರೆ ನಾವು ಸಹಿಸುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಿಗರೇ ಇದರ ರುವಾರಿಗಳು” ಎಂದು ಕನ್ನಡಪರ ಹೋರಾಟಗಾರ ಹರೀಶ್‍ಕುಮಾರ್ ಬಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...