Homeಕರ್ನಾಟಕಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ...

ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ಸಜ್ಜು

ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ

- Advertisement -
- Advertisement -

ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿನವನ್ನು ಒಕ್ಕೂಟದ ಸರ್ಕಾರ ಆಚರಿಸುತ್ತಾ ಬಂದಿದೆ. ಈ ಹಿಂದಿ ದಿನದ ಆಚರಣೆಯನ್ನು ರದ್ದುಗೊಳಿಸುವಂತೆ ಹಲವಾರು ಹೋರಾಟಗಳು ನಡೆಯುತ್ತಿವೆ. ಆದರೂ ತನ್ನ ನಿಲುವನ್ನು ಬದಲಾಯಿಸಿಕೊಳ್ಳದ ಸರ್ಕಾರದ ಧೋರಣೆಯನ್ನು ವಿರೋಧಿಸಿ ಹಿಂದಿ ದಿನವನ್ನು ರದ್ದು ಮಾಡುವಂತೆ ಆಗ್ರಹಿಸಿ ಕನ್ನಡಿಗರು ಕರಾಳ ದಿನಾಚರಣೆಗೆ ಮುಂದಾಗಿದ್ದಾರೆ. ನಾಳೆ ಬೆಂಗಳೂರಿನಲ್ಲಿರುವ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲು ಸಿದ್ದತೆ ನಡೆಸಿದ್ದಾರೆ. ಕೇವಲ ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಿದ್ದು, ಹೋರಾಟಗಾರರ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಆಗ್ರಹ ಪತ್ರವನ್ನು ನೀಡಲಿದ್ದಾರೆ.

ಭಾರತ ಒಂದು ವೈವಿದ್ಯತೆಯಿಂದ ಕೂಡಿದ ಒಕ್ಕೂಟ ರಾಷ್ಟ್ರ. ಬಹುತ್ವದಿಂದ ಕೂಡಿರುವ ಈ ದೇಶದಲ್ಲಿ ಎಲ್ಲಾ ಸಂಸ್ಕøತಿ, ಭಾಷೆ, ಜನಾಂಗ, ಆಚಾರ-ವಿಚಾರಗಳನ್ನೂ ಸಮಾನ ಗೌರವದಿಂದ ಆಚರಿಸುವ ಸ್ವಾತಂತ್ರ್ಯವನ್ನು ಎಲ್ಲಾ ವರ್ಗಗಳಿಗೂ ಸಂವಿಧಾನಿಕವಾಗಿ ನೀಡಲಾಗಿದೆ. ಆದರೆ ಹಲವಾರು ವರ್ಷಗಳಿಂದ ಉತ್ತರ ಭಾರತದ ಸಂಸ್ಕøತಿಯನ್ನು ದಕ್ಷಿಣ ಭಾರತೀಯರ ಮೇಲೆ ಬಲವಂತವಾಗಿ ಹೇರುವ ಧೋರಣೆಯನ್ನು ಒಕ್ಕೂಟ ವ್ಯವಸ್ಥೆಯ ಸರ್ಕಾರ ತೋರುತ್ತಾ ಬಂದಿದೆ. ಅದರಲ್ಲಿ ಹಿಂದಿ ಭಾಷೆಯ ಹೇರಿಕೆಯೂ ಪ್ರಮುಖವಾದದ್ದು. ಭಾರತದಲ್ಲಿ ಹಿಂದಿ ಭಾಷೆಯನ್ನು ಉತ್ತೇಜಿಸುವ ಸಲುವಾಗಿ 1953ರಿಂದ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿವಸವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಆರಂಭಿಸಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತೀಯರ ಮೇಲೆ ಹಿಂದಿ ಹೇರುವ ಕೆಲಸಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕುಮ್ಮಕ್ಕು ನೀಡುತ್ತಾ ಬಂದಿದೆ.

ಕೇಂದ್ರದ ಹಿಂದಿ ಹೇರಿಕೆಯ ಧೋರಣೆ ಹೆಚ್ಚಾದಂತೆ, ಕನ್ನಡಿಗರು ಹಿಂದಿ ಹೇರಿಕೆಯನ್ನು ಕಠುವಾಗಿ ವಿರೋಧಿಸುತ್ತಾ ಬಂದಿದ್ದಾರೆ. ನಮ್ಮದು ಹಿಂದಿ ಒಕ್ಕೂಟ ರಾಷ್ಟ್ರವಲ್ಲ. ಎಲ್ಲಾ ಭಾಷೆಗಳಿಗೂ ತಮ್ಮದೇ ಆದ ಮಹತ್ವವಿದೆ. ಹಾಗಾಗಿ ನಮ್ಮೆಲ್ಲರ ತೆರಿಗೆ ಹಣದಿಂದ ಕೇವಲ ಒಂದು ಭಾಷೆಯ ಪ್ರಚಾರ ಮತ್ತು ಹೇರಿಕೆ ಮಾಡುವುದನ್ನು ನಾವು ಒಪ್ಪುವುದಿಲ್ಲ ಎಂದಿರುವ ಕನ್ನಡಿಗರು, ಹಿಂದಿ ಬಿಟ್ಟು ಉಳಿದ ಭಾಷೆಗಳ ಪ್ರಚಾರಕ್ಕೆ ಕೇಂದ್ರ ಸರ್ಕಾರವೇಕೆ ಮುಂದಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಿಂದಿ ದಿನವನ್ನು ಭಾರತೀಯ ಭಾಷಾ ದಿನವನ್ನಾ ಆಚರಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 5 ರಂದು ಟ್ವಿಟರ್ ಅಭಿಯಾನ ಕೂಡ ಮಾಡಲಾಗಿದೆ. ಆದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿಕೊಂಡಿಲ್ಲ. ಹಾಗಾಗಿ ಆಕ್ರೋಶಗೊಂಡಿರುವ ಕನ್ನಡಿಗರು ಮತ್ತು ಕನ್ನಡಪರ ಸಂಘಟನೆಗಳು ಹಿಂದಿ ಭಾಷಾ ದಿನವಾದ ಸೆಪ್ಟೆಂಬರ್ 14ನ್ನು ಕನ್ನಡಿಗರ ಕರಾಳ ದಿನವನ್ನಾಗಿ ಆಚರಿಸಲು ಮುಂದಾಗಿವೆ. ಹೋರಾಟದ ಸಮಾವೇಶವನ್ನು ಕರ್ನಾಟಕ ರಕ್ಷಣಾ ಸೇನೆ, ಕರುನಾಡ ಸೇವಕರು ಸಂಘಟನೆ, ಕರುನಾಡ ಯುವಕರು ಸಂಘಟನೆ ಮತ್ತು ರಣಧೀರ ಪಡೆ ಸಂಘಟನೆಗಳು ಜೊತೆಗೂಡಿ ಆಯೋಜಿಸುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆ ಬಳಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ಮಟ್ಟದ ವಿರೋಧ ವ್ಯಕ್ತವಾದ ಬಳಿಕ ಮೆಟ್ರೋದಲ್ಲಿ ಹಿಂದಿ ಭಾಷೆಯನ್ನು ಹಿಂಪಡೆಯಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

“ನಾವು ಎಲ್ಲಾ ಭಾಷೆಯನ್ನು ಸಮಾನವಾಗಿ ಕಾಣುತ್ತೇವೆ. ಅಂತೆಯೇ ಹಿಂದಿಯನ್ನು ಒಂದು ಭಾಷೆಯಾಗಿ ಗೌರವಿಸುತ್ತೇವೆ. ಆದರೆ ನಮ್ಮ ಭಾಷೆಯ ಮೇಲೆ ಸವಾರಿ ಮಾಡಲು ಬಂದರೆ ನಾವು ಸಹಿಸುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಿಗರೇ ಇದರ ರುವಾರಿಗಳು” ಎಂದು ಕನ್ನಡಪರ ಹೋರಾಟಗಾರ ಹರೀಶ್‍ಕುಮಾರ್ ಬಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...