Homeಕರ್ನಾಟಕಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ...

ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ಸಜ್ಜು

ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ

- Advertisement -
- Advertisement -

ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿನವನ್ನು ಒಕ್ಕೂಟದ ಸರ್ಕಾರ ಆಚರಿಸುತ್ತಾ ಬಂದಿದೆ. ಈ ಹಿಂದಿ ದಿನದ ಆಚರಣೆಯನ್ನು ರದ್ದುಗೊಳಿಸುವಂತೆ ಹಲವಾರು ಹೋರಾಟಗಳು ನಡೆಯುತ್ತಿವೆ. ಆದರೂ ತನ್ನ ನಿಲುವನ್ನು ಬದಲಾಯಿಸಿಕೊಳ್ಳದ ಸರ್ಕಾರದ ಧೋರಣೆಯನ್ನು ವಿರೋಧಿಸಿ ಹಿಂದಿ ದಿನವನ್ನು ರದ್ದು ಮಾಡುವಂತೆ ಆಗ್ರಹಿಸಿ ಕನ್ನಡಿಗರು ಕರಾಳ ದಿನಾಚರಣೆಗೆ ಮುಂದಾಗಿದ್ದಾರೆ. ನಾಳೆ ಬೆಂಗಳೂರಿನಲ್ಲಿರುವ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲು ಸಿದ್ದತೆ ನಡೆಸಿದ್ದಾರೆ. ಕೇವಲ ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಿದ್ದು, ಹೋರಾಟಗಾರರ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಆಗ್ರಹ ಪತ್ರವನ್ನು ನೀಡಲಿದ್ದಾರೆ.

ಭಾರತ ಒಂದು ವೈವಿದ್ಯತೆಯಿಂದ ಕೂಡಿದ ಒಕ್ಕೂಟ ರಾಷ್ಟ್ರ. ಬಹುತ್ವದಿಂದ ಕೂಡಿರುವ ಈ ದೇಶದಲ್ಲಿ ಎಲ್ಲಾ ಸಂಸ್ಕøತಿ, ಭಾಷೆ, ಜನಾಂಗ, ಆಚಾರ-ವಿಚಾರಗಳನ್ನೂ ಸಮಾನ ಗೌರವದಿಂದ ಆಚರಿಸುವ ಸ್ವಾತಂತ್ರ್ಯವನ್ನು ಎಲ್ಲಾ ವರ್ಗಗಳಿಗೂ ಸಂವಿಧಾನಿಕವಾಗಿ ನೀಡಲಾಗಿದೆ. ಆದರೆ ಹಲವಾರು ವರ್ಷಗಳಿಂದ ಉತ್ತರ ಭಾರತದ ಸಂಸ್ಕøತಿಯನ್ನು ದಕ್ಷಿಣ ಭಾರತೀಯರ ಮೇಲೆ ಬಲವಂತವಾಗಿ ಹೇರುವ ಧೋರಣೆಯನ್ನು ಒಕ್ಕೂಟ ವ್ಯವಸ್ಥೆಯ ಸರ್ಕಾರ ತೋರುತ್ತಾ ಬಂದಿದೆ. ಅದರಲ್ಲಿ ಹಿಂದಿ ಭಾಷೆಯ ಹೇರಿಕೆಯೂ ಪ್ರಮುಖವಾದದ್ದು. ಭಾರತದಲ್ಲಿ ಹಿಂದಿ ಭಾಷೆಯನ್ನು ಉತ್ತೇಜಿಸುವ ಸಲುವಾಗಿ 1953ರಿಂದ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿವಸವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಆರಂಭಿಸಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತೀಯರ ಮೇಲೆ ಹಿಂದಿ ಹೇರುವ ಕೆಲಸಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕುಮ್ಮಕ್ಕು ನೀಡುತ್ತಾ ಬಂದಿದೆ.

ಕೇಂದ್ರದ ಹಿಂದಿ ಹೇರಿಕೆಯ ಧೋರಣೆ ಹೆಚ್ಚಾದಂತೆ, ಕನ್ನಡಿಗರು ಹಿಂದಿ ಹೇರಿಕೆಯನ್ನು ಕಠುವಾಗಿ ವಿರೋಧಿಸುತ್ತಾ ಬಂದಿದ್ದಾರೆ. ನಮ್ಮದು ಹಿಂದಿ ಒಕ್ಕೂಟ ರಾಷ್ಟ್ರವಲ್ಲ. ಎಲ್ಲಾ ಭಾಷೆಗಳಿಗೂ ತಮ್ಮದೇ ಆದ ಮಹತ್ವವಿದೆ. ಹಾಗಾಗಿ ನಮ್ಮೆಲ್ಲರ ತೆರಿಗೆ ಹಣದಿಂದ ಕೇವಲ ಒಂದು ಭಾಷೆಯ ಪ್ರಚಾರ ಮತ್ತು ಹೇರಿಕೆ ಮಾಡುವುದನ್ನು ನಾವು ಒಪ್ಪುವುದಿಲ್ಲ ಎಂದಿರುವ ಕನ್ನಡಿಗರು, ಹಿಂದಿ ಬಿಟ್ಟು ಉಳಿದ ಭಾಷೆಗಳ ಪ್ರಚಾರಕ್ಕೆ ಕೇಂದ್ರ ಸರ್ಕಾರವೇಕೆ ಮುಂದಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಿಂದಿ ದಿನವನ್ನು ಭಾರತೀಯ ಭಾಷಾ ದಿನವನ್ನಾ ಆಚರಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 5 ರಂದು ಟ್ವಿಟರ್ ಅಭಿಯಾನ ಕೂಡ ಮಾಡಲಾಗಿದೆ. ಆದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿಕೊಂಡಿಲ್ಲ. ಹಾಗಾಗಿ ಆಕ್ರೋಶಗೊಂಡಿರುವ ಕನ್ನಡಿಗರು ಮತ್ತು ಕನ್ನಡಪರ ಸಂಘಟನೆಗಳು ಹಿಂದಿ ಭಾಷಾ ದಿನವಾದ ಸೆಪ್ಟೆಂಬರ್ 14ನ್ನು ಕನ್ನಡಿಗರ ಕರಾಳ ದಿನವನ್ನಾಗಿ ಆಚರಿಸಲು ಮುಂದಾಗಿವೆ. ಹೋರಾಟದ ಸಮಾವೇಶವನ್ನು ಕರ್ನಾಟಕ ರಕ್ಷಣಾ ಸೇನೆ, ಕರುನಾಡ ಸೇವಕರು ಸಂಘಟನೆ, ಕರುನಾಡ ಯುವಕರು ಸಂಘಟನೆ ಮತ್ತು ರಣಧೀರ ಪಡೆ ಸಂಘಟನೆಗಳು ಜೊತೆಗೂಡಿ ಆಯೋಜಿಸುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆ ಬಳಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ಮಟ್ಟದ ವಿರೋಧ ವ್ಯಕ್ತವಾದ ಬಳಿಕ ಮೆಟ್ರೋದಲ್ಲಿ ಹಿಂದಿ ಭಾಷೆಯನ್ನು ಹಿಂಪಡೆಯಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

“ನಾವು ಎಲ್ಲಾ ಭಾಷೆಯನ್ನು ಸಮಾನವಾಗಿ ಕಾಣುತ್ತೇವೆ. ಅಂತೆಯೇ ಹಿಂದಿಯನ್ನು ಒಂದು ಭಾಷೆಯಾಗಿ ಗೌರವಿಸುತ್ತೇವೆ. ಆದರೆ ನಮ್ಮ ಭಾಷೆಯ ಮೇಲೆ ಸವಾರಿ ಮಾಡಲು ಬಂದರೆ ನಾವು ಸಹಿಸುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಿಗರೇ ಇದರ ರುವಾರಿಗಳು” ಎಂದು ಕನ್ನಡಪರ ಹೋರಾಟಗಾರ ಹರೀಶ್‍ಕುಮಾರ್ ಬಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...