Homeಕರ್ನಾಟಕಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ...

ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ಸಜ್ಜು

ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ

- Advertisement -
- Advertisement -

ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿನವನ್ನು ಒಕ್ಕೂಟದ ಸರ್ಕಾರ ಆಚರಿಸುತ್ತಾ ಬಂದಿದೆ. ಈ ಹಿಂದಿ ದಿನದ ಆಚರಣೆಯನ್ನು ರದ್ದುಗೊಳಿಸುವಂತೆ ಹಲವಾರು ಹೋರಾಟಗಳು ನಡೆಯುತ್ತಿವೆ. ಆದರೂ ತನ್ನ ನಿಲುವನ್ನು ಬದಲಾಯಿಸಿಕೊಳ್ಳದ ಸರ್ಕಾರದ ಧೋರಣೆಯನ್ನು ವಿರೋಧಿಸಿ ಹಿಂದಿ ದಿನವನ್ನು ರದ್ದು ಮಾಡುವಂತೆ ಆಗ್ರಹಿಸಿ ಕನ್ನಡಿಗರು ಕರಾಳ ದಿನಾಚರಣೆಗೆ ಮುಂದಾಗಿದ್ದಾರೆ. ನಾಳೆ ಬೆಂಗಳೂರಿನಲ್ಲಿರುವ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲು ಸಿದ್ದತೆ ನಡೆಸಿದ್ದಾರೆ. ಕೇವಲ ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಿದ್ದು, ಹೋರಾಟಗಾರರ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಆಗ್ರಹ ಪತ್ರವನ್ನು ನೀಡಲಿದ್ದಾರೆ.

ಭಾರತ ಒಂದು ವೈವಿದ್ಯತೆಯಿಂದ ಕೂಡಿದ ಒಕ್ಕೂಟ ರಾಷ್ಟ್ರ. ಬಹುತ್ವದಿಂದ ಕೂಡಿರುವ ಈ ದೇಶದಲ್ಲಿ ಎಲ್ಲಾ ಸಂಸ್ಕøತಿ, ಭಾಷೆ, ಜನಾಂಗ, ಆಚಾರ-ವಿಚಾರಗಳನ್ನೂ ಸಮಾನ ಗೌರವದಿಂದ ಆಚರಿಸುವ ಸ್ವಾತಂತ್ರ್ಯವನ್ನು ಎಲ್ಲಾ ವರ್ಗಗಳಿಗೂ ಸಂವಿಧಾನಿಕವಾಗಿ ನೀಡಲಾಗಿದೆ. ಆದರೆ ಹಲವಾರು ವರ್ಷಗಳಿಂದ ಉತ್ತರ ಭಾರತದ ಸಂಸ್ಕøತಿಯನ್ನು ದಕ್ಷಿಣ ಭಾರತೀಯರ ಮೇಲೆ ಬಲವಂತವಾಗಿ ಹೇರುವ ಧೋರಣೆಯನ್ನು ಒಕ್ಕೂಟ ವ್ಯವಸ್ಥೆಯ ಸರ್ಕಾರ ತೋರುತ್ತಾ ಬಂದಿದೆ. ಅದರಲ್ಲಿ ಹಿಂದಿ ಭಾಷೆಯ ಹೇರಿಕೆಯೂ ಪ್ರಮುಖವಾದದ್ದು. ಭಾರತದಲ್ಲಿ ಹಿಂದಿ ಭಾಷೆಯನ್ನು ಉತ್ತೇಜಿಸುವ ಸಲುವಾಗಿ 1953ರಿಂದ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿವಸವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಆರಂಭಿಸಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತೀಯರ ಮೇಲೆ ಹಿಂದಿ ಹೇರುವ ಕೆಲಸಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕುಮ್ಮಕ್ಕು ನೀಡುತ್ತಾ ಬಂದಿದೆ.

ಕೇಂದ್ರದ ಹಿಂದಿ ಹೇರಿಕೆಯ ಧೋರಣೆ ಹೆಚ್ಚಾದಂತೆ, ಕನ್ನಡಿಗರು ಹಿಂದಿ ಹೇರಿಕೆಯನ್ನು ಕಠುವಾಗಿ ವಿರೋಧಿಸುತ್ತಾ ಬಂದಿದ್ದಾರೆ. ನಮ್ಮದು ಹಿಂದಿ ಒಕ್ಕೂಟ ರಾಷ್ಟ್ರವಲ್ಲ. ಎಲ್ಲಾ ಭಾಷೆಗಳಿಗೂ ತಮ್ಮದೇ ಆದ ಮಹತ್ವವಿದೆ. ಹಾಗಾಗಿ ನಮ್ಮೆಲ್ಲರ ತೆರಿಗೆ ಹಣದಿಂದ ಕೇವಲ ಒಂದು ಭಾಷೆಯ ಪ್ರಚಾರ ಮತ್ತು ಹೇರಿಕೆ ಮಾಡುವುದನ್ನು ನಾವು ಒಪ್ಪುವುದಿಲ್ಲ ಎಂದಿರುವ ಕನ್ನಡಿಗರು, ಹಿಂದಿ ಬಿಟ್ಟು ಉಳಿದ ಭಾಷೆಗಳ ಪ್ರಚಾರಕ್ಕೆ ಕೇಂದ್ರ ಸರ್ಕಾರವೇಕೆ ಮುಂದಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಿಂದಿ ದಿನವನ್ನು ಭಾರತೀಯ ಭಾಷಾ ದಿನವನ್ನಾ ಆಚರಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 5 ರಂದು ಟ್ವಿಟರ್ ಅಭಿಯಾನ ಕೂಡ ಮಾಡಲಾಗಿದೆ. ಆದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿಕೊಂಡಿಲ್ಲ. ಹಾಗಾಗಿ ಆಕ್ರೋಶಗೊಂಡಿರುವ ಕನ್ನಡಿಗರು ಮತ್ತು ಕನ್ನಡಪರ ಸಂಘಟನೆಗಳು ಹಿಂದಿ ಭಾಷಾ ದಿನವಾದ ಸೆಪ್ಟೆಂಬರ್ 14ನ್ನು ಕನ್ನಡಿಗರ ಕರಾಳ ದಿನವನ್ನಾಗಿ ಆಚರಿಸಲು ಮುಂದಾಗಿವೆ. ಹೋರಾಟದ ಸಮಾವೇಶವನ್ನು ಕರ್ನಾಟಕ ರಕ್ಷಣಾ ಸೇನೆ, ಕರುನಾಡ ಸೇವಕರು ಸಂಘಟನೆ, ಕರುನಾಡ ಯುವಕರು ಸಂಘಟನೆ ಮತ್ತು ರಣಧೀರ ಪಡೆ ಸಂಘಟನೆಗಳು ಜೊತೆಗೂಡಿ ಆಯೋಜಿಸುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆ ಬಳಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ಮಟ್ಟದ ವಿರೋಧ ವ್ಯಕ್ತವಾದ ಬಳಿಕ ಮೆಟ್ರೋದಲ್ಲಿ ಹಿಂದಿ ಭಾಷೆಯನ್ನು ಹಿಂಪಡೆಯಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

“ನಾವು ಎಲ್ಲಾ ಭಾಷೆಯನ್ನು ಸಮಾನವಾಗಿ ಕಾಣುತ್ತೇವೆ. ಅಂತೆಯೇ ಹಿಂದಿಯನ್ನು ಒಂದು ಭಾಷೆಯಾಗಿ ಗೌರವಿಸುತ್ತೇವೆ. ಆದರೆ ನಮ್ಮ ಭಾಷೆಯ ಮೇಲೆ ಸವಾರಿ ಮಾಡಲು ಬಂದರೆ ನಾವು ಸಹಿಸುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಿಗರೇ ಇದರ ರುವಾರಿಗಳು” ಎಂದು ಕನ್ನಡಪರ ಹೋರಾಟಗಾರ ಹರೀಶ್‍ಕುಮಾರ್ ಬಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...