Homeಕರ್ನಾಟಕಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ...

ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ಸಜ್ಜು

ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ

- Advertisement -
- Advertisement -

ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿನವನ್ನು ಒಕ್ಕೂಟದ ಸರ್ಕಾರ ಆಚರಿಸುತ್ತಾ ಬಂದಿದೆ. ಈ ಹಿಂದಿ ದಿನದ ಆಚರಣೆಯನ್ನು ರದ್ದುಗೊಳಿಸುವಂತೆ ಹಲವಾರು ಹೋರಾಟಗಳು ನಡೆಯುತ್ತಿವೆ. ಆದರೂ ತನ್ನ ನಿಲುವನ್ನು ಬದಲಾಯಿಸಿಕೊಳ್ಳದ ಸರ್ಕಾರದ ಧೋರಣೆಯನ್ನು ವಿರೋಧಿಸಿ ಹಿಂದಿ ದಿನವನ್ನು ರದ್ದು ಮಾಡುವಂತೆ ಆಗ್ರಹಿಸಿ ಕನ್ನಡಿಗರು ಕರಾಳ ದಿನಾಚರಣೆಗೆ ಮುಂದಾಗಿದ್ದಾರೆ. ನಾಳೆ ಬೆಂಗಳೂರಿನಲ್ಲಿರುವ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲು ಸಿದ್ದತೆ ನಡೆಸಿದ್ದಾರೆ. ಕೇವಲ ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಿದ್ದು, ಹೋರಾಟಗಾರರ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಆಗ್ರಹ ಪತ್ರವನ್ನು ನೀಡಲಿದ್ದಾರೆ.

ಭಾರತ ಒಂದು ವೈವಿದ್ಯತೆಯಿಂದ ಕೂಡಿದ ಒಕ್ಕೂಟ ರಾಷ್ಟ್ರ. ಬಹುತ್ವದಿಂದ ಕೂಡಿರುವ ಈ ದೇಶದಲ್ಲಿ ಎಲ್ಲಾ ಸಂಸ್ಕøತಿ, ಭಾಷೆ, ಜನಾಂಗ, ಆಚಾರ-ವಿಚಾರಗಳನ್ನೂ ಸಮಾನ ಗೌರವದಿಂದ ಆಚರಿಸುವ ಸ್ವಾತಂತ್ರ್ಯವನ್ನು ಎಲ್ಲಾ ವರ್ಗಗಳಿಗೂ ಸಂವಿಧಾನಿಕವಾಗಿ ನೀಡಲಾಗಿದೆ. ಆದರೆ ಹಲವಾರು ವರ್ಷಗಳಿಂದ ಉತ್ತರ ಭಾರತದ ಸಂಸ್ಕøತಿಯನ್ನು ದಕ್ಷಿಣ ಭಾರತೀಯರ ಮೇಲೆ ಬಲವಂತವಾಗಿ ಹೇರುವ ಧೋರಣೆಯನ್ನು ಒಕ್ಕೂಟ ವ್ಯವಸ್ಥೆಯ ಸರ್ಕಾರ ತೋರುತ್ತಾ ಬಂದಿದೆ. ಅದರಲ್ಲಿ ಹಿಂದಿ ಭಾಷೆಯ ಹೇರಿಕೆಯೂ ಪ್ರಮುಖವಾದದ್ದು. ಭಾರತದಲ್ಲಿ ಹಿಂದಿ ಭಾಷೆಯನ್ನು ಉತ್ತೇಜಿಸುವ ಸಲುವಾಗಿ 1953ರಿಂದ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿವಸವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಆರಂಭಿಸಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತೀಯರ ಮೇಲೆ ಹಿಂದಿ ಹೇರುವ ಕೆಲಸಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕುಮ್ಮಕ್ಕು ನೀಡುತ್ತಾ ಬಂದಿದೆ.

ಕೇಂದ್ರದ ಹಿಂದಿ ಹೇರಿಕೆಯ ಧೋರಣೆ ಹೆಚ್ಚಾದಂತೆ, ಕನ್ನಡಿಗರು ಹಿಂದಿ ಹೇರಿಕೆಯನ್ನು ಕಠುವಾಗಿ ವಿರೋಧಿಸುತ್ತಾ ಬಂದಿದ್ದಾರೆ. ನಮ್ಮದು ಹಿಂದಿ ಒಕ್ಕೂಟ ರಾಷ್ಟ್ರವಲ್ಲ. ಎಲ್ಲಾ ಭಾಷೆಗಳಿಗೂ ತಮ್ಮದೇ ಆದ ಮಹತ್ವವಿದೆ. ಹಾಗಾಗಿ ನಮ್ಮೆಲ್ಲರ ತೆರಿಗೆ ಹಣದಿಂದ ಕೇವಲ ಒಂದು ಭಾಷೆಯ ಪ್ರಚಾರ ಮತ್ತು ಹೇರಿಕೆ ಮಾಡುವುದನ್ನು ನಾವು ಒಪ್ಪುವುದಿಲ್ಲ ಎಂದಿರುವ ಕನ್ನಡಿಗರು, ಹಿಂದಿ ಬಿಟ್ಟು ಉಳಿದ ಭಾಷೆಗಳ ಪ್ರಚಾರಕ್ಕೆ ಕೇಂದ್ರ ಸರ್ಕಾರವೇಕೆ ಮುಂದಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಿಂದಿ ದಿನವನ್ನು ಭಾರತೀಯ ಭಾಷಾ ದಿನವನ್ನಾ ಆಚರಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 5 ರಂದು ಟ್ವಿಟರ್ ಅಭಿಯಾನ ಕೂಡ ಮಾಡಲಾಗಿದೆ. ಆದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿಕೊಂಡಿಲ್ಲ. ಹಾಗಾಗಿ ಆಕ್ರೋಶಗೊಂಡಿರುವ ಕನ್ನಡಿಗರು ಮತ್ತು ಕನ್ನಡಪರ ಸಂಘಟನೆಗಳು ಹಿಂದಿ ಭಾಷಾ ದಿನವಾದ ಸೆಪ್ಟೆಂಬರ್ 14ನ್ನು ಕನ್ನಡಿಗರ ಕರಾಳ ದಿನವನ್ನಾಗಿ ಆಚರಿಸಲು ಮುಂದಾಗಿವೆ. ಹೋರಾಟದ ಸಮಾವೇಶವನ್ನು ಕರ್ನಾಟಕ ರಕ್ಷಣಾ ಸೇನೆ, ಕರುನಾಡ ಸೇವಕರು ಸಂಘಟನೆ, ಕರುನಾಡ ಯುವಕರು ಸಂಘಟನೆ ಮತ್ತು ರಣಧೀರ ಪಡೆ ಸಂಘಟನೆಗಳು ಜೊತೆಗೂಡಿ ಆಯೋಜಿಸುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆ ಬಳಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ಮಟ್ಟದ ವಿರೋಧ ವ್ಯಕ್ತವಾದ ಬಳಿಕ ಮೆಟ್ರೋದಲ್ಲಿ ಹಿಂದಿ ಭಾಷೆಯನ್ನು ಹಿಂಪಡೆಯಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

“ನಾವು ಎಲ್ಲಾ ಭಾಷೆಯನ್ನು ಸಮಾನವಾಗಿ ಕಾಣುತ್ತೇವೆ. ಅಂತೆಯೇ ಹಿಂದಿಯನ್ನು ಒಂದು ಭಾಷೆಯಾಗಿ ಗೌರವಿಸುತ್ತೇವೆ. ಆದರೆ ನಮ್ಮ ಭಾಷೆಯ ಮೇಲೆ ಸವಾರಿ ಮಾಡಲು ಬಂದರೆ ನಾವು ಸಹಿಸುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಿಗರೇ ಇದರ ರುವಾರಿಗಳು” ಎಂದು ಕನ್ನಡಪರ ಹೋರಾಟಗಾರ ಹರೀಶ್‍ಕುಮಾರ್ ಬಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...