Homeಅಂಕಣಗಳುಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

- Advertisement -
- Advertisement -

ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ, ದಾಖಲೆ-ದಸ್ತಾವೇಜುಗಳು, ಸಂಸದೀಯ ಚರ್ಚೆಗಳು ಮತ್ತಿತರೆ ಅಧಿಕೃತ ಸೀಮಿತ ಉದ್ದೇಶಗಳಿಗೆ ಬಳಸಲಾಗುವ ಭಾಷೆ.

ಬ್ರಿಟಿಷ್ ಭಾರತದಲ್ಲಿ ಇಂಗ್ಲಿಷ್ ಆಡಳಿತ ಭಾಷೆಯಾಗಿತ್ತು. ಈ ಭಾಷೆಯನ್ನೇ ಮುಂದುವರಿಸಬೇಕೇ ಅಥವಾ ಆ ಜಾಗಕ್ಕೆ ಹಿಂದಿಯನ್ನು ತರಬೇಕೇ ಎಂದು ಸಂವಿಧಾನ ರಚನಾಸಭೆಯಲ್ಲಿ ಕಾವೇರಿದ ಚರ್ಚೆಗಳು ನಡೆದವು. ಕಡೆಗೆ ’ಮುನ್ಷೀ-ಅಯ್ಯಂಗಾರ್’ ರಾಜೀ ಸೂತ್ರವೊಂದನ್ನು ಅಳವಡಿಸಿಕೊಳ್ಳಲಾಯಿತು. ಈ ಸೂತ್ರದ ಪ್ರಕಾರ ಮೊದಲ 15 ವರ್ಷಗಳ ಕಾಲ ಇಂಗ್ಲಿಷನ್ನೇ ಆಡಳಿತ ಭಾಷೆಯಾಗಿ ಬಳಸಲಾಗುವುದು. ಆ ನಂತರ ಇಂಗ್ಲಿಷಿನ ಸ್ಥಾನವನ್ನು ಹಿಂದೀ ತುಂಬುವುದು. 15 ವರ್ಷಗಳ ನಂತರ ಇಂಗ್ಲಿಷಿನ ಮುಂದುವರಿಕೆಯ ಆಯ್ಕೆಯನ್ನೂ ಉಳಿಸಿಕೊಳ್ಳಲಾಗಿತ್ತು. 1965ರಲ್ಲಿ 15 ವರ್ಷಗಳು ತುಂಬಿದಾಗ ಇಂಗ್ಲಿಷಿನ ಜಾಗಕ್ಕೆ ಹಿಂದಿಯನ್ನು ತರುವ ಪ್ರಸ್ತಾವಗಳಿಗೆ ದಕ್ಷಿಣ ಭಾರತೀಯ ರಾಜ್ಯಗಳಿಂದ, ವಿಶೇಷವಾಗಿ ತಮಿಳುನಾಡಿನಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹಿಂದಿಯೇತರ ರಾಜ್ಯಗಳು ಹಿಂದಿಯನ್ನು ಆಡಳಿತ ಭಾಷೆಯಾಗಿ ಒಪ್ಪಿಕೊಳ್ಳುವ ತನಕ ಹಿಂದಿಯೊಂದಿಗೆ ಇಂಗ್ಲಿಷನ್ನೂ ಉಳಿಸಿಕೊಳ್ಳುವುದಾಗಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಭರವಸೆ ನೀಡಿದರು. (ಆದರೆ ವಿಶೇಷವಾಗಿ ಬಿಜೆಪಿ ಸರ್ಕಾರ ಈ ಭರವಸೆಯನ್ನು ನಿರ್ಲಕ್ಷಿಸಿ ಹಿಂದಿ ಹೇರಿಕೆಯ ಸತತ ಪ್ರಯತ್ನಗಳನ್ನು ನಡೆಸುತ್ತಲೇ ಬಂದಿದೆ). ಹೀಗಾಗಿ ಕೇಂದ್ರ ಮತ್ತು ರಾಜ್ಯಗಳ ನಡುವಣ ಅಧಿಕೃತ ಭಾಷೆಗಳಾಗಿ ಇಂಗ್ಲಿಷ್ ಮತ್ತು ಹಿಂದಿ ಎರಡೂ ಮುಂದುವರಿದಿವೆ. ರಾಜ್ಯಗಳು ಹಿಂದಿ ಅಥವಾ ತಮ್ಮ ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಅಳವಡಿಸಿಕೊಳ್ಳುವ ಅವಕಾಶವನ್ನು ಸಂವಿಧಾನವು ನೀಡಿತು. ಸಂವಿಧಾನದ ಪ್ರಕಾರ ಹೈಕೋರ್ಟುಗಳು ಮತ್ತು ಸುಪ್ರೀಮ್ ಕೋರ್ಟಿನ ಕಲಾಪದ ಭಾಷೆ, ಕೇಂದ್ರ ಮತ್ತು ರಾಜ್ಯಗಳ ಶಾಸಕಾಂಗ ದಸ್ತಾವೇಜು ಹಾಗೂ ಎರಡು ರಾಜ್ಯಗಳ ನಡುವೆ ಕೇಂದ್ರ ಮತ್ತು ರಾಜ್ಯಗಳ ನಡುವಣ ಸಂಪರ್ಕ ಭಾಷೆ ಇಂಗ್ಲಿಷೇ ಆಗಿದೆ. ಸಂವಿಧಾನದ ಎಂಟನೆಯ ಷೆಡ್ಯೂಲು ಒಟ್ಟು 22 ಭಾಷೆಗಳನ್ನು ಗುರುತಿಸಿ ಪಟ್ಟಿ ಮಾಡಿದೆ. ಇವುಗಳ ಪೈಕಿ ಯಾವುದೇ ಭಾಷೆ ಅಥವಾ ಭಾಷೆಗಳನ್ನು ರಾಜ್ಯಗಳು ತಮ್ಮ ಆಡಳಿತ ಭಾಷೆಗಳನ್ನಾಗಿ ಆರಿಸಿಕೊಳ್ಳಬಹುದು.

ಎಂಟನೆಯ ಷೆಡ್ಯೂಲಿನಿಂದ ಹೊರಗಿಟ್ಟಿರುವ ದೊಡ್ಡ ಸಂಖ್ಯೆಯ ಮಾತೃಭಾಷೆಗಳನ್ನು ’ನುಡಿಗಟ್ಟುಗಳು’, ’ಬುಡಕಟ್ಟು ಭಾಷೆಗಳು’, ’ಸಣ್ಣ ಭಾಷೆ’ಗಳು ಎಂದು ಹೆಸರಿಟ್ಟು ಕರೆದು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇಂಗ್ಲಿಷಿನ ಜೊತೆಗೆ ಹಿಂದಿ ಒಂದು ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ. ರಾಷ್ಟ್ರಭಾಷೆಯ ಕುರಿತು ಸಂವಿಧಾನ ಮೌನವಹಿಸಿದೆ.

ಹಿಂದಿಯನ್ನು ರಾಷ್ಟ್ರಭಾಷೆ ಎಂದು ಘೋಷಿಸಿದರೆ ದೇಶದ ಎಲ್ಲ ನಾಗರಿಕರು ಆ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕಾಗುತ್ತದೆ. ಇಂತಹ ಸ್ಥಿತಿ ಉತ್ತರ ಭಾರತೀಯರಿಗೆ ಅನುಕೂಲದ್ದೂ, ದಕ್ಷಿಣದವರಿಗೆ ಪ್ರತಿಕೂಲದ್ದೂ ಆಗಿ ಪರಿಣಮಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯೇ ರಾಷ್ಟ್ರಭಾಷೆ ಎಂದು ಹಿಂದಿ ಚಿತ್ರನಟ ಅಜಯ್ ದೇವಗನ್ ಅವರ ಆಧಾರರಹಿತ ಘೋಷಣೆಗೆ ತಕ್ಕ ಮಾರುತ್ತರ ನೀಡಿದ್ದಾರೆ ಕಿಚ್ಚ ಸುದೀಪ್. ಸಾಮಾಜಿಕ ಜಾಲತಾಣದಲ್ಲಿ ನಡೆದ ಈ ಚರ್ಚೆಗೆ ರಾಜಕಾರಣಿಗಳೂ ದನಿಗೂಡಿಸಿದ್ದಾರೆ.

’ಹಿಂದಿ ಭಾಷೆಯನ್ನು ಪ್ರೀತಿ ಮಾಡದವರು ವಿದೇಶೀಯರು. ಅವರು ಭಾರತವನ್ನು ಬಿಟ್ಟು ಇನ್ನೆಲ್ಲಿಗಾದರೂ ತೊಲಗಬೇಕು’ ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸಂಪುಟದ ಮಂತ್ರಿ ಸಂಜಯ ನಿಷಾದ್ ಅಪ್ಪಣೆ ಕೊಡಿಸಿದ್ದಾರೆ. ’ಭಾರತದಲ್ಲಿ ಇರಬೇಕಿದ್ದರೆ ಹಿಂದಿಯನ್ನು ಪ್ರೀತಿಸಬೇಕು. ಪ್ರಾದೇಶಿಕ ಭಾಷೆಗಳನ್ನು ನಾವು ಗೌರವಿಸುತ್ತೇವೆ. ಆದರೆ ಸಂವಿಧಾನವು ಈ ದೇಶವನ್ನು ಹಿಂದುಸ್ತಾನ ಎಂದು ಕರೆದಿದೆ. ಹಿಂದುಸ್ತಾನವು ಹಿಂದಿ ಭಾಷಿಕರದು. ಹಿಂದಿ ಮಾತನಾಡದವರಿಗೆ ಹಿಂದುಸ್ತಾನದಲ್ಲಿ ಜಾಗವಿಲ್ಲ’ ಎಂದು ಅವರು ಸಾರಿದ್ದಾರೆ. ಹಾಗಿದ್ದರೆ ಹಿಂದಿ ಬಾರದ ಮತ್ತು ಕಲಿಯಲು ಬಯಸದ ಬಹುತೇಕ ದಕ್ಷಿಣ ಭಾರತೀಯರನ್ನು ಎಲ್ಲಿಗೆ ತೊಲಗಿಸಬೇಕೆಂದು ನಿಷಾದ್ ಮತ್ತು ಅವರ ಈ ನಿಲುವನ್ನು ಬೆಂಬಲಿಸುವವರು ಗಂಭೀರವಾಗಿ ಆಲೋಚಿಸಬೇಕಿದೆ.

ಪಾಟ್ನಾ ಹೈಕೋರ್ಟ್ 2003ರಲ್ಲಿ ನೀಡಿದ ತೀರ್ಪೊಂದರಲ್ಲಿ (ಜಯಕಾಂತ ಮಿಶ್ರಾ ವರ್ಸಸ್ ಸ್ಟೇಟ್ ಅಫ್ ಬಿಹಾರ) ಹಿಂದಿ ಹೇರಿಕೆ ಕುರಿತು ಆಡಿರುವ ಈ ಮಾತುಗಳನ್ನು ಇಲ್ಲಿ ಉಲ್ಲೇಖಿಸಲೇಬೇಕಿದೆ- “ಉತ್ತರ ಭಾರತದ ಜನರು ನಾನಾ ನುಡಿಗಟ್ಟುಗಳಲ್ಲಿ ಆಡುವ ಪ್ರಮುಖ ಭಾಷೆಯನ್ನು ಆಧಾರವಾಗಿ ಇಟ್ಟುಕೊಂಡು ರಾಷ್ಟ್ರವಾದವನ್ನು ಸರ್ಕಾರ ನಡೆಸುವವರು ಮಾಡಿದರೂ ಅದು ದುರಭಿಮಾನವೇ. ತಪ್ಪನ್ನು ಯಾರು ಮಾಡಿದರೂ ಅದು ತಪ್ಪೇ. ಆಡಳಿತ ಭಾಷೆ, ರಾಷ್ಟ್ರಭಾಷೆ ಹಾಗೂ ಮಾತೃಭಾಷೆಯ ನಡುವಣ ವ್ಯತ್ಯಾಸಗಳನ್ನು ಬಿಹಾರ ಸರ್ಕಾರ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಈ ತಪ್ಪು ತಿಳಿವಳಿಕೆಯೇ ಮೊದಲ ಮೂಲಭೂತ ತಪ್ಪು. ಹಿಂದಿ ಭಾಷಿಕ ರಾಜ್ಯಗಳ ಆಡಳಿತಗಳು ಇತರೆ ಭಾಷೆಗಳನ್ನು ಎದುರಾಳಿಗಳೆಂದು ಬಗೆದಿರುವ ಸಂದರ್ಭಗಳಿವೆ. ಈ ಭಾವನೆ ವಾಸ್ತವ ಅಲ್ಲ. ಹಿಂದಿಯ ಯಜಮಾನಿಕೆಯನ್ನು ಸಮರ್ಥಿಸುತ್ತ, ಸಂವಿಧಾನವೇ ವಿಧಿಸಿರುವ ರಾಷ್ಟ್ರಭಾಷೆಯಿದು ಎಂದು ಆ ಭಾಷೆಯನ್ನು ಆಕ್ರಮಣಕಾರಿಯಾಗಿ ಹೇರುವುದು ಅತಿ ದೊಡ್ಡ ತಪ್ಪು. ಹಿಂದಿ ಮಾತನಾಡದಿರುವ ಪ್ರದೇಶಗಳಲ್ಲಿ ಒಡಕಿನ ದನಿಯನ್ನು ಹುಟ್ಟಿಸಲು ಕಾರಣವಾಗುವ ಅಂಶವಿದು. ಹಿಂದಿ ಮಾತನಾಡದಿರುವ ವ್ಯಕ್ತಿ ಕೂಡ ಹಿಂದಿ ಭಾಷಿಕ ರಾಜ್ಯಗಳ ಪೌರರಷ್ಟೇ ದೇಶಾಭಿಮಾನಿಯೂ, ರಾಷ್ಟ್ರವಾದಿಯೂ ಆಗಿರುತ್ತಾಳೆ ಅಥವಾ ಆಗಿರುತ್ತಾನೆ. ಅದನ್ನೊಂದು ಸಂಪರ್ಕ ಭಾಷೆಯಾಗಿಸಲು ಪ್ರೋತ್ಸಾಹಿಸಬೇಕು ಎಂಬುದು ಬೇರೆ ಮಾತು. ಆದರೆ ಅಂತಹ ಪ್ರಯತ್ನಗಳು ಇತರೆ ಭಾಷೆಗಳನ್ನು ಮಾತನಾಡುವ ಮತ್ತು ಆ ಭಾಷೆಗಳ ಕುರಿತು ಹೆಮ್ಮೆ ಹೊಂದಿರುವ ಭಾರತೀಯರ ಸಂವೇದನೆಗಳನ್ನು ಘಾಸಿಗೊಳಿಸುವ ಮಟ್ಟಕ್ಕೆ ಹೋಗಕೂಡದು”.

ಬಹುಭಾಷೆಗಳು, ಬಹುಮುಖೀ ಸಂಸ್ಕೃತಿಯ ದೇಶದಲ್ಲಿ ಒಂದು ನಿರ್ದಿಷ್ಟ ಭಾಷೆಯನ್ನು ರಾಷ್ಟ್ರೀಯತೆಯ ತಳಪಾಯವೆಂದು, ಸಾಂಸ್ಕೃತಿಕ ತಳಹದಿಯೆಂದೂ ಎತ್ತಿ ಕಟ್ಟಿ ಹೇರುವುದು ಜನತಾಂತ್ರಿಕ ಧೋರಣೆ ಅಲ್ಲ. ಭಾಷೆ ಎಂಬುದು ಕಡು ಅಸ್ಮಿತೆಯ ತೀವ್ರ ಭಾವನಾತ್ಮಕ ಸಂಗತಿ. ಪಾಕಿಸ್ತಾನದಿಂದ ಸಿಡಿದು ಬಾಂಗ್ಲಾ ದೇಶ ಎಂಬ ಹೊಸ ರಾಷ್ಟ್ರ ಹುಟ್ಟಿದ್ದಕ್ಕೆ ಉರ್ದು ಹೇರಿಕೆಯೇ ಮೂಲ ಕಾರಣ ಎಂಬ ಕಟು ಸತ್ಯವನ್ನು ಮರೆಯಕೂಡದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಬಲಿತ ಬಲಪಂಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...