Homeಅಂಕಣಗಳುಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

- Advertisement -
- Advertisement -

ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ, ದಾಖಲೆ-ದಸ್ತಾವೇಜುಗಳು, ಸಂಸದೀಯ ಚರ್ಚೆಗಳು ಮತ್ತಿತರೆ ಅಧಿಕೃತ ಸೀಮಿತ ಉದ್ದೇಶಗಳಿಗೆ ಬಳಸಲಾಗುವ ಭಾಷೆ.

ಬ್ರಿಟಿಷ್ ಭಾರತದಲ್ಲಿ ಇಂಗ್ಲಿಷ್ ಆಡಳಿತ ಭಾಷೆಯಾಗಿತ್ತು. ಈ ಭಾಷೆಯನ್ನೇ ಮುಂದುವರಿಸಬೇಕೇ ಅಥವಾ ಆ ಜಾಗಕ್ಕೆ ಹಿಂದಿಯನ್ನು ತರಬೇಕೇ ಎಂದು ಸಂವಿಧಾನ ರಚನಾಸಭೆಯಲ್ಲಿ ಕಾವೇರಿದ ಚರ್ಚೆಗಳು ನಡೆದವು. ಕಡೆಗೆ ’ಮುನ್ಷೀ-ಅಯ್ಯಂಗಾರ್’ ರಾಜೀ ಸೂತ್ರವೊಂದನ್ನು ಅಳವಡಿಸಿಕೊಳ್ಳಲಾಯಿತು. ಈ ಸೂತ್ರದ ಪ್ರಕಾರ ಮೊದಲ 15 ವರ್ಷಗಳ ಕಾಲ ಇಂಗ್ಲಿಷನ್ನೇ ಆಡಳಿತ ಭಾಷೆಯಾಗಿ ಬಳಸಲಾಗುವುದು. ಆ ನಂತರ ಇಂಗ್ಲಿಷಿನ ಸ್ಥಾನವನ್ನು ಹಿಂದೀ ತುಂಬುವುದು. 15 ವರ್ಷಗಳ ನಂತರ ಇಂಗ್ಲಿಷಿನ ಮುಂದುವರಿಕೆಯ ಆಯ್ಕೆಯನ್ನೂ ಉಳಿಸಿಕೊಳ್ಳಲಾಗಿತ್ತು. 1965ರಲ್ಲಿ 15 ವರ್ಷಗಳು ತುಂಬಿದಾಗ ಇಂಗ್ಲಿಷಿನ ಜಾಗಕ್ಕೆ ಹಿಂದಿಯನ್ನು ತರುವ ಪ್ರಸ್ತಾವಗಳಿಗೆ ದಕ್ಷಿಣ ಭಾರತೀಯ ರಾಜ್ಯಗಳಿಂದ, ವಿಶೇಷವಾಗಿ ತಮಿಳುನಾಡಿನಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹಿಂದಿಯೇತರ ರಾಜ್ಯಗಳು ಹಿಂದಿಯನ್ನು ಆಡಳಿತ ಭಾಷೆಯಾಗಿ ಒಪ್ಪಿಕೊಳ್ಳುವ ತನಕ ಹಿಂದಿಯೊಂದಿಗೆ ಇಂಗ್ಲಿಷನ್ನೂ ಉಳಿಸಿಕೊಳ್ಳುವುದಾಗಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಭರವಸೆ ನೀಡಿದರು. (ಆದರೆ ವಿಶೇಷವಾಗಿ ಬಿಜೆಪಿ ಸರ್ಕಾರ ಈ ಭರವಸೆಯನ್ನು ನಿರ್ಲಕ್ಷಿಸಿ ಹಿಂದಿ ಹೇರಿಕೆಯ ಸತತ ಪ್ರಯತ್ನಗಳನ್ನು ನಡೆಸುತ್ತಲೇ ಬಂದಿದೆ). ಹೀಗಾಗಿ ಕೇಂದ್ರ ಮತ್ತು ರಾಜ್ಯಗಳ ನಡುವಣ ಅಧಿಕೃತ ಭಾಷೆಗಳಾಗಿ ಇಂಗ್ಲಿಷ್ ಮತ್ತು ಹಿಂದಿ ಎರಡೂ ಮುಂದುವರಿದಿವೆ. ರಾಜ್ಯಗಳು ಹಿಂದಿ ಅಥವಾ ತಮ್ಮ ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಅಳವಡಿಸಿಕೊಳ್ಳುವ ಅವಕಾಶವನ್ನು ಸಂವಿಧಾನವು ನೀಡಿತು. ಸಂವಿಧಾನದ ಪ್ರಕಾರ ಹೈಕೋರ್ಟುಗಳು ಮತ್ತು ಸುಪ್ರೀಮ್ ಕೋರ್ಟಿನ ಕಲಾಪದ ಭಾಷೆ, ಕೇಂದ್ರ ಮತ್ತು ರಾಜ್ಯಗಳ ಶಾಸಕಾಂಗ ದಸ್ತಾವೇಜು ಹಾಗೂ ಎರಡು ರಾಜ್ಯಗಳ ನಡುವೆ ಕೇಂದ್ರ ಮತ್ತು ರಾಜ್ಯಗಳ ನಡುವಣ ಸಂಪರ್ಕ ಭಾಷೆ ಇಂಗ್ಲಿಷೇ ಆಗಿದೆ. ಸಂವಿಧಾನದ ಎಂಟನೆಯ ಷೆಡ್ಯೂಲು ಒಟ್ಟು 22 ಭಾಷೆಗಳನ್ನು ಗುರುತಿಸಿ ಪಟ್ಟಿ ಮಾಡಿದೆ. ಇವುಗಳ ಪೈಕಿ ಯಾವುದೇ ಭಾಷೆ ಅಥವಾ ಭಾಷೆಗಳನ್ನು ರಾಜ್ಯಗಳು ತಮ್ಮ ಆಡಳಿತ ಭಾಷೆಗಳನ್ನಾಗಿ ಆರಿಸಿಕೊಳ್ಳಬಹುದು.

ಎಂಟನೆಯ ಷೆಡ್ಯೂಲಿನಿಂದ ಹೊರಗಿಟ್ಟಿರುವ ದೊಡ್ಡ ಸಂಖ್ಯೆಯ ಮಾತೃಭಾಷೆಗಳನ್ನು ’ನುಡಿಗಟ್ಟುಗಳು’, ’ಬುಡಕಟ್ಟು ಭಾಷೆಗಳು’, ’ಸಣ್ಣ ಭಾಷೆ’ಗಳು ಎಂದು ಹೆಸರಿಟ್ಟು ಕರೆದು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇಂಗ್ಲಿಷಿನ ಜೊತೆಗೆ ಹಿಂದಿ ಒಂದು ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ. ರಾಷ್ಟ್ರಭಾಷೆಯ ಕುರಿತು ಸಂವಿಧಾನ ಮೌನವಹಿಸಿದೆ.

ಹಿಂದಿಯನ್ನು ರಾಷ್ಟ್ರಭಾಷೆ ಎಂದು ಘೋಷಿಸಿದರೆ ದೇಶದ ಎಲ್ಲ ನಾಗರಿಕರು ಆ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕಾಗುತ್ತದೆ. ಇಂತಹ ಸ್ಥಿತಿ ಉತ್ತರ ಭಾರತೀಯರಿಗೆ ಅನುಕೂಲದ್ದೂ, ದಕ್ಷಿಣದವರಿಗೆ ಪ್ರತಿಕೂಲದ್ದೂ ಆಗಿ ಪರಿಣಮಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯೇ ರಾಷ್ಟ್ರಭಾಷೆ ಎಂದು ಹಿಂದಿ ಚಿತ್ರನಟ ಅಜಯ್ ದೇವಗನ್ ಅವರ ಆಧಾರರಹಿತ ಘೋಷಣೆಗೆ ತಕ್ಕ ಮಾರುತ್ತರ ನೀಡಿದ್ದಾರೆ ಕಿಚ್ಚ ಸುದೀಪ್. ಸಾಮಾಜಿಕ ಜಾಲತಾಣದಲ್ಲಿ ನಡೆದ ಈ ಚರ್ಚೆಗೆ ರಾಜಕಾರಣಿಗಳೂ ದನಿಗೂಡಿಸಿದ್ದಾರೆ.

’ಹಿಂದಿ ಭಾಷೆಯನ್ನು ಪ್ರೀತಿ ಮಾಡದವರು ವಿದೇಶೀಯರು. ಅವರು ಭಾರತವನ್ನು ಬಿಟ್ಟು ಇನ್ನೆಲ್ಲಿಗಾದರೂ ತೊಲಗಬೇಕು’ ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸಂಪುಟದ ಮಂತ್ರಿ ಸಂಜಯ ನಿಷಾದ್ ಅಪ್ಪಣೆ ಕೊಡಿಸಿದ್ದಾರೆ. ’ಭಾರತದಲ್ಲಿ ಇರಬೇಕಿದ್ದರೆ ಹಿಂದಿಯನ್ನು ಪ್ರೀತಿಸಬೇಕು. ಪ್ರಾದೇಶಿಕ ಭಾಷೆಗಳನ್ನು ನಾವು ಗೌರವಿಸುತ್ತೇವೆ. ಆದರೆ ಸಂವಿಧಾನವು ಈ ದೇಶವನ್ನು ಹಿಂದುಸ್ತಾನ ಎಂದು ಕರೆದಿದೆ. ಹಿಂದುಸ್ತಾನವು ಹಿಂದಿ ಭಾಷಿಕರದು. ಹಿಂದಿ ಮಾತನಾಡದವರಿಗೆ ಹಿಂದುಸ್ತಾನದಲ್ಲಿ ಜಾಗವಿಲ್ಲ’ ಎಂದು ಅವರು ಸಾರಿದ್ದಾರೆ. ಹಾಗಿದ್ದರೆ ಹಿಂದಿ ಬಾರದ ಮತ್ತು ಕಲಿಯಲು ಬಯಸದ ಬಹುತೇಕ ದಕ್ಷಿಣ ಭಾರತೀಯರನ್ನು ಎಲ್ಲಿಗೆ ತೊಲಗಿಸಬೇಕೆಂದು ನಿಷಾದ್ ಮತ್ತು ಅವರ ಈ ನಿಲುವನ್ನು ಬೆಂಬಲಿಸುವವರು ಗಂಭೀರವಾಗಿ ಆಲೋಚಿಸಬೇಕಿದೆ.

ಪಾಟ್ನಾ ಹೈಕೋರ್ಟ್ 2003ರಲ್ಲಿ ನೀಡಿದ ತೀರ್ಪೊಂದರಲ್ಲಿ (ಜಯಕಾಂತ ಮಿಶ್ರಾ ವರ್ಸಸ್ ಸ್ಟೇಟ್ ಅಫ್ ಬಿಹಾರ) ಹಿಂದಿ ಹೇರಿಕೆ ಕುರಿತು ಆಡಿರುವ ಈ ಮಾತುಗಳನ್ನು ಇಲ್ಲಿ ಉಲ್ಲೇಖಿಸಲೇಬೇಕಿದೆ- “ಉತ್ತರ ಭಾರತದ ಜನರು ನಾನಾ ನುಡಿಗಟ್ಟುಗಳಲ್ಲಿ ಆಡುವ ಪ್ರಮುಖ ಭಾಷೆಯನ್ನು ಆಧಾರವಾಗಿ ಇಟ್ಟುಕೊಂಡು ರಾಷ್ಟ್ರವಾದವನ್ನು ಸರ್ಕಾರ ನಡೆಸುವವರು ಮಾಡಿದರೂ ಅದು ದುರಭಿಮಾನವೇ. ತಪ್ಪನ್ನು ಯಾರು ಮಾಡಿದರೂ ಅದು ತಪ್ಪೇ. ಆಡಳಿತ ಭಾಷೆ, ರಾಷ್ಟ್ರಭಾಷೆ ಹಾಗೂ ಮಾತೃಭಾಷೆಯ ನಡುವಣ ವ್ಯತ್ಯಾಸಗಳನ್ನು ಬಿಹಾರ ಸರ್ಕಾರ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಈ ತಪ್ಪು ತಿಳಿವಳಿಕೆಯೇ ಮೊದಲ ಮೂಲಭೂತ ತಪ್ಪು. ಹಿಂದಿ ಭಾಷಿಕ ರಾಜ್ಯಗಳ ಆಡಳಿತಗಳು ಇತರೆ ಭಾಷೆಗಳನ್ನು ಎದುರಾಳಿಗಳೆಂದು ಬಗೆದಿರುವ ಸಂದರ್ಭಗಳಿವೆ. ಈ ಭಾವನೆ ವಾಸ್ತವ ಅಲ್ಲ. ಹಿಂದಿಯ ಯಜಮಾನಿಕೆಯನ್ನು ಸಮರ್ಥಿಸುತ್ತ, ಸಂವಿಧಾನವೇ ವಿಧಿಸಿರುವ ರಾಷ್ಟ್ರಭಾಷೆಯಿದು ಎಂದು ಆ ಭಾಷೆಯನ್ನು ಆಕ್ರಮಣಕಾರಿಯಾಗಿ ಹೇರುವುದು ಅತಿ ದೊಡ್ಡ ತಪ್ಪು. ಹಿಂದಿ ಮಾತನಾಡದಿರುವ ಪ್ರದೇಶಗಳಲ್ಲಿ ಒಡಕಿನ ದನಿಯನ್ನು ಹುಟ್ಟಿಸಲು ಕಾರಣವಾಗುವ ಅಂಶವಿದು. ಹಿಂದಿ ಮಾತನಾಡದಿರುವ ವ್ಯಕ್ತಿ ಕೂಡ ಹಿಂದಿ ಭಾಷಿಕ ರಾಜ್ಯಗಳ ಪೌರರಷ್ಟೇ ದೇಶಾಭಿಮಾನಿಯೂ, ರಾಷ್ಟ್ರವಾದಿಯೂ ಆಗಿರುತ್ತಾಳೆ ಅಥವಾ ಆಗಿರುತ್ತಾನೆ. ಅದನ್ನೊಂದು ಸಂಪರ್ಕ ಭಾಷೆಯಾಗಿಸಲು ಪ್ರೋತ್ಸಾಹಿಸಬೇಕು ಎಂಬುದು ಬೇರೆ ಮಾತು. ಆದರೆ ಅಂತಹ ಪ್ರಯತ್ನಗಳು ಇತರೆ ಭಾಷೆಗಳನ್ನು ಮಾತನಾಡುವ ಮತ್ತು ಆ ಭಾಷೆಗಳ ಕುರಿತು ಹೆಮ್ಮೆ ಹೊಂದಿರುವ ಭಾರತೀಯರ ಸಂವೇದನೆಗಳನ್ನು ಘಾಸಿಗೊಳಿಸುವ ಮಟ್ಟಕ್ಕೆ ಹೋಗಕೂಡದು”.

ಬಹುಭಾಷೆಗಳು, ಬಹುಮುಖೀ ಸಂಸ್ಕೃತಿಯ ದೇಶದಲ್ಲಿ ಒಂದು ನಿರ್ದಿಷ್ಟ ಭಾಷೆಯನ್ನು ರಾಷ್ಟ್ರೀಯತೆಯ ತಳಪಾಯವೆಂದು, ಸಾಂಸ್ಕೃತಿಕ ತಳಹದಿಯೆಂದೂ ಎತ್ತಿ ಕಟ್ಟಿ ಹೇರುವುದು ಜನತಾಂತ್ರಿಕ ಧೋರಣೆ ಅಲ್ಲ. ಭಾಷೆ ಎಂಬುದು ಕಡು ಅಸ್ಮಿತೆಯ ತೀವ್ರ ಭಾವನಾತ್ಮಕ ಸಂಗತಿ. ಪಾಕಿಸ್ತಾನದಿಂದ ಸಿಡಿದು ಬಾಂಗ್ಲಾ ದೇಶ ಎಂಬ ಹೊಸ ರಾಷ್ಟ್ರ ಹುಟ್ಟಿದ್ದಕ್ಕೆ ಉರ್ದು ಹೇರಿಕೆಯೇ ಮೂಲ ಕಾರಣ ಎಂಬ ಕಟು ಸತ್ಯವನ್ನು ಮರೆಯಕೂಡದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಬಲಿತ ಬಲಪಂಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...