Homeಅಂಕಣಗಳುಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

- Advertisement -
- Advertisement -

ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ, ದಾಖಲೆ-ದಸ್ತಾವೇಜುಗಳು, ಸಂಸದೀಯ ಚರ್ಚೆಗಳು ಮತ್ತಿತರೆ ಅಧಿಕೃತ ಸೀಮಿತ ಉದ್ದೇಶಗಳಿಗೆ ಬಳಸಲಾಗುವ ಭಾಷೆ.

ಬ್ರಿಟಿಷ್ ಭಾರತದಲ್ಲಿ ಇಂಗ್ಲಿಷ್ ಆಡಳಿತ ಭಾಷೆಯಾಗಿತ್ತು. ಈ ಭಾಷೆಯನ್ನೇ ಮುಂದುವರಿಸಬೇಕೇ ಅಥವಾ ಆ ಜಾಗಕ್ಕೆ ಹಿಂದಿಯನ್ನು ತರಬೇಕೇ ಎಂದು ಸಂವಿಧಾನ ರಚನಾಸಭೆಯಲ್ಲಿ ಕಾವೇರಿದ ಚರ್ಚೆಗಳು ನಡೆದವು. ಕಡೆಗೆ ’ಮುನ್ಷೀ-ಅಯ್ಯಂಗಾರ್’ ರಾಜೀ ಸೂತ್ರವೊಂದನ್ನು ಅಳವಡಿಸಿಕೊಳ್ಳಲಾಯಿತು. ಈ ಸೂತ್ರದ ಪ್ರಕಾರ ಮೊದಲ 15 ವರ್ಷಗಳ ಕಾಲ ಇಂಗ್ಲಿಷನ್ನೇ ಆಡಳಿತ ಭಾಷೆಯಾಗಿ ಬಳಸಲಾಗುವುದು. ಆ ನಂತರ ಇಂಗ್ಲಿಷಿನ ಸ್ಥಾನವನ್ನು ಹಿಂದೀ ತುಂಬುವುದು. 15 ವರ್ಷಗಳ ನಂತರ ಇಂಗ್ಲಿಷಿನ ಮುಂದುವರಿಕೆಯ ಆಯ್ಕೆಯನ್ನೂ ಉಳಿಸಿಕೊಳ್ಳಲಾಗಿತ್ತು. 1965ರಲ್ಲಿ 15 ವರ್ಷಗಳು ತುಂಬಿದಾಗ ಇಂಗ್ಲಿಷಿನ ಜಾಗಕ್ಕೆ ಹಿಂದಿಯನ್ನು ತರುವ ಪ್ರಸ್ತಾವಗಳಿಗೆ ದಕ್ಷಿಣ ಭಾರತೀಯ ರಾಜ್ಯಗಳಿಂದ, ವಿಶೇಷವಾಗಿ ತಮಿಳುನಾಡಿನಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹಿಂದಿಯೇತರ ರಾಜ್ಯಗಳು ಹಿಂದಿಯನ್ನು ಆಡಳಿತ ಭಾಷೆಯಾಗಿ ಒಪ್ಪಿಕೊಳ್ಳುವ ತನಕ ಹಿಂದಿಯೊಂದಿಗೆ ಇಂಗ್ಲಿಷನ್ನೂ ಉಳಿಸಿಕೊಳ್ಳುವುದಾಗಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಭರವಸೆ ನೀಡಿದರು. (ಆದರೆ ವಿಶೇಷವಾಗಿ ಬಿಜೆಪಿ ಸರ್ಕಾರ ಈ ಭರವಸೆಯನ್ನು ನಿರ್ಲಕ್ಷಿಸಿ ಹಿಂದಿ ಹೇರಿಕೆಯ ಸತತ ಪ್ರಯತ್ನಗಳನ್ನು ನಡೆಸುತ್ತಲೇ ಬಂದಿದೆ). ಹೀಗಾಗಿ ಕೇಂದ್ರ ಮತ್ತು ರಾಜ್ಯಗಳ ನಡುವಣ ಅಧಿಕೃತ ಭಾಷೆಗಳಾಗಿ ಇಂಗ್ಲಿಷ್ ಮತ್ತು ಹಿಂದಿ ಎರಡೂ ಮುಂದುವರಿದಿವೆ. ರಾಜ್ಯಗಳು ಹಿಂದಿ ಅಥವಾ ತಮ್ಮ ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಅಳವಡಿಸಿಕೊಳ್ಳುವ ಅವಕಾಶವನ್ನು ಸಂವಿಧಾನವು ನೀಡಿತು. ಸಂವಿಧಾನದ ಪ್ರಕಾರ ಹೈಕೋರ್ಟುಗಳು ಮತ್ತು ಸುಪ್ರೀಮ್ ಕೋರ್ಟಿನ ಕಲಾಪದ ಭಾಷೆ, ಕೇಂದ್ರ ಮತ್ತು ರಾಜ್ಯಗಳ ಶಾಸಕಾಂಗ ದಸ್ತಾವೇಜು ಹಾಗೂ ಎರಡು ರಾಜ್ಯಗಳ ನಡುವೆ ಕೇಂದ್ರ ಮತ್ತು ರಾಜ್ಯಗಳ ನಡುವಣ ಸಂಪರ್ಕ ಭಾಷೆ ಇಂಗ್ಲಿಷೇ ಆಗಿದೆ. ಸಂವಿಧಾನದ ಎಂಟನೆಯ ಷೆಡ್ಯೂಲು ಒಟ್ಟು 22 ಭಾಷೆಗಳನ್ನು ಗುರುತಿಸಿ ಪಟ್ಟಿ ಮಾಡಿದೆ. ಇವುಗಳ ಪೈಕಿ ಯಾವುದೇ ಭಾಷೆ ಅಥವಾ ಭಾಷೆಗಳನ್ನು ರಾಜ್ಯಗಳು ತಮ್ಮ ಆಡಳಿತ ಭಾಷೆಗಳನ್ನಾಗಿ ಆರಿಸಿಕೊಳ್ಳಬಹುದು.

ಎಂಟನೆಯ ಷೆಡ್ಯೂಲಿನಿಂದ ಹೊರಗಿಟ್ಟಿರುವ ದೊಡ್ಡ ಸಂಖ್ಯೆಯ ಮಾತೃಭಾಷೆಗಳನ್ನು ’ನುಡಿಗಟ್ಟುಗಳು’, ’ಬುಡಕಟ್ಟು ಭಾಷೆಗಳು’, ’ಸಣ್ಣ ಭಾಷೆ’ಗಳು ಎಂದು ಹೆಸರಿಟ್ಟು ಕರೆದು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇಂಗ್ಲಿಷಿನ ಜೊತೆಗೆ ಹಿಂದಿ ಒಂದು ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ. ರಾಷ್ಟ್ರಭಾಷೆಯ ಕುರಿತು ಸಂವಿಧಾನ ಮೌನವಹಿಸಿದೆ.

ಹಿಂದಿಯನ್ನು ರಾಷ್ಟ್ರಭಾಷೆ ಎಂದು ಘೋಷಿಸಿದರೆ ದೇಶದ ಎಲ್ಲ ನಾಗರಿಕರು ಆ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕಾಗುತ್ತದೆ. ಇಂತಹ ಸ್ಥಿತಿ ಉತ್ತರ ಭಾರತೀಯರಿಗೆ ಅನುಕೂಲದ್ದೂ, ದಕ್ಷಿಣದವರಿಗೆ ಪ್ರತಿಕೂಲದ್ದೂ ಆಗಿ ಪರಿಣಮಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯೇ ರಾಷ್ಟ್ರಭಾಷೆ ಎಂದು ಹಿಂದಿ ಚಿತ್ರನಟ ಅಜಯ್ ದೇವಗನ್ ಅವರ ಆಧಾರರಹಿತ ಘೋಷಣೆಗೆ ತಕ್ಕ ಮಾರುತ್ತರ ನೀಡಿದ್ದಾರೆ ಕಿಚ್ಚ ಸುದೀಪ್. ಸಾಮಾಜಿಕ ಜಾಲತಾಣದಲ್ಲಿ ನಡೆದ ಈ ಚರ್ಚೆಗೆ ರಾಜಕಾರಣಿಗಳೂ ದನಿಗೂಡಿಸಿದ್ದಾರೆ.

’ಹಿಂದಿ ಭಾಷೆಯನ್ನು ಪ್ರೀತಿ ಮಾಡದವರು ವಿದೇಶೀಯರು. ಅವರು ಭಾರತವನ್ನು ಬಿಟ್ಟು ಇನ್ನೆಲ್ಲಿಗಾದರೂ ತೊಲಗಬೇಕು’ ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸಂಪುಟದ ಮಂತ್ರಿ ಸಂಜಯ ನಿಷಾದ್ ಅಪ್ಪಣೆ ಕೊಡಿಸಿದ್ದಾರೆ. ’ಭಾರತದಲ್ಲಿ ಇರಬೇಕಿದ್ದರೆ ಹಿಂದಿಯನ್ನು ಪ್ರೀತಿಸಬೇಕು. ಪ್ರಾದೇಶಿಕ ಭಾಷೆಗಳನ್ನು ನಾವು ಗೌರವಿಸುತ್ತೇವೆ. ಆದರೆ ಸಂವಿಧಾನವು ಈ ದೇಶವನ್ನು ಹಿಂದುಸ್ತಾನ ಎಂದು ಕರೆದಿದೆ. ಹಿಂದುಸ್ತಾನವು ಹಿಂದಿ ಭಾಷಿಕರದು. ಹಿಂದಿ ಮಾತನಾಡದವರಿಗೆ ಹಿಂದುಸ್ತಾನದಲ್ಲಿ ಜಾಗವಿಲ್ಲ’ ಎಂದು ಅವರು ಸಾರಿದ್ದಾರೆ. ಹಾಗಿದ್ದರೆ ಹಿಂದಿ ಬಾರದ ಮತ್ತು ಕಲಿಯಲು ಬಯಸದ ಬಹುತೇಕ ದಕ್ಷಿಣ ಭಾರತೀಯರನ್ನು ಎಲ್ಲಿಗೆ ತೊಲಗಿಸಬೇಕೆಂದು ನಿಷಾದ್ ಮತ್ತು ಅವರ ಈ ನಿಲುವನ್ನು ಬೆಂಬಲಿಸುವವರು ಗಂಭೀರವಾಗಿ ಆಲೋಚಿಸಬೇಕಿದೆ.

ಪಾಟ್ನಾ ಹೈಕೋರ್ಟ್ 2003ರಲ್ಲಿ ನೀಡಿದ ತೀರ್ಪೊಂದರಲ್ಲಿ (ಜಯಕಾಂತ ಮಿಶ್ರಾ ವರ್ಸಸ್ ಸ್ಟೇಟ್ ಅಫ್ ಬಿಹಾರ) ಹಿಂದಿ ಹೇರಿಕೆ ಕುರಿತು ಆಡಿರುವ ಈ ಮಾತುಗಳನ್ನು ಇಲ್ಲಿ ಉಲ್ಲೇಖಿಸಲೇಬೇಕಿದೆ- “ಉತ್ತರ ಭಾರತದ ಜನರು ನಾನಾ ನುಡಿಗಟ್ಟುಗಳಲ್ಲಿ ಆಡುವ ಪ್ರಮುಖ ಭಾಷೆಯನ್ನು ಆಧಾರವಾಗಿ ಇಟ್ಟುಕೊಂಡು ರಾಷ್ಟ್ರವಾದವನ್ನು ಸರ್ಕಾರ ನಡೆಸುವವರು ಮಾಡಿದರೂ ಅದು ದುರಭಿಮಾನವೇ. ತಪ್ಪನ್ನು ಯಾರು ಮಾಡಿದರೂ ಅದು ತಪ್ಪೇ. ಆಡಳಿತ ಭಾಷೆ, ರಾಷ್ಟ್ರಭಾಷೆ ಹಾಗೂ ಮಾತೃಭಾಷೆಯ ನಡುವಣ ವ್ಯತ್ಯಾಸಗಳನ್ನು ಬಿಹಾರ ಸರ್ಕಾರ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಈ ತಪ್ಪು ತಿಳಿವಳಿಕೆಯೇ ಮೊದಲ ಮೂಲಭೂತ ತಪ್ಪು. ಹಿಂದಿ ಭಾಷಿಕ ರಾಜ್ಯಗಳ ಆಡಳಿತಗಳು ಇತರೆ ಭಾಷೆಗಳನ್ನು ಎದುರಾಳಿಗಳೆಂದು ಬಗೆದಿರುವ ಸಂದರ್ಭಗಳಿವೆ. ಈ ಭಾವನೆ ವಾಸ್ತವ ಅಲ್ಲ. ಹಿಂದಿಯ ಯಜಮಾನಿಕೆಯನ್ನು ಸಮರ್ಥಿಸುತ್ತ, ಸಂವಿಧಾನವೇ ವಿಧಿಸಿರುವ ರಾಷ್ಟ್ರಭಾಷೆಯಿದು ಎಂದು ಆ ಭಾಷೆಯನ್ನು ಆಕ್ರಮಣಕಾರಿಯಾಗಿ ಹೇರುವುದು ಅತಿ ದೊಡ್ಡ ತಪ್ಪು. ಹಿಂದಿ ಮಾತನಾಡದಿರುವ ಪ್ರದೇಶಗಳಲ್ಲಿ ಒಡಕಿನ ದನಿಯನ್ನು ಹುಟ್ಟಿಸಲು ಕಾರಣವಾಗುವ ಅಂಶವಿದು. ಹಿಂದಿ ಮಾತನಾಡದಿರುವ ವ್ಯಕ್ತಿ ಕೂಡ ಹಿಂದಿ ಭಾಷಿಕ ರಾಜ್ಯಗಳ ಪೌರರಷ್ಟೇ ದೇಶಾಭಿಮಾನಿಯೂ, ರಾಷ್ಟ್ರವಾದಿಯೂ ಆಗಿರುತ್ತಾಳೆ ಅಥವಾ ಆಗಿರುತ್ತಾನೆ. ಅದನ್ನೊಂದು ಸಂಪರ್ಕ ಭಾಷೆಯಾಗಿಸಲು ಪ್ರೋತ್ಸಾಹಿಸಬೇಕು ಎಂಬುದು ಬೇರೆ ಮಾತು. ಆದರೆ ಅಂತಹ ಪ್ರಯತ್ನಗಳು ಇತರೆ ಭಾಷೆಗಳನ್ನು ಮಾತನಾಡುವ ಮತ್ತು ಆ ಭಾಷೆಗಳ ಕುರಿತು ಹೆಮ್ಮೆ ಹೊಂದಿರುವ ಭಾರತೀಯರ ಸಂವೇದನೆಗಳನ್ನು ಘಾಸಿಗೊಳಿಸುವ ಮಟ್ಟಕ್ಕೆ ಹೋಗಕೂಡದು”.

ಬಹುಭಾಷೆಗಳು, ಬಹುಮುಖೀ ಸಂಸ್ಕೃತಿಯ ದೇಶದಲ್ಲಿ ಒಂದು ನಿರ್ದಿಷ್ಟ ಭಾಷೆಯನ್ನು ರಾಷ್ಟ್ರೀಯತೆಯ ತಳಪಾಯವೆಂದು, ಸಾಂಸ್ಕೃತಿಕ ತಳಹದಿಯೆಂದೂ ಎತ್ತಿ ಕಟ್ಟಿ ಹೇರುವುದು ಜನತಾಂತ್ರಿಕ ಧೋರಣೆ ಅಲ್ಲ. ಭಾಷೆ ಎಂಬುದು ಕಡು ಅಸ್ಮಿತೆಯ ತೀವ್ರ ಭಾವನಾತ್ಮಕ ಸಂಗತಿ. ಪಾಕಿಸ್ತಾನದಿಂದ ಸಿಡಿದು ಬಾಂಗ್ಲಾ ದೇಶ ಎಂಬ ಹೊಸ ರಾಷ್ಟ್ರ ಹುಟ್ಟಿದ್ದಕ್ಕೆ ಉರ್ದು ಹೇರಿಕೆಯೇ ಮೂಲ ಕಾರಣ ಎಂಬ ಕಟು ಸತ್ಯವನ್ನು ಮರೆಯಕೂಡದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಬಲಿತ ಬಲಪಂಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...