Homeಅಂಕಣಗಳುಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

- Advertisement -
- Advertisement -

ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ, ದಾಖಲೆ-ದಸ್ತಾವೇಜುಗಳು, ಸಂಸದೀಯ ಚರ್ಚೆಗಳು ಮತ್ತಿತರೆ ಅಧಿಕೃತ ಸೀಮಿತ ಉದ್ದೇಶಗಳಿಗೆ ಬಳಸಲಾಗುವ ಭಾಷೆ.

ಬ್ರಿಟಿಷ್ ಭಾರತದಲ್ಲಿ ಇಂಗ್ಲಿಷ್ ಆಡಳಿತ ಭಾಷೆಯಾಗಿತ್ತು. ಈ ಭಾಷೆಯನ್ನೇ ಮುಂದುವರಿಸಬೇಕೇ ಅಥವಾ ಆ ಜಾಗಕ್ಕೆ ಹಿಂದಿಯನ್ನು ತರಬೇಕೇ ಎಂದು ಸಂವಿಧಾನ ರಚನಾಸಭೆಯಲ್ಲಿ ಕಾವೇರಿದ ಚರ್ಚೆಗಳು ನಡೆದವು. ಕಡೆಗೆ ’ಮುನ್ಷೀ-ಅಯ್ಯಂಗಾರ್’ ರಾಜೀ ಸೂತ್ರವೊಂದನ್ನು ಅಳವಡಿಸಿಕೊಳ್ಳಲಾಯಿತು. ಈ ಸೂತ್ರದ ಪ್ರಕಾರ ಮೊದಲ 15 ವರ್ಷಗಳ ಕಾಲ ಇಂಗ್ಲಿಷನ್ನೇ ಆಡಳಿತ ಭಾಷೆಯಾಗಿ ಬಳಸಲಾಗುವುದು. ಆ ನಂತರ ಇಂಗ್ಲಿಷಿನ ಸ್ಥಾನವನ್ನು ಹಿಂದೀ ತುಂಬುವುದು. 15 ವರ್ಷಗಳ ನಂತರ ಇಂಗ್ಲಿಷಿನ ಮುಂದುವರಿಕೆಯ ಆಯ್ಕೆಯನ್ನೂ ಉಳಿಸಿಕೊಳ್ಳಲಾಗಿತ್ತು. 1965ರಲ್ಲಿ 15 ವರ್ಷಗಳು ತುಂಬಿದಾಗ ಇಂಗ್ಲಿಷಿನ ಜಾಗಕ್ಕೆ ಹಿಂದಿಯನ್ನು ತರುವ ಪ್ರಸ್ತಾವಗಳಿಗೆ ದಕ್ಷಿಣ ಭಾರತೀಯ ರಾಜ್ಯಗಳಿಂದ, ವಿಶೇಷವಾಗಿ ತಮಿಳುನಾಡಿನಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹಿಂದಿಯೇತರ ರಾಜ್ಯಗಳು ಹಿಂದಿಯನ್ನು ಆಡಳಿತ ಭಾಷೆಯಾಗಿ ಒಪ್ಪಿಕೊಳ್ಳುವ ತನಕ ಹಿಂದಿಯೊಂದಿಗೆ ಇಂಗ್ಲಿಷನ್ನೂ ಉಳಿಸಿಕೊಳ್ಳುವುದಾಗಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಭರವಸೆ ನೀಡಿದರು. (ಆದರೆ ವಿಶೇಷವಾಗಿ ಬಿಜೆಪಿ ಸರ್ಕಾರ ಈ ಭರವಸೆಯನ್ನು ನಿರ್ಲಕ್ಷಿಸಿ ಹಿಂದಿ ಹೇರಿಕೆಯ ಸತತ ಪ್ರಯತ್ನಗಳನ್ನು ನಡೆಸುತ್ತಲೇ ಬಂದಿದೆ). ಹೀಗಾಗಿ ಕೇಂದ್ರ ಮತ್ತು ರಾಜ್ಯಗಳ ನಡುವಣ ಅಧಿಕೃತ ಭಾಷೆಗಳಾಗಿ ಇಂಗ್ಲಿಷ್ ಮತ್ತು ಹಿಂದಿ ಎರಡೂ ಮುಂದುವರಿದಿವೆ. ರಾಜ್ಯಗಳು ಹಿಂದಿ ಅಥವಾ ತಮ್ಮ ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಅಳವಡಿಸಿಕೊಳ್ಳುವ ಅವಕಾಶವನ್ನು ಸಂವಿಧಾನವು ನೀಡಿತು. ಸಂವಿಧಾನದ ಪ್ರಕಾರ ಹೈಕೋರ್ಟುಗಳು ಮತ್ತು ಸುಪ್ರೀಮ್ ಕೋರ್ಟಿನ ಕಲಾಪದ ಭಾಷೆ, ಕೇಂದ್ರ ಮತ್ತು ರಾಜ್ಯಗಳ ಶಾಸಕಾಂಗ ದಸ್ತಾವೇಜು ಹಾಗೂ ಎರಡು ರಾಜ್ಯಗಳ ನಡುವೆ ಕೇಂದ್ರ ಮತ್ತು ರಾಜ್ಯಗಳ ನಡುವಣ ಸಂಪರ್ಕ ಭಾಷೆ ಇಂಗ್ಲಿಷೇ ಆಗಿದೆ. ಸಂವಿಧಾನದ ಎಂಟನೆಯ ಷೆಡ್ಯೂಲು ಒಟ್ಟು 22 ಭಾಷೆಗಳನ್ನು ಗುರುತಿಸಿ ಪಟ್ಟಿ ಮಾಡಿದೆ. ಇವುಗಳ ಪೈಕಿ ಯಾವುದೇ ಭಾಷೆ ಅಥವಾ ಭಾಷೆಗಳನ್ನು ರಾಜ್ಯಗಳು ತಮ್ಮ ಆಡಳಿತ ಭಾಷೆಗಳನ್ನಾಗಿ ಆರಿಸಿಕೊಳ್ಳಬಹುದು.

ಎಂಟನೆಯ ಷೆಡ್ಯೂಲಿನಿಂದ ಹೊರಗಿಟ್ಟಿರುವ ದೊಡ್ಡ ಸಂಖ್ಯೆಯ ಮಾತೃಭಾಷೆಗಳನ್ನು ’ನುಡಿಗಟ್ಟುಗಳು’, ’ಬುಡಕಟ್ಟು ಭಾಷೆಗಳು’, ’ಸಣ್ಣ ಭಾಷೆ’ಗಳು ಎಂದು ಹೆಸರಿಟ್ಟು ಕರೆದು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇಂಗ್ಲಿಷಿನ ಜೊತೆಗೆ ಹಿಂದಿ ಒಂದು ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ. ರಾಷ್ಟ್ರಭಾಷೆಯ ಕುರಿತು ಸಂವಿಧಾನ ಮೌನವಹಿಸಿದೆ.

ಹಿಂದಿಯನ್ನು ರಾಷ್ಟ್ರಭಾಷೆ ಎಂದು ಘೋಷಿಸಿದರೆ ದೇಶದ ಎಲ್ಲ ನಾಗರಿಕರು ಆ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕಾಗುತ್ತದೆ. ಇಂತಹ ಸ್ಥಿತಿ ಉತ್ತರ ಭಾರತೀಯರಿಗೆ ಅನುಕೂಲದ್ದೂ, ದಕ್ಷಿಣದವರಿಗೆ ಪ್ರತಿಕೂಲದ್ದೂ ಆಗಿ ಪರಿಣಮಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯೇ ರಾಷ್ಟ್ರಭಾಷೆ ಎಂದು ಹಿಂದಿ ಚಿತ್ರನಟ ಅಜಯ್ ದೇವಗನ್ ಅವರ ಆಧಾರರಹಿತ ಘೋಷಣೆಗೆ ತಕ್ಕ ಮಾರುತ್ತರ ನೀಡಿದ್ದಾರೆ ಕಿಚ್ಚ ಸುದೀಪ್. ಸಾಮಾಜಿಕ ಜಾಲತಾಣದಲ್ಲಿ ನಡೆದ ಈ ಚರ್ಚೆಗೆ ರಾಜಕಾರಣಿಗಳೂ ದನಿಗೂಡಿಸಿದ್ದಾರೆ.

’ಹಿಂದಿ ಭಾಷೆಯನ್ನು ಪ್ರೀತಿ ಮಾಡದವರು ವಿದೇಶೀಯರು. ಅವರು ಭಾರತವನ್ನು ಬಿಟ್ಟು ಇನ್ನೆಲ್ಲಿಗಾದರೂ ತೊಲಗಬೇಕು’ ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸಂಪುಟದ ಮಂತ್ರಿ ಸಂಜಯ ನಿಷಾದ್ ಅಪ್ಪಣೆ ಕೊಡಿಸಿದ್ದಾರೆ. ’ಭಾರತದಲ್ಲಿ ಇರಬೇಕಿದ್ದರೆ ಹಿಂದಿಯನ್ನು ಪ್ರೀತಿಸಬೇಕು. ಪ್ರಾದೇಶಿಕ ಭಾಷೆಗಳನ್ನು ನಾವು ಗೌರವಿಸುತ್ತೇವೆ. ಆದರೆ ಸಂವಿಧಾನವು ಈ ದೇಶವನ್ನು ಹಿಂದುಸ್ತಾನ ಎಂದು ಕರೆದಿದೆ. ಹಿಂದುಸ್ತಾನವು ಹಿಂದಿ ಭಾಷಿಕರದು. ಹಿಂದಿ ಮಾತನಾಡದವರಿಗೆ ಹಿಂದುಸ್ತಾನದಲ್ಲಿ ಜಾಗವಿಲ್ಲ’ ಎಂದು ಅವರು ಸಾರಿದ್ದಾರೆ. ಹಾಗಿದ್ದರೆ ಹಿಂದಿ ಬಾರದ ಮತ್ತು ಕಲಿಯಲು ಬಯಸದ ಬಹುತೇಕ ದಕ್ಷಿಣ ಭಾರತೀಯರನ್ನು ಎಲ್ಲಿಗೆ ತೊಲಗಿಸಬೇಕೆಂದು ನಿಷಾದ್ ಮತ್ತು ಅವರ ಈ ನಿಲುವನ್ನು ಬೆಂಬಲಿಸುವವರು ಗಂಭೀರವಾಗಿ ಆಲೋಚಿಸಬೇಕಿದೆ.

ಪಾಟ್ನಾ ಹೈಕೋರ್ಟ್ 2003ರಲ್ಲಿ ನೀಡಿದ ತೀರ್ಪೊಂದರಲ್ಲಿ (ಜಯಕಾಂತ ಮಿಶ್ರಾ ವರ್ಸಸ್ ಸ್ಟೇಟ್ ಅಫ್ ಬಿಹಾರ) ಹಿಂದಿ ಹೇರಿಕೆ ಕುರಿತು ಆಡಿರುವ ಈ ಮಾತುಗಳನ್ನು ಇಲ್ಲಿ ಉಲ್ಲೇಖಿಸಲೇಬೇಕಿದೆ- “ಉತ್ತರ ಭಾರತದ ಜನರು ನಾನಾ ನುಡಿಗಟ್ಟುಗಳಲ್ಲಿ ಆಡುವ ಪ್ರಮುಖ ಭಾಷೆಯನ್ನು ಆಧಾರವಾಗಿ ಇಟ್ಟುಕೊಂಡು ರಾಷ್ಟ್ರವಾದವನ್ನು ಸರ್ಕಾರ ನಡೆಸುವವರು ಮಾಡಿದರೂ ಅದು ದುರಭಿಮಾನವೇ. ತಪ್ಪನ್ನು ಯಾರು ಮಾಡಿದರೂ ಅದು ತಪ್ಪೇ. ಆಡಳಿತ ಭಾಷೆ, ರಾಷ್ಟ್ರಭಾಷೆ ಹಾಗೂ ಮಾತೃಭಾಷೆಯ ನಡುವಣ ವ್ಯತ್ಯಾಸಗಳನ್ನು ಬಿಹಾರ ಸರ್ಕಾರ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಈ ತಪ್ಪು ತಿಳಿವಳಿಕೆಯೇ ಮೊದಲ ಮೂಲಭೂತ ತಪ್ಪು. ಹಿಂದಿ ಭಾಷಿಕ ರಾಜ್ಯಗಳ ಆಡಳಿತಗಳು ಇತರೆ ಭಾಷೆಗಳನ್ನು ಎದುರಾಳಿಗಳೆಂದು ಬಗೆದಿರುವ ಸಂದರ್ಭಗಳಿವೆ. ಈ ಭಾವನೆ ವಾಸ್ತವ ಅಲ್ಲ. ಹಿಂದಿಯ ಯಜಮಾನಿಕೆಯನ್ನು ಸಮರ್ಥಿಸುತ್ತ, ಸಂವಿಧಾನವೇ ವಿಧಿಸಿರುವ ರಾಷ್ಟ್ರಭಾಷೆಯಿದು ಎಂದು ಆ ಭಾಷೆಯನ್ನು ಆಕ್ರಮಣಕಾರಿಯಾಗಿ ಹೇರುವುದು ಅತಿ ದೊಡ್ಡ ತಪ್ಪು. ಹಿಂದಿ ಮಾತನಾಡದಿರುವ ಪ್ರದೇಶಗಳಲ್ಲಿ ಒಡಕಿನ ದನಿಯನ್ನು ಹುಟ್ಟಿಸಲು ಕಾರಣವಾಗುವ ಅಂಶವಿದು. ಹಿಂದಿ ಮಾತನಾಡದಿರುವ ವ್ಯಕ್ತಿ ಕೂಡ ಹಿಂದಿ ಭಾಷಿಕ ರಾಜ್ಯಗಳ ಪೌರರಷ್ಟೇ ದೇಶಾಭಿಮಾನಿಯೂ, ರಾಷ್ಟ್ರವಾದಿಯೂ ಆಗಿರುತ್ತಾಳೆ ಅಥವಾ ಆಗಿರುತ್ತಾನೆ. ಅದನ್ನೊಂದು ಸಂಪರ್ಕ ಭಾಷೆಯಾಗಿಸಲು ಪ್ರೋತ್ಸಾಹಿಸಬೇಕು ಎಂಬುದು ಬೇರೆ ಮಾತು. ಆದರೆ ಅಂತಹ ಪ್ರಯತ್ನಗಳು ಇತರೆ ಭಾಷೆಗಳನ್ನು ಮಾತನಾಡುವ ಮತ್ತು ಆ ಭಾಷೆಗಳ ಕುರಿತು ಹೆಮ್ಮೆ ಹೊಂದಿರುವ ಭಾರತೀಯರ ಸಂವೇದನೆಗಳನ್ನು ಘಾಸಿಗೊಳಿಸುವ ಮಟ್ಟಕ್ಕೆ ಹೋಗಕೂಡದು”.

ಬಹುಭಾಷೆಗಳು, ಬಹುಮುಖೀ ಸಂಸ್ಕೃತಿಯ ದೇಶದಲ್ಲಿ ಒಂದು ನಿರ್ದಿಷ್ಟ ಭಾಷೆಯನ್ನು ರಾಷ್ಟ್ರೀಯತೆಯ ತಳಪಾಯವೆಂದು, ಸಾಂಸ್ಕೃತಿಕ ತಳಹದಿಯೆಂದೂ ಎತ್ತಿ ಕಟ್ಟಿ ಹೇರುವುದು ಜನತಾಂತ್ರಿಕ ಧೋರಣೆ ಅಲ್ಲ. ಭಾಷೆ ಎಂಬುದು ಕಡು ಅಸ್ಮಿತೆಯ ತೀವ್ರ ಭಾವನಾತ್ಮಕ ಸಂಗತಿ. ಪಾಕಿಸ್ತಾನದಿಂದ ಸಿಡಿದು ಬಾಂಗ್ಲಾ ದೇಶ ಎಂಬ ಹೊಸ ರಾಷ್ಟ್ರ ಹುಟ್ಟಿದ್ದಕ್ಕೆ ಉರ್ದು ಹೇರಿಕೆಯೇ ಮೂಲ ಕಾರಣ ಎಂಬ ಕಟು ಸತ್ಯವನ್ನು ಮರೆಯಕೂಡದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಬಲಿತ ಬಲಪಂಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...