Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ತಿಳಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದಿದ್ದಾರೆ.

ರಾಮ್‌ಗೋಪಾಲ್ ವರ್ಮಾ ಹಾಗೂ ಉಪೇಂದ್ರ ಅವರ ‘ಐಯಾಮ್‌ ಆರ್‌’ ಸಿನಿಮಾದ ಟೈಟಲ್‌ ಲಾಂಚ್‌ನಲ್ಲಿ ಮಾತನಾಡಿದ್ದ ನಟ ಕಿಚ್ಚ ಸುದೀಪ್‌, ನಿರೂಪಕಿಯ ಮಾತಿಗೆ ಪ್ರತಿಕ್ರಿಯೆ ನೀಡುತ್ತಾ,  “ಪ್ಯಾನ್‌ ಇಂಡಿಯಾ ಸಿನಿಮಾವನ್ನು ಕನ್ನಡದಲ್ಲಿ ಮಾಡಲಾಗಿದೆ ಎಂದು ಹೇಳಿದ್ದೀರಿ. ಒಂದು ಸಣ್ಣ ಕರೆಕ್ಷನ್. ಹಿಂದಿ ಈಗ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ. ಬಾಲಿವುಡ್‌ ಮಂದಿ ಈಗ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಿ ಅದನ್ನು ಎಲ್ಲಾ ಕಡೆ ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಆದರೆ ನಮ್ಮ ಚಿತ್ರ ಈಗ ಎಲ್ಲಾ ಭಾಷೆಗಳಿಗೂ ಹೋಗುತ್ತಿದೆ” ಎಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಾದಕ್ಕೆ ಸುದೀಪ್‌ ಪೆಟ್ಟು ನೀಡಿದ್ದನ್ನು ಆಕ್ಷೇಪ ವ್ಯಕ್ತಪಡಿಸಿ ಅಜಯ್ ದೇವಗನ್‌ ಟ್ವೀಟ್ ಮಾಡಿದ್ದು, ಅದಕ್ಕೂ ಸುದೀಪ್‌ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಕೇಳಿದ್ದಾರೆ.

“ಸರ್‌, ನಾನು ಯಾಕೆ ಇದನ್ನು ಹೇಳಿದೆ ಎಂಬುದು ನಿಮಗೆ ಅರ್ಥವಾಗಿಲ್ಲ. ನಿಮ್ಮನ್ನು ನೇರವಾಗಿ ಭೇಟಿಯಾದಾಗ ತಿಳಿಸುವೆ. ನೋವು ನೀಡುವುದಕ್ಕಾಗಲೀ ನೀಡಲಾಗಲೀ, ಪ್ರಚೋದನೆಗಾಗಲೀ, ಯಾವುದೇ ಚರ್ಚೆ ಹುಟ್ಟುಹಾಕುವುದಕ್ಕಾಗಿ ಈ ಮಾತು ಹೇಳಿಲ್ಲ. ನಾನು ಎಲ್ಲ ಭಾಷೆಗಳನ್ನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ದೇವಗನ್‌ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಎಂಬುದನ್ನು ಮತ್ತೆ ನೆನಪಿಸಿದ್ದಾರೆ.

“ಮಿಸ್ಟರ್‌ ದೇವಗನ್‌, ದಕ್ಷಿಣ ಭಾರತದಲ್ಲಿ ನಾವು ಯಾವುದೇ ಸಮಯದಲ್ಲಿ ಹಿಂದಿಯನ್ನು ನಮ್ಮ ರಾಷ್ಟ್ರೀಯ ಭಾಷೆಯನ್ನಾಗಿ ಸ್ವೀಕರಿಸುವುದಿಲ್ಲ. ಹಿಂದಿ ಅಧಿಕೃತ ಭಾಷೆಯಾಗಿ ಇಂಗ್ಲಿಷ್‌ಗೆ ಪರ್ಯಾಯವಾಗಿದೆ. ಹಿಂದಿಯೇತರ ರಾಜ್ಯಗಳು ರಾಷ್ಟ್ರಕ್ಕೆ ಹೆಚ್ಚು ಆದಾಯ ಮತ್ತು ಜಿಎಸ್‌ಟಿ ನೀಡುತ್ತಿವೆಯೇ ಹೊರತು ಹಿಂದಿ ರಾಜ್ಯಗಳಲ್ಲ” ಎಂದು ವಿಕ್ಕಿ ಎಂಬವರು ಪ್ರತಿಕ್ರಿಯೆ ನೀಡಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ. ಹಿಂದಿ ನನ್ನ ಮಾತೃಭಾಷೆಯಲ್ಲ. ಇದು ಕೇವಲ 23 ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. 2021 ರಲ್ಲಿ ದಕ್ಷಿಣ ಭಾರತದ ಚಲನಚಿತ್ರಗಳು ₹2,400 ಕೋಟಿ ಮತ್ತು ಬಾಲಿವುಡ್ ಕೇವಲ ₹800 ಕೋಟಿ ಗಳಿಸಿವೆ. ಬಡಾಯಿ ಕೊಚ್ಚಿಕೊಳ್ಳುವುದನ್ನು ನಿಲ್ಲಿಸಿ” ಎಂದು ಕತ್ಯುಶಾ ಎಂಬವರು ಆಗ್ರಹಿಸಿದ್ದಾರೆ.

ಎರಡು ವಿಷಯಗಳನ್ನು ಕನ್ನಡಿಗ ಸಜಿತ್‌ ಪ್ರಸ್ತಾಪಿಸಿದ್ದಾರೆ. “1) ಗುಟ್ಕಾ ಜಾಹೀರಾತು ನಿಲ್ಲಿಸಿ. 2) ಸಂವಿಧಾನವನ್ನು ಓದಿ. ಭಾರತಕ್ಕೆ  ರಾಷ್ಟ್ರೀಯ ಭಾಷೆ ಇಲ್ಲ ಎಂದು ನೀವೇ ತಿಳಿದುಕೊಳ್ಳಿ. ಹಿಂದಿ “ಕೇಂದ್ರ ಸರ್ಕಾರದ” ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ” ಎಂದು ತಿಳಿಸಿದ್ದಾರೆ.

ಹೀಗೆ ಅನೇಕರು ದೇವಗನ್‌ ಅವರ ವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....