Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ತಿಳಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದಿದ್ದಾರೆ.

ರಾಮ್‌ಗೋಪಾಲ್ ವರ್ಮಾ ಹಾಗೂ ಉಪೇಂದ್ರ ಅವರ ‘ಐಯಾಮ್‌ ಆರ್‌’ ಸಿನಿಮಾದ ಟೈಟಲ್‌ ಲಾಂಚ್‌ನಲ್ಲಿ ಮಾತನಾಡಿದ್ದ ನಟ ಕಿಚ್ಚ ಸುದೀಪ್‌, ನಿರೂಪಕಿಯ ಮಾತಿಗೆ ಪ್ರತಿಕ್ರಿಯೆ ನೀಡುತ್ತಾ,  “ಪ್ಯಾನ್‌ ಇಂಡಿಯಾ ಸಿನಿಮಾವನ್ನು ಕನ್ನಡದಲ್ಲಿ ಮಾಡಲಾಗಿದೆ ಎಂದು ಹೇಳಿದ್ದೀರಿ. ಒಂದು ಸಣ್ಣ ಕರೆಕ್ಷನ್. ಹಿಂದಿ ಈಗ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ. ಬಾಲಿವುಡ್‌ ಮಂದಿ ಈಗ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಿ ಅದನ್ನು ಎಲ್ಲಾ ಕಡೆ ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಆದರೆ ನಮ್ಮ ಚಿತ್ರ ಈಗ ಎಲ್ಲಾ ಭಾಷೆಗಳಿಗೂ ಹೋಗುತ್ತಿದೆ” ಎಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಾದಕ್ಕೆ ಸುದೀಪ್‌ ಪೆಟ್ಟು ನೀಡಿದ್ದನ್ನು ಆಕ್ಷೇಪ ವ್ಯಕ್ತಪಡಿಸಿ ಅಜಯ್ ದೇವಗನ್‌ ಟ್ವೀಟ್ ಮಾಡಿದ್ದು, ಅದಕ್ಕೂ ಸುದೀಪ್‌ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಕೇಳಿದ್ದಾರೆ.

“ಸರ್‌, ನಾನು ಯಾಕೆ ಇದನ್ನು ಹೇಳಿದೆ ಎಂಬುದು ನಿಮಗೆ ಅರ್ಥವಾಗಿಲ್ಲ. ನಿಮ್ಮನ್ನು ನೇರವಾಗಿ ಭೇಟಿಯಾದಾಗ ತಿಳಿಸುವೆ. ನೋವು ನೀಡುವುದಕ್ಕಾಗಲೀ ನೀಡಲಾಗಲೀ, ಪ್ರಚೋದನೆಗಾಗಲೀ, ಯಾವುದೇ ಚರ್ಚೆ ಹುಟ್ಟುಹಾಕುವುದಕ್ಕಾಗಿ ಈ ಮಾತು ಹೇಳಿಲ್ಲ. ನಾನು ಎಲ್ಲ ಭಾಷೆಗಳನ್ನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ದೇವಗನ್‌ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಎಂಬುದನ್ನು ಮತ್ತೆ ನೆನಪಿಸಿದ್ದಾರೆ.

“ಮಿಸ್ಟರ್‌ ದೇವಗನ್‌, ದಕ್ಷಿಣ ಭಾರತದಲ್ಲಿ ನಾವು ಯಾವುದೇ ಸಮಯದಲ್ಲಿ ಹಿಂದಿಯನ್ನು ನಮ್ಮ ರಾಷ್ಟ್ರೀಯ ಭಾಷೆಯನ್ನಾಗಿ ಸ್ವೀಕರಿಸುವುದಿಲ್ಲ. ಹಿಂದಿ ಅಧಿಕೃತ ಭಾಷೆಯಾಗಿ ಇಂಗ್ಲಿಷ್‌ಗೆ ಪರ್ಯಾಯವಾಗಿದೆ. ಹಿಂದಿಯೇತರ ರಾಜ್ಯಗಳು ರಾಷ್ಟ್ರಕ್ಕೆ ಹೆಚ್ಚು ಆದಾಯ ಮತ್ತು ಜಿಎಸ್‌ಟಿ ನೀಡುತ್ತಿವೆಯೇ ಹೊರತು ಹಿಂದಿ ರಾಜ್ಯಗಳಲ್ಲ” ಎಂದು ವಿಕ್ಕಿ ಎಂಬವರು ಪ್ರತಿಕ್ರಿಯೆ ನೀಡಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ. ಹಿಂದಿ ನನ್ನ ಮಾತೃಭಾಷೆಯಲ್ಲ. ಇದು ಕೇವಲ 23 ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. 2021 ರಲ್ಲಿ ದಕ್ಷಿಣ ಭಾರತದ ಚಲನಚಿತ್ರಗಳು ₹2,400 ಕೋಟಿ ಮತ್ತು ಬಾಲಿವುಡ್ ಕೇವಲ ₹800 ಕೋಟಿ ಗಳಿಸಿವೆ. ಬಡಾಯಿ ಕೊಚ್ಚಿಕೊಳ್ಳುವುದನ್ನು ನಿಲ್ಲಿಸಿ” ಎಂದು ಕತ್ಯುಶಾ ಎಂಬವರು ಆಗ್ರಹಿಸಿದ್ದಾರೆ.

ಎರಡು ವಿಷಯಗಳನ್ನು ಕನ್ನಡಿಗ ಸಜಿತ್‌ ಪ್ರಸ್ತಾಪಿಸಿದ್ದಾರೆ. “1) ಗುಟ್ಕಾ ಜಾಹೀರಾತು ನಿಲ್ಲಿಸಿ. 2) ಸಂವಿಧಾನವನ್ನು ಓದಿ. ಭಾರತಕ್ಕೆ  ರಾಷ್ಟ್ರೀಯ ಭಾಷೆ ಇಲ್ಲ ಎಂದು ನೀವೇ ತಿಳಿದುಕೊಳ್ಳಿ. ಹಿಂದಿ “ಕೇಂದ್ರ ಸರ್ಕಾರದ” ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ” ಎಂದು ತಿಳಿಸಿದ್ದಾರೆ.

ಹೀಗೆ ಅನೇಕರು ದೇವಗನ್‌ ಅವರ ವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...