Homeಕರ್ನಾಟಕ"ಹಿಂದಿ ನಮ್ಮ ರಾಷ್ಟ್ರ ಭಾಷೆ": ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

“ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

- Advertisement -
- Advertisement -

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡರಂಗೇಗೌಡರ “ಹಿಂದಿ ನಮ್ಮ ರಾಷ್ಟ್ರ ಭಾಷೆ – ತಿರಸ್ಕಾರ ಏಕೆ?” ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಸಾವಿರಾರು ಕನ್ನಡಿಗರು ಹೇಳಿಕೆ ವಿರುದ್ಧ ಮುಗಿಬಿದ್ದಿದ್ದಾರೆ.

ದೊಡ್ಡರಂಗೇಗೌಡರು ಪ್ರಜಾವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ಇಂಗ್ಲಿಷ್ ಭಾಷೆಯನ್ನು ಒಪ್ಪುವ ನಾವು ಹಿಂದಿ ಭಾಷೆಯನ್ನು ತಿರಸ್ಕರಿಸುವುದು ಏಕೆ? ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಸ್ಥಾನಮಾನವಿದೆ. ಅದು ನಮ್ಮ ರಾಷ್ಟ್ರಭಾಷೆ” ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಕನ್ನಡಿಗರು ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಒಕ್ಕೂಟ ರಾಷ್ಟ್ರದಲ್ಲಿರುವ ಹಲವು ಭಾಷೆಗಳ ರೀತಿ ಅದು ಸಹ ಒಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ನೂರಾರು ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದಿ ಬಳಕೆಗೂ, ಹಿಂದಿ ಹೇರಿಕೆಗೂ ದೊಡ್ಡ ವ್ಯತ್ಯಾಸವಿದೆ. ಅದನ್ನು ತಿಳಿದುಕೊಂಡು ಮಾತನಾಡಿ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರು ಯಾವತ್ತೂ ಹಿಂದಿ ಭಾಷೆಯ ವಿರೋಧಿಗಳಲ್ಲ, ಅವರು ಏನಿದ್ದರೂ ಹಿಂದಿ ಭಾಷೆ ಹೇರಿಕೆಯ ವಿರೋಧಿಗಳು. ಇದರ ಕನಿಷ್ಠ ಜ್ಞಾನ ಇಲ್ಲದವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಹೇಗೆ? ಕನ್ನಡಿಗರ, ಕನ್ನಡದ ಮೇಲೆ ಅಭಿಮಾನ ಇದ್ದವರು ಮಾತ್ರ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಲಿ. ಅಧ್ಯಕ್ಷರು_ಬದಲಾಗಲಿ ಎಂದು ಫೈಜಲ್ ಎಂಬುವವರು ಒತ್ತಾಯಿಸಿದ್ದಾರೆ.

#ಹಿಂದಿಹೇರಿಕೆ ಬಗ್ಗೆ ತುಟಿ ಬಿಚ್ಚದ ದೊಡ್ಡಮನುಷ್ಯ ಕನ್ನಡ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ. #ಹಿಂದಿ ರಾಷ್ಟ್ರೀಯ ಭಾಷೆ ಅನ್ನುವ ದೊಡ್ಡಮನುಷ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ. 35000 ಗುಡಿಗಳನ್ನ ಕಟ್ಟಬೇಕು ಅನ್ನೋ ದೊಡ್ಡಮನುಷ್ಯ ಸಮಾಜದ ಹಿರಿಯ ಚಿಂತಕ-ಸಾಹಿತಿ. ಇವರಿಗೆಲ್ಲ ಬೇಕಿರೋದು ಕನ್ನಡವಲ್ಲ – ಪರಿಷತ್, ರಾಜ್ಯಸಭೆ, ಜ್ಞಾನಪೀಠ ಎಂದು ರವಿ ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಯಾವ ವೇದಿಕೆಯ ಮೇಲೆ ಬರಿ ಕನ್ನಡ ಮೆಳೈಸಬೇಕೊ, ಹಿಗ್ಗಿ ಉಬ್ಬಬೇಕೊ, ರಾರಾಜಿಸಬೇಕೊ, ಮೆರೆಯಬೇಕೊ, ಆಗಸದೆತ್ತರಕ್ಕೆ ಜಿಗಿಯಬೇಕೊ, ಜಗತ್ತಿಗೆ ತನ್ನ ಹಿರಿಮೆ ಪಸರಿಸಬೇಕೊ, ತನ್ನ ಒಡಲಿನ ಸಾಹಿತ್ಯ ಕಂದಮ್ಮಗಳ ಬಗ್ಗೆ ಹೆಮ್ಮೆಯಿಂದ ಸಾರಬೇಕೊ, ಗಟ್ಟಿಯಾಗಿ ತನ್ನ ಸಾವಿರಾರು ವರ್ಷಗಳ ವೈಭವ ಹೇಳಬೇಕೊ ಅಂತಹ ವೇದಿಕೆಯ ಅಧ್ಯಕ್ಷರಿಂದ ಹಿಂದಿ ಒಪ್ಪಿ ಎಂಬ ಸಂದೇಶ.. ಎಂದು ರೋಹಿತ್ ಸಿಂಹ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆಯಂತೆ.. ಹೀಗೆ ಹೇಳಿ ಹೇಳಿ ತಾನೇ ಕನ್ನಡಿಗರನ್ನು ಗುಲಾಮಗಿರಿಗೆ ತಳ್ಳಿರೋದು. ಕರ್ನಾಟಕದಲ್ಲಿ ಕನ್ನಡಕ್ಕೆ ಪುರಸ್ಕಾರ ಯಾಕಿಲ್ಲಾ ಅಂತ ಕೇಳೋದು ಬಿಟ್ಟು ಹಿಂದಿಗೆ ಯಾಕೆ ತಿರಸ್ಕಾರ ಅಂತ ಕೇಳ್ತಿದ್ದಾರೆ.. ಹಿಂದಿಗರು ಹಿಂದಿ ಜೊತೆಗೆ ವಿಶ್ವ ಸಂಪರ್ಕ ಭಾಷೆ ಆಂಗ್ಲ ಕಲಿಯಬಹುದು ಆದರೆ ಅದೇ ನಮ್ಮ ಕನ್ನಡಿಗರು ಆಂಗ್ಲ ಕಲಿಯಬಾರದೇ ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆ ಹೇಗೆ!? ಒಕ್ಕೂಟ ವ್ಯವಸ್ಥೆಯಲ್ಲಿ ಇರುವ ಅನೇಕ ದೇಶ ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಅದೊಂದು ಅಧಿಕೃತ ಭಾಷೆ ಅಷ್ಟೆ. ಈ ಮೂಲಭೂತ ಸತ್ಯದ ಅರಿವು ಕೂಡ ಇರದವರನ್ನು ಕನ್ನಡ ಸಾಹಿತಿ ಎಂದು ಒಪ್ಪಿಕೊಳ್ಳುವುದು ಹೇಗೆ? ಇಂತಹ ಕನ್ನಡ ನುಡಿ ದ್ರೋಹಿಯನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದು ಯಾವ ಕಾರಣಕ್ಕೂ ಸಮಂಜಸವಲ್ಲ. ಬೇಕಾದರೆ ಅಭಾಹಿಂಸಾಸ (ಅಖಿಲ ಭಾರತ ಹಿಂದಿ ಸಾಹಿತ್ಯ ಸಮ್ಮೇಳನ) ಕ್ಕೆ ಅಧ್ಯಕ್ಷರಾಗಲಿ ಎಂದು ದಾದಾ ಖಲಂಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೊಡ್ಡರಂಗೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಕನ್ನಡ ಪ್ರಭ ಪತ್ರಿಕೆಯಲ್ಲಿ ಕವನವೊಂದನ್ನು ಬರೆದಿದ್ದರು. ಹಾಗಾಗಿಯೇ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಇವರು ಅಗ್ರಹಾರದ ಗೇಟ್ ಕೀಪರ್ ಕೆಲಸ ಮಾಡುತ್ತಿದ್ದಾರೆ ಎಂದೆಲ್ಲಾ ಕನ್ನಡಿಗರು ಟೀಕಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...