Homeಕರ್ನಾಟಕ"ಹಿಂದಿ ನಮ್ಮ ರಾಷ್ಟ್ರ ಭಾಷೆ": ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

“ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

- Advertisement -
- Advertisement -

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡರಂಗೇಗೌಡರ “ಹಿಂದಿ ನಮ್ಮ ರಾಷ್ಟ್ರ ಭಾಷೆ – ತಿರಸ್ಕಾರ ಏಕೆ?” ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಸಾವಿರಾರು ಕನ್ನಡಿಗರು ಹೇಳಿಕೆ ವಿರುದ್ಧ ಮುಗಿಬಿದ್ದಿದ್ದಾರೆ.

ದೊಡ್ಡರಂಗೇಗೌಡರು ಪ್ರಜಾವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ಇಂಗ್ಲಿಷ್ ಭಾಷೆಯನ್ನು ಒಪ್ಪುವ ನಾವು ಹಿಂದಿ ಭಾಷೆಯನ್ನು ತಿರಸ್ಕರಿಸುವುದು ಏಕೆ? ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಸ್ಥಾನಮಾನವಿದೆ. ಅದು ನಮ್ಮ ರಾಷ್ಟ್ರಭಾಷೆ” ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಕನ್ನಡಿಗರು ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಒಕ್ಕೂಟ ರಾಷ್ಟ್ರದಲ್ಲಿರುವ ಹಲವು ಭಾಷೆಗಳ ರೀತಿ ಅದು ಸಹ ಒಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ನೂರಾರು ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದಿ ಬಳಕೆಗೂ, ಹಿಂದಿ ಹೇರಿಕೆಗೂ ದೊಡ್ಡ ವ್ಯತ್ಯಾಸವಿದೆ. ಅದನ್ನು ತಿಳಿದುಕೊಂಡು ಮಾತನಾಡಿ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರು ಯಾವತ್ತೂ ಹಿಂದಿ ಭಾಷೆಯ ವಿರೋಧಿಗಳಲ್ಲ, ಅವರು ಏನಿದ್ದರೂ ಹಿಂದಿ ಭಾಷೆ ಹೇರಿಕೆಯ ವಿರೋಧಿಗಳು. ಇದರ ಕನಿಷ್ಠ ಜ್ಞಾನ ಇಲ್ಲದವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಹೇಗೆ? ಕನ್ನಡಿಗರ, ಕನ್ನಡದ ಮೇಲೆ ಅಭಿಮಾನ ಇದ್ದವರು ಮಾತ್ರ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಲಿ. ಅಧ್ಯಕ್ಷರು_ಬದಲಾಗಲಿ ಎಂದು ಫೈಜಲ್ ಎಂಬುವವರು ಒತ್ತಾಯಿಸಿದ್ದಾರೆ.

#ಹಿಂದಿಹೇರಿಕೆ ಬಗ್ಗೆ ತುಟಿ ಬಿಚ್ಚದ ದೊಡ್ಡಮನುಷ್ಯ ಕನ್ನಡ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ. #ಹಿಂದಿ ರಾಷ್ಟ್ರೀಯ ಭಾಷೆ ಅನ್ನುವ ದೊಡ್ಡಮನುಷ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ. 35000 ಗುಡಿಗಳನ್ನ ಕಟ್ಟಬೇಕು ಅನ್ನೋ ದೊಡ್ಡಮನುಷ್ಯ ಸಮಾಜದ ಹಿರಿಯ ಚಿಂತಕ-ಸಾಹಿತಿ. ಇವರಿಗೆಲ್ಲ ಬೇಕಿರೋದು ಕನ್ನಡವಲ್ಲ – ಪರಿಷತ್, ರಾಜ್ಯಸಭೆ, ಜ್ಞಾನಪೀಠ ಎಂದು ರವಿ ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಯಾವ ವೇದಿಕೆಯ ಮೇಲೆ ಬರಿ ಕನ್ನಡ ಮೆಳೈಸಬೇಕೊ, ಹಿಗ್ಗಿ ಉಬ್ಬಬೇಕೊ, ರಾರಾಜಿಸಬೇಕೊ, ಮೆರೆಯಬೇಕೊ, ಆಗಸದೆತ್ತರಕ್ಕೆ ಜಿಗಿಯಬೇಕೊ, ಜಗತ್ತಿಗೆ ತನ್ನ ಹಿರಿಮೆ ಪಸರಿಸಬೇಕೊ, ತನ್ನ ಒಡಲಿನ ಸಾಹಿತ್ಯ ಕಂದಮ್ಮಗಳ ಬಗ್ಗೆ ಹೆಮ್ಮೆಯಿಂದ ಸಾರಬೇಕೊ, ಗಟ್ಟಿಯಾಗಿ ತನ್ನ ಸಾವಿರಾರು ವರ್ಷಗಳ ವೈಭವ ಹೇಳಬೇಕೊ ಅಂತಹ ವೇದಿಕೆಯ ಅಧ್ಯಕ್ಷರಿಂದ ಹಿಂದಿ ಒಪ್ಪಿ ಎಂಬ ಸಂದೇಶ.. ಎಂದು ರೋಹಿತ್ ಸಿಂಹ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆಯಂತೆ.. ಹೀಗೆ ಹೇಳಿ ಹೇಳಿ ತಾನೇ ಕನ್ನಡಿಗರನ್ನು ಗುಲಾಮಗಿರಿಗೆ ತಳ್ಳಿರೋದು. ಕರ್ನಾಟಕದಲ್ಲಿ ಕನ್ನಡಕ್ಕೆ ಪುರಸ್ಕಾರ ಯಾಕಿಲ್ಲಾ ಅಂತ ಕೇಳೋದು ಬಿಟ್ಟು ಹಿಂದಿಗೆ ಯಾಕೆ ತಿರಸ್ಕಾರ ಅಂತ ಕೇಳ್ತಿದ್ದಾರೆ.. ಹಿಂದಿಗರು ಹಿಂದಿ ಜೊತೆಗೆ ವಿಶ್ವ ಸಂಪರ್ಕ ಭಾಷೆ ಆಂಗ್ಲ ಕಲಿಯಬಹುದು ಆದರೆ ಅದೇ ನಮ್ಮ ಕನ್ನಡಿಗರು ಆಂಗ್ಲ ಕಲಿಯಬಾರದೇ ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆ ಹೇಗೆ!? ಒಕ್ಕೂಟ ವ್ಯವಸ್ಥೆಯಲ್ಲಿ ಇರುವ ಅನೇಕ ದೇಶ ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಅದೊಂದು ಅಧಿಕೃತ ಭಾಷೆ ಅಷ್ಟೆ. ಈ ಮೂಲಭೂತ ಸತ್ಯದ ಅರಿವು ಕೂಡ ಇರದವರನ್ನು ಕನ್ನಡ ಸಾಹಿತಿ ಎಂದು ಒಪ್ಪಿಕೊಳ್ಳುವುದು ಹೇಗೆ? ಇಂತಹ ಕನ್ನಡ ನುಡಿ ದ್ರೋಹಿಯನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದು ಯಾವ ಕಾರಣಕ್ಕೂ ಸಮಂಜಸವಲ್ಲ. ಬೇಕಾದರೆ ಅಭಾಹಿಂಸಾಸ (ಅಖಿಲ ಭಾರತ ಹಿಂದಿ ಸಾಹಿತ್ಯ ಸಮ್ಮೇಳನ) ಕ್ಕೆ ಅಧ್ಯಕ್ಷರಾಗಲಿ ಎಂದು ದಾದಾ ಖಲಂಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೊಡ್ಡರಂಗೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಕನ್ನಡ ಪ್ರಭ ಪತ್ರಿಕೆಯಲ್ಲಿ ಕವನವೊಂದನ್ನು ಬರೆದಿದ್ದರು. ಹಾಗಾಗಿಯೇ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಇವರು ಅಗ್ರಹಾರದ ಗೇಟ್ ಕೀಪರ್ ಕೆಲಸ ಮಾಡುತ್ತಿದ್ದಾರೆ ಎಂದೆಲ್ಲಾ ಕನ್ನಡಿಗರು ಟೀಕಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...