Homeಕರ್ನಾಟಕ"ಹಿಂದಿ ನಮ್ಮ ರಾಷ್ಟ್ರ ಭಾಷೆ": ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

“ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

- Advertisement -
- Advertisement -

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡರಂಗೇಗೌಡರ “ಹಿಂದಿ ನಮ್ಮ ರಾಷ್ಟ್ರ ಭಾಷೆ – ತಿರಸ್ಕಾರ ಏಕೆ?” ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಸಾವಿರಾರು ಕನ್ನಡಿಗರು ಹೇಳಿಕೆ ವಿರುದ್ಧ ಮುಗಿಬಿದ್ದಿದ್ದಾರೆ.

ದೊಡ್ಡರಂಗೇಗೌಡರು ಪ್ರಜಾವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ಇಂಗ್ಲಿಷ್ ಭಾಷೆಯನ್ನು ಒಪ್ಪುವ ನಾವು ಹಿಂದಿ ಭಾಷೆಯನ್ನು ತಿರಸ್ಕರಿಸುವುದು ಏಕೆ? ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಸ್ಥಾನಮಾನವಿದೆ. ಅದು ನಮ್ಮ ರಾಷ್ಟ್ರಭಾಷೆ” ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಕನ್ನಡಿಗರು ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಒಕ್ಕೂಟ ರಾಷ್ಟ್ರದಲ್ಲಿರುವ ಹಲವು ಭಾಷೆಗಳ ರೀತಿ ಅದು ಸಹ ಒಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ನೂರಾರು ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದಿ ಬಳಕೆಗೂ, ಹಿಂದಿ ಹೇರಿಕೆಗೂ ದೊಡ್ಡ ವ್ಯತ್ಯಾಸವಿದೆ. ಅದನ್ನು ತಿಳಿದುಕೊಂಡು ಮಾತನಾಡಿ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರು ಯಾವತ್ತೂ ಹಿಂದಿ ಭಾಷೆಯ ವಿರೋಧಿಗಳಲ್ಲ, ಅವರು ಏನಿದ್ದರೂ ಹಿಂದಿ ಭಾಷೆ ಹೇರಿಕೆಯ ವಿರೋಧಿಗಳು. ಇದರ ಕನಿಷ್ಠ ಜ್ಞಾನ ಇಲ್ಲದವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಹೇಗೆ? ಕನ್ನಡಿಗರ, ಕನ್ನಡದ ಮೇಲೆ ಅಭಿಮಾನ ಇದ್ದವರು ಮಾತ್ರ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಲಿ. ಅಧ್ಯಕ್ಷರು_ಬದಲಾಗಲಿ ಎಂದು ಫೈಜಲ್ ಎಂಬುವವರು ಒತ್ತಾಯಿಸಿದ್ದಾರೆ.

#ಹಿಂದಿಹೇರಿಕೆ ಬಗ್ಗೆ ತುಟಿ ಬಿಚ್ಚದ ದೊಡ್ಡಮನುಷ್ಯ ಕನ್ನಡ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ. #ಹಿಂದಿ ರಾಷ್ಟ್ರೀಯ ಭಾಷೆ ಅನ್ನುವ ದೊಡ್ಡಮನುಷ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ. 35000 ಗುಡಿಗಳನ್ನ ಕಟ್ಟಬೇಕು ಅನ್ನೋ ದೊಡ್ಡಮನುಷ್ಯ ಸಮಾಜದ ಹಿರಿಯ ಚಿಂತಕ-ಸಾಹಿತಿ. ಇವರಿಗೆಲ್ಲ ಬೇಕಿರೋದು ಕನ್ನಡವಲ್ಲ – ಪರಿಷತ್, ರಾಜ್ಯಸಭೆ, ಜ್ಞಾನಪೀಠ ಎಂದು ರವಿ ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಯಾವ ವೇದಿಕೆಯ ಮೇಲೆ ಬರಿ ಕನ್ನಡ ಮೆಳೈಸಬೇಕೊ, ಹಿಗ್ಗಿ ಉಬ್ಬಬೇಕೊ, ರಾರಾಜಿಸಬೇಕೊ, ಮೆರೆಯಬೇಕೊ, ಆಗಸದೆತ್ತರಕ್ಕೆ ಜಿಗಿಯಬೇಕೊ, ಜಗತ್ತಿಗೆ ತನ್ನ ಹಿರಿಮೆ ಪಸರಿಸಬೇಕೊ, ತನ್ನ ಒಡಲಿನ ಸಾಹಿತ್ಯ ಕಂದಮ್ಮಗಳ ಬಗ್ಗೆ ಹೆಮ್ಮೆಯಿಂದ ಸಾರಬೇಕೊ, ಗಟ್ಟಿಯಾಗಿ ತನ್ನ ಸಾವಿರಾರು ವರ್ಷಗಳ ವೈಭವ ಹೇಳಬೇಕೊ ಅಂತಹ ವೇದಿಕೆಯ ಅಧ್ಯಕ್ಷರಿಂದ ಹಿಂದಿ ಒಪ್ಪಿ ಎಂಬ ಸಂದೇಶ.. ಎಂದು ರೋಹಿತ್ ಸಿಂಹ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆಯಂತೆ.. ಹೀಗೆ ಹೇಳಿ ಹೇಳಿ ತಾನೇ ಕನ್ನಡಿಗರನ್ನು ಗುಲಾಮಗಿರಿಗೆ ತಳ್ಳಿರೋದು. ಕರ್ನಾಟಕದಲ್ಲಿ ಕನ್ನಡಕ್ಕೆ ಪುರಸ್ಕಾರ ಯಾಕಿಲ್ಲಾ ಅಂತ ಕೇಳೋದು ಬಿಟ್ಟು ಹಿಂದಿಗೆ ಯಾಕೆ ತಿರಸ್ಕಾರ ಅಂತ ಕೇಳ್ತಿದ್ದಾರೆ.. ಹಿಂದಿಗರು ಹಿಂದಿ ಜೊತೆಗೆ ವಿಶ್ವ ಸಂಪರ್ಕ ಭಾಷೆ ಆಂಗ್ಲ ಕಲಿಯಬಹುದು ಆದರೆ ಅದೇ ನಮ್ಮ ಕನ್ನಡಿಗರು ಆಂಗ್ಲ ಕಲಿಯಬಾರದೇ ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆ ಹೇಗೆ!? ಒಕ್ಕೂಟ ವ್ಯವಸ್ಥೆಯಲ್ಲಿ ಇರುವ ಅನೇಕ ದೇಶ ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಅದೊಂದು ಅಧಿಕೃತ ಭಾಷೆ ಅಷ್ಟೆ. ಈ ಮೂಲಭೂತ ಸತ್ಯದ ಅರಿವು ಕೂಡ ಇರದವರನ್ನು ಕನ್ನಡ ಸಾಹಿತಿ ಎಂದು ಒಪ್ಪಿಕೊಳ್ಳುವುದು ಹೇಗೆ? ಇಂತಹ ಕನ್ನಡ ನುಡಿ ದ್ರೋಹಿಯನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದು ಯಾವ ಕಾರಣಕ್ಕೂ ಸಮಂಜಸವಲ್ಲ. ಬೇಕಾದರೆ ಅಭಾಹಿಂಸಾಸ (ಅಖಿಲ ಭಾರತ ಹಿಂದಿ ಸಾಹಿತ್ಯ ಸಮ್ಮೇಳನ) ಕ್ಕೆ ಅಧ್ಯಕ್ಷರಾಗಲಿ ಎಂದು ದಾದಾ ಖಲಂಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೊಡ್ಡರಂಗೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಕನ್ನಡ ಪ್ರಭ ಪತ್ರಿಕೆಯಲ್ಲಿ ಕವನವೊಂದನ್ನು ಬರೆದಿದ್ದರು. ಹಾಗಾಗಿಯೇ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಇವರು ಅಗ್ರಹಾರದ ಗೇಟ್ ಕೀಪರ್ ಕೆಲಸ ಮಾಡುತ್ತಿದ್ದಾರೆ ಎಂದೆಲ್ಲಾ ಕನ್ನಡಿಗರು ಟೀಕಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....