Homeಕರ್ನಾಟಕ"ಹಿಂದಿ ನಮ್ಮ ರಾಷ್ಟ್ರ ಭಾಷೆ": ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

“ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

- Advertisement -
- Advertisement -

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡರಂಗೇಗೌಡರ “ಹಿಂದಿ ನಮ್ಮ ರಾಷ್ಟ್ರ ಭಾಷೆ – ತಿರಸ್ಕಾರ ಏಕೆ?” ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಸಾವಿರಾರು ಕನ್ನಡಿಗರು ಹೇಳಿಕೆ ವಿರುದ್ಧ ಮುಗಿಬಿದ್ದಿದ್ದಾರೆ.

ದೊಡ್ಡರಂಗೇಗೌಡರು ಪ್ರಜಾವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ಇಂಗ್ಲಿಷ್ ಭಾಷೆಯನ್ನು ಒಪ್ಪುವ ನಾವು ಹಿಂದಿ ಭಾಷೆಯನ್ನು ತಿರಸ್ಕರಿಸುವುದು ಏಕೆ? ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಸ್ಥಾನಮಾನವಿದೆ. ಅದು ನಮ್ಮ ರಾಷ್ಟ್ರಭಾಷೆ” ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಕನ್ನಡಿಗರು ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಒಕ್ಕೂಟ ರಾಷ್ಟ್ರದಲ್ಲಿರುವ ಹಲವು ಭಾಷೆಗಳ ರೀತಿ ಅದು ಸಹ ಒಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ನೂರಾರು ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದಿ ಬಳಕೆಗೂ, ಹಿಂದಿ ಹೇರಿಕೆಗೂ ದೊಡ್ಡ ವ್ಯತ್ಯಾಸವಿದೆ. ಅದನ್ನು ತಿಳಿದುಕೊಂಡು ಮಾತನಾಡಿ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರು ಯಾವತ್ತೂ ಹಿಂದಿ ಭಾಷೆಯ ವಿರೋಧಿಗಳಲ್ಲ, ಅವರು ಏನಿದ್ದರೂ ಹಿಂದಿ ಭಾಷೆ ಹೇರಿಕೆಯ ವಿರೋಧಿಗಳು. ಇದರ ಕನಿಷ್ಠ ಜ್ಞಾನ ಇಲ್ಲದವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಹೇಗೆ? ಕನ್ನಡಿಗರ, ಕನ್ನಡದ ಮೇಲೆ ಅಭಿಮಾನ ಇದ್ದವರು ಮಾತ್ರ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಲಿ. ಅಧ್ಯಕ್ಷರು_ಬದಲಾಗಲಿ ಎಂದು ಫೈಜಲ್ ಎಂಬುವವರು ಒತ್ತಾಯಿಸಿದ್ದಾರೆ.

#ಹಿಂದಿಹೇರಿಕೆ ಬಗ್ಗೆ ತುಟಿ ಬಿಚ್ಚದ ದೊಡ್ಡಮನುಷ್ಯ ಕನ್ನಡ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ. #ಹಿಂದಿ ರಾಷ್ಟ್ರೀಯ ಭಾಷೆ ಅನ್ನುವ ದೊಡ್ಡಮನುಷ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ. 35000 ಗುಡಿಗಳನ್ನ ಕಟ್ಟಬೇಕು ಅನ್ನೋ ದೊಡ್ಡಮನುಷ್ಯ ಸಮಾಜದ ಹಿರಿಯ ಚಿಂತಕ-ಸಾಹಿತಿ. ಇವರಿಗೆಲ್ಲ ಬೇಕಿರೋದು ಕನ್ನಡವಲ್ಲ – ಪರಿಷತ್, ರಾಜ್ಯಸಭೆ, ಜ್ಞಾನಪೀಠ ಎಂದು ರವಿ ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಯಾವ ವೇದಿಕೆಯ ಮೇಲೆ ಬರಿ ಕನ್ನಡ ಮೆಳೈಸಬೇಕೊ, ಹಿಗ್ಗಿ ಉಬ್ಬಬೇಕೊ, ರಾರಾಜಿಸಬೇಕೊ, ಮೆರೆಯಬೇಕೊ, ಆಗಸದೆತ್ತರಕ್ಕೆ ಜಿಗಿಯಬೇಕೊ, ಜಗತ್ತಿಗೆ ತನ್ನ ಹಿರಿಮೆ ಪಸರಿಸಬೇಕೊ, ತನ್ನ ಒಡಲಿನ ಸಾಹಿತ್ಯ ಕಂದಮ್ಮಗಳ ಬಗ್ಗೆ ಹೆಮ್ಮೆಯಿಂದ ಸಾರಬೇಕೊ, ಗಟ್ಟಿಯಾಗಿ ತನ್ನ ಸಾವಿರಾರು ವರ್ಷಗಳ ವೈಭವ ಹೇಳಬೇಕೊ ಅಂತಹ ವೇದಿಕೆಯ ಅಧ್ಯಕ್ಷರಿಂದ ಹಿಂದಿ ಒಪ್ಪಿ ಎಂಬ ಸಂದೇಶ.. ಎಂದು ರೋಹಿತ್ ಸಿಂಹ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆಯಂತೆ.. ಹೀಗೆ ಹೇಳಿ ಹೇಳಿ ತಾನೇ ಕನ್ನಡಿಗರನ್ನು ಗುಲಾಮಗಿರಿಗೆ ತಳ್ಳಿರೋದು. ಕರ್ನಾಟಕದಲ್ಲಿ ಕನ್ನಡಕ್ಕೆ ಪುರಸ್ಕಾರ ಯಾಕಿಲ್ಲಾ ಅಂತ ಕೇಳೋದು ಬಿಟ್ಟು ಹಿಂದಿಗೆ ಯಾಕೆ ತಿರಸ್ಕಾರ ಅಂತ ಕೇಳ್ತಿದ್ದಾರೆ.. ಹಿಂದಿಗರು ಹಿಂದಿ ಜೊತೆಗೆ ವಿಶ್ವ ಸಂಪರ್ಕ ಭಾಷೆ ಆಂಗ್ಲ ಕಲಿಯಬಹುದು ಆದರೆ ಅದೇ ನಮ್ಮ ಕನ್ನಡಿಗರು ಆಂಗ್ಲ ಕಲಿಯಬಾರದೇ ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆ ಹೇಗೆ!? ಒಕ್ಕೂಟ ವ್ಯವಸ್ಥೆಯಲ್ಲಿ ಇರುವ ಅನೇಕ ದೇಶ ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಅದೊಂದು ಅಧಿಕೃತ ಭಾಷೆ ಅಷ್ಟೆ. ಈ ಮೂಲಭೂತ ಸತ್ಯದ ಅರಿವು ಕೂಡ ಇರದವರನ್ನು ಕನ್ನಡ ಸಾಹಿತಿ ಎಂದು ಒಪ್ಪಿಕೊಳ್ಳುವುದು ಹೇಗೆ? ಇಂತಹ ಕನ್ನಡ ನುಡಿ ದ್ರೋಹಿಯನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದು ಯಾವ ಕಾರಣಕ್ಕೂ ಸಮಂಜಸವಲ್ಲ. ಬೇಕಾದರೆ ಅಭಾಹಿಂಸಾಸ (ಅಖಿಲ ಭಾರತ ಹಿಂದಿ ಸಾಹಿತ್ಯ ಸಮ್ಮೇಳನ) ಕ್ಕೆ ಅಧ್ಯಕ್ಷರಾಗಲಿ ಎಂದು ದಾದಾ ಖಲಂಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೊಡ್ಡರಂಗೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಕನ್ನಡ ಪ್ರಭ ಪತ್ರಿಕೆಯಲ್ಲಿ ಕವನವೊಂದನ್ನು ಬರೆದಿದ್ದರು. ಹಾಗಾಗಿಯೇ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಇವರು ಅಗ್ರಹಾರದ ಗೇಟ್ ಕೀಪರ್ ಕೆಲಸ ಮಾಡುತ್ತಿದ್ದಾರೆ ಎಂದೆಲ್ಲಾ ಕನ್ನಡಿಗರು ಟೀಕಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...