Homeಕರ್ನಾಟಕ"ಹಿಂದಿ ನಮ್ಮ ರಾಷ್ಟ್ರ ಭಾಷೆ": ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

“ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

- Advertisement -
- Advertisement -

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡರಂಗೇಗೌಡರ “ಹಿಂದಿ ನಮ್ಮ ರಾಷ್ಟ್ರ ಭಾಷೆ – ತಿರಸ್ಕಾರ ಏಕೆ?” ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಸಾವಿರಾರು ಕನ್ನಡಿಗರು ಹೇಳಿಕೆ ವಿರುದ್ಧ ಮುಗಿಬಿದ್ದಿದ್ದಾರೆ.

ದೊಡ್ಡರಂಗೇಗೌಡರು ಪ್ರಜಾವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ಇಂಗ್ಲಿಷ್ ಭಾಷೆಯನ್ನು ಒಪ್ಪುವ ನಾವು ಹಿಂದಿ ಭಾಷೆಯನ್ನು ತಿರಸ್ಕರಿಸುವುದು ಏಕೆ? ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಸ್ಥಾನಮಾನವಿದೆ. ಅದು ನಮ್ಮ ರಾಷ್ಟ್ರಭಾಷೆ” ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಕನ್ನಡಿಗರು ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಒಕ್ಕೂಟ ರಾಷ್ಟ್ರದಲ್ಲಿರುವ ಹಲವು ಭಾಷೆಗಳ ರೀತಿ ಅದು ಸಹ ಒಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ನೂರಾರು ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದಿ ಬಳಕೆಗೂ, ಹಿಂದಿ ಹೇರಿಕೆಗೂ ದೊಡ್ಡ ವ್ಯತ್ಯಾಸವಿದೆ. ಅದನ್ನು ತಿಳಿದುಕೊಂಡು ಮಾತನಾಡಿ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರು ಯಾವತ್ತೂ ಹಿಂದಿ ಭಾಷೆಯ ವಿರೋಧಿಗಳಲ್ಲ, ಅವರು ಏನಿದ್ದರೂ ಹಿಂದಿ ಭಾಷೆ ಹೇರಿಕೆಯ ವಿರೋಧಿಗಳು. ಇದರ ಕನಿಷ್ಠ ಜ್ಞಾನ ಇಲ್ಲದವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಹೇಗೆ? ಕನ್ನಡಿಗರ, ಕನ್ನಡದ ಮೇಲೆ ಅಭಿಮಾನ ಇದ್ದವರು ಮಾತ್ರ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಲಿ. ಅಧ್ಯಕ್ಷರು_ಬದಲಾಗಲಿ ಎಂದು ಫೈಜಲ್ ಎಂಬುವವರು ಒತ್ತಾಯಿಸಿದ್ದಾರೆ.

#ಹಿಂದಿಹೇರಿಕೆ ಬಗ್ಗೆ ತುಟಿ ಬಿಚ್ಚದ ದೊಡ್ಡಮನುಷ್ಯ ಕನ್ನಡ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ. #ಹಿಂದಿ ರಾಷ್ಟ್ರೀಯ ಭಾಷೆ ಅನ್ನುವ ದೊಡ್ಡಮನುಷ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ. 35000 ಗುಡಿಗಳನ್ನ ಕಟ್ಟಬೇಕು ಅನ್ನೋ ದೊಡ್ಡಮನುಷ್ಯ ಸಮಾಜದ ಹಿರಿಯ ಚಿಂತಕ-ಸಾಹಿತಿ. ಇವರಿಗೆಲ್ಲ ಬೇಕಿರೋದು ಕನ್ನಡವಲ್ಲ – ಪರಿಷತ್, ರಾಜ್ಯಸಭೆ, ಜ್ಞಾನಪೀಠ ಎಂದು ರವಿ ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಯಾವ ವೇದಿಕೆಯ ಮೇಲೆ ಬರಿ ಕನ್ನಡ ಮೆಳೈಸಬೇಕೊ, ಹಿಗ್ಗಿ ಉಬ್ಬಬೇಕೊ, ರಾರಾಜಿಸಬೇಕೊ, ಮೆರೆಯಬೇಕೊ, ಆಗಸದೆತ್ತರಕ್ಕೆ ಜಿಗಿಯಬೇಕೊ, ಜಗತ್ತಿಗೆ ತನ್ನ ಹಿರಿಮೆ ಪಸರಿಸಬೇಕೊ, ತನ್ನ ಒಡಲಿನ ಸಾಹಿತ್ಯ ಕಂದಮ್ಮಗಳ ಬಗ್ಗೆ ಹೆಮ್ಮೆಯಿಂದ ಸಾರಬೇಕೊ, ಗಟ್ಟಿಯಾಗಿ ತನ್ನ ಸಾವಿರಾರು ವರ್ಷಗಳ ವೈಭವ ಹೇಳಬೇಕೊ ಅಂತಹ ವೇದಿಕೆಯ ಅಧ್ಯಕ್ಷರಿಂದ ಹಿಂದಿ ಒಪ್ಪಿ ಎಂಬ ಸಂದೇಶ.. ಎಂದು ರೋಹಿತ್ ಸಿಂಹ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆಯಂತೆ.. ಹೀಗೆ ಹೇಳಿ ಹೇಳಿ ತಾನೇ ಕನ್ನಡಿಗರನ್ನು ಗುಲಾಮಗಿರಿಗೆ ತಳ್ಳಿರೋದು. ಕರ್ನಾಟಕದಲ್ಲಿ ಕನ್ನಡಕ್ಕೆ ಪುರಸ್ಕಾರ ಯಾಕಿಲ್ಲಾ ಅಂತ ಕೇಳೋದು ಬಿಟ್ಟು ಹಿಂದಿಗೆ ಯಾಕೆ ತಿರಸ್ಕಾರ ಅಂತ ಕೇಳ್ತಿದ್ದಾರೆ.. ಹಿಂದಿಗರು ಹಿಂದಿ ಜೊತೆಗೆ ವಿಶ್ವ ಸಂಪರ್ಕ ಭಾಷೆ ಆಂಗ್ಲ ಕಲಿಯಬಹುದು ಆದರೆ ಅದೇ ನಮ್ಮ ಕನ್ನಡಿಗರು ಆಂಗ್ಲ ಕಲಿಯಬಾರದೇ ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆ ಹೇಗೆ!? ಒಕ್ಕೂಟ ವ್ಯವಸ್ಥೆಯಲ್ಲಿ ಇರುವ ಅನೇಕ ದೇಶ ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಅದೊಂದು ಅಧಿಕೃತ ಭಾಷೆ ಅಷ್ಟೆ. ಈ ಮೂಲಭೂತ ಸತ್ಯದ ಅರಿವು ಕೂಡ ಇರದವರನ್ನು ಕನ್ನಡ ಸಾಹಿತಿ ಎಂದು ಒಪ್ಪಿಕೊಳ್ಳುವುದು ಹೇಗೆ? ಇಂತಹ ಕನ್ನಡ ನುಡಿ ದ್ರೋಹಿಯನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದು ಯಾವ ಕಾರಣಕ್ಕೂ ಸಮಂಜಸವಲ್ಲ. ಬೇಕಾದರೆ ಅಭಾಹಿಂಸಾಸ (ಅಖಿಲ ಭಾರತ ಹಿಂದಿ ಸಾಹಿತ್ಯ ಸಮ್ಮೇಳನ) ಕ್ಕೆ ಅಧ್ಯಕ್ಷರಾಗಲಿ ಎಂದು ದಾದಾ ಖಲಂಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೊಡ್ಡರಂಗೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಕನ್ನಡ ಪ್ರಭ ಪತ್ರಿಕೆಯಲ್ಲಿ ಕವನವೊಂದನ್ನು ಬರೆದಿದ್ದರು. ಹಾಗಾಗಿಯೇ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಇವರು ಅಗ್ರಹಾರದ ಗೇಟ್ ಕೀಪರ್ ಕೆಲಸ ಮಾಡುತ್ತಿದ್ದಾರೆ ಎಂದೆಲ್ಲಾ ಕನ್ನಡಿಗರು ಟೀಕಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...