Homeಕರ್ನಾಟಕ"ಹಿಂದಿ ನಮ್ಮ ರಾಷ್ಟ್ರ ಭಾಷೆ": ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

“ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

- Advertisement -
- Advertisement -

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡರಂಗೇಗೌಡರ “ಹಿಂದಿ ನಮ್ಮ ರಾಷ್ಟ್ರ ಭಾಷೆ – ತಿರಸ್ಕಾರ ಏಕೆ?” ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಸಾವಿರಾರು ಕನ್ನಡಿಗರು ಹೇಳಿಕೆ ವಿರುದ್ಧ ಮುಗಿಬಿದ್ದಿದ್ದಾರೆ.

ದೊಡ್ಡರಂಗೇಗೌಡರು ಪ್ರಜಾವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ಇಂಗ್ಲಿಷ್ ಭಾಷೆಯನ್ನು ಒಪ್ಪುವ ನಾವು ಹಿಂದಿ ಭಾಷೆಯನ್ನು ತಿರಸ್ಕರಿಸುವುದು ಏಕೆ? ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಸ್ಥಾನಮಾನವಿದೆ. ಅದು ನಮ್ಮ ರಾಷ್ಟ್ರಭಾಷೆ” ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಕನ್ನಡಿಗರು ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಒಕ್ಕೂಟ ರಾಷ್ಟ್ರದಲ್ಲಿರುವ ಹಲವು ಭಾಷೆಗಳ ರೀತಿ ಅದು ಸಹ ಒಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ನೂರಾರು ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದಿ ಬಳಕೆಗೂ, ಹಿಂದಿ ಹೇರಿಕೆಗೂ ದೊಡ್ಡ ವ್ಯತ್ಯಾಸವಿದೆ. ಅದನ್ನು ತಿಳಿದುಕೊಂಡು ಮಾತನಾಡಿ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರು ಯಾವತ್ತೂ ಹಿಂದಿ ಭಾಷೆಯ ವಿರೋಧಿಗಳಲ್ಲ, ಅವರು ಏನಿದ್ದರೂ ಹಿಂದಿ ಭಾಷೆ ಹೇರಿಕೆಯ ವಿರೋಧಿಗಳು. ಇದರ ಕನಿಷ್ಠ ಜ್ಞಾನ ಇಲ್ಲದವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಹೇಗೆ? ಕನ್ನಡಿಗರ, ಕನ್ನಡದ ಮೇಲೆ ಅಭಿಮಾನ ಇದ್ದವರು ಮಾತ್ರ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಲಿ. ಅಧ್ಯಕ್ಷರು_ಬದಲಾಗಲಿ ಎಂದು ಫೈಜಲ್ ಎಂಬುವವರು ಒತ್ತಾಯಿಸಿದ್ದಾರೆ.

#ಹಿಂದಿಹೇರಿಕೆ ಬಗ್ಗೆ ತುಟಿ ಬಿಚ್ಚದ ದೊಡ್ಡಮನುಷ್ಯ ಕನ್ನಡ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ. #ಹಿಂದಿ ರಾಷ್ಟ್ರೀಯ ಭಾಷೆ ಅನ್ನುವ ದೊಡ್ಡಮನುಷ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ. 35000 ಗುಡಿಗಳನ್ನ ಕಟ್ಟಬೇಕು ಅನ್ನೋ ದೊಡ್ಡಮನುಷ್ಯ ಸಮಾಜದ ಹಿರಿಯ ಚಿಂತಕ-ಸಾಹಿತಿ. ಇವರಿಗೆಲ್ಲ ಬೇಕಿರೋದು ಕನ್ನಡವಲ್ಲ – ಪರಿಷತ್, ರಾಜ್ಯಸಭೆ, ಜ್ಞಾನಪೀಠ ಎಂದು ರವಿ ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಯಾವ ವೇದಿಕೆಯ ಮೇಲೆ ಬರಿ ಕನ್ನಡ ಮೆಳೈಸಬೇಕೊ, ಹಿಗ್ಗಿ ಉಬ್ಬಬೇಕೊ, ರಾರಾಜಿಸಬೇಕೊ, ಮೆರೆಯಬೇಕೊ, ಆಗಸದೆತ್ತರಕ್ಕೆ ಜಿಗಿಯಬೇಕೊ, ಜಗತ್ತಿಗೆ ತನ್ನ ಹಿರಿಮೆ ಪಸರಿಸಬೇಕೊ, ತನ್ನ ಒಡಲಿನ ಸಾಹಿತ್ಯ ಕಂದಮ್ಮಗಳ ಬಗ್ಗೆ ಹೆಮ್ಮೆಯಿಂದ ಸಾರಬೇಕೊ, ಗಟ್ಟಿಯಾಗಿ ತನ್ನ ಸಾವಿರಾರು ವರ್ಷಗಳ ವೈಭವ ಹೇಳಬೇಕೊ ಅಂತಹ ವೇದಿಕೆಯ ಅಧ್ಯಕ್ಷರಿಂದ ಹಿಂದಿ ಒಪ್ಪಿ ಎಂಬ ಸಂದೇಶ.. ಎಂದು ರೋಹಿತ್ ಸಿಂಹ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆಯಂತೆ.. ಹೀಗೆ ಹೇಳಿ ಹೇಳಿ ತಾನೇ ಕನ್ನಡಿಗರನ್ನು ಗುಲಾಮಗಿರಿಗೆ ತಳ್ಳಿರೋದು. ಕರ್ನಾಟಕದಲ್ಲಿ ಕನ್ನಡಕ್ಕೆ ಪುರಸ್ಕಾರ ಯಾಕಿಲ್ಲಾ ಅಂತ ಕೇಳೋದು ಬಿಟ್ಟು ಹಿಂದಿಗೆ ಯಾಕೆ ತಿರಸ್ಕಾರ ಅಂತ ಕೇಳ್ತಿದ್ದಾರೆ.. ಹಿಂದಿಗರು ಹಿಂದಿ ಜೊತೆಗೆ ವಿಶ್ವ ಸಂಪರ್ಕ ಭಾಷೆ ಆಂಗ್ಲ ಕಲಿಯಬಹುದು ಆದರೆ ಅದೇ ನಮ್ಮ ಕನ್ನಡಿಗರು ಆಂಗ್ಲ ಕಲಿಯಬಾರದೇ ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆ ಹೇಗೆ!? ಒಕ್ಕೂಟ ವ್ಯವಸ್ಥೆಯಲ್ಲಿ ಇರುವ ಅನೇಕ ದೇಶ ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಅದೊಂದು ಅಧಿಕೃತ ಭಾಷೆ ಅಷ್ಟೆ. ಈ ಮೂಲಭೂತ ಸತ್ಯದ ಅರಿವು ಕೂಡ ಇರದವರನ್ನು ಕನ್ನಡ ಸಾಹಿತಿ ಎಂದು ಒಪ್ಪಿಕೊಳ್ಳುವುದು ಹೇಗೆ? ಇಂತಹ ಕನ್ನಡ ನುಡಿ ದ್ರೋಹಿಯನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದು ಯಾವ ಕಾರಣಕ್ಕೂ ಸಮಂಜಸವಲ್ಲ. ಬೇಕಾದರೆ ಅಭಾಹಿಂಸಾಸ (ಅಖಿಲ ಭಾರತ ಹಿಂದಿ ಸಾಹಿತ್ಯ ಸಮ್ಮೇಳನ) ಕ್ಕೆ ಅಧ್ಯಕ್ಷರಾಗಲಿ ಎಂದು ದಾದಾ ಖಲಂಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೊಡ್ಡರಂಗೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಕನ್ನಡ ಪ್ರಭ ಪತ್ರಿಕೆಯಲ್ಲಿ ಕವನವೊಂದನ್ನು ಬರೆದಿದ್ದರು. ಹಾಗಾಗಿಯೇ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಇವರು ಅಗ್ರಹಾರದ ಗೇಟ್ ಕೀಪರ್ ಕೆಲಸ ಮಾಡುತ್ತಿದ್ದಾರೆ ಎಂದೆಲ್ಲಾ ಕನ್ನಡಿಗರು ಟೀಕಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....