Homeಮುಖಪುಟ"ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ": ಡಿಎಂಕೆ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ

- Advertisement -
- Advertisement -

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ” ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರಿಗೆ ತಾಕೀತು ಮಾಡಿರುವುದಾಗಿ ವರದಿಗಳು ತಿಳಿಸಿವೆ.

ಮಂಗಳವಾರ ನವದೆಹಲಿಯಲ್ಲಿ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ನಿತೀಶ್ ಕುಮಾರ್ ಮಾತನಾಡಲು ಶುರು ಮಾಡಿದಾಗ ಡಿಎಂಕೆ ನಾಯಕರಾದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಡಿಎಂಕೆ ನಾಯಕ ಟಿ.ಆರ್ ಬಾಲು ಅವರು ನಿತೀಶ್ ಕುಮಾರ್ ಅವರ ಹಿಂದಿ ಭಾಷಣವನ್ನು ಇಂಗ್ಲಿಷ್‌ಗೆ ಭಾಷಾಂತರಿಸುವಂತೆ ಕೋರಿದ್ದರು.

ಈ ವೇಳೆ ರಾಷ್ಟ್ರೀಯ ಜನತಾ ದಳದ ರಾಜ್ಯಸಭಾ ಸಂಸದ ಮನೋಜ್ ಕೆ. ಝಾ ಅವರು ನಿತೀಶ್ ಕುಮಾರ್ ಭಾಷಣವನ್ನು ಭಾಷಾಂತರಿಸಲು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನಿತೀಶ್ ಕುಮಾರ್ ” ಹಿಂದಿ ನಮ್ಮ ರಾಷ್ಟ್ರ ಭಾಷೆ, ಅದನ್ನು ಕಲಿಯಿರಿ. ಎಲ್ಲವನ್ನು ಭಾಷಾಂತರ ಮಾಡುತ್ತಾ ಕೂರಲು ಆಗುತ್ತಾ?” ಎಂದು ಪ್ರಶ್ನಿಸಿದ್ದಾಗಿ ತಿಳಿದು ಬಂದಿದೆ.

ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಹೋರಾಟ ಮತ್ತು ಇಂಗ್ಲಿಷ್ ಹೇರಿಕೆಯ ಬಗ್ಗೆ ಇದೇ ವೇಳೆ ನಿತೀಶ್ ಕುಮಾರ್ ಮಾತನಾಡಿದ್ದಾರೆ ಎನ್ನಲಾಗಿದ್ದು, ನಿತೀಶ್ ಹೇಳಿಕೆ ಸಂಬಂಧ ಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಭಾಷಾಂತರ ಕೇಳಿದ್ದಕ್ಕೆ ಕೋಪಗೊಂಡಿದ್ದ ನಿತೀಶ್ ಕುಮಾರ್ ಅವರನ್ನು ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಇತರ ನಾಯಕರು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಆದರೂ, ಅವರು ಸಮಾಧಾನಗೊಂಡಿಲ್ಲ ಎನ್ನಲಾಗಿದೆ. ನಿತೀಶ್ ಕುಮಾರ್ ಭಾಷಣದ ಬಳಿಕ ಲಾಲೂ ಪ್ರಸಾದ್ ಯಾದವ್ ಕೂಡ ಹಿಂದಿಯಲ್ಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಬಳಿಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಕೆಲ ಹಿಂದಿ ಮಾತನಾಡುವ ನಾಯಕರನ್ನು ಹಿಂದಿ ಬದಲು ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದಾರೆ.

ತಮಿಳುನಾಡು ಹಿಂದಿ ಭಾಷೆಯ ಹೇರಿಕೆಯನ್ನು ಕಠುವಾಗಿ ವಿರೋಧಿಸುವ ರಾಜ್ಯವಾಗಿದೆ. ಅಲ್ಲಿನ ಸಾಮಾನ್ಯ ಜನರು, ರಾಜಕೀಯ ನಾಯಕರೂ ಕೂಡ ಹಿಂದಿಯನ್ನು ಒಪ್ಪಿಕೊಳ್ಳುವುದಿಲ್ಲ. ಈ ಹಿಂದೆ ಹಿಂದಿ ಹೇರಿಕೆಯ ವಿರುದ್ಧ ತಮಿಳುನಾಡಿನಲ್ಲಿ ದೊಡ್ಡ ಕ್ರಾಂತಿಯೇ ಆಗಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಕಳೆದ 10 ವರ್ಷಗಳಿಂದ ಇದೆ. ತಮಿಳುನಾಡು ಮೋದಿ ಸರ್ಕಾರದ ಹಿಂದಿ ಹೇರಿಕೆಯನ್ನು ಸದಾ ವಿರೋಧಿಸುತ್ತಲೇ ಬಂದಿದೆ. ಆದರೆ, ಈಗ ಡಿಎಂಕೆಯ ಮಿತ್ರ ಪಕ್ಷದ ನಾಯಕನೇ ಹಿಂದಿ ಹೇರಿಕೆಯ ಮಾತನಾಡಿರುವುದು ಹೊಸತೊಂದು ಚರ್ಚೆಯನ್ನು ಹುಟ್ಟು ಹಾಕಿದೆ.

ಇದನ್ನೂ ಓದಿ: “ಅವರು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾರೆ”: ಸಂಸದರ ಅಮಾನತು ಕುರಿತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...