Homeಮುಖಪುಟ"ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ": ಡಿಎಂಕೆ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ

- Advertisement -
- Advertisement -

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ” ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರಿಗೆ ತಾಕೀತು ಮಾಡಿರುವುದಾಗಿ ವರದಿಗಳು ತಿಳಿಸಿವೆ.

ಮಂಗಳವಾರ ನವದೆಹಲಿಯಲ್ಲಿ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ನಿತೀಶ್ ಕುಮಾರ್ ಮಾತನಾಡಲು ಶುರು ಮಾಡಿದಾಗ ಡಿಎಂಕೆ ನಾಯಕರಾದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಡಿಎಂಕೆ ನಾಯಕ ಟಿ.ಆರ್ ಬಾಲು ಅವರು ನಿತೀಶ್ ಕುಮಾರ್ ಅವರ ಹಿಂದಿ ಭಾಷಣವನ್ನು ಇಂಗ್ಲಿಷ್‌ಗೆ ಭಾಷಾಂತರಿಸುವಂತೆ ಕೋರಿದ್ದರು.

ಈ ವೇಳೆ ರಾಷ್ಟ್ರೀಯ ಜನತಾ ದಳದ ರಾಜ್ಯಸಭಾ ಸಂಸದ ಮನೋಜ್ ಕೆ. ಝಾ ಅವರು ನಿತೀಶ್ ಕುಮಾರ್ ಭಾಷಣವನ್ನು ಭಾಷಾಂತರಿಸಲು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನಿತೀಶ್ ಕುಮಾರ್ ” ಹಿಂದಿ ನಮ್ಮ ರಾಷ್ಟ್ರ ಭಾಷೆ, ಅದನ್ನು ಕಲಿಯಿರಿ. ಎಲ್ಲವನ್ನು ಭಾಷಾಂತರ ಮಾಡುತ್ತಾ ಕೂರಲು ಆಗುತ್ತಾ?” ಎಂದು ಪ್ರಶ್ನಿಸಿದ್ದಾಗಿ ತಿಳಿದು ಬಂದಿದೆ.

ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಹೋರಾಟ ಮತ್ತು ಇಂಗ್ಲಿಷ್ ಹೇರಿಕೆಯ ಬಗ್ಗೆ ಇದೇ ವೇಳೆ ನಿತೀಶ್ ಕುಮಾರ್ ಮಾತನಾಡಿದ್ದಾರೆ ಎನ್ನಲಾಗಿದ್ದು, ನಿತೀಶ್ ಹೇಳಿಕೆ ಸಂಬಂಧ ಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಭಾಷಾಂತರ ಕೇಳಿದ್ದಕ್ಕೆ ಕೋಪಗೊಂಡಿದ್ದ ನಿತೀಶ್ ಕುಮಾರ್ ಅವರನ್ನು ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಇತರ ನಾಯಕರು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಆದರೂ, ಅವರು ಸಮಾಧಾನಗೊಂಡಿಲ್ಲ ಎನ್ನಲಾಗಿದೆ. ನಿತೀಶ್ ಕುಮಾರ್ ಭಾಷಣದ ಬಳಿಕ ಲಾಲೂ ಪ್ರಸಾದ್ ಯಾದವ್ ಕೂಡ ಹಿಂದಿಯಲ್ಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಬಳಿಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಕೆಲ ಹಿಂದಿ ಮಾತನಾಡುವ ನಾಯಕರನ್ನು ಹಿಂದಿ ಬದಲು ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದಾರೆ.

ತಮಿಳುನಾಡು ಹಿಂದಿ ಭಾಷೆಯ ಹೇರಿಕೆಯನ್ನು ಕಠುವಾಗಿ ವಿರೋಧಿಸುವ ರಾಜ್ಯವಾಗಿದೆ. ಅಲ್ಲಿನ ಸಾಮಾನ್ಯ ಜನರು, ರಾಜಕೀಯ ನಾಯಕರೂ ಕೂಡ ಹಿಂದಿಯನ್ನು ಒಪ್ಪಿಕೊಳ್ಳುವುದಿಲ್ಲ. ಈ ಹಿಂದೆ ಹಿಂದಿ ಹೇರಿಕೆಯ ವಿರುದ್ಧ ತಮಿಳುನಾಡಿನಲ್ಲಿ ದೊಡ್ಡ ಕ್ರಾಂತಿಯೇ ಆಗಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಕಳೆದ 10 ವರ್ಷಗಳಿಂದ ಇದೆ. ತಮಿಳುನಾಡು ಮೋದಿ ಸರ್ಕಾರದ ಹಿಂದಿ ಹೇರಿಕೆಯನ್ನು ಸದಾ ವಿರೋಧಿಸುತ್ತಲೇ ಬಂದಿದೆ. ಆದರೆ, ಈಗ ಡಿಎಂಕೆಯ ಮಿತ್ರ ಪಕ್ಷದ ನಾಯಕನೇ ಹಿಂದಿ ಹೇರಿಕೆಯ ಮಾತನಾಡಿರುವುದು ಹೊಸತೊಂದು ಚರ್ಚೆಯನ್ನು ಹುಟ್ಟು ಹಾಕಿದೆ.

ಇದನ್ನೂ ಓದಿ: “ಅವರು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾರೆ”: ಸಂಸದರ ಅಮಾನತು ಕುರಿತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...