Homeಮುಖಪುಟ"ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ": ಡಿಎಂಕೆ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ

- Advertisement -
- Advertisement -

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ” ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರಿಗೆ ತಾಕೀತು ಮಾಡಿರುವುದಾಗಿ ವರದಿಗಳು ತಿಳಿಸಿವೆ.

ಮಂಗಳವಾರ ನವದೆಹಲಿಯಲ್ಲಿ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ನಿತೀಶ್ ಕುಮಾರ್ ಮಾತನಾಡಲು ಶುರು ಮಾಡಿದಾಗ ಡಿಎಂಕೆ ನಾಯಕರಾದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಡಿಎಂಕೆ ನಾಯಕ ಟಿ.ಆರ್ ಬಾಲು ಅವರು ನಿತೀಶ್ ಕುಮಾರ್ ಅವರ ಹಿಂದಿ ಭಾಷಣವನ್ನು ಇಂಗ್ಲಿಷ್‌ಗೆ ಭಾಷಾಂತರಿಸುವಂತೆ ಕೋರಿದ್ದರು.

ಈ ವೇಳೆ ರಾಷ್ಟ್ರೀಯ ಜನತಾ ದಳದ ರಾಜ್ಯಸಭಾ ಸಂಸದ ಮನೋಜ್ ಕೆ. ಝಾ ಅವರು ನಿತೀಶ್ ಕುಮಾರ್ ಭಾಷಣವನ್ನು ಭಾಷಾಂತರಿಸಲು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನಿತೀಶ್ ಕುಮಾರ್ ” ಹಿಂದಿ ನಮ್ಮ ರಾಷ್ಟ್ರ ಭಾಷೆ, ಅದನ್ನು ಕಲಿಯಿರಿ. ಎಲ್ಲವನ್ನು ಭಾಷಾಂತರ ಮಾಡುತ್ತಾ ಕೂರಲು ಆಗುತ್ತಾ?” ಎಂದು ಪ್ರಶ್ನಿಸಿದ್ದಾಗಿ ತಿಳಿದು ಬಂದಿದೆ.

ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಹೋರಾಟ ಮತ್ತು ಇಂಗ್ಲಿಷ್ ಹೇರಿಕೆಯ ಬಗ್ಗೆ ಇದೇ ವೇಳೆ ನಿತೀಶ್ ಕುಮಾರ್ ಮಾತನಾಡಿದ್ದಾರೆ ಎನ್ನಲಾಗಿದ್ದು, ನಿತೀಶ್ ಹೇಳಿಕೆ ಸಂಬಂಧ ಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಭಾಷಾಂತರ ಕೇಳಿದ್ದಕ್ಕೆ ಕೋಪಗೊಂಡಿದ್ದ ನಿತೀಶ್ ಕುಮಾರ್ ಅವರನ್ನು ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಇತರ ನಾಯಕರು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಆದರೂ, ಅವರು ಸಮಾಧಾನಗೊಂಡಿಲ್ಲ ಎನ್ನಲಾಗಿದೆ. ನಿತೀಶ್ ಕುಮಾರ್ ಭಾಷಣದ ಬಳಿಕ ಲಾಲೂ ಪ್ರಸಾದ್ ಯಾದವ್ ಕೂಡ ಹಿಂದಿಯಲ್ಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಬಳಿಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಕೆಲ ಹಿಂದಿ ಮಾತನಾಡುವ ನಾಯಕರನ್ನು ಹಿಂದಿ ಬದಲು ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದಾರೆ.

ತಮಿಳುನಾಡು ಹಿಂದಿ ಭಾಷೆಯ ಹೇರಿಕೆಯನ್ನು ಕಠುವಾಗಿ ವಿರೋಧಿಸುವ ರಾಜ್ಯವಾಗಿದೆ. ಅಲ್ಲಿನ ಸಾಮಾನ್ಯ ಜನರು, ರಾಜಕೀಯ ನಾಯಕರೂ ಕೂಡ ಹಿಂದಿಯನ್ನು ಒಪ್ಪಿಕೊಳ್ಳುವುದಿಲ್ಲ. ಈ ಹಿಂದೆ ಹಿಂದಿ ಹೇರಿಕೆಯ ವಿರುದ್ಧ ತಮಿಳುನಾಡಿನಲ್ಲಿ ದೊಡ್ಡ ಕ್ರಾಂತಿಯೇ ಆಗಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಕಳೆದ 10 ವರ್ಷಗಳಿಂದ ಇದೆ. ತಮಿಳುನಾಡು ಮೋದಿ ಸರ್ಕಾರದ ಹಿಂದಿ ಹೇರಿಕೆಯನ್ನು ಸದಾ ವಿರೋಧಿಸುತ್ತಲೇ ಬಂದಿದೆ. ಆದರೆ, ಈಗ ಡಿಎಂಕೆಯ ಮಿತ್ರ ಪಕ್ಷದ ನಾಯಕನೇ ಹಿಂದಿ ಹೇರಿಕೆಯ ಮಾತನಾಡಿರುವುದು ಹೊಸತೊಂದು ಚರ್ಚೆಯನ್ನು ಹುಟ್ಟು ಹಾಕಿದೆ.

ಇದನ್ನೂ ಓದಿ: “ಅವರು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾರೆ”: ಸಂಸದರ ಅಮಾನತು ಕುರಿತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...