Homeಮುಖಪುಟಇಂಗ್ಲಿಷ್ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಗೆ ಹಿಂದಿ ಹೆಸರು: ಕೇರಳದಿಂದ ತೀವ್ರ ವಿರೋಧ

ಇಂಗ್ಲಿಷ್ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಗೆ ಹಿಂದಿ ಹೆಸರು: ಕೇರಳದಿಂದ ತೀವ್ರ ವಿರೋಧ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಆರ್‌ಟಿ) ತನ್ನ ಹಲವು ಹೊಸ ಇಂಗ್ಲಿಷ್ ಮಾಧ್ಯಮ ಪಠ್ಯಪುಸ್ತಕಗಳಿಗೆ ಹಿಂದಿ ಶೀರ್ಷಿಕೆಗಳನ್ನು ನೀಡಿದೆ. ಅವುಗಳಲ್ಲಿ ಇಂಗ್ಲಿಷ್ ಭಾಷೆಯನ್ನು ಕಲಿಸಲು ಉದ್ದೇಶಿಸಲಾದ ಪುಸ್ತಕಗಳು ಸೇರಿವೆ ಎಂದು ಇಂಡಿಯಾ ಟುಡೇ ಸೋಮವಾರ ವರದಿ ಮಾಡಿದೆ.

ಎನ್‌ಸಿಆರ್‌ಟಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಶಾಲಾ ಶಿಕ್ಷಣವನ್ನು ಸುಧಾರಿಸುವ ಕಾರ್ಯಕ್ರಮಗಳು ಮತ್ತು ನೀತಿಗಳ ಕುರಿತು ಸರ್ಕಾರಕ್ಕೆ ಸಲಹೆಗಳನ್ನು ನೀಡುತ್ತದೆ.

ಪಠ್ಯಪುಸ್ತಕಗಳ ಶೀರ್ಷಿಕೆಗಳನ್ನು ಬದಲಾಯಿಸುವ ಮಂಡಳಿಯ ನಿರ್ಧಾರವನ್ನು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಟೀಕಿಸಿದ್ದಾರೆ. ಈ ನಿರ್ಧಾರವು ಅರ್ಥಹೀನ ಎಂದು  ಅವರು ಹೇಳಿದ್ದು, ಪುನರ್‌ ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಹಿಂದೆ 6ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಕ್ಕೆ ‘ಹನಿಸಕಲ್’ ಎಂಬ ಹೆಸರಿತ್ತು. ಅದನ್ನು ಈಗ ‘ಪೂರ್ವಿ’ ಎಂದು ಬದಲಾಯಿಸಲಾಗಿದೆ. ಇದರ ಹಿಂದಿ ಅರ್ಥ ‘ಪೂರ್ವ’ ಎಂದಾಗಿದೆ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಒಂದು ರಾಗದ ಹೆಸರೂ ಹೌದು ಎಂದು ವರದಿ ಹೇಳಿದೆ.

ಮುಂದುವರಿದು, 1 ಮತ್ತು 2 ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಗಳಿಗೆ ಈಗ ‘ಮೃದಂಗ್’ ಎಂದು ಹೆಸರಿಸಲಾಗಿದೆ ಮತ್ತು 3 ನೇ ತರಗತಿಯ ಪಠ್ಯಪುಸ್ತಕದ ಹೆಸರನ್ನು ‘ಸಂತೂರ್’ ಎಂದು ಬದಲಾಯಿಸಲಾಗಿದೆ. ಮೃದಂಗ್ ಮತ್ತು ಸಂತೂರ್ ಭಾರತೀಯ ಸಂಗೀತ ವಾದ್ಯಗಳ ಹೆಸರುಗಳಾಗಿವೆ.

ಎನ್‌ಸಿಇಆರ್‌ಟಿ ಈ ಹಿಂದೆ ವಿವಿಧ ಭಾಷೆಗಳಲ್ಲಿ ಪಠ್ಯಪುಸ್ತಕಗಳಿಗೆ ವಿಭಿನ್ನ ಶೀರ್ಷಿಕೆಗಳನ್ನು ಬಳಸಿತ್ತು ಎಂದು ಇಂಡಿಯಾ ಟುಡೇ ವರದಿ ಹೇಳಿದೆ. 6 ನೇ ತರಗತಿಯ ಗಣಿತ ಪಠ್ಯಪುಸ್ತಕವನ್ನು ಇಂಗ್ಲಿಷ್‌ನಲ್ಲಿ ಮ್ಯಾಥ್‌ಮ್ಯಾಟಿಕ್ಸ್, ಹಿಂದಿಯಲ್ಲಿ ಗಣಿತ್ ಮತ್ತು ಉರ್ದು ಭಾಷೆಯಲ್ಲಿ ರಿಯಾಜಿ ಎಂದು ಕರೆಯಲಾಗಿತ್ತು.

ಹೊಸ ಬದಲಾವಣೆಯ ಪ್ರಕಾರ, ಗಣಿತ ಪಠ್ಯಪುಸ್ತಕದ ಇಂಗ್ಲಿಷ್ ಮತ್ತು ಹಿಂದಿ ಆವೃತ್ತಿಗಳಿಗೆ ಗಣಿತ್ ಪ್ರಕಾಶ್ ಎಂದು ಹೆಸರಿಸಲಾಗಿದೆ. ಉರ್ದು ಆವೃತ್ತಿಯ ಶೀರ್ಷಿಕೆ ಏನು ಎಂಬುದು ಸ್ಪಷ್ಟವಾಗಿಲ್ಲ.

ಕೇರಳದ ವಿರೋಧ

ಪಠ್ಯಪುಸ್ತಕಗಳಿಗೆ ಹಿಂದಿ ಮರುನಾಮಕರಣ ಮಾಡುವ ಎನ್‌ಸಿಇಆರ್‌ಟಿಯ ನಿರ್ಧಾರವು ‘ಒಕ್ಕೂಟ ವ್ಯವಸ್ಥೆಯ ತತ್ವಗಳು ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ’ ವಿರುದ್ಧವಾಗಿದೆ ಎಂದು ಸೋಮವಾರ ಕೇರಳದ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಹೇಳಿದ್ದಾರೆ.

“ಇದು ಅರ್ಥಹೀನ ಮಾತ್ರವಲ್ಲ, ನಮ್ಮ ದೇಶದ ಭಾಷಾ ವೈವಿಧ್ಯತೆಯನ್ನು ಹಾಳುಮಾಡುವ ರೀತಿಯಲ್ಲಿ ಒಬ್ಬರ ಸಾಂಸ್ಕೃತಿಕ ಮೌಲ್ಯಗಳನ್ನು ಹೇರುವ ಕೃತ್ಯವಾಗಿದೆ” ಎಂದಿದ್ದಾರೆ.

ಭಾಷಾ ವೈವಿಧ್ಯತೆಯನ್ನು ಗೌರವಿಸಲು ಮತ್ತು ಮಕ್ಕಳ ಮನಸ್ಸಿನಲ್ಲಿ ಸೂಕ್ಷ್ಮ ಸಂವೇದನೆಯನ್ನು ಬೆಳೆಸಲು ದಶಕಗಳಿಂದ ಬಳಸಲಾಗುತ್ತಿದ್ದ ಇಂಗ್ಲಿಷ್ ಶೀರ್ಷಿಕೆಗಳನ್ನು ಬದಲಾಯಿಸುವುದು ಸಂಪೂರ್ಣವಾಗಿ ತಪ್ಪು ಎಂದು ಹೇಳಿದ್ದಾರೆ.

“ಹಿಂದಿಯೇತರ ಇತರ ರಾಜ್ಯಗಳಂತೆ ಕೇರಳ ಕೂಡ ಭಾಷಾ ವೈವಿಧ್ಯತೆಯನ್ನು ರಕ್ಷಿಸಲು ಮತ್ತು ಪ್ರಾದೇಶಿಕ ಸಾಂಸ್ಕೃತಿಕ ಸ್ವಾತಂತ್ರ್ಯಕ್ಕೆ ಆದ್ಯತೆ ನೀಡಲು ಬದ್ಧವಾಗಿದೆ. ಪಠ್ಯಪುಸ್ತಕಗಳ ಶೀರ್ಷಿಕೆಗಳು ಕೇವಲ ಹೆಸರುಗಳಲ್ಲ; ಅವು ಮಕ್ಕಳ ಗ್ರಹಿಕೆ ಮತ್ತು ಕಲ್ಪನೆಯನ್ನು ರೂಪಿಸುತ್ತವೆ. ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಇಂಗ್ಲಿಷ್ ಶೀರ್ಷಿಕೆಗಳಿಗೆ ಅರ್ಹರು. ಶಿಕ್ಷಣವು ಹೇರಿಕೆಯ ಸಾಧನವಾಗಿರಬಾರದು, ಬದಲಾಗಿ ಸಬಲೀಕರಣ ಮತ್ತು ಒಮ್ಮತದ ಸಾಧನವಾಗಿರಬೇಕು” ಎಂದಿದ್ದಾರೆ.

ಹಿಂದಿ ಭಾಷೆಯ ಹೇರಿಕೆಯನ್ನು ವಿರೋಧಿಸಲು ರಾಜ್ಯ ಸರ್ಕಾರಗಳು ಒಗ್ಗೂಡಬೇಕೆಂದು ಅವರು ಕರೆ ನೀಡಿದ್ದಾರೆ.

2020ರ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಎನ್‌ಸಿಇಆರ್‌ಟಿ 2023ರಲ್ಲಿ ಹೊಸ ಪಠ್ಯಪುಸ್ತಕಗಳನ್ನು ಪರಿಚಯಿಸಿತು. ಮೊದಲು 1 ಮತ್ತು 2 ನೇ ತರಗತಿಯ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. ನಂತರ 2024 ರಲ್ಲಿ 3 ಮತ್ತು 6 ನೇ ತರಗತಿಯ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. 4, 5, 7 ಮತ್ತು 8 ನೇ ತರಗತಿಗಳಿಗೆ ಹೊಸ ಪಠ್ಯಪುಸ್ತಕಗಳನ್ನು ಈಗ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...