Homeಮುಖಪುಟಇಂಗ್ಲಿಷ್ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಗೆ ಹಿಂದಿ ಹೆಸರು: ಕೇರಳದಿಂದ ತೀವ್ರ ವಿರೋಧ

ಇಂಗ್ಲಿಷ್ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಗೆ ಹಿಂದಿ ಹೆಸರು: ಕೇರಳದಿಂದ ತೀವ್ರ ವಿರೋಧ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಆರ್‌ಟಿ) ತನ್ನ ಹಲವು ಹೊಸ ಇಂಗ್ಲಿಷ್ ಮಾಧ್ಯಮ ಪಠ್ಯಪುಸ್ತಕಗಳಿಗೆ ಹಿಂದಿ ಶೀರ್ಷಿಕೆಗಳನ್ನು ನೀಡಿದೆ. ಅವುಗಳಲ್ಲಿ ಇಂಗ್ಲಿಷ್ ಭಾಷೆಯನ್ನು ಕಲಿಸಲು ಉದ್ದೇಶಿಸಲಾದ ಪುಸ್ತಕಗಳು ಸೇರಿವೆ ಎಂದು ಇಂಡಿಯಾ ಟುಡೇ ಸೋಮವಾರ ವರದಿ ಮಾಡಿದೆ.

ಎನ್‌ಸಿಆರ್‌ಟಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಶಾಲಾ ಶಿಕ್ಷಣವನ್ನು ಸುಧಾರಿಸುವ ಕಾರ್ಯಕ್ರಮಗಳು ಮತ್ತು ನೀತಿಗಳ ಕುರಿತು ಸರ್ಕಾರಕ್ಕೆ ಸಲಹೆಗಳನ್ನು ನೀಡುತ್ತದೆ.

ಪಠ್ಯಪುಸ್ತಕಗಳ ಶೀರ್ಷಿಕೆಗಳನ್ನು ಬದಲಾಯಿಸುವ ಮಂಡಳಿಯ ನಿರ್ಧಾರವನ್ನು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಟೀಕಿಸಿದ್ದಾರೆ. ಈ ನಿರ್ಧಾರವು ಅರ್ಥಹೀನ ಎಂದು  ಅವರು ಹೇಳಿದ್ದು, ಪುನರ್‌ ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಹಿಂದೆ 6ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಕ್ಕೆ ‘ಹನಿಸಕಲ್’ ಎಂಬ ಹೆಸರಿತ್ತು. ಅದನ್ನು ಈಗ ‘ಪೂರ್ವಿ’ ಎಂದು ಬದಲಾಯಿಸಲಾಗಿದೆ. ಇದರ ಹಿಂದಿ ಅರ್ಥ ‘ಪೂರ್ವ’ ಎಂದಾಗಿದೆ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಒಂದು ರಾಗದ ಹೆಸರೂ ಹೌದು ಎಂದು ವರದಿ ಹೇಳಿದೆ.

ಮುಂದುವರಿದು, 1 ಮತ್ತು 2 ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಗಳಿಗೆ ಈಗ ‘ಮೃದಂಗ್’ ಎಂದು ಹೆಸರಿಸಲಾಗಿದೆ ಮತ್ತು 3 ನೇ ತರಗತಿಯ ಪಠ್ಯಪುಸ್ತಕದ ಹೆಸರನ್ನು ‘ಸಂತೂರ್’ ಎಂದು ಬದಲಾಯಿಸಲಾಗಿದೆ. ಮೃದಂಗ್ ಮತ್ತು ಸಂತೂರ್ ಭಾರತೀಯ ಸಂಗೀತ ವಾದ್ಯಗಳ ಹೆಸರುಗಳಾಗಿವೆ.

ಎನ್‌ಸಿಇಆರ್‌ಟಿ ಈ ಹಿಂದೆ ವಿವಿಧ ಭಾಷೆಗಳಲ್ಲಿ ಪಠ್ಯಪುಸ್ತಕಗಳಿಗೆ ವಿಭಿನ್ನ ಶೀರ್ಷಿಕೆಗಳನ್ನು ಬಳಸಿತ್ತು ಎಂದು ಇಂಡಿಯಾ ಟುಡೇ ವರದಿ ಹೇಳಿದೆ. 6 ನೇ ತರಗತಿಯ ಗಣಿತ ಪಠ್ಯಪುಸ್ತಕವನ್ನು ಇಂಗ್ಲಿಷ್‌ನಲ್ಲಿ ಮ್ಯಾಥ್‌ಮ್ಯಾಟಿಕ್ಸ್, ಹಿಂದಿಯಲ್ಲಿ ಗಣಿತ್ ಮತ್ತು ಉರ್ದು ಭಾಷೆಯಲ್ಲಿ ರಿಯಾಜಿ ಎಂದು ಕರೆಯಲಾಗಿತ್ತು.

ಹೊಸ ಬದಲಾವಣೆಯ ಪ್ರಕಾರ, ಗಣಿತ ಪಠ್ಯಪುಸ್ತಕದ ಇಂಗ್ಲಿಷ್ ಮತ್ತು ಹಿಂದಿ ಆವೃತ್ತಿಗಳಿಗೆ ಗಣಿತ್ ಪ್ರಕಾಶ್ ಎಂದು ಹೆಸರಿಸಲಾಗಿದೆ. ಉರ್ದು ಆವೃತ್ತಿಯ ಶೀರ್ಷಿಕೆ ಏನು ಎಂಬುದು ಸ್ಪಷ್ಟವಾಗಿಲ್ಲ.

ಕೇರಳದ ವಿರೋಧ

ಪಠ್ಯಪುಸ್ತಕಗಳಿಗೆ ಹಿಂದಿ ಮರುನಾಮಕರಣ ಮಾಡುವ ಎನ್‌ಸಿಇಆರ್‌ಟಿಯ ನಿರ್ಧಾರವು ‘ಒಕ್ಕೂಟ ವ್ಯವಸ್ಥೆಯ ತತ್ವಗಳು ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ’ ವಿರುದ್ಧವಾಗಿದೆ ಎಂದು ಸೋಮವಾರ ಕೇರಳದ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಹೇಳಿದ್ದಾರೆ.

“ಇದು ಅರ್ಥಹೀನ ಮಾತ್ರವಲ್ಲ, ನಮ್ಮ ದೇಶದ ಭಾಷಾ ವೈವಿಧ್ಯತೆಯನ್ನು ಹಾಳುಮಾಡುವ ರೀತಿಯಲ್ಲಿ ಒಬ್ಬರ ಸಾಂಸ್ಕೃತಿಕ ಮೌಲ್ಯಗಳನ್ನು ಹೇರುವ ಕೃತ್ಯವಾಗಿದೆ” ಎಂದಿದ್ದಾರೆ.

ಭಾಷಾ ವೈವಿಧ್ಯತೆಯನ್ನು ಗೌರವಿಸಲು ಮತ್ತು ಮಕ್ಕಳ ಮನಸ್ಸಿನಲ್ಲಿ ಸೂಕ್ಷ್ಮ ಸಂವೇದನೆಯನ್ನು ಬೆಳೆಸಲು ದಶಕಗಳಿಂದ ಬಳಸಲಾಗುತ್ತಿದ್ದ ಇಂಗ್ಲಿಷ್ ಶೀರ್ಷಿಕೆಗಳನ್ನು ಬದಲಾಯಿಸುವುದು ಸಂಪೂರ್ಣವಾಗಿ ತಪ್ಪು ಎಂದು ಹೇಳಿದ್ದಾರೆ.

“ಹಿಂದಿಯೇತರ ಇತರ ರಾಜ್ಯಗಳಂತೆ ಕೇರಳ ಕೂಡ ಭಾಷಾ ವೈವಿಧ್ಯತೆಯನ್ನು ರಕ್ಷಿಸಲು ಮತ್ತು ಪ್ರಾದೇಶಿಕ ಸಾಂಸ್ಕೃತಿಕ ಸ್ವಾತಂತ್ರ್ಯಕ್ಕೆ ಆದ್ಯತೆ ನೀಡಲು ಬದ್ಧವಾಗಿದೆ. ಪಠ್ಯಪುಸ್ತಕಗಳ ಶೀರ್ಷಿಕೆಗಳು ಕೇವಲ ಹೆಸರುಗಳಲ್ಲ; ಅವು ಮಕ್ಕಳ ಗ್ರಹಿಕೆ ಮತ್ತು ಕಲ್ಪನೆಯನ್ನು ರೂಪಿಸುತ್ತವೆ. ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಇಂಗ್ಲಿಷ್ ಶೀರ್ಷಿಕೆಗಳಿಗೆ ಅರ್ಹರು. ಶಿಕ್ಷಣವು ಹೇರಿಕೆಯ ಸಾಧನವಾಗಿರಬಾರದು, ಬದಲಾಗಿ ಸಬಲೀಕರಣ ಮತ್ತು ಒಮ್ಮತದ ಸಾಧನವಾಗಿರಬೇಕು” ಎಂದಿದ್ದಾರೆ.

ಹಿಂದಿ ಭಾಷೆಯ ಹೇರಿಕೆಯನ್ನು ವಿರೋಧಿಸಲು ರಾಜ್ಯ ಸರ್ಕಾರಗಳು ಒಗ್ಗೂಡಬೇಕೆಂದು ಅವರು ಕರೆ ನೀಡಿದ್ದಾರೆ.

2020ರ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಎನ್‌ಸಿಇಆರ್‌ಟಿ 2023ರಲ್ಲಿ ಹೊಸ ಪಠ್ಯಪುಸ್ತಕಗಳನ್ನು ಪರಿಚಯಿಸಿತು. ಮೊದಲು 1 ಮತ್ತು 2 ನೇ ತರಗತಿಯ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. ನಂತರ 2024 ರಲ್ಲಿ 3 ಮತ್ತು 6 ನೇ ತರಗತಿಯ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. 4, 5, 7 ಮತ್ತು 8 ನೇ ತರಗತಿಗಳಿಗೆ ಹೊಸ ಪಠ್ಯಪುಸ್ತಕಗಳನ್ನು ಈಗ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...